Headlines

ಧರ್ಮಸ್ಥಳ ಪ್ರಕರಣದ ದೂರುದಾರನ ಹೆಸರು ಗೃಹ ಸಚಿವರಿಂದ ಬಹಿರಂಗ!!!

ಬೆಂಗಳೂರು, ಆಗಸ್ಟ್ 18: ಧರ್ಮಸ್ಥಳ ಸುತ್ತಮುತ್ತ ನೂರಾರು ಜನರನ್ನು ಕೊಲೆ ಮಾಡಿ ಶವಗಳನ್ನು ಕಾಣದ ರೀತಿಯಲ್ಲಿ ಹೂತಿಡಲಾಗಿದೆ ಎಂದು ಆರೋಪಿಸಿ ಎಸ್ಐಟಿ ತನಿಖಾ ತಂಡಕ್ಕೆ ತಲೆನೋವಾಗಿರುವ ಅನಾಮಿಕ ದೂರುದಾರನ ಹೆಸರನ್ನು ಇಂದು ಖುದ್ದು ಗೃಹ ಸಚಿವ ಪರಮೇಶ್ವರ್ ಸದನದ ಮುಂದೆ ಬಹಿರಂಗಪಡಿಸಿದ್ದಾರೆ. ಸದನದ ಮುಂದೆ ಗೃಹ ಸಚಿವರು ಹೇಳಿದ್ದಿಷ್ಟು:“ಹಿಂದೆ ಧರ್ಮಸ್ಥಳ ಪೊಲೀಸ್ ಠಾಣೆಗೆ ತೆರಳಿ ಓರ್ವ ದೂರು ಕೊಟ್ಟಿದ್ದನು. ಈ ವ್ಯಕ್ತಿ ತನ್ನ ದೂರಿನಲ್ಲಿ ತನಗೆ ನಿರಂತರವಾಗಿ ಜೀವ ಬೆದರಿಕೆಯೊಡ್ಡಿ ಶವ ಹೂತಿಟ್ಟ ಬಗ್ಗೆ ತಿಳಿಸಿದ್ದ. ಈ…

Read More

ಪರಪ್ಪನ‌ ಅಗ್ರಹಾರ ಸೇರೊ‌ ಮುನ್ನ ಲುಕ್ ಬದಲಾಯಿಸಿದ ದರ್ಶನ್!

ಬೆಂಗಳೂರು, ಆಗಸ್ಟ್ 16: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್ ತೂಗುದೀಪ್, ಪವಿತ್ರಾಗೌಡ ಹಾಗೂ ಇನ್ನೂ ಕೆಲವರು ಮತ್ತೆ ಬಂಧನಕ್ಕೆ ಒಳಗಾಗಿದ್ದು ಪರಪ್ಪನ ಅಗ್ರಹಾರ ಜೈಲಿಗೆ ಸೇರಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಎಲ್ಲರನ್ನೂ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿದ್ದಾರೆ. ಹೀಗೆ ನ್ಯಾಯಾಂಗ ಬಂಧನಕ್ಕೆ ಕಳಿಸುವ ಮುಂಚೆ ಎಲ್ಲ ಆರೋಪಿಗಳ ಚಿತ್ರಗಳು, ಬೆರಳಚ್ಚು ತೆಗೆದುಕೊಂಡು ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಕೊಂಡಿದ್ದರು. ನ್ಯಾಯಾಂಗ ಬಂಧನಕ್ಕೆ ಕಳಿಸುವ ಮುಂಚೆ ತೆಗೆದುಕೊಂಡಿದ್ದ…

