Headlines

newsfilemagazine

ಟ್ರಂಪ್ ಗೆ ಉಕ್ರೇನ್ ನಾಗರಿಕರು ಬಹಳ ಕೃತಜ್ಞರಾಗಿರಬೇಕು: ಝೆಲೆನ್ಸ್ಕಿ

ವಾಷಿಂಗ್ಟನ್, ಆ.18: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅಮೆರಿಕ ಅಧ್ಯಕ್ಷರನ್ನು ಭೇಟಿ ಮಾಡಲು ವಾಷಿಂಗ್ಟನ್ ತಲುಪಿದ್ದಾರೆ. ಉಕ್ರೇನ್, ರಷ್ಯಾ ಮತ್ತು ಅಮೆರಿಕಕ್ಕೆ ನಿರ್ಣಾಯಕ ದಿನವಾಗಿದೆ. ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​​ ಭೇಟಿಗೂ ಮುನ್ನ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮಾತನಾಡಿದ್ದು, ನಮ್ಮ ಜನರು ಸದಾ ಟ್ರಂಪ್​ಗೆ ಕೃತಜ್ಞರಾಗಿರಬೇಕು ಎಂದು ಹೇಳಿದ್ದಾರೆ. ಸುಮಾರು 4 ವರ್ಷಗಳಿಂದ ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ಮುಂದಿನ ತಿರುವು ಏನಾಗಲಿದೆ ಎಂಬುದನ್ನು ಇಂದು ನಿರ್ಧರಿಸಲಾಗುತ್ತದೆ. ಟ್ರಂಪ್ ಮೊದಲು ರಷ್ಯಾ…

Read More

ಧರ್ಮಸ್ಥಳ ಪ್ರಕರಣದ ದೂರುದಾರನ ಹೆಸರು ಗೃಹ ಸಚಿವರಿಂದ ಬಹಿರಂಗ!!!

ಬೆಂಗಳೂರು, ಆಗಸ್ಟ್ 18: ಧರ್ಮಸ್ಥಳ ಸುತ್ತಮುತ್ತ ನೂರಾರು ಜನರನ್ನು ಕೊಲೆ ಮಾಡಿ ಶವಗಳನ್ನು ಕಾಣದ ರೀತಿಯಲ್ಲಿ ಹೂತಿಡಲಾಗಿದೆ ಎಂದು ಆರೋಪಿಸಿ ಎಸ್ಐಟಿ ತನಿಖಾ ತಂಡಕ್ಕೆ ತಲೆನೋವಾಗಿರುವ ಅನಾಮಿಕ ದೂರುದಾರನ ಹೆಸರನ್ನು ಇಂದು ಖುದ್ದು ಗೃಹ ಸಚಿವ ಪರಮೇಶ್ವರ್ ಸದನದ ಮುಂದೆ ಬಹಿರಂಗಪಡಿಸಿದ್ದಾರೆ. ಸದನದ ಮುಂದೆ ಗೃಹ ಸಚಿವರು ಹೇಳಿದ್ದಿಷ್ಟು:“ಹಿಂದೆ ಧರ್ಮಸ್ಥಳ ಪೊಲೀಸ್ ಠಾಣೆಗೆ ತೆರಳಿ ಓರ್ವ ದೂರು ಕೊಟ್ಟಿದ್ದನು. ಈ ವ್ಯಕ್ತಿ ತನ್ನ ದೂರಿನಲ್ಲಿ ತನಗೆ ನಿರಂತರವಾಗಿ ಜೀವ ಬೆದರಿಕೆಯೊಡ್ಡಿ ಶವ ಹೂತಿಟ್ಟ ಬಗ್ಗೆ ತಿಳಿಸಿದ್ದ. ಈ…

