Headlines

newsfilemagazine

ಹುಲಿಕೆರೆ: ಆಕಸ್ಮಿಕ ಬೆಂಕಿ, ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಪೀಠೋಪಕರಣಗಳು ಭಸ್ಮ!

ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮವಾಗಿ ಮನೆಯಲ್ಲಿದ್ದ ಪೀಠೋಪಕರಣಗಳು ಸುಟ್ಟು ಬಸ್ಮವಾಗಿರುವ ಘಟನೆ ಶ್ರೀರಂಗಪಟ್ಟಣ ತಾಲೂಕು ಹುಲಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿನ್ನೆ ನಡೆದಿದೆ. ನಿನ್ನೆ ಬೆಳಗ್ಗೆ ಸುಮಾರು 9 ಗಂಟೆಯ ಸುಮಾರಿಗೆ ಹುಲಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ MNPM ಕಾಲೋನಿಯ ಶಿವಣ್ಣಚಾರ್ ರವರ ಮನೆಯಲ್ಲಿ ಸೌದೆ ಒಲೆಯಲ್ಲಿ ನೀರು ಕಾಯಿಸುತ್ತಿರುವಾಗ ಆಕಸ್ಮಿಕವಾಗಿ ಬೆಂಕಿಯು ಮನೆಯನ್ನು ಆವರಿಸಿ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಪೀಠೋಪಕರಣಗಳು ಸುಟ್ಟು ಬಸ್ಮಮಾಡಿದೆ ಹಾಗೂ ಮನೆಯ ಮೇಲ್ಚಾವಣಿಯು ಸಂಪೂರ್ಣ ಹಾನಿಯಾಗಿದೆ. ಬೆಂಕಿ ಕಂಡ ಸ್ಥಳೀಯರು ಬೆಂಕಿ…

Read More

ಕರ್ನಾಟಕದಲ್ಲಿ ಮುಂದುವರೆದ ಹೃದಯಾಘಾತದ ಮರಣಮೃದಂಗ: ಭಾನುವಾರ 8 ಸಾವು!

ಕರ್ನಾಟಕದಲ್ಲಿ ಹೃದಯಾಘಾತದಿಂದ ಸಾವಿಗೀಡಾಗುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇಂದು ಭಾನುವಾರ (ಜುಲೈ 6) ಒಂದೇ ದಿನ ಕರ್ನಾಟಕದಲ್ಲಿ ಹೃದಯಾಘಾತದಿಂದ 8 ಜನರು ಸಾವನ್ನಪ್ಪಿದ್ದಾರೆ.ಇದೇ ರೀತಿ ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಸಹ ತಲಾ ಇಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇನ್ನು, ಯಾದಗಿರಿ, ಧಾರವಾಡ ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತಲಾ ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಚಾಮರಾಜನಗರದ ರಾಮಸಮುದ್ರ ಹೌಸಿಂಗ್‌ಬೋರ್ಡ್ ಕಾಲೋನಿ ನಿವಾಸಿ ಶಿವಕುಮಾರ್‌‌ (52) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶಿವಕುಮಾರ್ ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ…

Read More

ಕ್ಲಾಸಿಕ್ 2025 ಜಾವೆಲಿನ್ ಸ್ಪರ್ಧೆ: ನೀರಜ್ ಚೋಪ್ರಾ ಚಿನ್ನದ ಸಾಧನೆ ಕಣ್ತುಂಬಿಕೊಂಡ ಬೆಂಗಳೂರು ಫ್ಯಾನ್ಸ್‌

