Headlines

newsfilemagazine

ಕೂದಲೆಳೆಯ ಅಂತರದಲ್ಲಿ ಗೆದ್ದು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಡ್ರಾ ಮಾಡಿಕೊಂಡ ಭಾರತ!

ಲಂಡನ್, ಆಗಸ್ಟ್ 4: ಭಾರತ ಹಾಗೂ ಇಂಗ್ಲೆಂಡ್‌ ನಡುವೆ ನಡೆದ 5 ಪಂದ್ಯಗಳ ಟೆಸ್ಟ್ ಸರಣಿ ಡ್ರಾದಲ್ಲಿ ಕೊನೆಗೊಂಡಿದೆ. ಓವಲ್​ನಲ್ಲಿ ನಡೆದ ಸರಣಿಯ ಕೊನೆಯ ಹಾಗೂ 5ನೇ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಯಿತು. ರಣರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ಇಂಗ್ಲೆಂಡ್‌ ಗೆಲ್ಲಲು ಕೊನೆಯ ದಿನದಲ್ಲಿ 35 ರನ್ ಬೇಕಿದ್ದರೆ, ಇತ್ತ ಟೀಂ ಇಂಡಿಯಾ ಗೆಲ್ಲಲು 4 ವಿಕೆಟ್​ಗಳ ಅವಶ್ಯಕತೆ ಇತ್ತು. ಅದರಂತೆ 5ನೇ ದಿನದಾಟ ಆರಂಭವಾದ ಕೆಲವೇ ಕೆಲವು ಓವರ್​ಗಳಲ್ಲಿ ಇಂಗ್ಲೆಂಡ್‌ ತಂಡವನ್ನು ಆಲೌಟ್…

Read More

ಕನ್ನಂಬಾಡಿ ಅಣೆಕಟ್ಟೆಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನನೇ?

ವರದಿ: ಶ್ರೀಕಂಠ ಬಾಳಗಂಚಿ ಅಂದಿನ ಮೈಸೂರು ಸಂಸ್ಥಾನದ ನಾಡಿನ ಜನರ ಕುಡಿಯುವ ನೀರಿಗಾಗಿ, ಬರಗಾಲದಿಂದ ಪೀಡಿತರಾಗಿದ್ದ ಅಲ್ಲಿನ ರೈತರ ಕೃಷಿ ಚಟುವಟಿಕೆಗಳಿಗಾಗಿ, ಗಗನ ಚುಕ್ಕಿ ಬಳಿಯಲ್ಲಿ ಕಟ್ಟಲಾಗಿದ್ದ ಶಿಂಶಾ ಜಲ ವಿದ್ಯುತ್ ಯೋಜನೆಗೆ ನಿರಂತರವಾಗಿ ನೀರನ್ನು ಕೊಡುವ ಸಲುವಾಗಿ ಮೈಸೂರಿನ ಸಮೀಪ ಕಾವೇರಿ ನದಿಯ ಉಪನದಿಗಳಾದ ಹೇಮಾವತಿ ಮತ್ತು ಲಕ್ಷ್ಮಣ ತೀರ್ಥಗಳ ಸಂಗಮದ ಬಳಿಯ ಬೆಳಗೊಳದ ಬಳಿ ಕಟ್ಟಲಾಗಿರುವ ಕನ್ನಂಬಾಡಿ ಅಣೆಕಟ್ಟೆ ಅರ್ಥಾತ್ ಕೃಷ್ಣರಾಜಸಾಗರ (KRS) ಅಣೆಕಟ್ಟು ಎಂದೂ ಕರೆಯುವ ಈ ಜನೋಪಯೋಗಿ ಕಾರ್ಯಕ್ಕೆ 100 ವರ್ಷಗಳ ನಂತರವೂ, ನೈಜ…

