Headlines

ಧರ್ಮಸ್ಥಳ ಬಳಿ ಶವಗಳನ್ನು ಹೂತಿಟ್ಟ ಕೇಸ್: ಅತ್ಯಾಚಾರ ಮಾಡಲಾಗಿದೆಯೇ? ಎಂದು ನಿಖರವಾಗಿ ಹೇಳುವುದು ಅಸಾಧ್ಯ ಎಂದ ಎಸ್ಐಟಿ

ಮಂಗಳೂರು, ಆಗಸ್ಟ್ 1: ಅನಾಮಿಕ ದೂರುದಾರನ ಆಗ್ರಹದ ಮೇರೆಗೆ ಉತ್ಖನನ ಕೆಲಸ ಜಾರಿಯಲ್ಲಿದೆ ಮತ್ತು ಇವತ್ತು 7ನೇ ಸ್ಥಳದಲ್ಲಿ ಅಸ್ಥಿಪಂಜರಗಳನ್ನು ಪತ್ತೆ ಮಾಡುವ ಕೆಲಸವನ್ನು ಪೌರಕಾರ್ಮಿಕರು ಮಾಡುತ್ತಿದ್ದಾರೆ ಎಂದು ಹೇಳುತ್ತಾರೆ. ನೇತ್ರಾವತಿ ನದಿ ಹರಿಯುತ್ತಿರುವ ತೀರದ ಮತ್ತೊಂದು ಭಾಗದಲ್ಲಿ ಭೂಮಿ ತೋಡುವ ಕೆಲಸ ನಡೆಯುತ್ತಿದೆ ಮತ್ತು ನದಿ ತೀರದ ಈ ಭಾಗದಲ್ಲಿ ನಿಂತಿದ್ದಾರೆ. ಇದುವರೆಗೆ ಎರಡೂವರೆ ಅಡಿ ತೋಡಿದರೂ ಮಾನವ ದೇಹದ ಮೂಳೆಗಳಾಗಲೀ, ಅಸ್ಥಿಪಂಜರವಾಗಲೀ ಸಿಕ್ಕಿಲ್ಲ. ನಿನ್ನೆ ಮೂಳೆಗಳು ಸಿಕ್ಕಿದ್ದು ಮೂರೂವರೆ ಅಡಿ ಅಗೆತದ ನಂತರ, ಹಾಗಾಗಿ…

Read More

ಸರಣಿ ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಮತ್ತೆ ಮುಂದೂಡಿಕೆ!

ಬೆಂಗಳೂರು, ಜುಲೈ 30: ಸರಣಿ ಅತ್ಯಾಚಾರ ಆರೋಪ ಎದುರಿಸುತ್ತಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ತೀರ್ಪನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತ್ತೆರಡು ದಿನ ಮುಂದೂಡಿದೆ. ಮೈಸೂರಿನ ಕೆ.ಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದರು. ಇದೀಗ ಆಗಸ್ಟ್ 1ಕ್ಕೆ ತೀರ್ಪನ್ನು ಮುಂದೂಡಿಕೆ ಮಾಡಲಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧದ ತೀರ್ಪು…

Read More

ಕರ್ನಾಟಕದ ಇತಿಹಾಸದಲ್ಲೇ ಅತಿದೊಡ್ಡ ಸೈಬರ್ ಕ್ರೈಂ: ಕಂಪನಿಯ ಸರ್ವರ್ ಹ್ಯಾಕ್ ಮಾಡಿ 378 ಕೋಟಿ ರೂ‌. ಲೂಟಿ!

