Headlines

newsfilemagazine

ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ದೆಹಲಿಗೆ ಬಂದಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

ನವದೆಹಲಿ, ಜುಲೈ 9: ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಚರ್ಚಿಸಲು ನಾನು ಹಾಗೂ ಸಿಎಂ ಸಿದ್ದರಾಮಯ್ಯ ದೆಹಲಿಗೆ ಬಂದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಕೇಂದ್ರದ ವಿವಿಧ ಸಚಿವರ ಜತೆ ಕರ್ನಾಟಕದ ಅಭಿವೃದ್ಧಿ ಯೋಜನೆಗಳ ವಿಚಾರವಾಗಿ ಮಾತುಕತೆ ನಡೆಸಿದ ನಂತರ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಡಿಸಿಎಂ ಅವರು ಮಾತನಾಡಿದರು. ‘ಅಭಿವೃದ್ಧಿ ಯೋಜನೆಗಳ ಸಲುವಾಗಿ ಚರ್ಚಿಸಲು ನಾವು ಬಂದಿದ್ದೇವೆ. ರಾಹುಲ್ ಗಾಂಧಿ ಅವರ ಭೇಟಿಗೂ ಸಮಯ ಕೋರಿದ್ದೇನೆ. ನಾಳೆ ಭೇಟಿ ಮಾಡುವ ಸಾಧ್ಯತೆ…

Read More

ಐಶ್ವರ್ಯಗೌಡ ಚಿನ್ನ ವಂಚನೆ ಕೇಸ್: ಇ.ಡಿಯಿಂದ ಡಿ.ಕೆ ಸುರೇಶ್ ವಿಚಾರಣೆ

ಬೆಂಗಳೂರು, ಜುಲೈ 8: ಐಶ್ವರ್ಯಗೌಡ ಚಿನ್ನ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರನ್ನು ಕೇಂದ್ರ ಜಾರಿ ನಿರ್ದೇಶನಾಲಯ 2ನೇ ಬಾರಿಗೆ ವಿಚಾರಣೆಗೊಳಪಡಿಸಿದೆ. ಐಶ್ವರ್ಯಗೌಡ ಹಲವಾರು ಮಂದಿಗೆ ಚಿನ್ನ ವ್ಯಾಪಾರದ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಮಾಡಿದ್ದರು. ಈ ವೇಳೆ ಆಕೆ ತಾವು ಡಿ.ಕೆ.ಸುರೇಶ್‌ರವರ ಸಹೋದರಿ ಎಂದು ಹೇಳಿಕೊಂಡಿದ್ದರು. ನಟರೊಬ್ಬರು ಡಿ.ಕೆ.ಸುರೇಶ್‌ರವರ ಧ್ವನಿಯನ್ನು ಮಿಮಿಕ್ರಿ ಮಾಡಿ ಉದ್ಯಮಿಗಳ ಜೊತೆ ಮಾತನಾಡಿದ್ದರು. ಬಹುಕೋಟಿ ಹಗರಣವನ್ನು ವಿಚಾರಣೆ ನಡೆಸುತ್ತಿರುವ ಕೇಂದ್ರ ಜಾರಿ ನಿರ್ದೇಶನಾಲಯ ಡಿ.ಕೆ.ಸುರೇಶ್‌ರವರಿಗೆ ನೋಟಿಸ್ ನೀಡಿತ್ತು. ಕಳೆದ…

Read More

ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವರೊಂದಿಗೆ ಡಿಸಿಎಂ ಚರ್ಚೆ

ನವದೆಹಲಿ, ಜುಲೈ 8: ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದ್ರ ಪಾಟೀಲ್‌ರ ಜೊತೆ ಸಭೆಯ ಬಳಿಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ದೆಹಲಿಯಲ್ಲಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಹಿರಿಯ ಅಧಿಕಾರಿಗಳು ಹಾಗೂ ವಕೀಲರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಕೃಷಿ ಸಚಿವ ಚೆಲುವರಾಯಸ್ವಾಮಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ಗುಪ್ತ ಸೇರಿದಂತೆ ಹಿರಿಯ ಅಧಿಕಾರಿಗಳು, ವಕೀಲರು, ತಂತ್ರಜ್ಞರು ಸಭೆಯಲ್ಲಿ ಉಪಸ್ಥಿತರಿದ್ದರು.ಮೇಕೆದಾಟು, ಕಳಸಾ ಬಂಡೂರಿ, ಎತ್ತಿನಹೊಳೆ, ಕೃಷ್ಣಾ ಮೇಲ್ದಂಡೆ, ತುಂಗಭದ್ರಾ ಸೇರಿದಂತೆ ಹಲವಾರು ಯೋಜನೆಗಳ ಸ್ಥಿತಿಗತಿ ಹಾಗೂ ಕಾನೂನು ತೊಡಕುಗಳ…

