Headlines

newsfilemagazine

ಮಂಡ್ಯದ ಬೆನ್ನಲ್ಲೇ ಚಾಮರಾಜನಗರದಲ್ಲೂ ಫ್ಲೆಕ್ಸ್ ವಿವಾದ: ಅಧಿಕಾರಿಗಳ ಪ್ರಚಾರಕ್ಕೆ ಖಾಸಗಿ ಸಂಘಟನೆಗಳ ಸಾಥ್?

ವರದಿ: ರಾಮಸಮುದ್ರ ಎಸ್. ವೀರಭದ್ರಸ್ವಾಮಿ ಮಂಡ್ಯ ಜಿಲ್ಲೆಯಲ್ಲಿ ಹಬ್ಬದ ಶುಭಕೋರುವ ಫ್ಲೆಕ್ಸ್‌ಗಳಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಫೋಟೋ ಬಳಕೆಯಾಗಿ ದೊಡ್ಡಮಟ್ಟದ ವಿವಾದ ಸೃಷ್ಟಿಸಿದ ಬೆನ್ನಲ್ಲೇ, ಈಗ ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಅಂತಹದ್ದೇ ಬೆಳವಣಿಗೆಯೊಂದು ಮುನ್ನೆಲೆಗೆ ಬಂದಿದೆ. ಖಾಸಗಿ ಕಾರ್ಯಕ್ರಮಗಳ ಪ್ರಚಾರಕ್ಕಾಗಿ ಜಿಲ್ಲಾ ಮಟ್ಟದ ಉನ್ನತ ಅಧಿಕಾರಿಗಳ ಭಾವಚಿತ್ರಗಳನ್ನು ಫ್ಲೆಕ್ಸ್‌ಗಳಲ್ಲಿ ಬಳಸಿರುವುದು ಈಗ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ​ಚಾಮರಾಜನಗರ ವಿಶ್ವವಿದ್ಯಾನಿಲಯ ಹಾಗೂ ಮೈಸೂರಿನ ಶ್ರೀ ಯೋಗಿನಾರಾಯಣ ಯತೀಂದ್ರರ ಪ್ರಚಾರ ಸಭಾ ಸಂಯುಕ್ತಾಶ್ರಯದಲ್ಲಿ ಆಯೋಜಿಸಿರುವ ಕೈವಾರ ತಾತಯ್ಯನವರ…

Read More

ನಿವೃತ್ತಿ ಹೊತ್ತಲ್ಲಿ ಡಿಜಿಪಿಗೆ ವಿಡಿಯೋ ಶಾಕ್: ಕಚೇರಿಯಲ್ಲೇ ಸೆರೆಯಾಗಿದ್ದ ಶೃಂಗಾರ ದೃಶ್ಯಗಳು ನೂರಕ್ಕೆ ನೂರು ಸತ್ಯ!

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದ್ದ ಹಿರಿಯ ಐಪಿಎಸ್ ಅಧಿಕಾರಿ, ಡಿಜಿಪಿ ಕೆ. ರಾಮಚಂದ್ರ ರಾವ್ ಅವರ ವೈರಲ್ ವಿಡಿಯೋ ಪ್ರಕರಣವೀಗ ಸ್ಫೋಟಕ ತಿರುವು ಪಡೆದುಕೊಂಡಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ದೃಶ್ಯಗಳು ಎಡಿಟ್ ಮಾಡಿದ್ದಲ್ಲ, ಬದಲಾಗಿ ನೂರಕ್ಕೆ ನೂರರಷ್ಟು ಅಸಲಿ ಎಂಬುದು ಎಸ್‌ಐಟಿ (SIT) ತನಿಖೆಯಲ್ಲಿ ಬಯಲಾಗಿದೆ! ​ಎಡಿಟಿಂಗ್ ಅಲ್ಲ, ಇದು ಎಐ ಕಾಲದ ಡೀಪ್‌ಫೇಕ್ ಕೂಡ ಅಲ್ಲ! ​ವಿಡಿಯೋ ವೈರಲ್ ಆದ ಬೆನ್ನಲ್ಲೇ ಇದು ತನ್ನ ಚಾರಿತ್ರ್ಯ ಹರಣಕ್ಕೆ ಮಾಡಿರುವ ಪಿತೂರಿ, ದೃಶ್ಯಗಳನ್ನು ಎಡಿಟ್…