ಬೆಂಗಳೂರು, ಜುಲೈ 30: ಕರ್ನಾಟಕ ಇತಿಹಾಸದಲ್ಲೇ ಅತಿದೊಡ್ಡ ಸೈಬರ್ ವಂಚನೆ ಪ್ರಕರಣವೊಂದು ಬೆಂಗಳೂರಿನ ವೈಟ್​ಫೀಲ್ಡ್​ನಲ್ಲಿ ಬೆಳಕಿಗೆ ಬಂದಿದೆ. ದೇಶದ ಪ್ರತಿಷ್ಠಿತ ಕ್ರಿಪ್ಟೋ ಕರೆನ್ಸಿ ಕಂಪನಿಯಾದ ನೆಬಿಲೊ ಟೆಕ್ನಾಲಜೀಸ್ ಪ್ರೈವೇಟ್​ ಲಿಮಿಟೆಡ್​ನ ಸರ್ವರ್ ಹ್ಯಾಕ್ ಮಾಡಿ, ಸೈಬರ್​ ಖದೀಮರು 378 ಕೋಟಿ ರೂಪಾಯಿ ಕಳವು ಮಾಡಿದ್ದಾರೆ. ಪ್ರಕರಣ ಸಂಬಂಧ ವೈಟ್​​ಫೀಲ್ಡ್ ಸೈಬರ್​ ಕ್ರೈಂ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ನೆಬಿಲೊ ಟೆಕ್ನಾಲಜೀಸ್ ಕಂಪನಿ ನೌಕರ ರಾಹುಲ್ ಅಗರ್ವಾಲ್ ಎಂಬುವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಸೈಬರ್​…

Read More

ಅತ್ಯಾಚಾರ ಆರೋಪ ಕೇಸ್: ಪ್ರಜ್ವಲ್ ರೇವಣ್ಣ ಭವಿಷ್ಯ ಇಂದು ನಿರ್ಧಾರ

ಬೆಂಗಳೂರು, ಜುಲೈ 30: ಮೈಸೂರು ಜಿಲ್ಲೆಯ ಕೆ.ಆರ್.ನಗರ ಮಹಿಳೆಯ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಭವಿಷ್ಯ ಬುಧವಾರ (ಜುಲೈ 30) ದಂದು ನಿರ್ಧಾರವಾಗಲಿದೆ. 26 ಸಾಕ್ಷಿಗಳ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿಯೋ? ಅಥವಾ ಅಲ್ಲವೋ? ಎಂದು ತೀರ್ಪು ನೀಡಲಿದೆ. ಕಳೆದ 14 ತಿಂಗಳಿನಿಂದ ಸೆರೆವಾಸದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಭವಿಷ್ಯದ ದೃಷ್ಟಿಯಿಂದಲೂ ನಾಳೆಯ ತೀರ್ಪು ಮಹತ್ವದ್ದಾಗಲಿದೆ. ಸರಣಿ ಅತ್ಯಾಚಾರ ಆರೋಪ ಹೊತ್ತು…

Read More

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು: ಬೆಂಗಳೂರು ಪೊಲೀಸ್ ಕಮಿಷನರ್ ಹೇಳಿದ್ದಿಷ್ಟು….

ಬೆಂಗಳೂರು, ಜುಲೈ 29: ನಟಿ ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ನಟ ದರ್ಶನ್ ಅಭಿಮಾನಿಗಳ ಅಶ್ಲೀಲ ಕಮೆಂಟ್ ಹಾಗೂ ಮೆಸೇಜ್ ವಿರುದ್ಧ ದೂರು ನೀಡಿದ ಬೆನ್ನಲ್ಲೇ ನಟ ದರ್ಶನ್ ಅಭಿಮಾನಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಪೊಲೀಸರು ಮುಂದಾಗಿದ್ದಾರೆ. ರಮ್ಯಾ ಅವರು ಒಟ್ಟು 43 ಅಕೌಂಟ್ಸ್​ ಉಲ್ಲೇಖಿಸಿ ಕಮಿಷನರ್​ಗೆ ದೂರು ನೀಡಿದ್ದಾರೆ. ದೂರು ದಾಖಲಾಗ್ತಿದ್ದಂತೆ ಸೈಬರ್ ಕ್ರೈಂ ಪೊಲೀಸರು ಎಫ್​ಐಆರ್ ಮಾಡಿ ತನಿಖೆ ಚುರುಕುಗೊಳಿಸಿದ್ದಾರೆ. ಅಶ್ಲೀಲ ಕಾಮೆಂಟ್ ಬಂದ ಅಕೌಂಟ್ಸ್ ಪೈಕಿ ಬಹುತೇಕ ಫೇಕ್ ಅನ್ನೋದು ತಿಳಿದುಬಂದಿದೆ. ಯುವತಿಯರ…

