Headlines

ಸರ್ಕಾರಿ ಅಧಿಕಾರಿಗಳ ಜೊತೆ ಸುರ್ಜೇವಾಲ ಸಭೆ: ಸಚಿವ ಕೆ.ಎನ್ ರಾಜಣ್ಣ, ಜೆಡಿಎಸ್ ತೀವ್ರ ಆಕ್ಷೇಪ

ಬೆಂಗಳೂರು, ಜುಲೈ 25: ಇತ್ತೀಚಿಗಷ್ಟೇ ಬೆಂಗಳೂರಿಗೆ ಬಂದು ಕಾಂಗ್ರೆಸ್ ಶಾಸಕರ ಮತ್ತು ಸಚಿವರ ಜೊತೆ ಒನ್ ಟು ಒನ್ ಸಭೆ ನಡೆಸಿದ್ದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕೆಲವು ಮಂದಿ ಸರ್ಕಾರಿ ಅಧಿಕಾರಿಗಳಿಗೂ ಕೂಡ ಬುಲಾವ್ ನೀಡಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ಇದೀಗ ಸಹಕಾರ ಸಚಿವ ಕೆ.ಎನ್ ರಾಜಣ್ಣ ಮತ್ತು ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿವೆ. ಸುರ್ಜೇವಾಲ ಸರ್ಕಾರಿ ಅಧಿಕಾರಿಗಳನ್ನು ಕರೆಸಿ ಮಾತುಕತೆ ನಡೆಸಿದ್ದೇ ಆದರೆ ಅದು ಸಂವಿಧಾನ ಬಾಹಿರ ಕೃತ್ಯ ಎಂದು…

Read More

ಮುಂಬೈ ಸರಣಿ ರೈಲು ಸ್ಫೋಟ: ಬಾಂಬೆ ಹೈಕೋರ್ಟ್ ನ 12 ಆರೋಪಿಗಳ ಖುಲಾಸೆ ತೀರ್ಪಿಗೆ ಸುಪ್ರೀಂಕೋರ್ಟ್ ತಡೆ

ನವದೆಹಲಿ, ಜುಲೈ 24: ಮುಂಬೈನಲ್ಲಿ 2006ರಲ್ಲಿ ನಡೆದ ಸರಣಿ ರೈಲು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್​ ನೀಡಿದ್ದ 12 ಆರೋಪಿಗಳ ಖುಲಾಸೆ ತೀರ್ಪಿಗೆ ಸುಪ್ರೀಂಕೋರ್ಟ್​ ತಡೆ ನೀಡಿದೆ. ಆರೋಪಿಗಳು ಮತ್ತೆ ಜೈಲಿಗೆ ಮರುಳುತ್ತಾರಾ ಎಂದು ಕಾದು ನೋಡಬೇಕಿದೆ. ಸಾಕ್ಷ್ಯಾಧಾರಗಳ ಕೊರತೆ ಇರುವ ಕಾರಣ ಆರೋಪಿಗಳನ್ನು ಖುಲಾಸೆಗೊಳಿಸುತ್ತಿರುವುದಾಗಿ ಬಾಂಬೆ ಹೈಕೋರ್ಟ್​ ಹೇಳಿತ್ತು. 189 ಜನರ ಸಾವಿಗೆ ಕಾರಣವಾದ 2006 ರ ಮುಂಬೈ ರೈಲು ಸ್ಫೋಟದ ಎಲ್ಲಾ 12 ಅಪರಾಧಿಗಳನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮಹಾರಾಷ್ಟ್ರ…