Read More

ಧರ್ಮಸ್ಥಳ ಅನಾಮಿಕನ‌ ಕೇಸ್: ಎಸ್ಐಟಿಯಿಂದ ಮಧ್ಯಂತರ ವರದಿ

ಧರ್ಮಸ್ಥಳದ ಸುತ್ತಮುತ್ತ ಶವಗಳನ್ನು ಹೂತಿಡಲಾಗಿದೆ ಎಂದು ಹೇಳಿದ್ದ ಅನಾಮಿಕನ ಪ್ರಕರಣದ ಕುರಿತು ವಿಧಾನಸಭೆಯಲ್ಲಿ ಉತ್ತರ ನೀಡಬೇಕಿರುವುದರಿಂದ ಮಧ್ಯಂತರ ವರದಿ ನೀಡಲು ಎಸ್‌‍ಐಟಿ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಅನಾಮಿಕ ವ್ಯಕ್ತಿಯ ಹೇಳಿಕೆ ಆಧರಿಸಿ ಎಸ್‌‍ಐಟಿ ತನಿಖೆ ನಡೆಸಲು ರಾಜ್ಯ ಸರ್ಕಾರ ಕಳೆದ ಜುಲೈ 20 ರಂದು ಹಿರಿಯ ಅಧಿಕಾರಿ ಪ್ರಣವ್‌ಮೊಹಾಂತಿ ನೇತೃತ್ವದಲ್ಲಿ ತಂಡ ರಚಿಸಿತ್ತು. ಅಂದಿನಿಂದಲೂ ಕಾರ್ಯಪ್ರವೃತ್ತರಾಗಿರುವ ಎಸ್‌‍ಐಟಿ ಅಧಿಕಾರಿಗಳು ನಾನಾ ರೀತಿಯ ತನಿಖೆಗಳನ್ನು ನಡೆಸುತ್ತಿದ್ದಾರೆ. ಸುಮಾರು 20 ದಿನಗಳಿಂದಲೂ ಒಟ್ಟು 17 ಸ್ಥಳಗಳಲ್ಲಿ ಅಗೆದು ಶವ…

Read More

ದರ್ಶನ್ ಸೇರಿ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಿಗೆ ಜೈಲು ಕೈದಿ ಸಂಖ್ಯೆಗಳು ಹಂಚಿಕೆ

ಬೆಂಗಳೂರು, ಆಗಸ್ಟ್ 15 – ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತವಾದ ನಟ ದರ್ಶನ್ ಮತ್ತು ಇತರ ಆರೋಪಿಗಳು ಈಗ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಸುಪ್ರೀಂ ಕೋರ್ಟ್ ಆಗಸ್ಟ್ 14ರಂದು ದರ್ಶನ್ ಸೇರಿದಂತೆ ಏಳು ಮಂದಿಯ ಜಾಮೀನು ರದ್ದುಪಡಿಸಿದ ನಂತರ, ಅವರನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡು, ಕೋರ್ಟ್ ಮುಂದೆ ಹಾಜರುಪಡಿಸಿದರು. ಬಂಧಿತರಿಗೆ ತಕ್ಷಣವೇ ವಿಚಾರಣಾಧೀನ ಕೈದಿ (Undertrial Prisoner) ಸಂಖ್ಯೆಗಳು ನೀಡಲಾಗಿದ್ದು, ಪವಿತ್ರಾ ಗೌಡ (ಕೇಸಿನ ಎ1 ಆರೋಪಿ)ಗೆ 7313 ಸಂಖ್ಯೆ, ದರ್ಶನ್ಗೆ 7314, ನಾಗರಾಜ್ಗೆ 7315, ಲಕ್ಷ್ಮಣಗೆ 7316 ಮತ್ತು ಪ್ರದೋಷ್ಗೆ 7317 ಸಂಖ್ಯೆಗಳು…

