Headlines

newsfilemagazine

ಬೆಂಗಳೂರಿನ ಮತ್ತೊಂದು ಶಾಲೆಗೆ ಬಾಂಬ್ ಬೆದರಿಕೆ!

ಬೆಂಗಳೂರು, ಜುಲೈ 22: ನಗರದ ಮತ್ತೊಂದು ಖಾಸಗಿ ಶಾಲೆಗೆ ಬಾಂಬ್ ಬೆದರಿಕೆಯ ಇ-ಮೇಲ್‌ ಸಂದೇಶ ಬಂದ ಹಿನ್ನೆಲೆಯಲ್ಲಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು. ನಗರದ ವರ್ತೂರು ಪೊಲೀಸ್‌‍ ಠಾಣೆ ವ್ಯಾಪ್ತಿಯ ಗುಂಜೂರು ಮುಖ್ಯರಸ್ತೆಯಲ್ಲಿರುವ ಖಾಸಗಿ ಶಾಲೆಗೆ ಬಾಂಬ್‌ ಇಟ್ಟಿರುವುದಾಗಿ ಇಂದು ಮಂಗಳವಾರ ಬೆಳಗ್ಗೆ ಇ-ಮೇಲ್‌ ಸಂದೇಶ ಬಂದಿದೆ. ಇ-ಮೇಲ್‌ ಪರಿಶೀಲಿಸುತ್ತಿದ್ದ ಸಿಬ್ಬಂದಿ ಈ ಸಂದೇಶ ಗಮನಿಸಿ ಗಾಬರಿಯಾಗಿ ಶಾಲಾ ಆಡಳಿತ ಮಂಡಳಿಗೆ ತಿಳಿಸಿದ್ದಾರೆ. ಶಾಲಾ ಆಡಳಿತ ಮಂಡಳಿ ತಕ್ಷಣ ಮಕ್ಕಳನ್ನು ಮನೆಗೆ ಕಳುಹಿಸಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ….

Read More

ಜಗದೀಶ್ ಧನ್ ಜಕರ್ ರಾಜೀನಾಮೆ ಬೆನ್ನಲ್ಲೇ ಉಪರಾಷ್ಟ್ರಪತಿ ಸ್ಥಾನಕ್ಕೆ ಪೈಪೋಟಿ

ನವದೆಹಲಿ, ಜುಲೈ 22: ಆರೋಗ್ಯದ ಕಾರಣ ಹೇಳಿ, ಎಲ್ಲರಿಗೂ ಅಚ್ಚರಿಯಾಗುವಂತೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರು ದಿಢೀರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ ಉತ್ತರಾಧಿಕಾರಿ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದೆ. ಲೋಕಸಭೆ ಮತ್ತು ರಾಜ್ಯ ಸಭೆಯ ಸದಸ್ಯರನ್ನು ಒಳಗೊಂಡಂತೆ ಆಡಳಿತಾರೂಢ ಭಾರತೀಯ ಜನತಾ ಪಕ್ಷದ ನೇತೃತ್ವದ ರಾಷ್ಟ್ರೀಯ ಪ್ರಜಾಸತಾತ್ಮಕ ಒಕ್ಕೂಟವು ಬಹುಮತವನ್ನು ಹೊಂದಿರುವುದರಿಂದ, ಧನ್‌ಕರ್‌ ರಾಜೀನಾಮೆ ನೀಡುವ ನಿರ್ಧಾರವು ಅಚ್ಚರಿಗೆ ಕಾರಣವಾಗಿದೆ. ಮುಂಬರುವ ದಿನಗಳಲ್ಲಿ ಸಂಭಾವ್ಯ ಹೆಸರುಗಳನ್ನು ಪರಿಗಣಿಸುವ ಸಾಧ್ಯತೆಯಿದೆ. ಭಾರತೀಯ ಸಂವಿಧಾನದ ಪ್ರಕಾರ, 60 ದಿನಗಳ…

Read More

ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ ಸುಪ್ರೀಂಕೋರ್ಟ್ ವಿಚಾರಣೆ ಗುರುವಾರಕ್ಕೆ ಮುಂದೂಡಿಕೆ