Read More

ಸಾರಿಗೆ ನೌಕರರು ಮುಷ್ಕರ ನಡೆಸದೇ ಕೆಲಸಕ್ಕೆ ಹಾಜರಾಗಲು ನೋಟಿಸ್ ಜಾರಿ

ಬೆಂಗಳೂರು, ಆಗಸ್ಟ್ 4: ರಾಜ್ಯದ ಸಾರಿಗೆ ನಿಗಮಗಳ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ನಾಳೆ ಆಗಸ್ಟ್ 5 ರಿಂದ ರಾಜ್ಯಾದ್ಯಂತ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ 4 ಸಾರಿಗೆ ನಿಗಮಗಳು ಇಂದು ಕೆಲಸಕ್ಕೆ ಹಾಜರಾಗುವಂತೆ ಎಲ್ಲಾ ಸಾರಿಗೆ ನೌಕರರಿಗೆ ನೋಟಿಸ್ ನೀಡಿದ್ದಾರೆ. ಅಲ್ಲದೆ ನಾಳೆಯಿಂದ ಕಡ್ಡಾಯವಾಗಿ ಎಲ್ಲಾ ಸಾರಿಗೆ ನೌಕರರು ತಮ್ಮ ಕೆಲಸಕ್ಕೆ ಹಾಜರಾಗಬೇಕು, ಜೊತೆಗೆ ವಾರದ ರಜೆಯನ್ನು ಸಹ ಸಾರಿಗೆ ನೌಕರರು ತೆಗೆದುಕೊಳ್ಳುವಂತಿಲ್ಲ ಎಂದು 4 ಸಾರಿಗೆ ನಿಗಮಗಳು ಸಾರಿಗೆ ನೌಕರರಿಗೆ ನೋಟಿಸ್…

Read More

ನಾಳೆಯಿಂದ ತೆಲುಗು ಫಿಲ್ಮ್ ಶೂಟಿಂಗ್ ಬಂದ್!

ಹೈದರಾಬಾದ್, ಆಗಸ್ಟ್ 3: ಟಾಲಿವುಡ್ ಅಂದರೆ ತೆಲುಗು ಚಿತ್ರರಂಗ ಭಾರತದ ಅತ್ಯಂತ ಲಾಭದಾಯಕ ಚಿತ್ರರಂಗ. ತೆಲುಗು ಚಿತ್ರರಂಗದಷ್ಟು ಹಣ ಹೂಡುವ ಮತ್ತು ಲಾಭಗಳಿಸುವ ಮತ್ತೊಂದು ಚಿತ್ರರಂಗ ಇಲ್ಲ. ಬಾಲಿವುಡ್​ಗಿಂತಲೂ ಹೆಚ್ಚಿನ ಹಣವನ್ನು ತೆಲುಗು ಚಿತ್ರರಂಗ ಹೂಡಿಕೆ ಮಾಡುತ್ತದೆ ಮತ್ತು ಲಾಭವಾಗಿ ಪುನಃ ಪಡೆದುಕೊಳ್ಳುತ್ತದೆ. ನರೇಂದ್ರ ಮೋದಿ ಸಹ ತೆಲುಗು ಚಿತ್ರರಂಗವನ್ನು ಹಲವು ಸಂದರ್ಭಗಳಲ್ಲಿ ಕೊಂಡಾಡಿದ್ದಾರೆ. ಭಾರತ ಚಿತ್ರರಂಗವನ್ನು ವಿಶ್ವಮಟ್ಟದಲ್ಲಿ ಗುರುತಿಸುವಂತೆ ಮಾಡುವಲ್ಲಿ ತೆಲುಗು ಸಿನಿಮಾ ರಂಗದ ಯೋಗದಾನ ದೊಡ್ಡದಿದೆ. ವರ್ಷಕ್ಕೆ ನೂರಾರು ಸಿನಿಮಾಗಳು ತೆಲುಗು ಚಿತ್ರರಂಗದಲ್ಲಿ ನಿರ್ಮಾಣಗೊಳ್ಳುತ್ತವೆ….

Read More

ಆಗಸ್ಟ್ 5 ರಂದು ಸಾರಿಗೆ ‌ಮುಷ್ಕರ ಮಾಡುತ್ತಿಲ್ಲ: ಅನಂತ ಸುಬ್ಬರಾವ್ ಸ್ಪಷ್ಟನೆ

ಬೆಂಗಳೂರು, ಆಗಸ್ಟ್ 3: ಇದೇ ಮಂಗಳವಾರ (ಆಗಸ್ಟ್ 5) ರಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕಕ್ಕೆ ಬರುತ್ತಿರುವುದರಿಂದ ಸಾರಿಗೆ ನೌಕರರು ಮುಷ್ಕರ ಮಾಡುತ್ತಿಲ್ಲ. ಬದಲಿಗೆ ಬಸ್ ಸಂಚಾರ ಸ್ಥಗಿತಗೊಳಿಸಿ ಎಲ್ಲಾ ಸಿಬ್ಬಂದಿಗಳು ಮನೆಯಲ್ಲಿರುತ್ತಾರೆ ಎಂದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಕೂಡಲೇ ರಾಜ್ಯಸರ್ಕಾರ ಸಾರಿಗೆ ನೌಕರರಿಗೆ 38 ತಿಂಗಳ ಅರಿಯರ್ಸ್​ ಕೊಡಬೇಕು. ಶಕ್ತಿ…