Read More

ಕಲಾಸಿಪಾಳ್ಯದಲ್ಲಿ ಬಾಂಬ್ ಸ್ಫೋಟಕ‌ ಪತ್ತೆ ಹಿನ್ನೆಲೆ: ತನಿಖೆಗೆ 6 ತಂಡಗಳ ರಚನೆ

ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ವಿಚಾರವಾಗಿ ತನಿಖೆಗೆ ಕಲಾಸಿಪಾಳ್ಯ ಠಾಣೆ ಪೊಲೀಸರಿಂದ ಆರು ತಂಡಗಳ ರಚನೆ ಮಾಡಲಾಗಿದೆ. ಸಿಸಿಬಿ, ಇಂಟೆಲಿಜೆನ್ಸ್, ಎಟಿಸಿ ತಂಡದಿಂದಲೂ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಜಿಲೆಟಿನ್ ಕಡ್ಡಿ ಜೊತೆಗೆ ಡಿಟೋನೆಟರ್​​ಗಳು​ ಕೂಡ ಪತ್ತೆ ಆಗಿದ್ದವು. ಈ ಬಗ್ಗೆ ಕಲಾಸಿಪಾಳ್ಯ ಪೊಲೀಸರು ಎಫ್​ಐಆರ್ ದಾಖಲಿಸಿದ್ದರು. ಕಲಾಸಿಪಾಳ್ಯ ಬಸ್​ ನಿಲ್ದಾಣದ ಶೌಚಾಲಯದ ಸಮೀಪ ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸ್ಫೋಟಕ ಪತ್ತೆಯಾಗಿತ್ತು. ಸ್ಥಳಕ್ಕೆ ಪೊಲೀಸರು, ಶ್ವಾನದಳ, ಬಾಂಬ್​ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿದ್ದವು….

Read More

ಬೆಂಗಳೂರಿನ ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ!

ಬೆಂಗಳೂರು, ಜುಲೈ 23: ನಗರದ ಕಲಾಸಿಪಾಳ್ಯ ಬಿಎಂಟಿಸಿ ಬಸ್​ ನಿಲ್ದಾಣದಲ್ಲಿ ಸ್ಫೋಟಕ ಪತ್ತೆಯಾಗಿದೆ. ಇಂದು(ಜುಲೈ23) ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಲಾಸಿಪಾಳ್ಯ ಬಸ್ ನಿಲ್ದಾಣದ ಶೌಚಾಲಯದ ಸಮೀಪ ಸ್ಫೋಟಕ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು, ಶ್ವಾನದಳ, ಬಾಂಬ್​ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿದೆ. ಒಂದು ಬ್ಯಾಗ್​ ನಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇನ್ನು ಸ್ಥಳಕ್ಕೆ ಡಿಸಿಪಿ ಎಸ್.ಗಿರೀಶ್​ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಸದ್ಯ ಬಸ್​ ನಿಲ್ದಾಣದಲ್ಲಿ ಪತ್ತೆಯಾದ ಸ್ಫೋಟಕವನ್ನು ಪೊಲೀಸರು ವಶಕ್ಕೆ…

Read More

ಬೆಂಗಳೂರಿನ ಮತ್ತೊಂದು ಶಾಲೆಗೆ ಬಾಂಬ್ ಬೆದರಿಕೆ!

ಬೆಂಗಳೂರು, ಜುಲೈ 22: ನಗರದ ಮತ್ತೊಂದು ಖಾಸಗಿ ಶಾಲೆಗೆ ಬಾಂಬ್ ಬೆದರಿಕೆಯ ಇ-ಮೇಲ್‌ ಸಂದೇಶ ಬಂದ ಹಿನ್ನೆಲೆಯಲ್ಲಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು. ನಗರದ ವರ್ತೂರು ಪೊಲೀಸ್‌‍ ಠಾಣೆ ವ್ಯಾಪ್ತಿಯ ಗುಂಜೂರು ಮುಖ್ಯರಸ್ತೆಯಲ್ಲಿರುವ ಖಾಸಗಿ ಶಾಲೆಗೆ ಬಾಂಬ್‌ ಇಟ್ಟಿರುವುದಾಗಿ ಇಂದು ಮಂಗಳವಾರ ಬೆಳಗ್ಗೆ ಇ-ಮೇಲ್‌ ಸಂದೇಶ ಬಂದಿದೆ. ಇ-ಮೇಲ್‌ ಪರಿಶೀಲಿಸುತ್ತಿದ್ದ ಸಿಬ್ಬಂದಿ ಈ ಸಂದೇಶ ಗಮನಿಸಿ ಗಾಬರಿಯಾಗಿ ಶಾಲಾ ಆಡಳಿತ ಮಂಡಳಿಗೆ ತಿಳಿಸಿದ್ದಾರೆ. ಶಾಲಾ ಆಡಳಿತ ಮಂಡಳಿ ತಕ್ಷಣ ಮಕ್ಕಳನ್ನು ಮನೆಗೆ ಕಳುಹಿಸಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ….

Read More

ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರಿಗೆ 6 ತಿಂಗಳ ಎಸ್ಮಾ ಜಾರಿ ಶಾಕ್!

