ಸೌಜನ್ಯ ಹತ್ಯೆಗೀಡಾಗಿ 13 ವರ್ಷ; ಮಂಡ್ಯದಲ್ಲಿ ಜಾಗೃತ ಕರ್ನಾಟಕ ಮತ್ತು ಪ್ರಗತಿಪರ ಸಂಘಟನೆಗಳ ವಿನೂತನ ಪ್ರತಿಭಟನೆ
ಧರ್ಮಸ್ಥಳದ ಸೌಜನ್ಯ ಅತ್ಯಾಚಾರವಾಗಿ ಕೊಲೆಯಾಗಿ 13 ವರ್ಷ ಗತಿಸಿದ ಸಂದರ್ಭದಲ್ಲಿ ಜಾಗೃತ ಕರ್ನಾಟಕ ಮತ್ತು ಪ್ರಗತಿಪರ ಸಂಘಟನೆಗಳು ಮಂಡ್ಯನಗರದಲ್ಲಿ ಗುರುವಾರ ಸಂಜೆ ಮೆಣದಬತ್ತಿಗಳನ್ನು ಬೆಳಗಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿ ಸರ್ಕಾರವನ್ನು ಆಗ್ರಹಿಸಿದವು. ಮಂಡ್ಯನಗರ ಸಂಜಯ ವೃತ್ತದಲ್ಲಿ ಜಾಗೃತ ಕರ್ನಾಟಕ ಸಂಘಟನೆಯ ಮುಖಂಡರು ಹಾಗೂ ವಿವಿಧ ಜನಪರ ಸಂಘಟನೆಗಳ ಮುಖಂಡರು ಪಾಲ್ಗೊಂಡು ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಮುಂದಿಟ್ಟರು. ಜನಾಗ್ರಹದಲ್ಲೇನಿದೆ ? 1. ಧರ್ಮಸ್ಥಳದ ಫಾಸಲೆಯಲ್ಲಿ ನಡೆದಿರುವ 400ಕ್ಕೂ ಹೆಚ್ಚು ಅಸಹಜ ಸಾವುಗಳ ಬಗ್ಗೆ ಕೂಲಂಕುಶವಾದ, ಗಂಭೀರವಾದ…

