Headlines

newsfilemagazine

ದರ್ಶನ್ ಅಭಿಮಾನಿಗಳಿಂದ ಅಶ್ಲೀಲ ಕಮೆಂಟ್ಸ್: ರಮ್ಯಾ ದೂರು ಕೊಟ್ಟರೆ ಕ್ರಮ ಎಂದ ಗೃಹ ಸಚಿವ

ಬೆಂಗಳೂರು, ಜುಲೈ 28: ನಟ ದರ್ಶನ್‌ ಅಭಿಮಾನಿಗಳಿಂದ ಅಶ್ಲೀಲವಾದ, ಕೊಳಕು ಕಮೆಂಟ್ಸ್‌ ಬರುತ್ತಿರುವ ಬಗ್ಗೆ ನಟಿ ರಮ್ಯಾ ದೂರು ನೀಡಿದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹಸಚಿವ ಜಿ. ಪರಮೇಶ್ವರ್‌ ಹೇಳಿದ್ದಾರೆ. ಸೋಮವಾರ ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ರಮ್ಯ ಅವರು ಇದುವರೆಗೂ ಯಾವುದೇ ದೂರು ದಾಖಲಿಸಿಲ್ಲ. ಒಂದು ವೇಳೆ ದಾಖಲಿಸಿದರೆ ನಮ್ಮ ಪೊಲೀಸರು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ನುಡಿದರು. ರಮ್ಯಾ ದೂರು ಕೊಡಲಿ, ಪೊಲೀಸರು ಏನು ಕ್ರಮ‌ ಕೈಗೊಳ್ಳಬೇಕೋ ತಗೊಳ್ತಾರೆ….

Read More

ಎಚ್ಐವಿ ಪೀಡಿತ ತಮ್ಮನನ್ನು ಕೊಲೆಗೈದ ಅಕ್ಕ, ಕೊಲೆಗೆ ಸಾಥ್ ನೀಡಿದ ಪತಿ..!?

ಹೊಳಲ್ಕೆರೆ, ಜುಲೈ 28: ಹೆಚ್‌ಐವಿ ಪೀಡಿತನಾಗಿದ್ದ ತಮ್ಮನಿಂದ ನಮ್ಮ ಮನೆ ಮರ್ಯಾದೆ ಹೋಗುತ್ತದೆ ಎಂದು ಸ್ವತಃ ಅಕ್ಕನೇ ತನ್ನ ಗಂಡನ ಜೊತೆ ಸೇರಿ ಆತನನ್ನು ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದಲ್ಲಿ ನಡೆದಿದೆ. ಹೀಗೆ ತನ್ನ ಒಡಹುಟ್ಟಿದ ಅಕ್ಕನಿಂದಲೇ ಕೊಲೆಗೀಡಾದ ಯುವಕನನ್ನು ಮಲ್ಲಿಕಾರ್ಜುನ್‌(23) ಎಂದು ಗುರುತಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಕೊಲೆಗೀಡಾದ ಮಲ್ಲಿಕಾರ್ಜುನನ ಅಕ್ಕ ನಿಶಾ ಹಾಗೂ ಆಕೆಯ ಪತಿ ಮಂಜುನಾಥ್‌ ನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಮಲ್ಲಿಕಾರ್ಜುನ್‌ ಬೆಂಗಳೂರಿನಲ್ಲಿ ಗಾರ್ಮೆಂರ್ಟ್‌ನಲ್ಲಿ…

Read More

ಪರಿಶಿಷ್ಟ ಜಾತಿ-ಪಂಗಡಗಳಿಗೆ ಮೀಸಲಿಟ್ಟ ಅನುದಾನ ಗ್ಯಾರಂಟಿ ಯೋಜನೆಗಳಿಗೆ ಬಳಕೆ!

