Headlines

newsfilemagazine

ಹೈಕೋರ್ಟ್ ಮಹತ್ವದ ಆದೇಶ: ಗ್ರೇಟರ್ ಬೆಂಗಳೂರು (ಆಡಳಿತ) ಕಾಯ್ದೆಯಡಿ ಭೂಸ್ವಾಧೀನಕ್ಕೆ ಹಿನ್ನಡೆ

ಬೆಂಗಳೂರು, ಜುಲೈ 24: ಗ್ರೇಟರ್ ಬೆಂಗಳೂರು(ಆಡಳಿತ) ಕಾಯ್ದೆಯಡಿ ಭೂಸ್ವಾಧೀನಕ್ಕೆ ಆರಂಭಿಕ ವಿಘ್ನ ಎದುರಾಗಿದೆ. ಗ್ರೇಟರ್ ಬೆಂಗಳೂರು ಆಡಳಿತ ಕಾಯಿದೆ (2025) ಅಡಿಯಲ್ಲಿ ಭೂಸ್ವಾಧೀನ ಪ್ರಶ್ನಿಸಿ ರಾಜಗೋಪಾಲ ಗೋಪಾಲಕೃಷ್ಣ ಎಂಬುವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ನೋಟಿಸ್ ಆಧರಿಸಿ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು. ಅರ್ಜಿದಾರರ ಬಿಡದಿ ಜಮೀನಿನ ಸ್ವಾಧೀನಕ್ಕೆ ಅಡ್ಡಿಪಡಿಸದಂತೆ ಆದೇಶ ಹೊರಡಿಸಿದೆ. ಅಲ್ಲದೇ ಈ ಬಗ್ಗೆ ಇದೇ ಜುಲೈ 29ರಂದು ಪ್ರತಿಕ್ರಿಯಿಸುವಂತೆ ರಾಜ್ಯ ಸರ್ಕಾರದ ನಗರಾಭಿವೃದ್ಧಿ ಇಲಾಖೆಗೆ ಸೂಚಿಸಿ ಹೈಕೋರ್ಟ್ ನೋಟಿಸ್…

Read More

ಮುಂಬೈ ಸರಣಿ ರೈಲು ಸ್ಫೋಟ: ಬಾಂಬೆ ಹೈಕೋರ್ಟ್ ನ 12 ಆರೋಪಿಗಳ ಖುಲಾಸೆ ತೀರ್ಪಿಗೆ ಸುಪ್ರೀಂಕೋರ್ಟ್ ತಡೆ

ನವದೆಹಲಿ, ಜುಲೈ 24: ಮುಂಬೈನಲ್ಲಿ 2006ರಲ್ಲಿ ನಡೆದ ಸರಣಿ ರೈಲು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್​ ನೀಡಿದ್ದ 12 ಆರೋಪಿಗಳ ಖುಲಾಸೆ ತೀರ್ಪಿಗೆ ಸುಪ್ರೀಂಕೋರ್ಟ್​ ತಡೆ ನೀಡಿದೆ. ಆರೋಪಿಗಳು ಮತ್ತೆ ಜೈಲಿಗೆ ಮರುಳುತ್ತಾರಾ ಎಂದು ಕಾದು ನೋಡಬೇಕಿದೆ. ಸಾಕ್ಷ್ಯಾಧಾರಗಳ ಕೊರತೆ ಇರುವ ಕಾರಣ ಆರೋಪಿಗಳನ್ನು ಖುಲಾಸೆಗೊಳಿಸುತ್ತಿರುವುದಾಗಿ ಬಾಂಬೆ ಹೈಕೋರ್ಟ್​ ಹೇಳಿತ್ತು. 189 ಜನರ ಸಾವಿಗೆ ಕಾರಣವಾದ 2006 ರ ಮುಂಬೈ ರೈಲು ಸ್ಫೋಟದ ಎಲ್ಲಾ 12 ಅಪರಾಧಿಗಳನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮಹಾರಾಷ್ಟ್ರ…

Read More

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ಮೃತ ಯುವತಿಯ ಮರಣೋತ್ತರ ಪರೀಕ್ಷೆ ವೇಳೆ ಕಿವಿಯೋಲೆ ಕಳವು!