Read More

ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೊಟ್ರು ಹೊಸ ಅಪ್ ಡೇಟ್…

ಧಾರವಾಡ, ಆಗಸ್ಟ್ 3: ಕರ್ನಾಟಕ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನಕ್ಕೆ ವರಿಷ್ಠರು ಯಾರನ್ನು ಆಯ್ಕೆ ಮಾಡಬಹುದು ಎನ್ನುವ ಗೊಂದಲ ಇನ್ನೂ ಮುಂದುವರಿದಿದೆ. ರೆಬೆಲ್ ಟೀಂ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿದ್ದರೆ, ಮತ್ತೊಂದೆಡೆ ವಿಜಯೇಂದ್ರ ಅವರನ್ನೇ ಮುಂದುವರಿಸಬೇಕೆಂದು ಮತ್ತೊಂದು ಬಣ ಬಿಗಿಪಟ್ಟು ಹಿಡಿದಿದೆ. ಹೀಗಾಗಿ ಬೇರೆ ಹಲವು ರಾಜ್ಯಗಳಲ್ಲಿ ಅಧ್ಯಕ್ಷರ ಘೋಷಣೆಯಾಗಿದ್ದರೂ, ಕರ್ನಾಟಕ, ಉತ್ತರ ಪ್ರದೇಶ, ಗುಜರಾತ್ ಮುಂತಾದ ರಾಜ್ಯಗಳಲ್ಲಿ ಇನ್ನೂ ಹೆಸರು ಘೋಷಣೆಯಾಗದೇ ವಿಳಂಬವಾಗಿತ್ತು. ಈ ನಡುವೆ ಕೇಂದ್ರ ಸಚಿವ ಪ್ರಹ್ಲಾದ್…

Read More

ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಪ್ರಾಚೀನ ಹಿಂದೂ ವಿಗ್ರಹಗಳು ಪತ್ತೆ!

ಅನಂತನಾಗ್, ಆಗಸ್ಟ್ 3: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ ಜಿಲ್ಲೆಯ ಬುಗ್ಗೆಯೊಂದರ ನವೀಕರಣಕ್ಕಾಗಿ ಉತ್ಖನನ ಕಾರ್ಯದ ಸಮಯದಲ್ಲಿ ಪ್ರಾಚೀನ ಹಿಂದೂ ವಿಗ್ರಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಐಶುಖಮ್‌ನ ಸಲಿಯಾ ಪ್ರದೇಶದ ಕಾರ್ಕೂಟ್‌ ನಾಗ್‌ನಲ್ಲಿ ವಿಗ್ರಹಗಳು ಮತ್ತು ಶಿವಲಿಂಗಗಳು ಪತ್ತೆಯಾಗಿವೆ. ಈ ಸ್ಥಳವು ಕಾಶ್ಮೀರವನ್ನು 625 ರಿಂದ 855 ರವರೆಗೆ ಆಳಿದ ಕಾರ್ಕೂಟ ರಾಜವಂಶದೊಂದಿಗೆ ಸಂಬಂಧ ಹೊಂದಿರುವ ಕಾಶ್ಮೀರಿ ಪಂಡಿತರಿಗೆ ಮಹತ್ವದ್ದಾಗಿದೆ.ಲೋಕೋಪಯೋಗಿ ಇಲಾಖೆಯು ವಸಂತಕಾಲದಲ್ಲಿ ಪುನರುಜ್ಜೀವನ ಮತ್ತು ಪುನಃಸ್ಥಾಪನೆ ಕಾರ್ಯಗಳನ್ನು ಕೈಗೊಳ್ಳುತ್ತಿದೆ ಮತ್ತು…