ಬೆಂಗಳೂರು, ಜುಲೈ 28: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಅನುದಾನದಿಂದ ಉಚಿತ ಗ್ಯಾರಂಟಿ ಯೋಜನೆಗಳಿಗೆ ಹಣ ಬಳಸಿ ತೀವ್ರ ಟೀಕೆಗೆ ಗುರಿಯಾಗಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೊಮ್ಮೆ ವಿವಾದ ಮೈಮೇಲೆ ಎಳೆದುಕೊಂಡಿದೆ. ಎಸ್​ಸಿ, ಎಸ್​ಟಿಗೆ ಮಾತ್ರ ಮೀಸಲಿಟ್ಟ ಎಸ್​ಸಿಎಸ್​​ಪಿ-ಟಿಎಸ್​​ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಡೈವರ್ಟ್ ಮಾಡಲು ಮುಂದಾಗಿದೆ. ಎಸ್​ಸಿಎಸ್​​ಪಿ-ಟಿಎಸ್​​ಪಿ (ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ) ಯೋಜನೆಯಡಿ 2025-26ರ ಸಾಲಿನಲ್ಲಿ 42,017.51 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಈ…

Read More

ಉತ್ತಮ ಮಳೆಯಾದ್ರೂ ರಸಗೊಬ್ಬರದ ಕೊರತೆ: ಇಂದು ರಾಜ್ಯಾದ್ಯಂತ ಬಿಜೆಪಿ ಹೋರಾಟ

ಬೆಂಗಳೂರು, ಜುಲೈ 28: ಕರ್ನಾಟಕದಾದ್ಯಂತ ಈ ಬಾರಿ ಮುಂಗಾರಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಹೀಗೆ ನಿರಂತರ ಮಳೆಯಿಂದ ಇಳೆ ಕಂಗೊಳಿಸುತ್ತಿದೆ. ಪರಿಣಾಮ ವರುಣನ ಕೃಪೆಗೆ ರೈತನ ಮೊಗದಲ್ಲಿ ಮಂದಹಾಸ ಮೂಡಿದೆ. ಉತ್ಕೃಷ್ಟ ಬೆಳೆಯ ನಿರೀಕ್ಷೆಯಲ್ಲಿರುವ ರೈತ, ಈ ಬಾರಿ ಉತ್ತಮ ಫಸಲು ತೆಗೆಯುವ ಕನಸು ಹೊತ್ತು ಹೆಜ್ಜೆ ಇಟ್ಟಿದ್ದಾನೆ. ಹೀಗೆ ಹೆಜ್ಜೆ ಇಟ್ಟ ಅನ್ನದಾತನಿಗೆ ರಸಗೊಬ್ಬರ ಕೊರತೆಯ ಕಲ್ಲು ಎದೆಗೆ ಬಡಿದಿದೆ. ಎಲ್ಲಿ ಹೋದರೂ ‘‘ನೋ ಸ್ಟಾಕ್’’ ಬೋರ್ಡ್!!! ಕಾಂಗ್ರೆಸ್, ಬಿಜೆಪಿ ಮಧ್ಯೆ ಗೊಬ್ಬರ ಗುದ್ದಾಟ…ಮಳೆ ಬಂದ್ರೂ ಗೊಬ್ಬರವಿಲ್ಲ,…

Read More

ಮಲ್ಲಿಕಾರ್ಜುನ ಖರ್ಗೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ-ಐಸಿಯುನಲ್ಲಿ ಚಿಕಿತ್ಸೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ 2ನೇ ಪುತ್ರ ಮಿಲಿಂದ್ ಖರ್ಗೆ ಅವರಿಗೆ ಕ್ಯಾನ್ಸರ್ ನಿಂದ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಸದ್ಯ ಮಿಲಿಂದ್ ಖರ್ಗೆ ಅವರನ್ನು ಬೆಂಗಳೂರಿನ ಸಕ್ರಾ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಬ್ಬರು ಹೆಣ್ಣುಮಕ್ಕಳು, ಮೂವರು ಗಂಡು ಮಕ್ಕಳಿದ್ದಾರೆ. ಮಿಲಿಂದ್ ಖರ್ಗೆ ಅವರು ಯುನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾದ ವಾರ್ಟನ್ ಸ್ಕೂಲ್ ನಲ್ಲಿ ಎಂ.ಬಿ.ಎ ಪದವಿ ಪಡೆದಿದ್ದಾರೆ. ವಿದೇಶದಲ್ಲಿದ್ದ ಮಿಲಿಂದ್ ಖರ್ಗೆ ಅವರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಮಿಲಿಂದ್…

Read More

ಡಿಸಿಎಂ ಡಿ.ಕೆ ಶಿವಕುಮಾರ್ ಕಚೇರಿ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಸಂದೇಶ

ಬೆಂಗಳೂರು, ಜುಲೈ 27: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಕಚೇರಿ ಹಾಗೂ ದೇವನಹಳ್ಳಿಯಲ್ಲಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಸ್ಫೋಟಿಸುವುದಾಗಿ ಇ-ಮೇಲ್​ ಸಂದೇಶ ಬಂದಿದೆ. ಮಾಹಿತಿ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ತೆರಳಿದ ಪೊಲೀಸರು, ಬಾಂಬ್​ ನಿಷ್ಕ್ರಿಯ ದಳ ಹಾಗೂ ಬಾಂಬ್ ಪತ್ತೆ ದಳ ಸಿಬ್ಬಂದಿ ಪರಿಶೀಲನೆ ನಡೆಸಿದರು. ಯಾವುದೇ ಬಾಂಬ್​ ಪತ್ತೆಯಾಗದ ಹಿನ್ನೆಲೆಯಲ್ಲಿ ಹುಸಿ ಬಾಂಬ್​ ಬೆದರಿಕೆ ಸಂದೇಶ ಎಂದು ಗೊತ್ತಾಗಿದೆ. ಬಾಂಬ್​ ಬೆದರಿಕೆ ಸಂದೇಶದಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. bhagwanthmann@yandex.com ಮೇಲ್‌ನಿಂದ ಬಾಂಬ್​ ಬೆದರಿಕೆ…

Read More

ದ್ರೋಹಿಗಳನ್ನು ಮಲ್ಲಾಡಿಹಳ್ಳಿ ಮಠದಿಂದ ಹೊರಹಾಕಿ: ಮಾಜಿ ಶಾಸಕ ಎ.ವಿ ಉಮಾಪತಿ ಕರೆ

ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿಹಳ್ಳಿಯ ಅನಾಥಸೇವಾಶ್ರಮದ ಆಡಳಿತಾಧಿಕಾರಿ ರಾಘವೇಂದ್ರ ಪಾಟೀಲ್ ಸಾರ್ವಜನಿಕರೆದುರು ಬಂದು ಇರುವ ಸಮಸ್ಯೆಗಳ ಬಗ್ಗೆ ಮಾತನಾಡಬೇಕೆಂದು ಮಾಜಿ ಶಾಸಕ ಎ.ವಿ ಉಮಾಪತಿ ಅವರು ಸವಾಲು ಹಾಕಿದ್ದಾರೆ. ಈ ಬಗ್ಗೆ ಹೊಳಲ್ಕೆರೆಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಜಿ ಶಾಸಕರಾದ ಎ.ವಿ ಉಮಾಪತಿ ಅವರು ಮಲ್ಲಾಡಿಹಳ್ಳಿಯ ಅನಾಥಸೇವಾಶ್ರಮದ ಆಸ್ತಿ ಅಲ್ಲಿನ ಆಡಳಿತಾಧಿಕಾರಿ ರಾಘವೇಂದ್ರ ಪಾಟೀಲ್, ಬಡಿಗೇರ್, ಶಿವರಾಮಯ್ಯ ಅವರ ಪಾಲಾಗುತ್ತಿದೆ ಎಂದು ಹರಿಹಾಯ್ದರು. “ಬಡಿಗೇರ್, ಮಠದ ಆಡಳಿತಾಧಿಕಾರಿ ರಾಘವೇಂದ್ರ ಪಾಟೀಲ್ ಹಾಗೂ ಶಿವರಾಮಯ್ಯ ಸೇರಿಕೊಂಡು ಮಲ್ಲಾಡಿಹಳ್ಳಿಯ ಅನಾಥಸೇವಾಶ್ರಮದ ಆಸ್ತಿಯನ್ನು ಕೊಳ್ಳೆ…

Read More

ಮೈಸೂರಿನಲ್ಲೇ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಕೊನೆಗೂ ರಹಸ್ಯ ಬಾಯ್ಬಿಟ್ಟ ಪೆಡ್ಲರ್!

