ಸಾಥನ್ಕುಲಂ ಹಂತಕರಿಗೆ ಶಾಸ್ತಿ: 9 ಪೊಲೀಸರಿಗೆ ಮರಣದಂಡನೆ.
2020ರ ಕೊರೊನಾ ಲಾಕ್ಡೌನ್ ಅವಧಿಯಲ್ಲಿ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ತಮಿಳುನಾಡಿನ ಸಾಥನ್ಕುಲಂ ತಂದೆ-ಮಗನ ಕಸ್ಟಡಿಯಲ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧುರೈ…
2020ರ ಕೊರೊನಾ ಲಾಕ್ಡೌನ್ ಅವಧಿಯಲ್ಲಿ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ತಮಿಳುನಾಡಿನ ಸಾಥನ್ಕುಲಂ ತಂದೆ-ಮಗನ ಕಸ್ಟಡಿಯಲ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧುರೈ ಜಿಲ್ಲಾ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ. ವಿಚಾರಣಾಧೀನ ಕೈದಿಗಳಾಗಿದ್ದ ವ್ಯಾಪಾರಿ ಪಿ. ಜಯರಾಜ್ ಮತ್ತು ಅವರ ಮಗ ಬೆನ್ನಿಕ್ಸ್ ಅವರನ್ನು ಕ್ರೂರವಾಗಿ ಚಿತ್ರಹಿಂಸೆ ನೀಡಿ ಕೊಂದ ಆರೋಪ ಸಾಬೀತಾಗಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಇನ್ಸ್ಪೆಕ್ಟರ್ ಸೇರಿದಂತೆ ಒಟ್ಟು ಒಂಬತ್ತು ಪೊಲೀಸರಿಗೆ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿದೆ. ಪ್ರಕರಣದ ಹಿನ್ನೆಲೆ 2020ರಲ್ಲಿ ರಾತ್ರಿ ನಿಗದಿತ ಸಮಯಕ್ಕಿಂತ ಹೆಚ್ಚಿನ ಸಮಯ…
ಬೆಂಗಳೂರು, ಏಪ್ರಿಲ್ 02: ಲೋಕಾಯುಕ್ತ ಎಡಿಜಿಪಿ ಮತ್ತು ಎಸ್ಐಟಿ ಮುಖ್ಯಸ್ಥ ಎಂ.ಚಂದ್ರಶೇಖರ್ ಮತ್ತು ಅವರ ಕುಟುಂಬದ ಮೇಲೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆದರಿಕೆ ಹಾಕಿರುವ ಪ್ರಕರಣವು ರಾಜಿ ಸಂಧಾನ ಹಂತಕ್ಕೆ ಬಂದು ನಿಂತಿದೆ. ಹೈಕೋರ್ಟ್ ನ್ಯಾಯಾಧೀಶರ ಸಲಹೆಯಂತೆ ಇಬ್ಬರ ಪರ ವಕೀಲರು ರಾಜಿ ಮಾತುಕತೆಗೆ ಒಪ್ಪಿದ್ದು, ಮಧ್ಯಸ್ಥಿಕೆದಾರರ ನೇಮಕ ಮತ್ತು ಸಭೆ ದಿನಾಂಕವನ್ನು ಏಪ್ರಿಲ್ 30ಕ್ಕೆ ನಿಗದಿ ಮಾಡಲಾಗಿದೆ. ಐಪಿಎಸ್ ಅಧಿಕಾರಿ ಚಂದ್ರಶೇಖರ್ ಅವರು ಸಾಯಿ ಮಿನರಲ್ಸ್ ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡುವ ಸಂದರ್ಭದಲ್ಲಿ ನಿಯಮ…
ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆಯ ಘನತೆಗೆ ಕುಂದು ತರುವಂತಹ ಘಟನೆಯೊಂದು ರಾಜಧಾನಿಯಲ್ಲಿ ಬೆಳಕಿಗೆ ಬಂದಿದೆ. ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ನ ರಿಜಿಸ್ಟ್ರಾರ್ ಮಲ್ಲು ಎಂಬುವವರು ತಮ್ಮದೇ ಕಚೇರಿಯ ಮಹಿಳಾ ಸಿಬ್ಬಂದಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಗಂಭೀರ ಆರೋಪ ಎದುರಿಸುತ್ತಿದ್ದಾರೆ. ಘಟನೆಯ ಹಿನ್ನೆಲೆ: ಗಾಂಧೀನಗರದಲ್ಲಿರುವ ನರ್ಸಿಂಗ್ ಕೌನ್ಸಿಲ್ ಕಚೇರಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಕೆಲಸದ ನೆಪದಲ್ಲಿ ಸಂತ್ರಸ್ತೆಯ ಬಳಿ ಬಂದ ಆರೋಪಿ, ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕವಾಗಿ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ….