Read More

ರೇಣುಕಾಸ್ವಾಮಿ ಕೊಲೆ ಕೇಸ್: ಮತ್ತೆ ಜೈಲು ಸೇರುತ್ತಿರುವ ದರ್ಶನ್ ಮುಂದಿರುವ ಆಯ್ಕೆಗಳಿವು…

ಬೆಂಗಳೂರು, ಆಗಸ್ಟ್ 14: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ್, ನಟಿ ಪವಿತ್ರಾಗೌಡ ಹಾಗೂ ಇತರೆ ಕೆಲ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಷರತ್ತುಬದ್ಧ ಜಾಮೀನು ಆದೇಶವನ್ನು ಸುಪ್ರೀಂಕೋರ್ಟ್ ಇಂದು ರದ್ದುಗೊಳಿಸಿ ತೀರ್ಪು ನೀಡಿದೆ. ಇದರಿಂದ ನಟ ದರ್ಶನ್, ನಟಿ ಪವಿತ್ರಾಗೌಡ ಸೇರಿದಂತೆ ಎಲ್ಲಾ 7 ಆರೋಪಿಗಳು ಮತ್ತೊಮ್ಮೆ ಜೈಲು ಸೇರುತ್ತಿದ್ದಾರೆ. ಅದರಲ್ಲೂ ನಟ ದರ್ಶನ್​ಗೆ ಎಲ್ಲರಿಗಿಂತಲೂ ತುಸು ಮುಂಚಿತವಾಗಿ ಮಧ್ಯಂತರ ಜಾಮೀನು ನೀಡಿತ್ತು. ಆದರೆ ಇಂದು ಸುಪ್ರೀಂಕೋರ್ಟ್ ಜಾಮೀನು ರದ್ದು ಮಾಡಿದ್ದು, ರೇಣುಕಾಸ್ವಾಮಿ…

Read More

ಧರ್ಮಸ್ಥಳ ಬಳಿ ಶವಗಳನ್ನು ಹೂತಿಟ್ಟ ಕೇಸ್: ನಾಳೆ 13ನೇ ಸ್ಥಳದ ಜಿಪಿಆರ್ ವರದಿ ಎಸ್ಐಟಿಗೆ ಸಲ್ಲಿಕೆ

ಬೆಳ್ತಂಗಡಿ/ಬೆಂಗಳೂರು, ಆಗಸ್ಟ್ 13: ರಾಜ್ಯದ ಸುಪ್ರಸಿದ್ಧ ಪುಣ್ಯಕ್ಷೇತ್ರ ಧರ್ಮಸ್ಥಳ ಸ್ನಾನಘಟ್ಟದ ಬಳಿ ಅನಾಮಿಕ ವ್ಯಕ್ತಿ ಗುರುತಿಸಿರುವ 13 ನೇ ಸ್ಥಳದಲ್ಲಿ ಜಿಪಿಆರ್‌ ಬಳಸಿ ನಡೆಸುತ್ತಿದ್ದ ಶೋಧ ಕಾರ್ಯ ಮುಗಿದಿದ್ದು ಅದರ ವರದಿಯನ್ನು ತಂಡ ಇಂದು ಅಥವಾ ನಾಳೆ ಗುರುವಾರ ಎಸ್‌‍ಐಟಿಗೆ ನೀಡಲಿದೆ. ಈ ತಂಡ ನೀಡುವ ವರದಿ ಆಧಾರದ ಮೇಲೆ ಎಸ್‌‍ಐಟಿ ಉತ್ಖನನವನ್ನು ಆರಂಭಿಸಲಿದೆ. ಸೋಮವಾರ ದೆಹಲಿಯಿಂದ ಮಂಗಳೂರಿಗೆ ಬಂದ ಜಿಪಿಆರ್‌ ತಂಡ ಅಂದು ಪ್ರಾಯೋಗಿಕವಾಗಿ 13ನೇ ಸ್ಥಳದಲ್ಲಿ ಪರಿಶೀಲಿಸಿತು. ಬಳಿಕ ಆ ಸ್ಥಳದಲ್ಲಿದ್ದ ಗಿಡಗಂಟೆಗಳನ್ನು ತೆರವುಗೊಳಿಸಿ…

Read More

ಹುಬ್ಬಳ್ಳಿಯ ನೇಹಾ ಹಿರೇಮಠ್ ಕೊಲೆ ಕೇಸ್: ಹಂತಕನ ಜಾಮೀನು ಅರ್ಜಿ ವಜಾ

ಹುಬ್ಬಳ್ಳಿ, ಆಗಸ್ಟ್ 4: ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. 2024ರ ಏಪ್ರಿಲ್ 18ರಂದು ನಡೆದಿದ್ದ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಸಲ್ಲಿಸಿದ ಜಾಮೀನು ಅರ್ಜಿಯನ್ನು ಇಂದು(ಆಗಸ್ಟ್ 04) ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ್ದು, ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದೆ. ಇಲ್ಲಿವರೆಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದ ಹಂತಕ ಫಯಾಜ್​ ನನ್ನು ಆಗಸ್ಟ್ 6…