ಸಾಂಸ್ಕೃತಿಕ ನಗರಿ ಮೈಸೂರಿನಲ್ಲೇ ಭಾರಿ ಪ್ರಮಾಣದ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಇನ್ನು ಡ್ರಗ್ಸ್ ತಯಾರಿಕಾ ಘಟಕ ಮೈಸೂರಿನಲ್ಲೇ ಇರುವುದು ಪತ್ತೆಯಾಗಿದೆ. ಮೈಸೂರಿನಲ್ಲಿ ಸಿಕ್ಕ ಮಾದಕ ವಸ್ತುವಿಗೆ ಮಹಾರಾಷ್ಟ್ರದ ನಂಟು ಇದ್ದು, ಈ ಬಗ್ಗೆ ಮಹಾರಾಷ್ಟ್ರದಲ್ಲಿ ಸೆರೆಯಾದ ಡ್ರಗ್ ಪೆಡ್ಲರ್‌ನಿಂದ ಮಾಹಿತಿ ಬಹಿರಂಗವಾಗಿದೆ.ಮೈಸೂರಿನಿಂದ ಡ್ರಗ್ ಸಪ್ಲೈ ಆಗುತ್ತಿರುವ ಬಗ್ಗೆ ಪೆಡ್ಲರ್ ಬಾಯ್ಬಿಟ್ಟಿದ್ದಾನೆ. ಖಚಿತ ಮಾಹಿತಿ ಮೇರೆಗೆ ಮಹಾರಾಷ್ಟ್ರ ಪೊಲೀಸರು, ಮೈಸೂರು ಹೊರವಲಯದ ರಿಂಗ್ ರಸ್ತೆ ಬಳಿ ತಯಾರಿಕಾ ಘಟಕದ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದರು. ಈ ವೇಳೆ…

Read More

ಕಾಂಗ್ರೆಸ್ ಗೆ ಗೊಂದಲ ಸೃಷ್ಟಿಸಿರುವ ಕೆಎಂಎಫ್ ಅಧ್ಯಕ್ಷ ಚುನಾವಣೆ

ಬೆಂಗಳೂರು, ಜುಲೈ 27: ಕರ್ನಾಟಕ ಹಾಲು ಮಹಾ ಮಂಡಳಿ (ಕೆ.ಎಂ.ಎಫ್) ಅಧ್ಯಕ್ಷರಾಗಿದ್ದ ಭೀಮಾ ನಾಯ್ಕ್ ಅವರ ಅಧಿಕಾರದ ಅವಧಿ ಮುಗಿದ ಮೇಲೆ ಹೊಸ ಕೆಎಂಎಫ್ ಅಧ್ಯಕ್ಷರ ಆಯ್ಕೆಗಾಗಿ ಕಾಂಗ್ರೆಸ್ ಪಕ್ಷದಲ್ಲೇ ಭಾರಿ ಪೈಪೋಟಿ ನಡೆಯುತ್ತಿದೆ. ಈಗಾಗಲೇ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ಡಿ.ಕೆ ಸುರೇಶ್ ಅವರನ್ನು ನೇಮಿಸಬೇಕೆಂದು ಡಿಸಿಎಂ ತಥಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಲಾಬಿ ಎಐಸಿಸಿ ಮಟ್ಟದಲ್ಲಿ ನಡೆಸುತ್ತಿದ್ದಾರೆ.ಆದರೆ ಇದೀಗ ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಜಿಲ್ಲೆಗಳ ಹಾಲು ಒಕ್ಕೂಟದ (ರಾ.ಬ.ಕೊ.ವಿ) ಅಧ್ಯಕ್ಷರಾಗಿ…

Read More

ಶಾಸಕ ಕೆ.ಎಂ ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ನೀಡಿ ಎಂದ ಸಚಿವ ಜಮೀರ್

ಹಾಸನ, ಜುಲೈ 26: ಜಿಲ್ಲೆಯ ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಸ್ಥಳೀಯ ಕಾಂಗ್ರೆಸ್ ಶಾಸಕ ಕೆ.ಎಂ ಶಿವಲಿಂಗೇಗೌಡ ಆಯೋಜಿಸಿದ ಗ್ಯಾರಂಟಿ ಯೋಜನೆ ಫಲಾನುಭವಿ ಸಮಾವೇಶದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಭಾಗವಹಿಸಿದ್ದರು.ಈ ವೇಳೆ ಅಬ್ಬರದ ಭಾಷಣ ಮಾಡಿದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ತಮ್ಮ ಮಾತುಗಳ ಕೊನೆಯಲ್ಲಿ ಸ್ಥಳೀಯ ಕಾಂಗ್ರೆಸ್ ಶಾಸಕ ಕೆ.ಎಂ ಶಿವಲಿಂಗೇಗೌಡರ ಪರ ಮಾತನಾಡಿ ಇವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.ಹಿಂದೆ ಜೆಡಿಎಸ್ ಪಕ್ಷದಲ್ಲಿದ್ದಾಗ ಜಮೀರ್ ಅಹ್ಮದ್ ಮತ್ತು…

Read More
error: Content is protected !!