ಹೈಕೋರ್ಟ್ ಆದೇಶವನ್ನೂ ಮೀರಿ ನಾಳೆ ಸಾರಿಗೆ ನೌಕರರ ಮುಷ್ಕರ!
ಬೆಂಗಳೂರು, ಆಗಸ್ಟ್ 4: ಸಾರಿಗೆ ನೌಕರರ ಮುಷ್ಕರವನ್ನು ನಾಳೆವರೆಗೂ (ಆಗಸ್ಟ್ 5) ತಡೆಹಿಡಿಯುವಂತೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ.ನಾಳಿನ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ಮಹತ್ವದ ಆದೇಶ ನೀಡಿತ್ತು. ಆದರೆ ಹೈಕೋರ್ಟ್ ಆದೇಶದ ನಡುವೆಯೂ ನಾಳೆಯಿಂದ ಅನಿರ್ದಿಷ್ಟಾವದಿ ಮುಷ್ಕರ ಆರಂಭಿಸುವುದಾಗಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಖಚಿತಪಡಿಸಿದ್ದಾರೆ.ಹೀಗಾಗಿ ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ರಾಜ್ಯಾದ್ಯಂತ ಸಾರಿಗೆ ಬಸ್ ರಸ್ತೆಗಳಿಯುವುದಿಲ್ಲ. ಈ ಬಗ್ಗೆ…