Read More

ಬೆಂಗಳೂರಿನಲ್ಲಿ ಭಾರತದ ಪ್ರಥಮ ಯುಪಿಐ ಆಧಾರಿತ ಬ್ಯಾಂಕ್ ಆರಂಭ!

ಬೆಂಗಳೂರು, ಜುಲೈ 8: ಅಂತೂ ಇಂತೂ ಬೆಂಗಳೂರಿನಲ್ಲಿ ಭಾರತದ ಪ್ರಪ್ರಥಮ ಪೂರ್ಣ ಪ್ರಮಾಣದ ಯುಪಿಐ (UPI) ಬ್ಯಾಂಕ್ ಪ್ರಾಯೋಗಿಕವಾಗಿ ಪ್ರಾರಂಭಿಸಲಾಗಿದೆ.ಈ ಯುಪಿಐ ಬ್ಯಾಂಕ್ ನಲ್ಲಿ ಎಲ್ಲವೂ ಡಿಜಿಟಲ್ ಮಯವಾಗಿದ್ದು, ನಿಮ್ಮ ನೆರವಿಗೆ ಅಥವಾ ಕೆಲಸ ಮಾಡಲು ಯಾವುದೇ ಉದ್ಯೋಗಿಗಳು ಇಲ್ಲ! ಫಿನ್‌ಟೆಕ್ ಕಂಪನಿಯಾದ ಸ್ಲೈಸ್ ಬೆಂಗಳೂರಿನ ಕೋರಮಂಗಲದಲ್ಲಿ ಯುಪಿಐ ಬ್ಯಾಂಕನ್ನು ಪ್ರಾಯೋಗಿಕವಾಗಿ ಆರಂಭಿಸಿದೆ. ಇಲ್ಲಿ ನೀವು ಯಾವುದೇ ಕಾಗದ ಪತ್ರಗಳು ಅಥವಾ ಕಾರ್ಡ್‌ಗಳ ಅಗತ್ಯವಿಲ್ಲದೇ ಸಂಪೂರ್ಣವಾಗಿ ಡಿಜಿಟಲ್ ಬ್ಯಾಂಕಿಂಗ್ ಬಳಸಬಹುದು. ಖಾತೆ ತೆರೆಯುವಿಕೆಯಿಂದ ಹಿಡಿದು ನಗದು ಠೇವಣಿ,…

Read More

ಜನೌಷಧ ಕೇಂದ್ರ ಸ್ಥಗಿತಕ್ಕೆ ಹೈಕೋರ್ಟ್ ತಡೆ, ರಾಜ್ಯಸರ್ಕಾರಕ್ಕೆ ಕಪಾಳಮೋಕ್ಷ!

ಬೆಂಗಳೂರು, ಜುಲೈ 8: ಕರ್ನಾಟಕದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ರಾಜ್ಯಸರ್ಕಾರ ಸ್ಥಗಿತಗೊಳಿಸಿತ್ತು. ಇದಕ್ಕೆ ಭಾರೀ ವಿರೋಧಗಳು ವ್ಯಕ್ತವಾಗಿದ್ದವು. ಅಲ್ಲದೇ ರಾಜ್ಯದ ಕಾಂಗ್ರೆಸ್ ಸರ್ಕಾರದ ಈ ಕ್ರಮ ಪ್ರಶ್ನಿಸಿ 16 ಜನರು ಹೈಕೋರ್ಟ್​ ಮೆಟ್ಟಿಲೇರಿದ್ದು, ಇಂದು (ಜುಲೈ 8) ಈ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಹೈಕೋರ್ಟ್ ಪೀಠ, ಮುಂದಿನ ವಿಚಾರಣೆವರೆಗೂ ಅರ್ಜಿದಾರರ…

Read More

ಹಿಂದುಳಿದ ವರ್ಗಗಳ ರಾಷ್ಟ್ರೀಯ ವೋಟ್ ಬ್ಯಾಂಕ್ ಗಿಟ್ಟಿಸಲು ಸಿದ್ದರಾಮಯ್ಯಗೆ ಎಐಸಿಸಿಯ ಮಹತ್ವದ ಹುದ್ದೆ!