ನವದೆಹಲಿ, ಜುಲೈ 22: ನಟ ದರ್ಶನ್ ತೂಗುದೀಪ್ ಅವರು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿ, ಜಾಮೀನು ಪಡೆದು ಹೊರಬಂದರು. ಬಳಿಕ ಕರ್ನಾಟಕ ಹೈಕೋರ್ಟ್ ದರ್ಶನ್​ಗೆ ಜಾಮೀನು ನೀಡಿತ್ತು. ಈ ಜಾಮೀನು ತೀರ್ಪನ್ನು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನೆ ಮಾಡಿದೆ. ಈ ಅರ್ಜಿ ವಿಚಾರಣೆ ಇಂದು (ಜುಲೈ 22) ನಡೆಯಬೇಕಿತ್ತು. ಆದರೆ, ಈಗ ಅರ್ಜಿ ವಿಚಾರಣೆ ಗುರುವಾರಕ್ಕೆ ಮುಂದೂಡಲ್ಪಟ್ಟಿದೆ. ಹೀಗಾಗಿ, ದರ್ಶನ್​ಗೆ ಮತ್ತೆರಡು ದಿನ ರಿಲೀಫ್ ಸಿಕ್ಕಂತಾಗಿದೆ. ‘ಇಂದು ಸುಪ್ರೀಂಕೋರ್ಟ್ ನಲ್ಲಿ ದರ್ಶನ್ ಪರ ಹಿರಿಯ…

Read More

ಅನಾರೋಗ್ಯ ಕಾರಣ ಹೇಳಿ ಉಪರಾಷ್ಟ್ರಪತಿ ರಾಜೀನಾಮೆ

ನವದೆಹಲಿ, ಜುಲೈ 21: ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲು ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು, ನಾನು ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ, ಇದು ತಕ್ಷಣವೇ ಜಾರಿಗೆ ಬರುತ್ತದೆ” ಎಂದು ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ ಜಗದೀಪ್‌ ಧನ್‌ಕರ್‌ ಉಲ್ಲೇಖಿಸಿದ್ದಾರೆ. ಧನ್‌ಕರ್‌ ರಾಜೀನಾಮೆ ಭಾರತದ ರಾಜಕಾರಣದಲ್ಲಿ ಇದೀಗ ಭಾರೀ ಚರ್ಚೆಗೆ ಒಳಪಡುತ್ತಿದೆ. ಜಗದೀಪ್‌ ಧನ್‌ಕರ್‌ ಸಂಸತ್ತಿನ ಮಾನ್ಸೂನ್‌ ಅಧಿವೇಶನದ ಮೊದಲ ದಿನವೇ ಉಪರಾಷ್ಟ್ರಪತಿ ಮತ್ತು ರಾಜ್ಯಸಭೆ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ತಮ್ಮ ರಾಜೀನಾಮೆಗೆ ಆರೋಗ್ಯದ ಕಾರಣಗಳನ್ನು ನೀಡಿದ್ದಾರೆ….

Read More

17 ಲಕ್ಷ ಜನರಿಗೆ ತುಂಗಭದ್ರಾ ಕುಡಿಯುವ ನೀರಿನ ಸೌಲಭ್ಯ; ಸಿಎಂ ಸಿದ್ದರಾಮಯ್ಯ

ತುಮಕೂರು, ಜುಲೈ 21: ಜಿಲ್ಲೆಯ ಪಾವಗಡ ವಿಧಾನಸಭಾ ಕ್ಷೇತ್ರದ ಜನರು ಇಂದು ಸುವರ್ಣ ಅಕ್ಷರಗಳಲ್ಲಿಎ ಬರೆದಿಡುವ ಕ್ಷಣವಾಗಿದೆ, 2529 ಕೋಟಿ ವೆಚ್ಚದಲ್ಲಿ ಪಾವಗಡ, ಮೊಳಕಾಲ್ಮೂರು, ಚಳ್ಳಕೆರೆ, ಕೂಡ್ಲಿಗಿ,ಹಾಗೂ ಹರಪನಹಳ್ಳಿ ತಾಲ್ಲೂಕುಗಳ ಜನರಿಗೆ ಕುಡಿಯುವ ನೀರು ನೀಡಲಾಗುತ್ತಿದೆ, ಪ್ಲೋರೈಡ್ ನೀರಿನಿಂದ ಹಲವು ರೋಗಗಳು ಬರುತ್ತಿದ್ದವು ಇದರ ನಿವಾರಣೆಗೆ 200 ಕಿ.ಮೀ ದೂರದಿಂದ ಕುಡಿಯುವ ನೀರು ತಂದು ನೀಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಪಾವಗಡ ಪಟ್ಟಣದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ…