Read More

ಬೂದನೂರು ಗ್ರಾಮ ಪಂಚಾಯಿತಿಯ ಸಾಮಾಗ್ರಿ ಖರೀದಿಯಲ್ಲಿ ಭ್ರಷ್ಟಾಚಾರ; ಲೋಕಾಯುಕ್ತಕ್ಕೆ ದೂರು

ಮಂಡ್ಯ: ತಾಲ್ಲೂಕಿನ ಬೂದನೂರು ಗ್ರಾಮ ಪಂಚಾಯತಿಯ ಆಡಳಿತ ಮಂಡಳಿ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ಹಾಗೂ ಭ್ರಷ್ಟಾಚಾರ ಎಸಗಿರುವ ಕುರಿತು ನಗರದಲ್ಲಿ ಲೋಕಾಯುಕ್ತಕ್ಕೆ ಸ್ವಂತಮನೆ ನಮ್ಮ ಹಕ್ಕು ಹೋರಾಟ ಸಮಿತಿ ಸಂಚಾಲಕ ಬಿ.ಕೆ.ಸತೀಶರವರು (ಬೂಸ) ದೂರು ನೀಡಿದರು‌‌. ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸತೀಶ್ ರವರು ಬೂದನೂರು ಗ್ರಾಮ ಪಂಚಾಯತಿ ಆಡಳಿತ ಮಂಡಳಿಯ ಅಧ್ಯಕ್ಷೆ ಮಾನಸ ಹಾಗೂ ಪಿಡಿಒ ವೈ.ಎಸ್‌.ವಿನಯ್ ಕುಮಾರ್ ಅವರು 2024-25ನೇ ಸಾಲಿನಲ್ಲಿ ಗ್ರಾಮ ಪಂಚಾಯತಿಯ ನೀರು ಸರಬರಾಜು ಸಾಮಾಗ್ರಿ ಖರೀದಿಯಲ್ಲಿ ಸರ್ಕಾರದ ಪಾರದರ್ಶಕ…

Read More

ದೇವನಹಳ್ಳಿ ಏರ್ಪೋರ್ಟ್ ನಲ್ಲಿ 40 ಕೋಟಿ ಮೌಲ್ಯದ ಕೊಕೇನ್ ಜಪ್ತಿ!

ಬೆಂಗಳೂರು, ಜುಲೈ 20: ಖಚಿತ ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸಿದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಬೆಂಗಳೂರು ವಲಯ ಘಟಕದ ಅಧಿಕಾರಿಗಳು, 40 ಕೋಟಿ ಮೌಲ್ಯದ 4 ಕೆಜಿಗೂ ಹೆಚ್ಚು ಕೊಕೇನ್‌ನೊಂದಿಗೆ ಪುರುಷ ಪ್ರಯಾಣಿಕನನ್ನು ಬಂಧಿಸಿರುವ ಘಟನೆ ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ವಶಪಡಿಸಿಕೊಂಡ ಕೊಕೇನ್‌ 4,006 ಗ್ರಾಂ (4 ಕೆ.ಜಿ.ಗಿಂತ ಹೆಚ್ಚು) ತೂಕವಿದ್ದು,ಇದರ ಅಂತರರಾಷ್ಟ್ರೀಯ ಮಾರುಕಟ್ಟೆ ಮೌಲ್ಯ ಸುಮಾರು 40 ಕೋಟಿ ರೂ ಎಂದು ಅಂದಾಜು ಮಾಡಲಾಗಿದೆ. ದೋಹಾದಿಂದ ಆಗಮಿಸಿದ ಆರೋಪಿಯನ್ನು ಬೆಂಗಳೂರು ಅಂತರಾಷ್ಟ್ರೀಯ…

Read More
error: Content is protected !!