Read More

ಸಚಿವ ಕೆ.ಎನ್ ರಾಜಣ್ಣ ವಿರುದ್ಧ ಹನಿಟ್ರ್ಯಾಪ್ ನಡೆದಿಲ್ಲ-ಸರ್ಕಾರಕ್ಕೆ ಸಿಐಡಿ ರಿಪೋರ್ಟ್

ಬೆಂಗಳೂರು: ತಮ್ಮ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂಬ ರಾಜ್ಯ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಆರೋಪ ನಿರಾಧಾರವಾಗಿದೆ. ಸಚಿವರ ಆಪಾದನೆಗೆ ಯಾವುದೇ ಪುರಾವೆ ಇಲ್ಲ ಎಂದು ರಾಜ್ಯಸರ್ಕಾರಕ್ಕೆ ವರದಿ ಸಲ್ಲಿಸಿ ವಿಚಾರಣೆಯನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ಪೂರ್ಣಗೊಳಿಸಿದೆ. ಈ ಮೂಲಕ 7 ತಿಂಗಳ ಹಿಂದೆ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಹನಿಟ್ರ್ಯಾಪ್ ಯತ್ನ ವಿವಾದವು ತಾರ್ಕಿಕ ಅಂತ್ಯ ಕಂಡಿದೆ. ಈ ಪ್ರಕರಣದ ಕುರಿತು ಸುದೀರ್ಘವಾಗಿ ವಿಚಾರಣೆ ನಡೆಸಿದ ಸಿಐಡಿ ಅಧಿಕಾರಿಗಳು, ಕೊನೆಗೆ ಆರೋಪದಲ್ಲಿ…

Read More

ಮಳೆಗಾಲ ಬಳಿಕ ಬಿಬಿಎಂಪಿ ಚುನಾವಣೆಗೆ ಚುನಾವಣಾ ಆಯೋಗ ಸಿದ್ಧತೆ..!!!

ಬೆಂಗಳೂರು, ಆಗಸ್ಟ್ 2: ನೆನೆಗುದಿಗೆ ಬಿದ್ದಿದ್ದ ಬಿಬಿಎಂಪಿ ಎಲೆಕ್ಷನ್‌ ಸದ್ಯದಲ್ಲೇ ನಡೆಯುವ ಸಾಧ್ಯತೆಗಳು ಗೋಚರಿಸುತ್ತಿವೆ. ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್‌ ಗಿರಿನಾಥ್‌ ಅವರು ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಡಿಸೆಂಬರ್‌ ಒಳಗೆ ಬಿಬಿಎಂಪಿಯ 5 ಪಾಲಿಕೆಗಳಿಗೆ ಎಲೆಕ್ಷನ್‌ ನಡೆಸಲು ಸರ್ಕಾರ ಸಿದ್ದವಿದೆ ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ. ಅವರು ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ ಈ ಸಂಜೆಗೆ ಲಭ್ಯವಿದೆ. 26 ಪುಟಗಳ ಪ್ರಮಾಣ ಪತ್ರದಲ್ಲಿ ಬಿಬಿಎಂಪಿಯನ್ನು 5 ಪಾಲಿಕೆಗಳನ್ನಾಗಿ ವಿಂಗಡಿಸಿ, ಗಡಿ ಗುರುತಿಸಲಾಗಿದೆ. ಈ 5 ಪಾಲಿಕೆಗಳಿಗೆ ಚುನಾವಣೆ ನಡೆಸಲು ಸಿದ್ದವಿರೋದಾಗಿ ತಿಳಿಸಿದ್ದಾರೆ.ಬೆಂಗಳೂರು ಪಶ್ಚಿಮ…

Read More

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮಂಗಳೂರು ಸೇರಿ ರಾಜ್ಯದ 14 ಕಡೆ ಎನ್ಐಎ ದಾಳಿ

ಮಂಗಳೂರು, ಆಗಸ್ಟ್ 2: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ. ಬಜ್ಪೆಯಲ್ಲಿ 10 ಕಡೆ ಮತ್ತು ಸುರತ್ಕಲ್​ನಲ್ಲಿ 4 ಕಡೆ ಹಲವರ ಮನೆ, ಕಚೇರಿ ಮೇಲೆ ದಾಳಿ ಮಾಡಿರುವ ಎನ್ಐಎ ಅಧಿಕಾರಿಗಳು ದಾಖಲೆ ಪರಿಶೀಲನೆ ಮಾಡಿದ್ದಾರೆ. ಜೊತೆಗೆ ಕೆಲವರನ್ನು ವಿಚಾರಣೆಗೂ ಒಳಪಡಿಸಿದ್ದಾರೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು‌. ಹತ್ಯೆ ಮಾಡಿದ ಮತ್ತು ಹತ್ಯೆಗೆ…

Read More
error: Content is protected !!