Headlines

₹1 ಕೋಟಿ ವೆಚ್ಚದ ರಸ್ತೆ ಕಾಮಗಾರಿಯಲ್ಲಿ ಕಳಪೆ ಕಾಮಗಾರಿ ಆರೋಪ: ತನಿಖೆಗೆ ಆಗ್ರಹ

ಗುಂಡ್ಲುಪೇಟೆ, ಆಗಸ್ಟ್ 4: ಗುಂಡ್ಲುಪೇಟೆ ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದಿಂದ ಪುತ್ತನಪುರ ಗೇಟ್ ಸಂಪರ್ಕ ಕಲ್ಪಿಸುವ ಸುಮಾರು ₹1 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿ ಅವೈಜ್ಞಾನಿಕ ಹಾಗೂ ಕಳಪೆ ರೀತಿಯಲ್ಲಿ ನಡೆಯುತ್ತಿದ್ದು, ಸಾರ್ವಜನಿಕರ ಸುರಕ್ಷತೆಯನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ ಎಂದು ಗುಂಡ್ಲುಪೇಟೆ ತಾಲ್ಲೂಕು ಅಹಿಂದ ಅಧ್ಯಕ್ಷ ಶಶಿಕುಮಾರ್ ಆರೋಪಿಸಿದ್ದಾರೆ.ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ರಸ್ತೆ ಬದಿಯಲ್ಲಿ ನಿರ್ಮಿಸಲಾಗುತ್ತಿರುವ ಚರಂಡಿ ಕಾಮಗಾರಿ ಹಲವು ಕಡೆ ಅಪೂರ್ಣವಾಗಿದ್ದು, ಸುರಕ್ಷತಾ ಕ್ರಮಗಳನ್ನು ಅನುಸರಿಸದೆ ಆಳವಾದ ಚರಂಡಿಗಳು ಹಾಗೂ…

Read More

ಅರ್ಧ ವರ್ಷ ಕಳೆದರೂ ಚಾಲನೆಯಾಗದ ANPR ಕ್ಯಾಮರಾ..!?

ವರದಿ: ರಾಮಸಮುದ್ರ ಎಸ್. ವೀರಭದ್ರಸ್ವಾಮಿ ಚಾಮರಾಜನಗರ: ಚಾಮರಾಜನಗರ ಪಟ್ಟಣ ಒಳ ಹಾಗೂ ಹೊರಭಾಗದಲ್ಲಿ ಅಪರಾಧ ಸಂಖ್ಯೆ, ಕುಕೃತ್ಯ ತಡೆಯುವಲ್ಲಿ ಸಹಕಾರಿಯಾದ ಎಎನ್ಪಿಆರ್ ಕ್ಯಾಮರಾಗಳ ಚಾಲ್ತಿ ಇನ್ನೂ ಕನಸಾಗೆ ಇದೆ ಎಂದರೆ ತಪ್ಪಾಗಲಾರದು. ಜಿಲ್ಲೆಯಲ್ಲಿ ಈಗಾಗಲೇ 14 ಕಡೆಗಳಲ್ಲಿ ಎಎನ್ ಪಿಆರ್ ಕ್ಯಾಮರಾಗಳನ್ನು ಜಿಲ್ಲಾ ಅಳವಡಿಸಲು ಸ್ಥಳಗಳನ್ನು ಗುರುತಿಸಲಾಗಿದ್ದು, ಕೇಂದ್ರದ ನಾಲ್ಕು ಕಡೆ ತಲಾ ಎರಡರಂತೆ 8 ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಉಳಿದ ಕ್ಯಾಮೆರಾಗಳನ್ನು ಗುಂಡ್ಲುಪೇಟೆ, ಕೊಳ್ಳೇಗಾಲ ಹಾಗೂ ಜಿಲ್ಲಾ ಕೇಂದ್ರದ ಪ್ರಮುಖ ವೃತ್ತಗಳಲ್ಲಿ ಅಳವಡಿಕೆ ಮಾಡಿ ಕಾರರೂಪಕ್ಕೆ ತರುವುದಷ್ಟೇ…

Read More

ಮಂಡ್ಯ : ಹಳೆ ಕಟ್ಟಡದ ಕಬ್ಬಿಣ ನುಂಗಿದ ಆರೋಪಿಗೆ ‘ಸರ್ವೋತ್ತಮ ಸೇವಾ ಪ್ರಶಸ್ತಿ’ ಭಾಗ್ಯ…!?