ವರದಿ: ರಾಮಸಮುದ್ರ ಎಸ್. ವೀರಭದ್ರಸ್ವಾಮಿಚಾಮರಾಜನಗರ : ಜಿಲ್ಲಾಡಳಿತ ಸಮೀಪವಿರುವ ಇಂದಿರಾ ಕ್ಯಾಂಟಿನ್ ಗೆ ಮಳೆ ನೀರು, ಒಳಚರಂಡಿ ನೀರಿನಿಂದ ಜಲಾವೃತಗೊಂಡ ಪರಿಣಾಮ: ೨-೩ ದಿನ ಕ್ಯಾಂಟಿನ್ ಬಂದ್ ಮಾಡಲಾಗಿದೆ. ಕೂಲಿಕಾರ್ಮಿಕರು, ಸಾರ್ವಜನಿಕರು. ವಿದ್ಯಾರ್ಥಿಗಳಿಗೆ ಕಡಿಮೆದರದಲ್ಲಿ ಉಪಹಾರ ಒದಗಿಸುವ ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆ ಇಂದಿರಾ ಕ್ಯಾಂಟೀನ್ ಸಿಎಂ ಸಿದ್ದರಾಮಯ್ಯ 2013 ರಲ್ಲಿ ಸಿಎಂ ಆಗಿದ್ದಾಗ ಚಾಮರಾಜನಗರ ಸೇರಿದಂತೆ ರಾಜ್ಯದ ಹಲಜಿಲ್ಲೆಗಳಲ್ಲಿ ಆರಂಭಿಸಿದ್ಷರು. ದುರಂತ ಎಂದರೆ ಸಿಎಂ ತವರು ಜಿಲ್ಲೆಯಿಂದ 60 ಕಿಮೀ ಗಡಿಜಿಲ್ಲಾ ಕೇಂದ್ರದಲ್ಲಿನ ಇಂದಿರಾ ಕ್ಯಾಂಟಿನ್…
ವರದಿ: ರಾಮಸಮುದ್ರ ಎಸ್. ವೀರಭದ್ರಸ್ವಾಮಿ ಗಡಿ ಜಿಲ್ಲೆ ಚಾಮರಾಜನಗರದ ಪೊಲೀಸ್ ಇಲಾಖೆಯಲ್ಲಿ ವಿಚಿತ್ರವೊಂದು ಜಾರಿಯಲ್ಲಿದೆ. “ಜನಸ್ನೇಹಿ ಪೊಲೀಸ್” ಎಂಬ ಘೋಷವಾಕ್ಯಕ್ಕೆ ಇಲ್ಲಿನ ಕೆಲವು ಠಾಣೆಗಳು ಅಕ್ಷರಶಃ ಬೀಗ ಜಡಿಯುತ್ತಿವೆ. ಜಿಲ್ಲೆಯ ಸೆನ್ (CEN) ಮತ್ತು ಮಹಿಳಾ ಪೊಲೀಸ್ ಠಾಣೆಗಳು ರಾತ್ರಿ ಹೊತ್ತಾದರೆ ಸಾಕು, ದೂರುದಾರರಿಗಾಗಿ ಕಾಯುವ ಬದಲು ಬಾಗಿಲಿಗೆ ಬೀಗ ಹಾಕಿಕೊಂಡು ವಿಶ್ರಮಿಸುತ್ತಿರುವ ಗಂಭೀರ ಆರೋಪಗಳು ಕೇಳಿಬರುತ್ತಿವೆ. ವರದಿಯ ಪ್ರಕಾರ, ಮಾರ್ಚ್ 26ರ ರಾತ್ರಿ 9 ಗಂಟೆ ಹಾಗೂ 27ರ ಬೆಳಗಿನ ಜಾವ 8 ಗಂಟೆಯ ಸಮಯದಲ್ಲೂ…
ಬಾಲಿವುಡ್ ಅಂಗಳದಲ್ಲಿ ಈಗ ‘ಧುರಂಧರ್-2’ ಚಿತ್ರದ ಹವಾ ಜೋರಾಗಿದೆ. ರಣವೀರ್ ಸಿಂಗ್ ಶತ್ರು ರಾಷ್ಟ್ರಕ್ಕೆ ನುಗ್ಗಿ ಅಬ್ಬರಿಸುವುದನ್ನು ನೋಡಿ ಪ್ರೇಕ್ಷಕರು ಶಿಳ್ಳೆ ಹೊಡೆಯುತ್ತಿದ್ದಾರೆ. ಆದರೆ, ಬೆಳ್ಳಿತೆರೆಯ ಈ ಕಾಲ್ಪನಿಕ ಸಾಹಸಗಳಿಗಿಂತ ಸಾವಿರ ಪಟ್ಟು ಹೆಚ್ಚು ಭಯಾನಕ ಮತ್ತು ರೋಚಕವಾದ ಕಥೆಯೊಂದು ನಮ್ಮ ಇತಿಹಾಸದ ಕತ್ತಲ ಪುಟಗಳಲ್ಲಿ ಅಡಗಿದೆ. ಅದುವೇ ಭಾರತದ ಶ್ರೇಷ್ಠ ಗೂಢಚಾರಿ, ‘ದಿ ಬ್ಲ್ಯಾಕ್ ಟೈಗರ್’ ರವೀಂದ್ರ ಕೌಶಿಕ್ ಅವರ ಬದುಕು ಮತ್ತು ಬಲಿದಾನದ ಕಥೆ. ರಂಗಭೂಮಿಯಿಂದ ರಣರಂಗಕ್ಕೆ: 21ರ ಹರೆಯದ ಯುವಕನ ಸಾಹಸ! 1952ರಲ್ಲಿ…
ವರದಿ: ರಾಮಸಮುದ್ರ ಎಸ್. ವೀರಭದ್ರಸ್ವಾಮಿ ಮಂಡ್ಯ ಜಿಲ್ಲೆಯಲ್ಲಿ ಹಬ್ಬದ ಶುಭಕೋರುವ ಫ್ಲೆಕ್ಸ್ಗಳಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಫೋಟೋ ಬಳಕೆಯಾಗಿ ದೊಡ್ಡಮಟ್ಟದ ವಿವಾದ ಸೃಷ್ಟಿಸಿದ ಬೆನ್ನಲ್ಲೇ, ಈಗ ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಅಂತಹದ್ದೇ ಬೆಳವಣಿಗೆಯೊಂದು ಮುನ್ನೆಲೆಗೆ ಬಂದಿದೆ. ಖಾಸಗಿ ಕಾರ್ಯಕ್ರಮಗಳ ಪ್ರಚಾರಕ್ಕಾಗಿ ಜಿಲ್ಲಾ ಮಟ್ಟದ ಉನ್ನತ ಅಧಿಕಾರಿಗಳ ಭಾವಚಿತ್ರಗಳನ್ನು ಫ್ಲೆಕ್ಸ್ಗಳಲ್ಲಿ ಬಳಸಿರುವುದು ಈಗ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಚಾಮರಾಜನಗರ ವಿಶ್ವವಿದ್ಯಾನಿಲಯ ಹಾಗೂ ಮೈಸೂರಿನ ಶ್ರೀ ಯೋಗಿನಾರಾಯಣ ಯತೀಂದ್ರರ ಪ್ರಚಾರ ಸಭಾ ಸಂಯುಕ್ತಾಶ್ರಯದಲ್ಲಿ ಆಯೋಜಿಸಿರುವ ಕೈವಾರ ತಾತಯ್ಯನವರ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದ್ದ ಹಿರಿಯ ಐಪಿಎಸ್ ಅಧಿಕಾರಿ, ಡಿಜಿಪಿ ಕೆ. ರಾಮಚಂದ್ರ ರಾವ್ ಅವರ ವೈರಲ್ ವಿಡಿಯೋ ಪ್ರಕರಣವೀಗ ಸ್ಫೋಟಕ ತಿರುವು ಪಡೆದುಕೊಂಡಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ದೃಶ್ಯಗಳು ಎಡಿಟ್ ಮಾಡಿದ್ದಲ್ಲ, ಬದಲಾಗಿ ನೂರಕ್ಕೆ ನೂರರಷ್ಟು ಅಸಲಿ ಎಂಬುದು