ಬೆಂಗಳೂರು: ಒಲಿಂಪಿಂಕ್‌ ಚಾಂಪಿಯನ್‌ ನೀರಜ್‌ ಚೋಪ್ರಾ ಶನಿವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕ್ಲಾಸಿಕ್ 2025 ಅಂತಾರಾಷ್ಟ್ರೀಯ ಜಾವೆಲಿನ್ ಸ್ಪರ್ಧೆಯಲ್ಲಿ ಭಾಗಿಯಾಗಿದ್ದರು. ಸಾಮಾನ್ಯವಾಗಿ ಬೆಂಗಳೂರಿನಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ನೆರೆದಂತೆ ಜನಸಾಗರವೇ ನೆರೆದಿತ್ತು. ತಮ್ಮ ನೆಚ್ಚಿನ ಕ್ರೀಡಾ ತಾರೆಯನ್ನು ಕಂಡ ಬೆಂಗಳೂರಿನ ಅಭಿಮಾನಿಗಳ ಸಂತಸಕ್ಕೆ ಪಾರವೇ ಇರಲಿಲ್ಲ. ಭರ್ತಿ 15 ಸಾವಿರಕ್ಕೂ ಅಧಿಕ ಪ್ರೇಕ್ಷಕರಿಂದ ತುಂಬಿದ್ದ ಕಂಠೀರವ ಕ್ರೀಡಾಂಗಣದಲ್ಲಿ ನೀರಜ್‌ ಚೋಪ್ರಾ ಎಲ್ಲರ ನಿರೀಕ್ಷೆಯಂತೆ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ಚಿನ್ನದ ಪದಕಕ್ಕೆ ಕೊರಳೊಡ್ಡಿದ ನೀರಜ್‌ ಭಾರತದಲ್ಲಿ ಮೊತ್ತಮೊದಲಾಗಿ ನಡೆದ ಅಂತಾರಾಷ್ಟ್ರೀಯ ಜಾವೆಲಿನ್ ಸ್ಪರ್ಧೆ ‘ನೀರಜ್…

Read More

ಎಐಸಿಸಿ ಓಬಿಸಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕ: ಕರ್ನಾಟಕಕ್ಕೆ ಬದಲಿ ಸಿಎಂ ಆಯ್ಕೆಗೆ ಮುನ್ನುಡಿ?

ನವದೆಹಲಿ, ಜುಲೈ 6: ಕರ್ನಾಟಕದ ಸಿಎಂ ಸಿದ್ದರಾಮಯ್ಯನವರನ್ನು ಏಕಾಏಕಿ ಎಐಸಿಸಿ ಓಬಿಸಿ ಸಲಹಾ ಮಂಡಳಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಕರ್ನಾಟಕದಲ್ಲಿ ಸೆಪ್ಟೆಂಬರ್ ಕ್ರಾಂತಿ ಹಾಗೂ ನಾಯಕತ್ವ ಬದಲಾವಣೆ ಚರ್ಚೆ ಮಧ್ಯೆ ಸಿಎಂ ಸಿದ್ದರಾಮಯ್ಯರನ್ನು ಎಐಸಿಸಿ ಓಬಿಸಿ ರಾಷ್ಟ್ರೀಯ ಸಲಹಾ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಿರುವ ಕಾಂಗ್ರೆಸ್ ಹೈಕಮಾಂಡ್ ನಡೆ ತೀವ್ರ ಕುತೂಹಲ ಮೂಡಿಸಿದೆ. ಸಿಎಂ ಸಿದ್ದರಾಮಯ್ಯರಿಗೆ ಈ ಹೇಳಿಕೆಯೇ ಮುಳುವಾಯ್ತಾ?ರಾಜ್ಯದಲ್ಲಿ 5 ವರ್ಷ ನಾನೇ ಸಿಎಂ ಎಂಬ ಸಂದೇಶ ನೀಡಿದ್ದ ಸಿದ್ದರಾಮಯ್ಯ ಅವರು ಸಿಎಂ ಹುದ್ದೆ ತೊರೆದು ರಾಷ್ಟ್ರ ರಾಜಕಾರಣಕ್ಕೆ…

Read More

ಅಮೆರಿಕಾದಲ್ಲಿ ವಿಶ್ವದ ನಂ.1 ಶ್ರೀಮಂತ ಎಲಾನ್ ಮಸ್ಕ್ ರಿಂದ ಹೊಸ ಪಕ್ಷ ಘೋಷಣೆ!

