Headlines

newsfilemagazine

ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಹ್ಲಿ ಅಭಿಮಾನಿಗಳ ಕ್ಷಮೆ ಕೇಳಬೇಕೆಂದ ಮಾಜಿ ಮಹಿಳಾ ಡಿವೈಎಸ್ಪಿ

ಉಡುಪಿ, ಜುಲೈ 19: ‘ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆರ್​ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಪೊಲೀಸ್ ಇಲಾಖೆಯಲ್ಲಿನ ರಾಜಕೀಯವೇ ಕಾರಣ. ಆದರೆ, ಸರ್ಕಾರ ಹೈಕೋರ್ಟ್​​ಗೆ ಸಲ್ಲಿಸಿರುವ ವರದಿಯಲ್ಲಿ ವಿರಾಟ್ ಕೊಹ್ಲಿ ಅವರನ್ನು ಆರೋಪಿ ಸ್ಥಾನದಲ್ಲಿ ಉಲ್ಲೇಖಿಸಲಾಗಿದೆ. ಕೊಹ್ಲಿಯನ್ನು ಜೈಲಿಗೆ ಕಳುಹಿಸಲು ಸಂಚು ರೂಪಿಸಲಾಗಿದೆ. ಇದಕ್ಕಾಗಿ ಸಿಎಂ ಸಿದ್ದರಾಮಯ್ಯ ಕೊಹ್ಲಿ ಅಭಿಮಾನಿಗಳ ಕ್ಷಮೆಯಾಚಿಸಬೇಕು’ ಎಂದು ಮಾಜಿ ಡಿವೈಎಸ್​​ಪಿ ಅನುಪಮಾ ಶೆಣೈ ಆಗ್ರಹಿಸಿದ್ದಾರೆ. ಇದಷ್ಟೇ ಅಲ್ಲದೆ, ಬೆಂಗಳೂರಿನ ಕೆ.ಜೆ ಹಳ್ಳಿ ಮತ್ತು ಡಿ.ಜೆ ಹಳ್ಳಿ ಗುಂಪುಗಳ ನೆರವು ಪಡೆದು…

Read More

ಕ್ಯಾಂಟೀನ್‌ಗೆ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿ: ಯುವತಿ ಸಾವು!

ಬೆಂಗಳೂರು, ಜುಲೈ 19: ನಗರದಲ್ಲಿ ಆಗಾಗ ಬಿಎಂಟಿಸಿ ಬಸ್‌ ಅಪಘಾತಕ್ಕೆ ಈಡಾಗುತ್ತಲೇ ಇವೆ. ಈ ನಡುವೆ ನಿನ್ನೆ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಪೀಣ್ಯ 2ನೇ ಹಂತದ ಬಳಿ ಕ್ಯಾಂಟೀನ್‌ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವತಿ ಸಾವಿಗೀಡಾಗಿ, ಹಲವರು ಗಾಯಗೊಂಡಿದ್ದಾರೆ. ಬಿಎಂಟಿಸಿ ನಿರ್ವಹಿಸುತ್ತಿದ್ದ ಎಲೆಕ್ಟ್ರಿಕ್ ಬಸ್ ನಿನ್ನೆ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ರಸ್ತೆ ಬದಿಯ ಕ್ಯಾಂಟೀನ್‌ಗೆ ಡಿಕ್ಕಿ ಹೊಡೆದ ಪರಿಣಾಮ ಹಲವಾರು ಜನರು ಗಾಯಗೊಂಡಿದ್ದಾರೆ.ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ಹೇಳಲಾಗಿದ್ದು, ಇದರಲ್ಲಿ ಓರ್ವ ಯುವತಿ ಸಾವಿಗೀಡಾಗಿದ್ದಾರೆ…

