ಡಿಸಿಎಂ ಆದೇಶದ ಬೆನ್ನಲ್ಲೇ ಎಚ್ಚೆತ್ತ ಆಡಳಿತ: ಪಾಂಡವಪುರ ಎಸಿ ನೇತೃತ್ವದಲ್ಲಿ ಕೆ.ಆರ್.ಎಸ್ ಒತ್ತುವರಿ ತೆರವು ಸಮಿತಿ ರಚನೆ.
ಮಂಡ್ಯ: ರಾಜ್ಯದ ಜೀವನಾಡಿ ಕೃಷ್ಣರಾಜ ಸಾಗರ (KRS) ಅಣೆಕಟ್ಟಿನ ಹಿನ್ನೀರಿನ ಪ್ರದೇಶದಲ್ಲಿನ ಅಕ್ರಮ ಒತ್ತುವರಿಗಳನ್ನು ತೆರವುಗೊಳಿಸಲು ಜಿಲ್ಲಾಡಳಿತವು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಜನವರಿ 06, 2026ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಮಹತ್ವದ ಸಭೆಯಲ್ಲಿ, ಒತ್ತುವರಿ ಪ್ರದೇಶಗಳನ್ನು ಗುರುತಿಸಲು ತಕ್ಷಣವೇ ಸಮಗ್ರ ಸರ್ವೆ ಕಾರ್ಯವನ್ನು ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು. ಜಂಟಿ ಮನವಿಗೆ ಸ್ಪಂದಿಸಿದ ಉಪ ಮುಖ್ಯಮಂತ್ರಿ ಶ್ರೀರಂಗಪಟ್ಟಣ ಶಾಸಕ ಶ್ರೀ ಎ.ಬಿ. ರಮೇಶ್ ಬಂಡಿಸಿದ್ದೇಗೌಡ ಹಾಗೂ ವಿಧಾನ ಪರಿಷತ್ ಸದಸ್ಯ ಶ್ರೀ ದಿನೇಶ್ ಗೂಳಿಗೌಡ ಅವರು ಜಂಟಿಯಾಗಿ…