ಬೆಂಗಳೂರು, ಜುಲೈ 18: ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಸರ್ಕಾರದ ಬಾಗಿಲು ಬಡಿದು ಸುಸ್ತಾದ ಕೆಎಸ್​ಆರ್​ಟಿಸಿ, ಬಿಎಂಆರ್​ಟಿಸಿ ಸೇರಿದಂತೆ 4 ಸಾರಿಗೆ ನಿಗಮಗಳ ಸಿಬ್ಬಂದಿಗಳು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಆಗಸ್ಟ್ 5ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಆದರೆ ಇದೀಗ ಸಾರಿಗೆ ನೌಕರರಿಗೆ ಕೆಎಸ್ಆರ್​​ಟಿಸಿ ಶಾಕ್ ನೀಡಿದ್ದು, ಪ್ರತಿಭಟನೆ ನಡೆಸದಂತೆ ಕಾರ್ಮಿಕ ಇಲಾಖೆ ಎಸ್ಮಾ ಜಾರಿ ಮಾಡಿದೆ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ 4 ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್​ 5ರಂದು ಬೆಳಿಗ್ಗೆ 6…

Read More

ರಾಜಕಾರಣಿಗಳು 75 ವರ್ಷಕ್ಕೆ ನಿವೃತ್ತಿಯಾಗಬೇಕೆಂದ ಆರೆಸ್ಸೆಸ್ ಮುಖ್ಯಸ್ಥ!

ದೇಶದಲ್ಲಿ ಎಲ್ಲಾ ಪ್ರಮುಖ ಹುದ್ದೆಗಳಲ್ಲಿರುವ ರಾಜಕೀಯ ನಾಯಕರು 75 ವರ್ಷ ತುಂಬಿದ ನಂತರ ಸ್ವಯಂ ನಿವೃತ್ತಿಯಾಗಿ ಇತರರಿಗೆ ಅವಕಾಶ ನೀಡಬೇಕು’ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರೆಸ್ಸೆಸ್) ಮುಖ್ಯಸ್ಥ ಮೋಹನ್ ಭಾಗವತ್ ಮತ್ತೊಮ್ಮೆ ಹೇಳಿದ್ದಾರೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು ಹೀಗೆ ಭಾಷಣ ಮಾಡಿದರು: “ಯಾರಾದರೂ ನಿಮಗೆ 75 ವರ್ಷ ತುಂಬಿದ್ದಕ್ಕೆ ಅಭಿನಂದನೆ ಸಲ್ಲಿಸಿದರೆ, ನೀವು ಕೆಲಸ ಮಾಡುವುದನ್ನು ನಿಲ್ಲಿಸಬೇಕು ಎಂದರ್ಥ. ಇತರರಿಗೆ ಕೆಲಸ ಮಾಡಲು ಅವಕಾಶ ನೀಡಬೇಕು” ಎಂದು ಒತ್ತಿ ಹೇಳಿದ್ದಾರೆ. ಮೋಹನ್…

Read More

ಬೇಕರಿ, ಕಾಂಡಿಮೆಂಟ್ಸ್, ಬೀಡಾ ಅಂಗಡಿ ಮಾಲೀಕರಿಗೆ ಗುಡ್ ನ್ಯೂಸ್!

ಬೆಂಗಳೂರು, ಜುಲೈ 12: ಯುಪಿಐ (UPI) ಮೂಲಕ 40 ಲಕ್ಷ ರೂಪಾಯಿಗಿಂತ ಅಧಿಕ ವಹಿವಾಟು ನಡೆಸಿದ ಬೇಕರಿ, ಕಾಂಡಿಮೆಂಟ್ಸ್, ಬೀಡ ಅಂಗಡಿಗಳು ಕಮರ್ಷಿಯಲ್ ಟ್ಯಾಕ್ಸ್ ಪಾವತಿ ಮಾಡಬೇಕೆಂಬ ನೋಟಿಸ್​ಗೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ, ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. ವಾರ್ಷಿಕ ವಹಿವಾಟು 1.5 ಕೋಟಿ ರೂ.ಗಿಂತ ಕಡಿಮೆ ಇದ್ದರೆ ಅಂತಹ ವರ್ತಕರು ಕೇವಲ ಶೇ.1 ರಷ್ಟು ಮಾತ್ರ ತೆರಿಗೆ ಪಾವತಿಸಬಹುದಾಗಿದೆ ಎಂದು ಹೇಳಿದೆ. ಆದರೆ, ಯುಪಿಐ ಮೂಲಕ 40 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ಹಣವನ್ನು…

Read More
error: Content is protected !!