ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ದೆಹಲಿಗೆ ಬಂದಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
ನವದೆಹಲಿ, ಜುಲೈ 9: ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಚರ್ಚಿಸಲು ನಾನು ಹಾಗೂ ಸಿಎಂ ಸಿದ್ದರಾಮಯ್ಯ ದೆಹಲಿಗೆ ಬಂದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಕೇಂದ್ರದ ವಿವಿಧ ಸಚಿವರ ಜತೆ ಕರ್ನಾಟಕದ ಅಭಿವೃದ್ಧಿ ಯೋಜನೆಗಳ ವಿಚಾರವಾಗಿ ಮಾತುಕತೆ ನಡೆಸಿದ ನಂತರ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಡಿಸಿಎಂ ಅವರು ಮಾತನಾಡಿದರು. ‘ಅಭಿವೃದ್ಧಿ ಯೋಜನೆಗಳ ಸಲುವಾಗಿ ಚರ್ಚಿಸಲು ನಾವು ಬಂದಿದ್ದೇವೆ. ರಾಹುಲ್ ಗಾಂಧಿ ಅವರ ಭೇಟಿಗೂ ಸಮಯ ಕೋರಿದ್ದೇನೆ. ನಾಳೆ ಭೇಟಿ ಮಾಡುವ ಸಾಧ್ಯತೆ…

