₹1 ಕೋಟಿ ವೆಚ್ಚದ ರಸ್ತೆ ಕಾಮಗಾರಿಯಲ್ಲಿ ಕಳಪೆ ಕಾಮಗಾರಿ ಆರೋಪ: ತನಿಖೆಗೆ ಆಗ್ರಹ
ಗುಂಡ್ಲುಪೇಟೆ, ಆಗಸ್ಟ್ 4: ಗುಂಡ್ಲುಪೇಟೆ ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದಿಂದ ಪುತ್ತನಪುರ ಗೇಟ್ ಸಂಪರ್ಕ ಕಲ್ಪಿಸುವ ಸುಮಾರು ₹1 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿ ಅವೈಜ್ಞಾನಿಕ ಹಾಗೂ ಕಳಪೆ ರೀತಿಯಲ್ಲಿ ನಡೆಯುತ್ತಿದ್ದು, ಸಾರ್ವಜನಿಕರ ಸುರಕ್ಷತೆಯನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ ಎಂದು ಗುಂಡ್ಲುಪೇಟೆ ತಾಲ್ಲೂಕು ಅಹಿಂದ ಅಧ್ಯಕ್ಷ ಶಶಿಕುಮಾರ್ ಆರೋಪಿಸಿದ್ದಾರೆ.ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ರಸ್ತೆ ಬದಿಯಲ್ಲಿ ನಿರ್ಮಿಸಲಾಗುತ್ತಿರುವ ಚರಂಡಿ ಕಾಮಗಾರಿ ಹಲವು ಕಡೆ ಅಪೂರ್ಣವಾಗಿದ್ದು, ಸುರಕ್ಷತಾ ಕ್ರಮಗಳನ್ನು ಅನುಸರಿಸದೆ ಆಳವಾದ ಚರಂಡಿಗಳು ಹಾಗೂ…