ಬೆಂಗಳೂರು, ಜುಲೈ 24: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ ಮೃತಪಟ್ಟಿದ್ದ ದಿವ್ಯಾಂಶಿಯ ಚಿನ್ನಾಭರಣ ಕಳ್ಳತನವಾಗಿರುವ ಆರೋಪ ಕೇಳಿಬಂದಿದೆ. ಶವಾಗಾರದೊಳಗೆ ಮೃತದೇಹ ಕೊಂಡೊಯ್ಯುವಾಗ ಮಗಳ ಕಿವಿಯೋಲೆ, ಚಿನ್ನದ ಸರ ಇತ್ತು. ಆದ್ರೆ, ಕುಟುಂಬಸ್ಥರಿಗೆ ಹಸ್ತಾಂತರಿಸುವಾಗ ಆಭರಣ ಕಾಣೆಯಾಗಿತ್ತು ಎಂದು ದಿವ್ಯಾಂಶಿ ತಾಯಿ ಅಶ್ವಿನಿ ಆರೋಪಿಸಿ ಬೌರಿಂಗ್ ಆಸ್ಪತ್ರೆ ವಿರುದ್ಧ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಶವಾಗಾರದೊಳಗೆ ಮೃತದೇಹ ಕೊಂಡೊಯ್ಯುವಾಗ ಆಭರಣ ಇತ್ತು. ಕುಟುಂಬಸ್ಥರಿಗೆ ಹಸ್ತಾಂತರಿಸುವಾಗ ಆಭರಣ…

Read More

ಕಲಾಸಿಪಾಳ್ಯದಲ್ಲಿ ಬಾಂಬ್ ಸ್ಫೋಟಕ‌ ಪತ್ತೆ ಹಿನ್ನೆಲೆ: ತನಿಖೆಗೆ 6 ತಂಡಗಳ ರಚನೆ

ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ವಿಚಾರವಾಗಿ ತನಿಖೆಗೆ ಕಲಾಸಿಪಾಳ್ಯ ಠಾಣೆ ಪೊಲೀಸರಿಂದ ಆರು ತಂಡಗಳ ರಚನೆ ಮಾಡಲಾಗಿದೆ. ಸಿಸಿಬಿ, ಇಂಟೆಲಿಜೆನ್ಸ್, ಎಟಿಸಿ ತಂಡದಿಂದಲೂ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಜಿಲೆಟಿನ್ ಕಡ್ಡಿ ಜೊತೆಗೆ ಡಿಟೋನೆಟರ್​​ಗಳು​ ಕೂಡ ಪತ್ತೆ ಆಗಿದ್ದವು. ಈ ಬಗ್ಗೆ ಕಲಾಸಿಪಾಳ್ಯ ಪೊಲೀಸರು ಎಫ್​ಐಆರ್ ದಾಖಲಿಸಿದ್ದರು. ಕಲಾಸಿಪಾಳ್ಯ ಬಸ್​ ನಿಲ್ದಾಣದ ಶೌಚಾಲಯದ ಸಮೀಪ ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸ್ಫೋಟಕ ಪತ್ತೆಯಾಗಿತ್ತು. ಸ್ಥಳಕ್ಕೆ ಪೊಲೀಸರು, ಶ್ವಾನದಳ, ಬಾಂಬ್​ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿದ್ದವು….

