Headlines

newsfilemagazine

ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಪೋಸ್ಟ್ ಹಾಗೂ ಪ್ರಚೋದನಕಾರಿ ಹೇಳಿಕೆ: ಕಾನೂನು ಕ್ರಮದ ಎಚ್ಚರಿಕೆ ನೀಡಿದ ಚಾಮರಾಜನಗರ ಎಸ್ಪಿ

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಪದಬಳಕೆ, ಕೋಮು ಸೌಹಾರ್ದತೆಗೆ ಧಕ್ಕೆ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ಪೋಸ್ಟ್ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಮುತ್ತುರಾಜು ಎಂ. ಅವರು ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ​ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಕಾಮೆಂಟ್ ಮಾಡಿದ್ದ ಹಿನ್ನೆಲೆಯಲ್ಲಿ, ಕೊಳ್ಳೆಗಾಲ ಪೊಲೀಸರು ದೂರು ದಾಖಲಿಸಿಕೊಂಡು ಓರ್ವ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದರ…

Read More

ದಲಿತ ದ್ರೋಹಿ ಹುಲಿಕೆರೆ ಗ್ರಾ.ಪಂ. ಪಿಡಿಒ ರವರ ಅಮಾನತು ಆದೇಶವಿದ್ದರೂ ಕಚೇರಿಗೆ ಬರುತ್ತಿರುವುದೇಕೆ!?

​ಶ್ರೀರಂಗಪಟ್ಟಣ: ತಾಲ್ಲೂಕಿನ ಹುಲಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಂಗಹಳ್ಳಿ ಗ್ರಾಮದಲ್ಲಿ ನಿಯಮಬಾಹಿರವಾಗಿ ಅಂಬೇಡ್ಕರ್ ಭವನವನ್ನು ನೆಲಸಮಗೊಳಿಸಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಶ್ರೀನಿವಾಸ್ ಕೆ. ಅವರನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು (CEO) ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಆದರೆ, ಅಮಾನತು ಆದೇಶ ಹೊರಬಿದ್ದರೂ ಅಧಿಕಾರಿ ಇಂದಿಗೂ ಕರ್ತವ್ಯದಲ್ಲಿ ಮುಂದುವರಿದಿರುವುದು ಸಾರ್ವಜನಿಕರಲ್ಲಿ ತೀವ್ರ ಅನುಮಾನಗಳಿಗೆ ಕಾರಣವಾಗಿದೆ. ​ಪ್ರಕರಣದ ಹಿನ್ನೆಲೆ: ​ಹೊಂಗಹಳ್ಳಿ ಗ್ರಾಮದ ಅಂಬೇಡ್ಕರ್ ಭವನದ ದುರಸ್ತಿಗಾಗಿ 2025-26ನೇ ಸಾಲಿನ ಶೇ. 25ರ…

Read More

ಗೌರಿಬಿದನೂರು EO ಸಾಹೇಬರ ಸಾಮ್ರಾಜ್ಯ!

ವರದಿ : ನಾರ. ವೆಂಕಟೇಶ್ ಮೂರ್ತಿಮೊ. ಸಂ= 7411173919 ಹೊನ್ನಯ್ಯ ಎಂಬ ಹೆಸರಿನ ಈ ಸಾಹೇಬರು ಕಳೆದ ಎರಡು ವರ್ಷಗಳಿಂದ ಇಲ್ಲಿರುತ್ತಾರೆ. ಇವರ ಅಧಿಕಾರಾವಧಿಯಲ್ಲಿ ಬಹುತೇಕ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯವಸ್ಥೆ ಎಕ್ಕುಟ್ಟಿ ಹೋಗಿರುವುದು ಅಲ್ಲಲ್ಲೇ ಕಾಣಿಸುತ್ತದೆ. ಆದರೆ ಇವುಗಳ ಜವಾಬ್ದಾರಿ ಹೊತ್ತ ಇಯಪ್ಪ ಏನು ಮಾಡುತ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳೋಣ. ಅದಕ್ಕಿಂತ ಮುಂಚೆ ಪ್ರಸ್ತುತ ಪಂಚಾಯಿತಿ ಪಿಡಿಒ ಒಬ್ಬರ ಅಕ್ರಮ ಕಾರ್ಯವೈಖರಿ ಹೇಗಿರುತ್ತದೆ ಎಂದು ಸ್ಯಾಂಪಲ್ ನೋಡೋಣ. ಇದು ತೊಂಡೆಬಾವಿ ಎಂಬ ಗ್ರಾಮ ಪಂಚಾಯಿತಿ ಕಥೆ. ಈ…

Read More

​ಲೋಕಾ ಬಲೆಗೆ ಬ್ರೋಕರ್ ಸಮೇತ ಬಿದ್ದ ಭ್ರಷ್ಟ ಅಧಿಕಾರಿಗಳು!