ವಿಶ್ವದ ನಂ.1 ಶ್ರೀಮಂತ ಎನಿಸಿರುವ ಬಿಲಿಯನೇರ್‌ ಉದ್ಯಮಿ ಮತ್ತು ತಂತ್ರಜ್ಞಾನ ದೊರೆ ಎಲಾನ್‌ ಮಸ್ಕ್‌ ಅವರು ತಮ್ಮದೇ ಆದ “ಅಮೆರಿಕಾ ಪಾರ್ಟಿ” ಎಂಬ ಹೊಸ ರಾಜಕೀಯ ಪಕ್ಷ ರಚಿಸುವುದಾಗಿ ಘೋಷಿಸಿದ್ದಾರೆ. ಒಂದೆಡೆ ಅಮೆರಿಕದ 249ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಹೆಚ್ಚು ಚರ್ಚೆಯಲ್ಲಿರುವ ಒನ್‌ ಬಿಗ್‌ ಬ್ಯೂಟಿಫುಲ್‌ ಕಾನೂನನ್ನು ಜಾರಿಗೆ ತಂದಿದ್ದಾರೆ. ಮತ್ತೊಂದೆಡೆ ಅವರ ಮಾಜಿ ಸಹೋದ್ಯೋಗಿ ಮತ್ತು ಕೈಗಾರಿಕೋದ್ಯಮಿ ಎಲಾನ್‌ ಮಸ್ಕ್‌ ಅವರು “ಅಮೆರಿಕಾ ಪಾರ್ಟಿ” ಎಂಬ ಹೊಸ ರಾಜಕೀಯ ಪಕ್ಷವನ್ನು ರಚಿಸುವುದಾಗಿ…

Read More

ಬೆಂಗಳೂರು ನೋಡಿ ನಗುತ್ತಿದ್ದ ಹೈದರಾಬಾದ್‌ಗೂ ಅದೇ ಸಮಸ್ಯೆ! ನಮ್ಮ ಕಷ್ಟ ಗೊತ್ತಾಯ್ತಾ ಎಂದ ಬೆಂಗಳೂರಿಗರು!

ಬೆಂಗಳೂರಿನಲ್ಲಿ ಕಳೆದ 10 ವರ್ಷಗಳಿಂದಲೂ ಟ್ರಾಫಿಕ್ ಜಾಮ್‌ ವಿಪರೀತ ಹೆಚ್ಚಳವಾಗಿದೆ. ಟ್ರಾಫಿಕ್‌ ಜಾಮ್‌ ಸಮಸ್ಯೆಯಿಂದ ಜನ ಹೈರಾಣಾಗಿದ್ದಾರೆ. ಬೆಂಗಳೂರಿನ ಟ್ರಾಫಿಕ್‌ ಜಾಮ್‌ ಸಮಸ್ಯೆಯ ಬಗ್ಗೆ ದಿನಕ್ಕೊಂದು ಟ್ರೋಲ್‌ಗಳು ಸೋಷಿಯಲ್‌ ಮೀಡಿಯಾದಲ್ಲಿ ಕಾಣಿಸಿಕೊಳ್ಳುವುದಿದೆ. ಬೆಂಗಳೂರಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ಟ್ರಾಫಿಕ್‌ ಜಾಮ್‌ ಹೆಚ್ಚಾಗುತ್ತಿದ್ದು. ಮೆಟ್ರೋ ಬಂದ ಮೇಲೂ ಟ್ರಾಫಿಕ್‌ ಜಾಮ್‌ನಲ್ಲಿ ಹೇಳಿಕೊಳ್ಳುವಂತಹ ಬದಲಾವಣೆ ಆಗಿಲ್ಲ. ಆದರೆ, ಬೆಂಗಳೂರಿನ ಬಗ್ಗೆ ಕಾಮಿಡಿ ಮಾಡುತ್ತಿದ್ದ ಜನರಿರುವ ನಗರಗಳಲ್ಲೂ ಇದೀಗ ನಿಧಾನವಾಗಿ ಟ್ರಾಫಿಕ್ ಜಾಮ್‌ ಹೆಚ್ಚಾಗಿದೆ. ಬೆಂಗಳೂರಿನ ಟ್ರಾಫಿಕ್‌ ಜಾಮ್ ಬಗ್ಗೆ ಕಾಮಿಡಿ ಮಾಡುತ್ತಿದ್ದ…

Read More
error: Content is protected !!