Read More

ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

ನವದೆಹಲಿ, ಜುಲೈ 24: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ನಟ ದರ್ಶನ್ ತೂಗುದೀಪ್ ಹಾಗೂ ಇತರೆ ಎಲ್ಲಾ 17 ಆರೋಪಿಗಳು ಈಗಾಗಲೇ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಈ ಪೈಕಿ ದರ್ಶನ್ ಹಾಗೂ 7 ಆರೋಪಿಗಳ ಜಾಮೀನು ರದ್ದು ಮಾಡುವಂತೆ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ಗೆ ಮನವಿ ಮಾಡಿತ್ತು. ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆಯಲ್ಲಿ ವಾದ-ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. 10 ದಿನಗಳ ಬಳಿಕವಷ್ಟೇ ನಟ ದರ್ಶನ್ ಜಾಮೀನು ಅರ್ಜಿ ಬಗ್ಗೆ ತೀರ್ಪು…

Read More

ಹಳೆಯ GST ಬಾಕಿ ಮನ್ನಾ: ಸಣ್ಣ ವ್ಯಾಪಾರಿಗಳ ಮುಷ್ಕರ ವಾಪಸ್!

ಬೆಂಗಳೂರು, ಜುಲೈ 23: ವಾಣಿಜ್ಯ ತೆರಿಗೆ ಇಲಾಖೆಯಿಂದ ಜಾರಿಯಾಗುತ್ತಿದ್ದ ನೋಟೀಸ್ ಗಳಿಂದ ಹೌಹಾರಿದ್ದ ರಾಜ್ಯದ ಸಣ್ಣ ಉದ್ದಿಮೆದಾರರು ಸಿಎಂ ಸಿದ್ದರಾಮಯ್ಯನವರು ನಡೆಸಿದ ಮೀಟಿಂಗ್ ನಂತರ ನಿರಾಳರಾಗಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯಿಂದ ಜಾರಿಯಾಗಿರುವ ತೆರಿಗೆ ನೋಟೀಸ್ ಗಳನ್ನು ವಾಪಸ್ಸು ಪಡೆಯುವ ಆಶ್ವಾಸನೆಯನ್ನು ಕಾಂಡಿಮೆಂಟ್ಸ್, ಬೇಕರಿ, ಟೀ ಸ್ಟಾಲ್ ನಡೆಸುವ ಮತ್ತು ಎಲ್ಲ ಸಣ್ಣ ಉದ್ದಿಮೆದಾರರಿಗೆ ಸಿಎಂ ಸಿದ್ದರಾಮಯ್ಯ ಇಂದು ಭರವಸೆ ನೀಡಿದ ಹಿನ್ನೆಲೆಯಲ್ಲಿ ಇಂದು ಪ್ರತಿಭಟನೆ ಆರಂಭಿಸಿದ್ದ ಸಣ್ಣ ವ್ಯಾಪಾರಿಗಳು ಅದನ್ನು ಇಂದೇ ವಾಪಸ್ ಪಡೆದಿದ್ದಾರೆ. ಆದರೆ ಈ…

Read More

ಬೆಂಗಳೂರಿನ ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ!

ಬೆಂಗಳೂರು, ಜುಲೈ 23: ನಗರದ ಕಲಾಸಿಪಾಳ್ಯ ಬಿಎಂಟಿಸಿ ಬಸ್​ ನಿಲ್ದಾಣದಲ್ಲಿ ಸ್ಫೋಟಕ ಪತ್ತೆಯಾಗಿದೆ. ಇಂದು(ಜುಲೈ23) ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಲಾಸಿಪಾಳ್ಯ ಬಸ್ ನಿಲ್ದಾಣದ ಶೌಚಾಲಯದ ಸಮೀಪ ಸ್ಫೋಟಕ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು, ಶ್ವಾನದಳ, ಬಾಂಬ್​ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿದೆ. ಒಂದು ಬ್ಯಾಗ್​ ನಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇನ್ನು ಸ್ಥಳಕ್ಕೆ ಡಿಸಿಪಿ ಎಸ್.ಗಿರೀಶ್​ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಸದ್ಯ ಬಸ್​ ನಿಲ್ದಾಣದಲ್ಲಿ ಪತ್ತೆಯಾದ ಸ್ಫೋಟಕವನ್ನು ಪೊಲೀಸರು ವಶಕ್ಕೆ…