Read More

ಕನ್ನಡ ಧ್ವಜಕ್ಕೆ ಮತ್ತೆ ಹಕ್ಕು ಮಂಡಿಸಿ ಕೇಂದ್ರಕ್ಕೆ ಪತ್ರ ಬರೆದ ರಾಜ್ಯಸರ್ಕಾರ

ಬೆಂಗಳೂರು, ಜುಲೈ 19: ರಾಜ್ಯಸರ್ಕಾರ ಕನ್ನಡ ಧ್ವಜಕ್ಕೆ ಧ್ವಜಕ್ಕೆ ಮತ್ತೆ ಹಕ್ಕು ಮಂಡಿಸಿದೆ. ಹಳದಿ-ಕೆಂಪು ಬಾವುಟಕ್ಕೆ ಅಧಿಕೃತ ಮಾನ್ಯತೆ ಕೊಡುವಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. 2017 ರಲ್ಲೇ ಬಾವುಟ ಅಧಿಕೃತ ಕೋರಿ ಕೇಂದ್ರಕ್ಕೆ ಅಂದಿನ ಸಿದ್ದರಾಮಯ್ಯ ಸರ್ಕಾರ ಮನವಿ ಸಲ್ಲಿಸಿತ್ತು. ಇದೀಗ ಮತ್ತೊಮ್ಮೆ ಪತ್ರ ಬರೆಯುವ ಮೂಲಕ ಕೇಂದ್ರದ ಮೇಲೆ ಒತ್ತಡ ಹೇರಿದೆ. ಪತ್ರ ಬರೆದಿರುವ ಬಗ್ಗೆ ಟಿವಿ9 ಗೆ ಸಚಿವ ಶಿವರಾಜ್ ತಂಗಡಗಿ ಮಾಹಿತಿ ನೀಡಿದ್ದಾರೆ….

Read More

ಮಾಜಿ ಸಂಸದ ಅನಂತಕುಮಾರ ಹೆಗಡೆಗೆ ಜೀವ ಬೆದರಿಕೆ ಸಂದೇಶ!

ಕಾರವಾರ, ಜುಲೈ 18: ಮಾಜಿ ಸಂಸದ ಅನಂತಕುಮಾರ್ ಹೆಗಡೆ ಅವರಿಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆಯ ಇ-ಮೇಲ್ ಸಂದೇಶ ಬಂದಿದೆ. ಈ ಬಗ್ಗೆ ಅನಂತಕುಮಾರ್ ಹೆಗಡೆ ಆಪ್ತ ಕಾರ್ಯದರ್ಶಿ ಸುರೇಶ್ ಶೆಟ್ಟಿಯವರು ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜೂನ್‌ 24ರಂದು ಅನಂತ ಕುಮಾರ್ ಹೆಗಡೆ ಅವರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಸಂದೇಶ ಬಂದಿತ್ತು. ನ್ಯಾಯಾಲಯದ ಅನುಮತಿ ಮೇರೆಗೆ ಶುಕ್ರವಾರ (ಜು.18) ದೂರು ದಾಖಲಿಸಲಾಗಿದೆ. ಕೇಸ್ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅನಂತ ಕುಮಾರ್…

Read More

ಆಗಸ್ಟ್ 11 ರಿಂದ ಕರ್ನಾಟಕ ಮುಂಗಾರು ಅಧಿವೇಶನ ಆರಂಭ

ಬೆಂಗಳೂರು, ಜುಲೈ 18: ಸಂಸತ್ತಿನ ಮುಂಗಾರು ಅಧಿವೇಶನ ಇದೇ ಜುಲೈ 21ರಿಂದ ಆರಂಭವಾಗಲಿದೆ. ಇದರಂತೆ ಇತ್ತ ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನ ಸಹ ಆಗಸ್ಟ್ 11ರಿಂದ ಆರಂಭವಾಗಲಿದೆ. ಈ ಬಗ್ಗೆ ರಾಜ್ಯಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿಸಿದ್ದು, ಆಗಸ್ಟ್ 11ರಿಂದ ಆಗಸ್ಟ್ 22ರವರೆಗೆ ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ನಡೆಯಲಿದೆ. ಇನ್ನು ಆಗಸ್ಟ್ 11ರಂದು ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದು, ಒಟ್ಟು 12 ದಿನಗಳ ಪೈಕಿ 8…