Read More

ಹಿರಿಯ ಪತ್ರಕರ್ತ ಕೆ ಜೆ. ಕುಮಾರ್ ನಿಧನ

ಮೈಸೂರು-ಮಾರ್ಚ್.11- ಮೈಸೂರಿನ ಹಿರಿಯ ಪತ್ರಕರ್ತ ಕೆ. ಜೆ. ಕುಮಾರ್ ಇಂದು ಸಂಜೆ ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು.ಉಡುಪಿ ಜಿಲ್ಲೆ ಕೊರಂದರ ಪಾಳ್ಯದಲ್ಲಿ ರಘು ರಾಮ್ ಶೆಟ್ಟಿ ಮತ್ತು ಶಾರದಾ ಅವರ ಜ್ಯೋಷ್ಠ ಪುತ್ರರಾಗಿ 1952ರ್ ನವಂಬರ್. 6 ರಂದು ಜನಿಸಿದರು. ಸುಮಾರು 56 ವರ್ಷಗಳಿಂದ ಮೈಸೂರಿನ ಪ್ರಮುಖ ಪತ್ರಿಕಾ ವಿತರಕರಾಗಿ ಹಾಗೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದರು. 1969ರಲ್ಲಿ ಸೋದರ ಮಾವ ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಸ್ವತಂತ್ರ ಹೋರಾಟಗಾರ ಎ….

Read More

​ಮೋದಿ ಗ್ಯಾರಂಟಿ Vs ಪಿಣರಾಯಿ ಗೈರು: ₹10 ಸಾವಿರ ಕೋಟಿ ಯೋಜನೆಗಳ ನಡುವೆ ರಾಜಕೀಯ ಹೈಡ್ರಾಮಾ!

ಕೊಚ್ಚಿಯಲ್ಲಿ ನಡೆದ ಅಖಿಲ ಕೇರಳ ದೀವರ ಸಭಾದ ಸುವರ್ಣ ಮಹೋತ್ಸವದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ, ₹10 ಸಾವಿರ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವ ಮೂಲಕ ಕೇರಳದಲ್ಲಿ ಚುನಾವಣಾ ಪ್ರಚಾರದ ರಣಕಹಳೆ ಮೊಳಗಿಸಿದರು. ಇದೇ ವೇಳೆ ಕೊಲ್ಲಿ ರಾಷ್ಟ್ರಗಳಲ್ಲಿರುವ ಲಕ್ಷಾಂತರ ಭಾರತೀಯರ ಸುರಕ್ಷತೆಯ ಬಗ್ಗೆ ಭರವಸೆ ನೀಡಿದ ಅವರು, ಸಂಕಷ್ಟದ ಸಮಯದಲ್ಲಿ ಇಂದಿನ ಭಾರತ ತನ್ನ ಜನರನ್ನು ಕೈಬಿಡುವುದಿಲ್ಲ ಎಂದರು. ವಿದೇಶಿ ಸರ್ಕಾರಗಳು ನೀಡುತ್ತಿರುವ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತಲೇ, ಇಂತಹ ಜಾಗತಿಕ ಬಿಕ್ಕಟ್ಟಿನ…

Read More

ಮದ್ದೂರು: ಅಕ್ರಮ ಜೂಜು ಅಡ್ಡೆ ಮೇಲೆ ದಾಳಿ, 50 ಆರೋಪಿಗಳ ವಿರುದ್ಧ ಪ್ರಕರಣ ದಾಖಲು.

ದಿನಾಂಕ 10/03/2026 ರಂದು ಮಂಡ್ಯ ಜಿಲ್ಲೆ ಮದ್ದೂರು ಪೊಲೀಸ್ ಠಾಣಾ ಸರಹದ್ದಿನ ಮದ್ದೂರು ತಾಲ್ಲೂಕು, ಆತಗೂರು ಹೋಬಳಿ, ನಿಡಘಟ್ಟ ಗ್ರಾಮದ ತಿನ್ನೂರು ರಸ್ತೆಯಲ್ಲಿರುವ ಶ್ರೀ ವರದರಾಜಸ್ವಾಮಿ ರಿಕ್ರಿಯೇಷನ್ ಅಸೋಸಿಯೇಷನ್ ಕ್ಲಬ್ ಕಟ್ಟಡದಲ್ಲಿ ಅಕ್ರಮವಾಗಿ ಮತ್ತು ಕಾನೂನು ಬಾಹಿರವಾಗಿ ಗುಂಪುಗೂಡಿಕೊಂಡು ಅಂದರ್-ಬಾಹರ್ ಜೂಜಾಟವಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ​ಈ ಮಾಹಿತಿಯ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಪೊಲೀಸ್‌ ಅಧೀಕ್ಷಕರು ಡಾ. ಶೋಭಾರಾಣಿ ವಿಜೆ, ಐಪಿಎಸ್ ರವರ ಆದೇಶದ ಮೇರೆಗೆ, ಘನ ನ್ಯಾಯಾಲಯದ ಅನುಮತಿ ಪಡೆದು ಕಾರ್ಯಾಚರಣೆ ರೂಪಿಸಲಾಯಿತು. ಮಳವಳ್ಳಿ…