Read More

ಸೆಪ್ಟೆಂಬರ್ 22 ರಿಂದ ಮರುಜಾತಿಗಣತಿಗೆ ನಿರ್ಧರಿಸಿದ ರಾಜ್ಯಸರ್ಕಾರ

ಬೆಂಗಳೂರು, ಜುಲೈ 23: ಭಾರೀ ವಿವಾದಕ್ಕೆ ಗುರಿಯಾಗಿರುವ ಕಾಂತರಾಜು ಆಯೋಗ ಜಾತಿಗಣತಿ ವರದಿಗೆ ಬ್ರೇಕ್ ಹಾಕಲು ಹೈಕಮಾಂಡ್ ಸೂಚಿಸಿದ್ದು, ಬದಲಿಗೆ ಮರು ಜಾತಿಗಣತಿ ಮಾಡುವಂತೆ ಸೂಚಿಸಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಸಹ ಒಪ್ಪಿಗೆ ಸೂಚಿಸಿದ್ದಾರೆ. ಈ ಸಂಬಂಧ ಇಂದು (ಜುಲೈ 23) ಸಂಬಂಧ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಸುಮಾರು ಒಂದುವರೆ ಗಂಟೆಗೂ ಹೆಚ್ಚು ಕಾಲ ಮಹತ್ವದ ಸಭೆ ಮಾಡಿದ್ದು, ಜಾತಿ ಜನಗಣತಿ ಮರು ಸಮೀಕ್ಷೆಯ ಬಗ್ಗೆ ಚರ್ಚೆ ಮಾಡಿದ್ದಾರೆ. ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ 15…

Read More

MRMC ಶಿಷ್ಯ ವೇತನ ಹಗರಣ: ಕೈ ಮುಖಂಡನ 5.87 ಕೋಟಿ ಆಸ್ತಿ ಜಪ್ತಿ

ಕಲಬುರಗಿ, ಜುಲೈ 23: ಎಂಆರ್​ಎಂಸಿ ಮೆಡಿಕಲ್ ಕಾಲೇಜ್ ಶಿಷ್ಯ ವೇತನ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್​ಕೆಇ ಸೊಸೈಟಿಯ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಭೀಮಾಶಂಕರ್ ಬಲಿಗುಂದಿಯ 5.87 ಕೋಟಿ ರೂ ಆಸ್ತಿಯನ್ನು ಇ.ಡಿ ಜಪ್ತಿ ಮಾಡಿದೆ. ಕಲಬುರಗಿಯ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 2018 ರಿಂದ 2024 ರ ವರೆಗಿನ ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳ ಶಿಷ್ಯ ವೇತನದಲ್ಲಿ ಅಂದಾಜು 82 ಕೋಟಿ ರೂ. ಹಗರಣ ನಡೆದಿತ್ತು. ಈ ಬಗ್ಗೆ ಟಿವಿ9 ವಿಸ್ತೃತ ವರದಿ ಪ್ರಸಾರ‌ ಮಾಡಿತ್ತು….

Read More

ಅರಣ್ಯ ಪ್ರದೇಶಗಳಲ್ಲಿ ಇನ್ನು‌ ದನ-ಕರು, ಕುರಿ-ಮೇಕೆ ಮೇಯಿಸುವುದು ನಿಷೇಧ!

ಬೆಂಗಳೂರು, ಜುಲೈ 22: ಕರ್ನಾಟಕದಲ್ಲಿರುವ ಅರಣ್ಯ ಪ್ರದೇಶದೊಳಗೆ ದನಕರು , ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿರುವ ಅವರು, ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಸಾಕು ಪ್ರಾಣಿಗಳಿಗೆ ಆಹಾರವಾಗಿ, ಅರಣ್ಯದಲ್ಲಿ…

Read More
error: Content is protected !!