ವರದಿ: ರಾಮಸಮುದ್ರ ಎಸ್. ವೀರಭದ್ರಸ್ವಾಮಿಚಾಮರಾಜನಗರ: ಇ ಖಾತಾ ಮಾಡಿಕೊಡಲು ಸಾರ್ವಜನಿಕರಿಂದ ಬರೋಬ್ಬರಿ 25 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಚಾಮರಾಜನಗರ ನಗರಸಭೆಯ ಇಬ್ಬರು ಅಧಿಕಾರಿಗಳು ಹಾಗೂ ಓರ್ವ ಮಧ್ಯವರ್ತಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಚಾಮರಾಜನಗರದ ನಗರಸಭೆ ಕಚೇರಿಯಲ್ಲಿಯೇ ಈ ಹೈಡ್ರಾಮಾ ನಡೆದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ​ನಗರಸಭೆಯ ಕಂದಾಯ ಅಧಿಕಾರಿ (RO) ಹೇಮಂತ್ ಕುಮಾರ್, ಕಂದಾಯ ನಿರೀಕ್ಷಕ (RI) ಶಕೀಲ್ ಅಹಮ್ಮದ್ ಹಾಗೂ ಲಂಚದ ಹಣ ವಸೂಲಿಗೆ ನಿಂತಿದ್ದ ದಲ್ಲಾಳಿ ಹಬೀಬ್ ಸಿಕ್ಕಿಬಿದ್ದ ಆರೋಪಿಗಳು….

Read More

​ಶಾಸಕ ಎ.ಆರ್. ಕೃಷ್ಣಮೂರ್ತಿಗೆ ಸಚಿವ ಸ್ಥಾನ ನೀಡಲು ಬಿ.ಎಸ್. ಶಶಿಕುಮಾರ್ ಒತ್ತಾಯ

ಚಾಮರಾಜನಗರ: ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕೆಪಿಸಿಸಿ ಸಂವಹನ ಮತ್ತು ಮಾಧ್ಯಮ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ರಾಜ್ಯ ಮಟ್ಟದ ಕುರುಬರ ಸಂಘದ ಚಾಮರಾಜನಗರ ಜಿಲ್ಲಾಧ್ಯಕ್ಷರಾದ ಬಿ.ಎಸ್. ಶಶಿಕುಮಾರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ​ಎ.ಆರ್. ಕೃಷ್ಣಮೂರ್ತಿ ಅವರು ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಹಿಂದುಳಿದ ಹಾಗೂ ದಲಿತ ವರ್ಗಗಳ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ಅವರ ರಾಜಕೀಯ ಹಿರಿತನ ಮತ್ತು ಪಕ್ಷಕ್ಕೆ ನೀಡಿರುವ ಕೊಡುಗೆಯನ್ನು…

Read More

​ಅಂದು 136, ಇಂದು 2028ರ ಭವಿಷ್ಯ! ಸಿಎಂ ಪ್ರಶ್ನೆಗೆ ಮೌನವಾದ ಡಿಸಿಎಂ ಗುಟ್ಟೇನು?

​”ಇಂದೇ ಪೇಪರ್‌ನಲ್ಲಿ ಬರೆದಿಟ್ಟುಕೊಳ್ಳಿ, 2028ರಲ್ಲೂ ಇದೇ ಡಿಕೆ ಶಿವಕುಮಾರ್ ಇರುತ್ತಾರೆ, ಇದೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ!”—ಹೀಗೆಂದು ಭವಿಷ್ಯ ನುಡಿಯುವ ಮೂಲಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ಗೆ ನೇರ ಸವಾಲು ಹಾಕಿದ್ದಾರೆ.​ರಾಜ್ಯ ಬಿಜೆಪಿಯು ಮುಂದಿನ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಬೆನ್ನಲ್ಲೇ, ಇತ್ತ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ, ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರ ಹಿಡಿಯುವುದು ಸೂರ್ಯ-ಚಂದ್ರರಷ್ಟೇ ಸತ್ಯ ಎಂಬ ಆತ್ಮವಿಶ್ವಾಸ ವ್ಯಕ್ತಪಡಿಸಿದರು. ​ಅಂದು 136, ಇಂದು 2028ರ ಭವಿಷ್ಯ!…