ಕರ್ನಾಟಕದ ಸಿಎಂ ಸಿದ್ದರಾಮಯ್ಯಗೆ ನಿನ್ನೆ ಎಐಸಿಸಿ ಮಹತ್ವದ ಜವಾಬ್ದಾರಿ ನೀಡಿದೆ. ಎಐಸಿಸಿಯ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ಅಧ್ಯಕ್ಷರನ್ನಾಗಿ ಸಿದ್ದರಾಮಯ್ಯ ಅವರನ್ನು ನೇಮಕ ಮಾಡಿದೆ. ಈ ಮೂಲಕ ಸಿದ್ದರಾಮಯ್ಯ ಇದೀಗ ರಾಷ್ಟ್ರ ರಾಜಕಾರಣದಲ್ಲೂ ಗುರುತಿಸಿಕೊಳ್ಳಲಿದ್ದಾರೆ. ಕಳೆದ ವಾರ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದರು. ಈ ವೇಳೆ ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ’ ಅಸ್ತಿತ್ವಕ್ಕೆ ಬಂದಿದೆ. ಜುಲೈ 15ರಂದು ಬೆಂಗಳೂರಿನಲ್ಲಿ ಇದರ ಮೊದಲ ಸಭೆ ನಡೆಯಲಿದೆ. ದೇಶದಲ್ಲಿ ಹಿಂದುಳಿದ ವರ್ಗಗಳ ಸಮುದಾಯಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು…

Read More

ಲಾರಿ ಮುಷ್ಕರ ಹಿನ್ನೆಲೆ: ಅನ್ನಭಾಗ್ಯ ಆಹಾರಧಾನ್ಯ ಸಾಗಾಣಿಕೆ ಬಂದ್!

ಬೆಂಗಳೂರು, ಜುಲೈ 7: ಕಳೆದ 4 ತಿಂಗಳಿಂದ ರಾಜ್ಯಸರ್ಕಾರ ಪಡಿತರ ಆಹಾರಧಾನ್ಯ ಸಾಗಾಣಿಕೆ ವೆಚ್ಚ ನೀಡಿಲ್ಲ. 250 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. ಹೀಗಾಗಿ ಲಾರಿ ಮಾಲೀಕರು, ಚಾಲಕರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಆ ಮೂಲಕ ಈ ತಿಂಗಳ ಪಡಿತರ ವಿತರಣೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಈ ಬಗ್ಗೆ ಮಾತನಾಡಿರುವ ರಾಜ್ಯ ಲಾರಿ ಮಾಲೀಕರ ಸಂಘದ ರಾಜ್ಯಾಧ್ಯಕ್ಷ ವಿ‌.ಆರ್.ಷಣ್ಮುಗಪ್ಪ, ಇಂದಿನಿಂದ ಅನ್ನಭಾಗ್ಯ ಆಹಾರ ಧಾನ್ಯ ಸಾಗಾಣಿಕೆ ಬಂದ್ ಎಂದು ಸರ್ಕಾರಕ್ಕೆ ಶಾಕ್ ನೀಡಿದ್ದಾರೆ. ಈ ಬಗ್ಗೆ…

Read More

ಹುಲಿಕೆರೆ: ಆಕಸ್ಮಿಕ ಬೆಂಕಿ, ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಪೀಠೋಪಕರಣಗಳು ಭಸ್ಮ!

ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮವಾಗಿ ಮನೆಯಲ್ಲಿದ್ದ ಪೀಠೋಪಕರಣಗಳು ಸುಟ್ಟು ಬಸ್ಮವಾಗಿರುವ ಘಟನೆ ಶ್ರೀರಂಗಪಟ್ಟಣ ತಾಲೂಕು ಹುಲಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿನ್ನೆ ನಡೆದಿದೆ. ನಿನ್ನೆ ಬೆಳಗ್ಗೆ ಸುಮಾರು 9 ಗಂಟೆಯ ಸುಮಾರಿಗೆ ಹುಲಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ MNPM ಕಾಲೋನಿಯ ಶಿವಣ್ಣಚಾರ್ ರವರ ಮನೆಯಲ್ಲಿ ಸೌದೆ ಒಲೆಯಲ್ಲಿ ನೀರು ಕಾಯಿಸುತ್ತಿರುವಾಗ ಆಕಸ್ಮಿಕವಾಗಿ ಬೆಂಕಿಯು ಮನೆಯನ್ನು ಆವರಿಸಿ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಪೀಠೋಪಕರಣಗಳು ಸುಟ್ಟು ಬಸ್ಮಮಾಡಿದೆ ಹಾಗೂ ಮನೆಯ ಮೇಲ್ಚಾವಣಿಯು ಸಂಪೂರ್ಣ ಹಾನಿಯಾಗಿದೆ. ಬೆಂಕಿ ಕಂಡ ಸ್ಥಳೀಯರು ಬೆಂಕಿ…