Read More

ಹಳದಿ ಮಾರ್ಗದ ಮೆಟ್ರೋ ಮಾರ್ಗ ಸೋಮವಾರದಿಂದ ಕಾರ್ಯಾರಂಭ

ಬೆಂಗಳೂರು, ಆ.17: ಮೊನ್ನೆ ಸ್ವಾತಂತ್ರ್ಯ ದಿನ ರಜೆ, ನಿನ್ನೆ ವಾರಾಂತ್ಯ ಹಿನ್ನೆಲೆಯಲ್ಲಿ ಊರು, ಪ್ರವಾಸಕ್ಕೆ ತೆರಳಿದ ಜನರು ಸೋಮವಾರ (ಆ.18) ಬೆಳಗ್ಗೆ ಬೆಂಗಳೂರಿಗೆ ಮರಳುತ್ತಾರೆ. ಇದರಿಂದ ಸಹಜವಾಗಿ ನಮ್ಮ ಮೆಟ್ರೋದಲ್ಲಿ ಪ್ರಯಾಣಿಕರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಹಳದಿ ಮಾರ್ಗದ ರೈಲು ಸಂಚಾರವನ್ನು ಸೋಮವಾರದಂದು (ಆ.18) ಒಂದು ದಿನ ಬೇಗ ಆರಂಭಿಸಲು ನಿರ್ಧರಿಸಿದೆ. ನಮ್ಮ ಮೆಟ್ರೋ ಹಳದಿ ಮಾರ್ಗದ ರೈಲುಗಳುಬೆಳಿಗ್ಗೆ 5:00 ಗಂಟೆಗೆ…

Read More

ಉಪರಾಷ್ಟ್ರಪತಿ ಚುನಾವಣೆಗೆ ಸಿ.ಪಿ.ರಾಧಾಕೃಷ್ಣನ್ ಎನ್.ಡಿ.ಎ ಅಭ್ಯರ್ಥಿ

ನವದೆಹಲಿ, ಆಗಸ್ಟ್ 17: ಮುಂಬರುವ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಸಿ.ಪಿ ರಾಧಾಕೃಷ್ಣನ್​​ ಅವರನ್ನು ಎನ್​ಡಿಎ ಅಭ್ಯರ್ಥಿಯಾಗಿ ಬಿಜೆಪಿ ಅಧಿಕೃತವಾಗಿ ಘೋಷಿಸಿದೆ. ದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮುಂಬರುವ ಉಪರಾಷ್ಟ್ರಪತಿ ಚುನಾವಣೆಗೆ ಎನ್​ಡಿಎ ಮೈತ್ರಿಕೂಟವು ತನ್ನ ಅಭ್ಯರ್ಥಿಯನ್ನಾಗಿ ಪ್ರಸ್ತುತ ಮಹಾರಾಷ್ಟ್ರದ ರಾಜ್ಯಪಾಲರಾಗಿರುವ ಸಿ.ಪಿ.ರಾಧಾಕೃಷ್ಣನ್ ಅವರನ್ನು ಆಯ್ಕೆ ಮಾಡಿದೆ ಎಂದು ಹೇಳಿದರು.ಭಾನುವಾರ (ಆ.17) ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಂಸದೀಯ ಮಂಡಳಿ ಸಭೆಯಲ್ಲಿ ರಾಧಾಕೃಷ್ಣನ್​ ಅವರ ಹೆಸರನ್ನು ಅಂತಿಮಗೊಳಿಸಲಾಯಿತು. ಈ ಹಿಂದೆ ಉಪರಾಷ್ಟ್ರಪತಿಯಾಗಿದ್ದ ಜಗದೀಪ್​…

Read More

ಪದೇ ಪದೇ ಸಿಎಂ ಬದಲಾವಣೆ ಹೇಳಿಕೆ: ಚನ್ನಗಿರಿ ಶಾಸಕರಿಗೆ ನೋಟಿಸ್!

ಬೆಂಗಳೂರು, ಆಗಸ್ಟ್ 17: ಪದೇ ಪದೇ ರಾಜ್ಯದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಬದಲಾವಣೆ ಕುರಿತು ಹೇಳಿಕೆ ನೀಡಿದ ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವರಾಜು ಶಿವಗಂಗಾಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಶಿಸ್ತು ಪಾಲನಾ ಸಮಿತಿ ಭಾನುವಾರ ನೋಟಿಸ್ ನೀಡಿದೆ. ‘ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಪಕ್ಷದಲ್ಲಿ ಗೊಂದಲ ಹಾಗೂ ಮುಜುಗರ ಉಂಟು ಮಾಡುವ ರೀತಿಯ ಹೇಳಿಕೆಗಳನ್ನು ನೀಡಿದ್ದೀರಿ. ತಮ್ಮ ಈ ಹೇಳಿಕೆಗಳಿಂದ ಪಕ್ಷಕ್ಕೆ ಮುಜುಗರ ಉಂಟಾಗಿದ್ದಲ್ಲದೆ, ಪಕ್ಷ ಶಿಸ್ತು ಉಲ್ಲಂಘನೆಯಾಗಿರುತ್ತದೆ. ಈ ಅಶಿಸ್ತಿನ ಹೇಳಿಕೆಗಳನ್ನು ಗಂಭೀರವಾಗಿ…