Read More

ರೌಡಿಗಳ ಬೆವರಿಳಿಸಿದ ಎಸ್‌ಪಿ ಮುತ್ತುರಾಜು: ತಂಟೆಗೆ ಬಂದ್ರೆ ಜೈಲು ಫಿಕ್ಸ್ ಎಂದು ವಾರ್ನಿಂಗ್!

ವರದಿ : ರಾಮಸಮುದ್ರ ಎಸ್. ವೀರಭದ್ರ ಸ್ವಾಮಿ ಚಾಮರಾಜನಗರ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಭರ್ಜರಿ ಕಾರ್ಯಾಚರಣೆ ನಡೆಸಿದೆ. ವಿವಿಧ ಠಾಣೆಗಳಲ್ಲಿ ರೌಡಿಶೀಟ್ ಹೊಂದಿರುವ ಹಾಗೂ ಸರಣಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಸಾರ್ವಜನಿಕ ನೆಮ್ಮದಿಗೆ ಭಂಗ ತರುತ್ತಿದ್ದ ಸಮಾಜವಿರೋಧಿ ಶಕ್ತಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಶ್ರೀ ಮುತ್ತುರಾಜು ಎಂ. ಖಡಕ್ ವಾರ್ನಿಂಗ್ ನೀಡಿದ್ದಾರೆ. ಮೇ 25ರ ಸೋಮವಾರದಂದು ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲೆಯ ಇತಿಹಾಸದಲ್ಲೇ ಅತಿ…

Read More

ಉಪ ಲೋಕಾಯುಕ್ತರ ಭೇಟಿ ಬೆನ್ನಲ್ಲೇ ಕಲೆಕ್ಷನ್ ದಂಧೆ: ಮಂಡ್ಯದಲ್ಲಿ ಭಾಸ್ಕರ ರಾವ್ ಕಪ್ಪು ಇತಿಹಾಸ ಮರುಕಳಿಸಿತೇ?

ಮಾನ್ಯ ಮುಖ್ಯ ಕಾರ್ಯದರ್ಶಿಗಳಿಗೆ ಸಲ್ಲಿಕೆಯಾಗಿರುವ ಒಂದು ಸ್ಪೋಟಕ ದೂರು ಈಗ ಮಂಡ್ಯ ಮತ್ತು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಮಂಡ್ಯ ಹಾಗೂ ಮಳವಳ್ಳಿ ತಾಲೂಕುಗಳ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರದ ತನಿಖೆ ನಡೆಸಲು ಬಂದಿರುವ ಉಪ ಲೋಕಾಯುಕ್ತರ ಹೆಸರಿನಲ್ಲೇ ಈಗ ಕೋಟ್ಯಂತರ ರೂಪಾಯಿ ವಸೂಲಿ ದಂಧೆ ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಧಿಕಾರಿಗಳಿಗೆ ತನಿಖೆಯಿಂದ ‘ಕ್ಲೀನ್ ಚಿಟ್’ ಕೊಡಿಸುವುದಾಗಿ ನಂಬಿಸಿ, ಪಂಚಾಯತಿ ಮಟ್ಟದ ಸಿಬ್ಬಂದಿಯಿಂದ ಹಿಡಿದು ಕ್ಲಾಸ್ 1 ದರ್ಜೆಯ ಅಧಿಕಾರಿಗಳವರೆಗೆ ಎಲ್ಲರಿಂದಲೂ ಲಕ್ಷ ಲಕ್ಷ…

Read More

ಸಾರ್ವಜನಿಕ ಸೇವಾ ಕಾಯ್ದೆ ಗಾಳಿಗೆ ತೂರಿದ ಪಿಡಿಒ ಶೋಭಾರಾಣಿ: ಮೇಲಾಧಿಕಾರಿಗಳ ಮೌನದ ವಿರುದ್ಧ ಸಾರ್ವಜನಿಕರ ತೀವ್ರ ಅಸಮಾಧಾನ.!?