Read More

ಕರ್ನಾಟಕದಲ್ಲಿ ಮುಂದುವರೆದ ಹೃದಯಾಘಾತದ ಮರಣಮೃದಂಗ: ಭಾನುವಾರ 8 ಸಾವು!

ಕರ್ನಾಟಕದಲ್ಲಿ ಹೃದಯಾಘಾತದಿಂದ ಸಾವಿಗೀಡಾಗುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇಂದು ಭಾನುವಾರ (ಜುಲೈ 6) ಒಂದೇ ದಿನ ಕರ್ನಾಟಕದಲ್ಲಿ ಹೃದಯಾಘಾತದಿಂದ 8 ಜನರು ಸಾವನ್ನಪ್ಪಿದ್ದಾರೆ.ಇದೇ ರೀತಿ ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಸಹ ತಲಾ ಇಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇನ್ನು, ಯಾದಗಿರಿ, ಧಾರವಾಡ ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತಲಾ ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಚಾಮರಾಜನಗರದ ರಾಮಸಮುದ್ರ ಹೌಸಿಂಗ್‌ಬೋರ್ಡ್ ಕಾಲೋನಿ ನಿವಾಸಿ ಶಿವಕುಮಾರ್‌‌ (52) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶಿವಕುಮಾರ್ ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ…

Read More

ಕ್ಲಾಸಿಕ್ 2025 ಜಾವೆಲಿನ್ ಸ್ಪರ್ಧೆ: ನೀರಜ್ ಚೋಪ್ರಾ ಚಿನ್ನದ ಸಾಧನೆ ಕಣ್ತುಂಬಿಕೊಂಡ ಬೆಂಗಳೂರು ಫ್ಯಾನ್ಸ್‌

ಬೆಂಗಳೂರು: ಒಲಿಂಪಿಂಕ್‌ ಚಾಂಪಿಯನ್‌ ನೀರಜ್‌ ಚೋಪ್ರಾ ಶನಿವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕ್ಲಾಸಿಕ್ 2025 ಅಂತಾರಾಷ್ಟ್ರೀಯ ಜಾವೆಲಿನ್ ಸ್ಪರ್ಧೆಯಲ್ಲಿ ಭಾಗಿಯಾಗಿದ್ದರು. ಸಾಮಾನ್ಯವಾಗಿ ಬೆಂಗಳೂರಿನಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ನೆರೆದಂತೆ ಜನಸಾಗರವೇ ನೆರೆದಿತ್ತು. ತಮ್ಮ ನೆಚ್ಚಿನ ಕ್ರೀಡಾ ತಾರೆಯನ್ನು ಕಂಡ ಬೆಂಗಳೂರಿನ ಅಭಿಮಾನಿಗಳ ಸಂತಸಕ್ಕೆ ಪಾರವೇ ಇರಲಿಲ್ಲ. ಭರ್ತಿ 15 ಸಾವಿರಕ್ಕೂ ಅಧಿಕ ಪ್ರೇಕ್ಷಕರಿಂದ ತುಂಬಿದ್ದ ಕಂಠೀರವ ಕ್ರೀಡಾಂಗಣದಲ್ಲಿ ನೀರಜ್‌ ಚೋಪ್ರಾ ಎಲ್ಲರ ನಿರೀಕ್ಷೆಯಂತೆ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ಚಿನ್ನದ ಪದಕಕ್ಕೆ ಕೊರಳೊಡ್ಡಿದ ನೀರಜ್‌ ಭಾರತದಲ್ಲಿ ಮೊತ್ತಮೊದಲಾಗಿ ನಡೆದ ಅಂತಾರಾಷ್ಟ್ರೀಯ ಜಾವೆಲಿನ್ ಸ್ಪರ್ಧೆ ‘ನೀರಜ್…

Read More
error: Content is protected !!