Read More

ಭಾರತಕ್ಕೆ ಬೈದು ರಷ್ಯಾ ಜೊತೆ ಭಾರಿ ವಹಿವಾಟು ಹೆಚ್ಚಿಸಿಕೊಂಡ ಅಮೆರಿಕಾ!

ಅಲಾಸ್ಕಾ, ಆಗಸ್ಟ್ 17: ಉಕ್ರೇನ್ ವಿರುದ್ಧ ಯುದ್ಧ ನಡೆಸುತ್ತಿರುವ ರಷ್ಯಾ ಜತೆ ಯಾವ ದೇಶವೂ ವ್ಯಾಪಾರ ಒಪ್ಪಂದ ಹೊಂದಬಾರದು. ರಷ್ಯಾದಿಂದ ಆಮದು ಕಡಿತಗೊಳಿಸಬೇಕು ಎಂದು ಆಗ್ರಹಿಸುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿಜಬಣ್ಣ ಈಗ ಬಯಲಾಗಿದೆ. ಅಲಾಸ್ಕಾದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜತೆಗೆ ನಡೆಸಿದ ದ್ವಿಪಕ್ಷೀಯ ಮಾತುಕತೆಯ ನಂತರ ಉಭಯ ನಾಯಕರು ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲೇ ಈ ವಿಚಾರ ಬಹಿರಂಗವಾಗಿದೆ. ಡೊನಾಲ್ಡ್ ಟ್ರಂಪ್ 2ನೇ ಬಾರಿ ಅಧಿಕಾರ ವಹಿಸಿಕೊಂಡ ನಂತರ ಈವರೆಗೆ ರಷ್ಯಾ ಜತೆಗಿನ ಅಮೆರಿಕದ…

Read More

ಪರಪ್ಪನ‌ ಅಗ್ರಹಾರ ಸೇರೊ‌ ಮುನ್ನ ಲುಕ್ ಬದಲಾಯಿಸಿದ ದರ್ಶನ್!

ಬೆಂಗಳೂರು, ಆಗಸ್ಟ್ 16: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್ ತೂಗುದೀಪ್, ಪವಿತ್ರಾಗೌಡ ಹಾಗೂ ಇನ್ನೂ ಕೆಲವರು ಮತ್ತೆ ಬಂಧನಕ್ಕೆ ಒಳಗಾಗಿದ್ದು ಪರಪ್ಪನ ಅಗ್ರಹಾರ ಜೈಲಿಗೆ ಸೇರಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಎಲ್ಲರನ್ನೂ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿದ್ದಾರೆ. ಹೀಗೆ ನ್ಯಾಯಾಂಗ ಬಂಧನಕ್ಕೆ ಕಳಿಸುವ ಮುಂಚೆ ಎಲ್ಲ ಆರೋಪಿಗಳ ಚಿತ್ರಗಳು, ಬೆರಳಚ್ಚು ತೆಗೆದುಕೊಂಡು ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಕೊಂಡಿದ್ದರು. ನ್ಯಾಯಾಂಗ ಬಂಧನಕ್ಕೆ ಕಳಿಸುವ ಮುಂಚೆ ತೆಗೆದುಕೊಂಡಿದ್ದ…