Read More

ಶಾಲೆಗಳಿಗೆ ಬಾಂಬ್ ಬೆದರಿಕೆ ಗಂಭೀರವಾಗಿ ಪರಿಗಣಿಸಿದ್ದೇವೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು, ಜುಲೈ 18: ನಗರದ ಹಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ ಮಾಹಿತಿ ಬಂದಿರುವುದನ್ನು ಲಘುವಾಗಿ ಪರಿಗಣಿಸುವುದಿಲ್ಲ. ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆಯೂ ಶಾಲೆಗಳಿಗೆ ಬೆದರಿಕೆ ಕರೆ ಬಂದಿದ್ದು, ಬಾಂಬ್‌ ಬೆದರಿಕೆಯ ಅನೇಕ ಇ-ಮೇಲ್‌ಗಳೂ ಬಂದಿವೆ. ಇವುಗಳನ್ನು ಮೊದಲು ಪರಿಶೀಲನೆ ಮಾಡುತ್ತೇವೆ. ಯಾವುದನ್ನೂ ಲಘುವಾಗಿ ತೆಗೆದುಕೊಳ್ಳುವುದಿಲ್ಲ. ಏಕೆ ಈ ರೀತಿ ಮಾಹಿತಿ ಬರುತ್ತದೆ ಎಂಬುದನ್ನು ಪರಿಶೀಲಿಸುತ್ತೇವೆ. ಆನಂತರ ವಾಸ್ತವ ಏನೆಂಬುದು ಗೊತ್ತಾಗಲಿದೆ ಎಂದರು. ಪ್ರತಿ…

Read More

ಅಲ್ಪಸಂಖ್ಯಾತ ಇಲಾಖೆಯ ಅನುದಾನ ದುರ್ಬಳಕೆ ಆರೋಪ: ಸಚಿವ ಜಮೀರ್ ಗೆ ಪ್ರಾಸಿಕ್ಯೂಶನ್ ಭೀತಿ..!

ಸಚಿವ ಜಮೀರ್ ಅಹ್ಮದ್ ಅವರು ತಮ್ಮ ವಸತಿ ಮತ್ತು ಅಲ್ಪಸಂಖ್ಯಾತ ಇಲಾಖೆಯಲ್ಲಿ ಅನುದಾನ ದುರ್ಬಳಕೆ ಸಂಬಂಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಜೆಡಿಎಸ್ ದೂರು ನೀಡಿತ್ತು. ಸದ್ಯ ದೂರಿನ ಬಗ್ಗೆ ಸ್ಪಷ್ಟನೆ ಕೇಳಿರುವ ರಾಜ್ಯಪಾಲರು ಕೆಲ ದಾಖಲೆಗಳ ಬಗ್ಗೆ ಮಾಹಿತಿ ಕೇಳಿದ್ದಾರೆ. ಒಂದು ವೇಳೆ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ರೆ ಸಚಿವ ಜಮೀರ್​​ಗೆ ಸಂಕಷ್ಟ ಎದುರಾಗಲಿದೆ. ಅಲ್ಪಸಂಖ್ಯಾತ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿತ್ತು. ಇದೇ ಅಸ್ತ್ರ…

Read More

ಬೇಕರಿ, ಕಾಂಡಿಮೆಂಟ್ಸ್, ಅಂಗಡಿಗಳಿಗೆ ನೋಟಿಸ್: ಮತ್ತೊಂದು ಅಪ್ ಡೇಟ್ ನೀಡಿದ ವಾಣಿಜ್ಯ ತೆರಿಗೆ ಇಲಾಖೆ