ಜಿಲ್ಲಾ ಪಂಚಾಯಿತಿಯಲ್ಲಿ ಕಳ್ಳತನವಾದ ಸಾವಿರಾರು ಕೆಜಿ ಕಬ್ಬಿಣದ ಕಳ್ಳತನದ ಆರೋಪಿ ಇದೀಗ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನ..!? ‘ಶಹಭಾಷ್’ ಮಂಡ್ಯ….!ಜಿಲ್ಲಾಡಳಿತಕ್ಕೆ ಇಂತಹ ವಿಚಾರದಲ್ಲಿ ಅದೇನು ಜಾಣ ಕುರುಡೋ ಅಥವಾ ಭ್ರಷ್ಟರಿಗೆ ಮಣೆ ಹಾಕುವ ಮನಸ್ಥಿತಿಯೋ..!? ಯಾವುದು ತಿಳಿಯದಾಗಿದೆ ಅಥವಾ ಮಂಡ್ಯ ಜಿಲ್ಲೆಯಲ್ಲಿ ಪ್ರಶಸ್ತಿಯು ಮಾರಾಟವಾಗಿದೆಯೇ..! ಎಂಬ ಪ್ರಶ್ನೆ ಕಾಡುತ್ತಿದೆ. ಸದ್ಯಕ್ಕೆ ಡಾ. ಶಿವಲಿಂಗಯ್ಯ ಎಂಬ ವ್ಯಕ್ತಿ ಮೂಲತಹ ಪಶು ಸಂಗೋಪನಾ ಇಲಾಖೆಗೆ ಸಂಬಂಧ ಪಟ್ಟವರು, ಮಂಡ್ಯ ಜಿಲ್ಲೆಯಲ್ಲಿ ಕೆಲಸ ಮಾಡಲು ಅಧಿಕಾರಿಗಳಿಗೆ ಬರವೇನೋ… ಎಂಬಂತೆ ಜಿಲ್ಲಾ ಪಂಚಾಯಿತಿ…

Read More

ಪಾಲಿಕೆ ಸಮರಕ್ಕೆ ಮುಹೂರ್ತ ಫಿಕ್ಸ್: ಸರ್ಕಾರದ ‘ಮುಂದೂಡಿಕೆ’ ಪ್ಲಾನ್‌ಗೆ ಆಯೋಗದ ಬ್ರೇಕ್!

ಬೆಂಗಳೂರು: ಗ್ರೇಟರ್ ಬೆಂಗಳೂರು ವ್ಯಾಪ್ತಿಯ 5 ಮಹಾನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಚುನಾವಣೆ ಆಯೋಗದ ನಡುವೆ ಈಗ ನೇರ ಹಣಾಹಣಿ ಶುರುವಾಗಿದೆ. ಮಾನ್ಯ ಸುಪ್ರೀಂ ಕೋರ್ಟ್ ನೀಡಿರುವ ಗಡುವಿನಂತೆ ಜೂನ್ 30, 2026 ರೊಳಗೆ ಚುನಾವಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಆಯೋಗವು ಪಣತೊಟ್ಟಿದ್ದು, ಈ ಬಗ್ಗೆ ಇಂದು ಅಧಿಕೃತ ಪ್ರಕಟಣೆ ಹೊರಡಿಸಿದೆ. ​ವಾಸ್ತವದಲ್ಲಿ, ರಾಜ್ಯ ಸರ್ಕಾರವು ಜನಗಣತಿ ಕಾರ್ಯ ಮತ್ತು ಶೈಕ್ಷಣಿಕ ಪರೀಕ್ಷೆಗಳ ನೆಪವೊಡ್ಡಿ ಚುನಾವಣೆಯನ್ನು ಸೆಪ್ಟೆಂಬರ್ ಅಂತ್ಯದವರೆಗೆ ಮುಂದೂಡುವಂತೆ ಆಯೋಗಕ್ಕೆ ಮನವಿ ಮಾಡಿತ್ತು….

Read More

ಸಂಪುಟಕ್ಕೆ ಸರ್ಜರಿ ಫಿಕ್ಸ್? 50% ಸಚಿವರಿಗೆ ಗೇಟ್‌ಪಾಸ್‌ ಸಾಧ್ಯತೆ!