Read More

ಧರ್ಮಸ್ಥಳ ಅನಾಮಿಕನ‌ ಕೇಸ್: ಎಸ್ಐಟಿಯಿಂದ ಮಧ್ಯಂತರ ವರದಿ

ಧರ್ಮಸ್ಥಳದ ಸುತ್ತಮುತ್ತ ಶವಗಳನ್ನು ಹೂತಿಡಲಾಗಿದೆ ಎಂದು ಹೇಳಿದ್ದ ಅನಾಮಿಕನ ಪ್ರಕರಣದ ಕುರಿತು ವಿಧಾನಸಭೆಯಲ್ಲಿ ಉತ್ತರ ನೀಡಬೇಕಿರುವುದರಿಂದ ಮಧ್ಯಂತರ ವರದಿ ನೀಡಲು ಎಸ್‌‍ಐಟಿ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಅನಾಮಿಕ ವ್ಯಕ್ತಿಯ ಹೇಳಿಕೆ ಆಧರಿಸಿ ಎಸ್‌‍ಐಟಿ ತನಿಖೆ ನಡೆಸಲು ರಾಜ್ಯ ಸರ್ಕಾರ ಕಳೆದ ಜುಲೈ 20 ರಂದು ಹಿರಿಯ ಅಧಿಕಾರಿ ಪ್ರಣವ್‌ಮೊಹಾಂತಿ ನೇತೃತ್ವದಲ್ಲಿ ತಂಡ ರಚಿಸಿತ್ತು. ಅಂದಿನಿಂದಲೂ ಕಾರ್ಯಪ್ರವೃತ್ತರಾಗಿರುವ ಎಸ್‌‍ಐಟಿ ಅಧಿಕಾರಿಗಳು ನಾನಾ ರೀತಿಯ ತನಿಖೆಗಳನ್ನು ನಡೆಸುತ್ತಿದ್ದಾರೆ. ಸುಮಾರು 20 ದಿನಗಳಿಂದಲೂ ಒಟ್ಟು 17 ಸ್ಥಳಗಳಲ್ಲಿ ಅಗೆದು ಶವ…

Read More

ಅಭಿಮಾನಿಗಳಿಗೆ ಜೈಲಿನಿಂದಲೇ ಸಂದೇಶ ಕಳುಹಿಸಿದ ದರ್ಶನ್

ಬೆಂಗಳೂರು, ಆಗಸ್ಟ್ 16: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತೊಮ್ಮೆ ಜೈಲು ಸೇರಿದ್ದಾರೆ. ಈ ಬಾರಿ ಅವರ ಜೈಲು ವಾಸ ತುಸು ಸುದೀರ್ಘವಾಗಿಯೇ ಇರಲಿದೆ. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇನ್ನೂ ಕೆಲ ಆರೋಪಿಗಳ ಜಾಮೀನು ರದ್ದಾಗಿದ್ದು ಎಲ್ಲರೂ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಕಳೆದ ಗುರುವಾರ ರಾತ್ರಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದು, ಜೈಲು ಸೇರಿದ ಎರಡೇ ದಿನಕ್ಕೆ ಜೈಲಿನಿಂದಲೇ ದರ್ಶನ್ ಅವರು ತಮ್ಮ ಅಭಿಮಾನಿಗಳಿಗೆ ಸಂದೇಶವೊಂದನ್ನು…

Read More

ಬೆಂಗಳೂರಿನ ನಿಗೂಢ ಗ್ಯಾಸ್ ಸ್ಫೋಟದ ಬಗ್ಗೆ ಡಿಸಿಎಂ ಹೇಳಿದ್ದೇನು?

ಬೆಂಗಳೂರು, ಆಗಸ್ಟ್ 15: ನಗರದ ವಿಲ್ಸನ್ ಗಾರ್ಡನ್ ಪ್ರದೇಶದ ಚಿನ್ನಯ್ಯನಪಾಳ್ಯದಲ್ಲಿ ಸಂಭವಿಸಿದ್ದ ನಿಗೂಢ ಸ್ಫೋಟದಲ್ಲಿ ಓರ್ವ ಬಾಲಕ ಮೃತಪಟ್ಟು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.ಜೊತೆಗೆ ಈ ಅವಘಡದಲ್ಲಿ ಸುಮಾರು 8 ಮನೆಗಳಿಗೆ ಹಾನಿಯಾಗಿವೆ. ಈ ನಿಗೂಢ ಸ್ಫೋಟ ಸಂಭವಿಸಿದ ಸ್ಥಳಕ್ಕೆ ನಿನ್ನೆ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವ ಪ್ರಿಯಾಂಕ್​ ಖರ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಈ ನಿಗೂಢ ಸ್ಫೋಟಕ್ಕೆ ಮನೆಯ ಅಡುಗೆ ಗ್ಯಾಸ್ ಲೀಕ್…

Read More
error: Content is protected !!