Read More

ಎಲ್ಲಾ ಶಾಸಕರಿಗೂ 50 ಕೋಟಿ ನೀಡಲು ಅನುದಾನ ಲಭ್ಯವಿಲ್ಲ: ಸಿಎಂ ಆರ್ಥಿಕ ಸಲಹೆಗಾರ

ಹುಬ್ಬಳ್ಳಿ, ಜು.21: ರಾಜ್ಯದ ಎಲ್ಲಾ ಶಾಸಕರ ಕ್ಷೇತ್ರಗಳಿಗೂ ತಲಾ 50 ಕೋಟಿ ರೂ. ಅನುದಾನ ನೀಡುವ ಸಂದರ್ಭದಲ್ಲಿ ನಡೆದ ಚರ್ಚೆಯನ್ನು ಸಿಎಂ ಆರ್ಥಿಕ ಸಲಹೆಗಾರರಾಗಿರುವ ಬಸವರಾಜರಾಯರೆಡ್ಡಿ ಬಹಿರಂಗಪಡಿಸಿದ್ದಾರೆ. ಇಂದು ನಗರದಲ್ಲಿ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ತಯಾರಿಕೆಯ ವೇಳೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಎಲ್ಲಾ ಶಾಸಕರಿಗೂ ತಲಾ 50 ಕೋಟಿ ರೂ.ಗಳನ್ನು ನೀಡುವ ಇಂಗಿತ ವ್ಯಕ್ತಪಡಿಸಿದ್ದರು. ಆ ಸಂದರ್ಭದಲ್ಲಿ ನಾನು ಕೂಡ ಇದ್ದೆ. ಎಲ್ಲಾ ಶಾಸಕರಿಗೂ ತಲಾ…

Read More

ಸಂಸದ ತೇಜಸ್ವಿಸೂರ್ಯ ವಿರುದ್ಧದ ಸುಳ್ಳು ಸುದ್ದಿ ಪ್ರಕರಣ ವಜಾ: ರಾಜ್ಯಸರ್ಕಾರಕ್ಕೆ ಮುಖಭಂಗ

ನವದೆಹಲಿ, ಜುಲೈ 21: ಹಾವೇರಿ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆಯೂ ಸುಳ್ಳು ಸುದ್ದಿ ಹಬ್ಬಿಸಿದರೆಂದು ಆರೋಪಿಸಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್​ಐಆರ್​ ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಈ ಮೂಲಕ ಬಿಜೆಪಿ ಸಂಸದ ತೇಜಸ್ವಿಸೂರ್ಯಗೆ ಬಿಗ್​ ರಿಲೀಫ್​ ಸಿಕ್ಕಿದೆ. ಜೊತೆಗೆ ಕರ್ನಾಟಕದ ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗ ಉಂಟಾಗಿದೆ. ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ನೇತೃತ್ವದ ಪೀಠ ವಿಚಾರಣೆ…

Read More

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್!

ನವದೆಹಲಿ, ಜುಲೈ 21: ಮುಡಾ ಹಗರಣ ಸಂಬಂಧ ಕೇಂದ್ರ ಜಾರಿ ನಿರ್ದೇಶನಾಲಯ ತನಿಖೆ ವಿಚಾರದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್​​ಗೆ ಸುಪ್ರೀಂಕೋರ್ಟ್​ನಲ್ಲಿ ಬಿಗ್ ರಿಲೀಫ್ ದೊರೆತಿದೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ ಪಾರ್ವತಿ ಅವರಿಗೆ ಕೇಂದ್ರ ಜಾರಿ ನಿರ್ದೇಶನಾಲಯ ನೀಡಿದ್ದ ನೋಟಿಸ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಇ.ಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಅಷ್ಟೇ ಅಲ್ಲದೆ, ಇಡಿಯನ್ನು ರಾಜಕೀಯವಾಗಿ ಬಳಸಿಕೊಳ್ಳುವ…