ಹುಬ್ಬಳ್ಳಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಯಾವುದೇ ಪ್ರಸ್ತಾಪವಿಲ್ಲ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಸ್ಪಷ್ಟಪಡಿಸಿದ್ದಾರೆ. ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಸುಭದ್ರವಾಗಿದೆ. ಈ ಬಗ್ಗೆ ಹೈಕಮಾಂಡ್ ಈಗಾಗಲೇ ಸ್ಪಷ್ಟ ಸೂಚನೆ ನೀಡಿದ್ದು, ಅನಗತ್ಯ ಗೊಂದಲಗಳಿಗೆ ಅವಕಾಶವಿಲ್ಲ ಎಂದರು. ​ಸಚಿವ ಸಂಪುಟ ವಿಸ್ತರಣೆಯ ಕುರಿತು ಮಾತನಾಡಿದ ಅವರು, ಮೇ 20ರೊಳಗೆ ಸಂಪುಟ ಪುನಾರಚನೆಯಾಗುವ ವಿಶ್ವಾಸವಿದೆ. ಉಪ ಚುನಾವಣೆಗಳ ಫಲಿತಾಂಶ ಮೇ 4ರಂದು…

Read More

​ಬೂದನೂರು ಭೂ ಹಗರಣ: ಸರ್ಕಾರಿ ರಸ್ತೆಯನ್ನೇ ನುಂಗಿ 41 ಲಕ್ಷ ಲಪಟಾಯಿಸಿದ ‘ಕಿಲಾಡಿ’ಗಳು!

ಭ್ರಷ್ಟ ಪಿಡಿಒಗೆ ಸಂಕಷ್ಟ! ಶಿಸ್ತು ಕ್ರಮಕ್ಕೆ ಮಂಡ್ಯ ಸಿಇಒಗೆ ಜಿಲ್ಲಾಧಿಕಾರಿಗಳ ಸೂಚನೆ. ಮಂಡ್ಯ ಜಿಲ್ಲೆಯ ಬೂದನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ರಾಷ್ಟ್ರೀಯ ಹೆದ್ದಾರಿ ಭೂಸ್ವಾಧೀನ ಪ್ರಕ್ರಿಯೆಯ ಬೃಹತ್ ಹಗರಣವೊಂದು ಈಗ ಬಯಲಿಗೆ ಬಂದಿದ್ದು, ಜಿಲ್ಲಾಡಳಿತದ ಕಟ್ಟುನಿಟ್ಟಿನ ಕ್ರಮಕ್ಕೆ ಸಾಕ್ಷಿಯಾಗಿದೆ. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ (NH-275) ನಿರ್ಮಾಣದ ಸಂದರ್ಭದಲ್ಲಿ ಸಾರ್ವಜನಿಕ ಬಳಕೆಗೆ ಮೀಸಲಾಗಿದ್ದ ರಸ್ತೆಯನ್ನೇ ಖಾಸಗಿ ಆಸ್ತಿ ಎಂದು ಬಿಂಬಿಸಿ, ಲಕ್ಷಾಂತರ ರೂಪಾಯಿ ಪರಿಹಾರ ಪಡೆದಿರುವುದು ತನಿಖೆಯಿಂದ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ….

Read More

ಹಿರಿಯ ಪತ್ರಕರ್ತ ಕೆ ಜೆ. ಕುಮಾರ್ ನಿಧನ

ಮೈಸೂರು-ಮಾರ್ಚ್.11- ಮೈಸೂರಿನ ಹಿರಿಯ ಪತ್ರಕರ್ತ ಕೆ. ಜೆ. ಕುಮಾರ್ ಇಂದು ಸಂಜೆ ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು.ಉಡುಪಿ ಜಿಲ್ಲೆ ಕೊರಂದರ ಪಾಳ್ಯದಲ್ಲಿ ರಘು ರಾಮ್ ಶೆಟ್ಟಿ ಮತ್ತು ಶಾರದಾ ಅವರ ಜ್ಯೋಷ್ಠ ಪುತ್ರರಾಗಿ 1952ರ್ ನವಂಬರ್. 6 ರಂದು ಜನಿಸಿದರು. ಸುಮಾರು 56 ವರ್ಷಗಳಿಂದ ಮೈಸೂರಿನ ಪ್ರಮುಖ ಪತ್ರಿಕಾ ವಿತರಕರಾಗಿ ಹಾಗೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದರು. 1969ರಲ್ಲಿ ಸೋದರ ಮಾವ ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಸ್ವತಂತ್ರ ಹೋರಾಟಗಾರ ಎ….

Read More

ಮದ್ದೂರು: ಅಕ್ರಮ ಜೂಜು ಅಡ್ಡೆ ಮೇಲೆ ದಾಳಿ, 50 ಆರೋಪಿಗಳ ವಿರುದ್ಧ ಪ್ರಕರಣ ದಾಖಲು.