Read More

ಗಲ್ಫ್ ಯುದ್ಧದಲ್ಲಿ ತಲ್ಲಣ: ಜನವಸತಿ ಪ್ರದೇಶಗಳ ಮೇಲೆ ‘ವೈಟ್ ಫಾಸ್ಫರಸ್’ ಸುರಿಮಳೆ!

ನವದೆಹಲಿ: ಗಲ್ಫ್ ರಾಷ್ಟ್ರಗಳ ಸಂಘರ್ಷ ತಾರಕಕ್ಕೇರಿದ್ದು, ಲೆಬನಾನ್‌ನ ಜನವಸತಿ ಪ್ರದೇಶಗಳ ಮೇಲೆ ಇಸ್ರೇಲ್ ಅತ್ಯಂತ ಅಪಾಯಕಾರಿ ‘ವೈಟ್ ಫಾಸ್ಫರಸ್’ (ಬಿಳಿ ರಂಜಕ) ಬಾಂಬ್‌ಗಳನ್ನು ಬಳಸಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇರಾನ್ ಬೆಂಬಲಿತ ಹೆಜ್ಬುಲ್ಲಾ ಗುಂಪುಗಳ ದಾಳಿಗೆ ಪ್ರತಿಯಾಗಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಈ ವಿಷಕಾರಿ ರಾಸಾಯನಿಕ ಬಳಕೆಯಾಗಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ​ವಿಶ್ವಸಂಸ್ಥೆಯ ಕೆಂಗಣ್ಣು ​ನಾಗರಿಕ ಪ್ರದೇಶಗಳಲ್ಲಿ ಬಿಳಿ ರಂಜಕದ ಬಳಕೆ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಉಲ್ಲಂಘನೆಯೆಂದು ಪರಿಗಣಿಸಲ್ಪಟ್ಟಿದೆ. ಈ ಹಿಂದೆಯೂ…

Read More

ಮಂಡ್ಯ : ಕಳೆದುಕೊಂಡಿದ್ದ ಮೊಬೈಲ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ನಿರ್ವಾಹಕ

ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ತೆರಳುವ ಸಂದರ್ಭದಲ್ಲಿ ಮೊಬೈಲ್ ಕಳೆದು ಕೊಂಡಿದ್ದ ಪ್ರಯಾಣಿಕರೊಬ್ಬರ ಮೊಬೈಲನ್ನು ಹಿಂದಿರುಗಿಸುವ ಮೂಲಕ ಬಸ್ಸಿನ ನಿರ್ವಾಹಕರೊಬ್ಬರು ಪ್ರಾಮಾಣಿಕತೆ ಮೆರೆದಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಮಂಡ್ಯ – ಆದಿಚುಂಚನಗಿರಿ ನಡುವೆ ಸಂಚರಿಸುವ ನಾಗಮಂಗಲ ಡಿಪೋಗೆ ಬಸ್ಸಿನ ನಿರ್ವಾಹಕ ಸತೀಶ್ ಬಿ.ಎಸ್.ಮೊಬೈಲನ್ನು ಹಿಂದಿರುಗಿಸಿ ಮಾನವೀಯತೆ ಮರೆದಿದ್ದಾರೆ. ಏನಿದು ಘಟನೆ ? ಮಂಡ್ಯ ತಾಲ್ಲೂಕಿನ ಹನಿಯಂಬಾಡಿ ಗ್ರಾಮದ ಮಂಜುಳ ಹಾಗೂ ಅವರ ಪತಿ ಎನ್.ಶೇಖರ್ ಅವರು ಭಾನುವಾರ ಬೆಳಿಗ್ಗೆ ಮಂಡ್ಯದಿಂದ ಆದಿಚುಂಚನಗಿರಿಗೆ ಬಸ್ಸಿನಲ್ಲಿ ತೆರಳುತ್ತಿದ್ದರು. ಆ ಸಂದರ್ಭದಲ್ಲಿ ಮಂಜುಳ…

Read More

ಆರು ವರ್ಷಗಳ ಸಂಭ್ರಮವೋ? ಅಧಿಕಾರಕ್ಕಾಗಿ ಆಟವೋ? ಡಿಕೆಶಿ ‘ಡಿನ್ನರ್ ಡಿಪ್ಲೊಮಸಿ’ಗೆ ಸಿದ್ಧತೆ!