Read More

ಸಚಿವ ಕೆ.ಎನ್ ರಾಜಣ್ಣ ವಿರುದ್ಧ ಹನಿಟ್ರ್ಯಾಪ್ ನಡೆದಿಲ್ಲ-ಸರ್ಕಾರಕ್ಕೆ ಸಿಐಡಿ ರಿಪೋರ್ಟ್

ಬೆಂಗಳೂರು: ತಮ್ಮ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂಬ ರಾಜ್ಯ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಆರೋಪ ನಿರಾಧಾರವಾಗಿದೆ. ಸಚಿವರ ಆಪಾದನೆಗೆ ಯಾವುದೇ ಪುರಾವೆ ಇಲ್ಲ ಎಂದು ರಾಜ್ಯಸರ್ಕಾರಕ್ಕೆ ವರದಿ ಸಲ್ಲಿಸಿ ವಿಚಾರಣೆಯನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ಪೂರ್ಣಗೊಳಿಸಿದೆ. ಈ ಮೂಲಕ 7 ತಿಂಗಳ ಹಿಂದೆ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಹನಿಟ್ರ್ಯಾಪ್ ಯತ್ನ ವಿವಾದವು ತಾರ್ಕಿಕ ಅಂತ್ಯ ಕಂಡಿದೆ. ಈ ಪ್ರಕರಣದ ಕುರಿತು ಸುದೀರ್ಘವಾಗಿ ವಿಚಾರಣೆ ನಡೆಸಿದ ಸಿಐಡಿ ಅಧಿಕಾರಿಗಳು, ಕೊನೆಗೆ ಆರೋಪದಲ್ಲಿ…

Read More

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮಂಗಳೂರು ಸೇರಿ ರಾಜ್ಯದ 14 ಕಡೆ ಎನ್ಐಎ ದಾಳಿ

ಮಂಗಳೂರು, ಆಗಸ್ಟ್ 2: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ. ಬಜ್ಪೆಯಲ್ಲಿ 10 ಕಡೆ ಮತ್ತು ಸುರತ್ಕಲ್​ನಲ್ಲಿ 4 ಕಡೆ ಹಲವರ ಮನೆ, ಕಚೇರಿ ಮೇಲೆ ದಾಳಿ ಮಾಡಿರುವ ಎನ್ಐಎ ಅಧಿಕಾರಿಗಳು ದಾಖಲೆ ಪರಿಶೀಲನೆ ಮಾಡಿದ್ದಾರೆ. ಜೊತೆಗೆ ಕೆಲವರನ್ನು ವಿಚಾರಣೆಗೂ ಒಳಪಡಿಸಿದ್ದಾರೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು‌. ಹತ್ಯೆ ಮಾಡಿದ ಮತ್ತು ಹತ್ಯೆಗೆ…

Read More

ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಕಳುಹಿಸಿದ್ದ ಮೂವರ ಬಂಧನ

ಬೆಂಗಳೂರು, ಆಗಸ್ಟ್ 2: ಸಾಮಾಜಿಕ ಜಾಲತಾಣದಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾಗೆ ಅವಹೇಳನಕಾರಿ ಸಂದೇಶ ಕಳುಹಿಸಿದ್ದ ಮೂವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ, ಚಿತ್ರದುರ್ಗ ಮೂಲದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂವರು ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್‌ ಹಾಕಿ ಸವಾಲ್‌ ಹಾಕಿದ್ದರು. ಬಳಿಕ ಈ ಬಗ್ಗೆ ನಟಿ ರಮ್ಯಾ ದೂರು ನೀಡುವ ವೇಳೆ 43 ಅಕೌಂಟ್‌‍ಗಳ ಹೆಸರು ಉಲ್ಲೇಖಿಸಿ ದೂರು ದಾಖಲಿಸಿದ್ದರು. ಐಪಿ ಅಡ್ರೆಸ್‌‍ ಆಧರಿಸಿ ಪ್ರಕರಣದಲ್ಲಿ ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ…

Read More
error: Content is protected !!