ಬೆಂಗಳೂರಿನ ಬೇಕರಿಗಳು, ಕಾಂಡಿಮೆಂಡ್ಸ್, ಚಹಾ/ಕಾಫಿ ಅಂಗಡಿಗಳಿಗೆ ತೆರಿಗೆ ನೋಟಿಸ್ ನೀಡಿದ್ದ ವಾಣಿಜ್ಯ ತೆರಿಗೆ ಇಲಾಖೆ, ಆನಂತರ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಸ್ಪಷ್ಟನೆ ನೀಡಿತ್ತು. ವಾರ್ಷಿಕ ವಹಿವಾಟು 1.5 ಕೋಟಿ ರೂ.ಗಿಂತ ಕಡಿಮೆ ಇದ್ದರೆ ಅಂತಹ ವರ್ತಕರು ಕೇವಲ ಶೇ.1 ರಷ್ಟು ಮಾತ್ರ ತೆರಿಗೆ ಪಾವತಿಸಬಹುದು. ಕಂಪೋಸಿಷನ್ ಟ್ಯಾಕ್ಸ್ ಸ್ಕೀಮ್ ಆಯ್ಕೆ ಮಾಡಿ ವಿನಾಯಿತಿ ಪಡೆಯಬಹುದು ಎಂದಿತ್ತು. ಇದೀಗ ತೆರಿಗೆ ಇಲಾಖೆ ಈ ಬಗ್ಗೆ ಮತ್ತೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಬಾರಿಯೂ ವಾಣಿಜ್ಯ ತೆರಿಗೆ ನೋಟಿಸ್ ಬಗ್ಗೆ…

Read More

ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರಿಗೆ 6 ತಿಂಗಳ ಎಸ್ಮಾ ಜಾರಿ ಶಾಕ್!

ಬೆಂಗಳೂರು, ಜುಲೈ 18: ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಸರ್ಕಾರದ ಬಾಗಿಲು ಬಡಿದು ಸುಸ್ತಾದ ಕೆಎಸ್​ಆರ್​ಟಿಸಿ, ಬಿಎಂಆರ್​ಟಿಸಿ ಸೇರಿದಂತೆ 4 ಸಾರಿಗೆ ನಿಗಮಗಳ ಸಿಬ್ಬಂದಿಗಳು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಆಗಸ್ಟ್ 5ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಆದರೆ ಇದೀಗ ಸಾರಿಗೆ ನೌಕರರಿಗೆ ಕೆಎಸ್ಆರ್​​ಟಿಸಿ ಶಾಕ್ ನೀಡಿದ್ದು, ಪ್ರತಿಭಟನೆ ನಡೆಸದಂತೆ ಕಾರ್ಮಿಕ ಇಲಾಖೆ ಎಸ್ಮಾ ಜಾರಿ ಮಾಡಿದೆ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ 4 ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್​ 5ರಂದು ಬೆಳಿಗ್ಗೆ 6…

Read More

ಹರಪನಹಳ್ಳಿ ಶಾಸಕಿ ಕಚೇರಿಯಲ್ಲಿ ಕಳ್ಳತನ!

ಹರಪನಹಳ್ಳಿ ಶಾಸಕಿ ಕಚೇರಿಯಲ್ಲಿ ಕಳ್ಳತನ ನಡೆದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದ ಕಾಶಿ ಸಂಗಮೇಶ ಬಡಾವಣೆಯಲ್ಲಿರುವ ಶಾಸಕಿ ಲತಾ ಮಲ್ಲಿಕಾರ್ಜುನ್ ಕಚೇರಿಯಲ್ಲಿ ಬೀಗ ಮುರಿದು ಕಳ್ಳತನ ಮಾಡಲಾಗಿದೆ. 2.50 ಲಕ್ಷ ರೂ., 10.80 ಲಕ್ಷ ರೂ. ಮೌಲ್ಯದ ಚಿನ್ನ ಕಳುವು ಮೊನ್ನೆ ಗುರುವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಕಳ್ಳತನ ನಡೆದಿದೆ ಎನ್ನಲಾಗಿದೆ. ಕಳ್ಳರು ಲಾಕರ್ ಮುರಿದು 2 ಲಕ್ಷದ 50 ಸಾವಿರ ರೂಪಾಯಿ ಹಣ ಹಾಗೂ 10.80 ಲಕ್ಷ ರೂ. ಮೌಲ್ಯದ ಚಿನ್ನಾಭರಣ…

Read More
error: Content is protected !!