Read More

ಧರ್ಮಸ್ಥಳ ಭಾಗದ ಅಸಹಜ ಸಾವು-ನಾಪತ್ತೆಯಾದವರ ಕೇಸ್ ಗಳನ್ನು ಎಸ್ಐಟಿಗೆ ವಹಿಸಿದ ರಾಜ್ಯಸರ್ಕಾರ

ಬೆಂಗಳೂರು, ಜುಲೈ 20: ಧರ್ಮಸ್ಥಳ ಭಾಗದಲ್ಲಿ ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ಪ್ರಕರಣಗಳು ಹಾಗೂ ಅಸ್ವಾಭಾವಿಕ ಸಾವು, ಕೊಲೆ, ಅತ್ಯಾಚಾರ ಪ್ರಕರಣಗಳನ್ನು ಡಿಜಿಪಿ ಮಟ್ಟದ ಹಿರಿಯ ಅಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖೆಗೊಳಪಡಿಸುವುದಾಗಿ ರಾಜ್ಯಸರ್ಕಾರ ತಿಳಿಸಿದೆ. ಗೃಹ ಇಲಾಖೆಯಿಂದ ಹೊರಡಿಸಲಾಗಿರುವ ಆದೇಶದ ಅನುಸಾರ ಬೆಂಗಳೂರು ಆಂತರಿಕ ಭದ್ರತಾ ವಿಭಾಗದ ಪೊಲೀಸ್‌‍ ಮಹಾ ನಿರ್ದೇಶಕ ಡಾ. ಪ್ರಣವ್ ಮೊಹಾಂತಿ ನೇತೃತ್ವದಲ್ಲಿ 4 ಐಪಿಎಸ್‌‍ ಅಧಿಕಾರಿಗಳ ಎಸ್‌‍ಐಟಿ ರಚಿಸಲಾಗಿದೆ. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಸಿಎಂ ಸಿದ್ದರಾಮಯ್ಯ…

Read More

ಕರ್ನಾಟಕ ರಣಜಿ ಟೀಂಗೆ ವಾಪಸ್ಸಾದ ಚಾಂಪಿಯನ್ ಕರುಣ್ ನಾಯರ್!

ಬೆಂಗಳೂರು, ಜುಲೈ 20: 8 ವರ್ಷಗಳ ನಂತರ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿರುವ ಕನ್ನಡಿಗ ಕರುಣ್ ನಾಯರ್ ಇಂಗ್ಲೆಂಡ್‌ನಲ್ಲಿ ಇಲ್ಲಿಯವರೆಗೆ ಬ್ಯಾಟಿಂಗ್‌ನಲ್ಲಿ ಯಶಸ್ಸಾಗದೆ ವಿಫಲವಾಗಿದ್ದಾರೆ. ಈ ನಡುವೆ ಕರುಣ್ ನಾಯರ್ ದೇಶೀ ಟೂರ್ನಿಯಲ್ಲಿ ವಿದರ್ಭ ತಂಡವನ್ನು ರಣಜಿ ಚಾಂಪಿಯನ್ ಮಾಡಿದ ನಂತರ ಮತ್ತೆ ತಮ್ಮ ತವರು ಕರ್ನಾಟಕ ತಂಡವನ್ನು ಸೇರಿಕೊಂಡಿದ್ದಾರೆ. ಕಳೆದ ಎರಡು ದೇಶೀ ಆವೃತ್ತಿಯಲ್ಲಿ ವಿದರ್ಭ ತಂಡದ ಪರ ಆಡಿದ್ದ ಕರುಣ್ ನಾಯರ್ ಬಹಳ ಅದ್ಭುತ ಬ್ಯಾಟಿಂಗ್ ಮಾಡಿ ಜೊತೆಗೆ ನಾಯಕನಾಗಿ ಯಶಸ್ಸು ಕಂಡಿದ್ದಾರೆ. ಪ್ರಸ್ತುತ…

Read More
error: Content is protected !!