ಮಾರ್ಚ್ 9ರಂದು ಬೆಂಗಳೂರಿನಲ್ಲಿ ನಡೆದ ರಾಜಕೀಯ ಬೆಳವಣಿಗೆಗಳು ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಂಚಲನ ಮೂಡಿಸಿವೆ. “ಹೈಕಮಾಂಡ್ ಅವಕಾಶ ನೀಡಿದರೆ ಮುಂದಿನ ಎರಡು ವರ್ಷಗಳ ಕಾಲ ನಾನೇ ಬಜೆಟ್ ಮಂಡಿಸುತ್ತೇನೆ” ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದೆಹಲಿ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಭಾನುವಾರ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದ ಶಿವಕುಮಾರ್, ಅಲ್ಲಿಂದ ನೇರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ವಿಮಾನದಲ್ಲಿ ದೆಹಲಿಗೆ…

Read More

ಕೆ.ಆರ್.ಪೇಟೆ: ಪತ್ನಿ ಬೆನ್ನಲ್ಲೇ ಪತಿಯೂ ಬಲಿ; ಕತ್ತು ಹಿಸುಕಿದರೂ ಬದುಕುಳಿದ ಎರಡು ವರ್ಷದ ಕಂದಮ್ಮ.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ಹೊಸಕೋಟೆ ಗ್ರಾಮದ ಮೂಲದ ದರ್ಶನ್ (29) ಮತ್ತು ಪತ್ನಿ ದಿವ್ಯಶ್ರೀ (25) ಮೃತಪಟ್ಟವರು. ಮೃತ ದಂಪತಿ ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದು, ಕೆ.ಆರ್. ಪೇಟೆಯ ಜಯನಗರ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ದರ್ಶನ್ ಕಾರು ಚಾಲಕನಾಗಿ ಕೆಲಸ ಮಾಡುತ್ತಾ ಕೃಷಿಯಲ್ಲೂ ತೊಡಗಿಸಿಕೊಂಡಿದ್ದರೆ, ದಿವ್ಯಶ್ರೀ ಪ್ಯಾರಾ ಮೆಡಿಕಲ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ​ಇಂದು ಬೆಳಗ್ಗೆ ದಂಪತಿ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದೆ ಎನ್ನಲಾಗಿದ್ದು,…

Read More

​ದೂರು ನೀಡಲು ಹೋದವರ ಮೇಲೆಯೇ ಪೊಲೀಸ್ ಪ್ರತಾಪ: ಹಲ್ಲೆ ನಡೆಸಿದರೇ ಎಸ್‌ಐ ಮತ್ತು ಕಾನ್ಸ್‌ಟೇಬಲ್!?

ವರದಿ: ರಾಮಸಮುದ್ರ ಎಸ್. ವೀರಭದ್ರಸ್ವಾಮಿ ಚಾಮರಾಜನಗರ ಜಿಲ್ಲೆಯ ಯಳಂದೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಹೋದ ಅಮಾಯಕ ಯುವಕರ ಮೇಲೆ ಖಾಕಿ ಪಡೆ ದರ್ಪ ಮೆರೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕಂದಹಳ್ಳಿ ಗ್ರಾಮದ ಶಿವರಾಜು ಹಾಗೂ ಕುಮಾರ್ ಎಂಬುವವರು ತಮ್ಮ ಮೊಬೈಲ್ ಕಳ್ಳತನವಾಗಿರುವ ಬಗ್ಗೆ ಸಿಸಿಟಿವಿ ದೃಶ್ಯಾವಳಿಗಳ ಸಮೇತ ದೂರು ನೀಡಲು ಠಾಣೆಗೆ ತೆರಳಿದ್ದರು. ಆದರೆ, ಅಲ್ಲಿ ನ್ಯಾಯ ಸಿಗುವ ಬದಲು ಪೊಲೀಸರ ಹಲ್ಲೆ ಮತ್ತು ಅವಾಚ್ಯ ಶಬ್ದಗಳ ನಿಂದನೆ ಎದುರಾಗಿದೆ ಎಂದು ಸಂತ್ರಸ್ತರು ಅಳಲು…

Read More
error: Content is protected !!