ದಿನಾಂಕ 10/03/2026 ರಂದು ಮಂಡ್ಯ ಜಿಲ್ಲೆ ಮದ್ದೂರು ಪೊಲೀಸ್ ಠಾಣಾ ಸರಹದ್ದಿನ ಮದ್ದೂರು ತಾಲ್ಲೂಕು, ಆತಗೂರು ಹೋಬಳಿ, ನಿಡಘಟ್ಟ ಗ್ರಾಮದ ತಿನ್ನೂರು ರಸ್ತೆಯಲ್ಲಿರುವ ಶ್ರೀ ವರದರಾಜಸ್ವಾಮಿ ರಿಕ್ರಿಯೇಷನ್ ಅಸೋಸಿಯೇಷನ್ ಕ್ಲಬ್ ಕಟ್ಟಡದಲ್ಲಿ ಅಕ್ರಮವಾಗಿ ಮತ್ತು ಕಾನೂನು ಬಾಹಿರವಾಗಿ ಗುಂಪುಗೂಡಿಕೊಂಡು ಅಂದರ್-ಬಾಹರ್ ಜೂಜಾಟವಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ​ಈ ಮಾಹಿತಿಯ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಪೊಲೀಸ್‌ ಅಧೀಕ್ಷಕರು ಡಾ. ಶೋಭಾರಾಣಿ ವಿಜೆ, ಐಪಿಎಸ್ ರವರ ಆದೇಶದ ಮೇರೆಗೆ, ಘನ ನ್ಯಾಯಾಲಯದ ಅನುಮತಿ ಪಡೆದು ಕಾರ್ಯಾಚರಣೆ ರೂಪಿಸಲಾಯಿತು. ಮಳವಳ್ಳಿ…

Read More

ಡಿಸಿಎಂ ಆದೇಶದ ಬೆನ್ನಲ್ಲೇ ಎಚ್ಚೆತ್ತ ಆಡಳಿತ: ಪಾಂಡವಪುರ ಎಸಿ ನೇತೃತ್ವದಲ್ಲಿ ಕೆ.ಆರ್.ಎಸ್ ಒತ್ತುವರಿ ತೆರವು ಸಮಿತಿ ರಚನೆ.

ಮಂಡ್ಯ: ರಾಜ್ಯದ ಜೀವನಾಡಿ ಕೃಷ್ಣರಾಜ ಸಾಗರ (KRS) ಅಣೆಕಟ್ಟಿನ ಹಿನ್ನೀರಿನ ಪ್ರದೇಶದಲ್ಲಿನ ಅಕ್ರಮ ಒತ್ತುವರಿಗಳನ್ನು ತೆರವುಗೊಳಿಸಲು ಜಿಲ್ಲಾಡಳಿತವು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಜನವರಿ 06, 2026ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಮಹತ್ವದ ಸಭೆಯಲ್ಲಿ, ಒತ್ತುವರಿ ಪ್ರದೇಶಗಳನ್ನು ಗುರುತಿಸಲು ತಕ್ಷಣವೇ ಸಮಗ್ರ ಸರ್ವೆ ಕಾರ್ಯವನ್ನು ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು. ​ಜಂಟಿ ಮನವಿಗೆ ಸ್ಪಂದಿಸಿದ ಉಪ ಮುಖ್ಯಮಂತ್ರಿ ​ಶ್ರೀರಂಗಪಟ್ಟಣ ಶಾಸಕ ಶ್ರೀ ಎ.ಬಿ. ರಮೇಶ್ ಬಂಡಿಸಿದ್ದೇಗೌಡ ಹಾಗೂ ವಿಧಾನ ಪರಿಷತ್ ಸದಸ್ಯ ಶ್ರೀ ದಿನೇಶ್ ಗೂಳಿಗೌಡ ಅವರು ಜಂಟಿಯಾಗಿ…

Read More

​ಚಾಮರಾಜನಗರ: 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಗೆ ಚಾಲನೆ; ನಿಯಮ ಪಾಲನೆಗೆ ನ್ಯಾಯಾಧೀಶರ ಕರೆ

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ, ಜನವರಿ 06 :- ಪ್ರತಿಯೊಂದು ಜೀವವೂ ಅಮೂಲ್ಯವಾಗಿದ್ದು, ಜೀವಗಳ ರಕ್ಷಣೆ ಹಾಗೂ ರಸ್ತೆ ಸುರಕ್ಷತೆಗಾಗಿ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ ಅವರು ಸಲಹೆ ಮಾಡಿದರು. ನಗರದ ಪ್ರಾದೇಶಿಕ ಸಾರಿಗೆ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್, ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ…

Read More
error: Content is protected !!