ಎಸ್ಐಟಿ (SIT) ತನಿಖೆಯಲ್ಲಿ ಬಯಲಾಗಿದೆ! ಎಡಿಟಿಂಗ್ ಅಲ್ಲ, ಇದು ಎಐ ಕಾಲದ ಡೀಪ್ಫೇಕ್ ಕೂಡ ಅಲ್ಲ! ವಿಡಿಯೋ ವೈರಲ್ ಆದ ಬೆನ್ನಲ್ಲೇ ಇದು ತನ್ನ ಚಾರಿತ್ರ್ಯ ಹರಣಕ್ಕೆ ಮಾಡಿರುವ ಪಿತೂರಿ, ದೃಶ್ಯಗಳನ್ನು ಎಡಿಟ್…
ಮೈಸೂರು-ಮಾರ್ಚ್.11- ಮೈಸೂರಿನ ಹಿರಿಯ ಪತ್ರಕರ್ತ ಕೆ. ಜೆ. ಕುಮಾರ್ ಇಂದು ಸಂಜೆ ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು.ಉಡುಪಿ ಜಿಲ್ಲೆ ಕೊರಂದರ ಪಾಳ್ಯದಲ್ಲಿ ರಘು ರಾಮ್ ಶೆಟ್ಟಿ ಮತ್ತು ಶಾರದಾ ಅವರ ಜ್ಯೋಷ್ಠ ಪುತ್ರರಾಗಿ 1952ರ್ ನವಂಬರ್. 6 ರಂದು ಜನಿಸಿದರು. ಸುಮಾರು 56 ವರ್ಷಗಳಿಂದ ಮೈಸೂರಿನ ಪ್ರಮುಖ ಪತ್ರಿಕಾ ವಿತರಕರಾಗಿ ಹಾಗೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದರು. 1969ರಲ್ಲಿ ಸೋದರ ಮಾವ ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಸ್ವತಂತ್ರ ಹೋರಾಟಗಾರ ಎ….
ಕೊಚ್ಚಿಯಲ್ಲಿ ನಡೆದ ಅಖಿಲ ಕೇರಳ ದೀವರ ಸಭಾದ ಸುವರ್ಣ ಮಹೋತ್ಸವದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ, ₹10 ಸಾವಿರ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವ ಮೂಲಕ ಕೇರಳದಲ್ಲಿ ಚುನಾವಣಾ ಪ್ರಚಾರದ ರಣಕಹಳೆ ಮೊಳಗಿಸಿದರು. ಇದೇ ವೇಳೆ ಕೊಲ್ಲಿ ರಾಷ್ಟ್ರಗಳಲ್ಲಿರುವ ಲಕ್ಷಾಂತರ ಭಾರತೀಯರ ಸುರಕ್ಷತೆಯ ಬಗ್ಗೆ ಭರವಸೆ ನೀಡಿದ ಅವರು, ಸಂಕಷ್ಟದ ಸಮಯದಲ್ಲಿ ಇಂದಿನ ಭಾರತ ತನ್ನ ಜನರನ್ನು ಕೈಬಿಡುವುದಿಲ್ಲ ಎಂದರು. ವಿದೇಶಿ ಸರ್ಕಾರಗಳು ನೀಡುತ್ತಿರುವ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತಲೇ, ಇಂತಹ ಜಾಗತಿಕ ಬಿಕ್ಕಟ್ಟಿನ…