ಶ್ರೀರಂಗಪಟ್ಟಣ ತಾಲ್ಲೂಕಿನ ಕೆ. ಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಸಾರ್ವಜನಿಕ ಸೇವೆ ಸಂಪೂರ್ಣ ಹದಗೆಟ್ಟಿದ್ದು, ಕಚೇರಿ ವೇಳೆಯಲ್ಲೇ ಬೀಗ ಹಾಕಿ ಸಿಬ್ಬಂದಿ ನಾಪತ್ತೆಯಾಗಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸೋಮವಾರದ ಬಿರುಬಿಸಿಲಿನ ನಡುವೆಯೂ ವಿವಿಧ ಪ್ರಮಾಣಪತ್ರಗಳು, ತುರ್ತು ದಾಖಲಾತಿಗಳು ಹಾಗೂ ಸರ್ಕಾರದ ಸೌಲಭ್ಯಗಳಿಗಾಗಿ ದೂರದ ಗ್ರಾಮಗಳಿಂದ ಬಂದಿದ್ದ ಬಡ ಜನತೆ ಪಂಚಾಯತಿ ಕಚೇರಿ ಎದುರು ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ಸಾರ್ವಜನಿಕರನ್ನು ಸ್ವಾಗತಿಸಿದ್ದು ಮಾತ್ರ ಕಚೇರಿಯ ಮುಖ್ಯ ದ್ವಾರಕ್ಕೆ ಹಾಕಿದ್ದ ಬೀಗವೇ ಎಂಬುದು ಜನರ ಆಕ್ರೋಶಕ್ಕೆ ಕಾರಣವಾಯಿತು.ದಿನಾಂಕ…

Read More

ಮಂಡ್ಯ ಮೂಲದ ವ್ಯಕ್ತಿಯ ಐಡೆಂಟಿಟಿ ಬಳಸಿ ಬೆಸ್ಕಾಂ ಇಂಜಿನಿಯರ್ ಆಗಿದ್ದ ಬೊಮ್ಮೇಗೌಡನ ಆಟ ಕ್ಲೈಮ್ಯಾಕ್ಸ್ನಲ್ಲಿ ಪ್ಲಾಪ್!

ಬೆಂಗಳೂರಿನ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ 40 ವರ್ಷಗಳ ಹಿಂದಿನ ಮಹಾ ವಂಚನೆಯೊಂದು ತನಿಖೆಯ ಹಂತದಲ್ಲಿದೆ. 1982ರಲ್ಲಿ ಮಂಡ್ಯ ಜಿಲ್ಲೆ ಮಳವಳ್ಳಿಯ ಎಂ. ರಾಚಯ್ಯ ಎಂಬ ಯುವಕ ಶಿವಮೊಗ್ಗದ ಕರ್ನಾಟಕ ವಿದ್ಯುತ್ ಮಂಡಳಿಯ ಗ್ಯಾಂಗ್‌ಮನ್ ಹುದ್ದೆಯ ಸಂದರ್ಶನಕ್ಕೆ ಹೋಗಿದ್ದಾಗ ಅವರ ಮಾರ್ಕ್ಸ್‌ಕಾರ್ಡ್ ಮತ್ತು ಪ್ರಮಾಣಪತ್ರಗಳು ಕಳೆದುಹೋಗಿದ್ದವು. ಅದೇ ಸಂದರ್ಶನಕ್ಕೆ ಬಂದಿದ್ದ ಹಾಸನ ಮೂಲದ ಬೊಮ್ಮೇಗೌಡನಿಗೆ ಈ ದಾಖಲೆಗಳು ಸಿಕ್ಕಿದ್ದವು. ಬೊಮ್ಮೇಗೌಡ ತಾನೇ ‘ರಾಚಯ್ಯ’ ಎಂದು ಸೋಗು ಹಾಕಿ, ಆ ನಕಲಿ ಐಡೆಂಟಿಟಿ ಮೂಲಕವೇ ಸರ್ಕಾರಿ ಕೆಲಸ ಗಿಟ್ಟಿಸಿಕೊಂಡಿದ್ದ. ​ಅಸಲಿ…

Read More
error: Content is protected !!