ಸಾಥನ್ಕುಲಂ ಹಂತಕರಿಗೆ ಶಾಸ್ತಿ: 9 ಪೊಲೀಸರಿಗೆ ಮರಣದಂಡನೆ.
2020ರ ಕೊರೊನಾ ಲಾಕ್ಡೌನ್ ಅವಧಿಯಲ್ಲಿ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ತಮಿಳುನಾಡಿನ ಸಾಥನ್ಕುಲಂ ತಂದೆ-ಮಗನ ಕಸ್ಟಡಿಯಲ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧುರೈ ಜಿಲ್ಲಾ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ. ವಿಚಾರಣಾಧೀನ ಕೈದಿಗಳಾಗಿದ್ದ ವ್ಯಾಪಾರಿ ಪಿ. ಜಯರಾಜ್ ಮತ್ತು ಅವರ ಮಗ ಬೆನ್ನಿಕ್ಸ್ ಅವರನ್ನು ಕ್ರೂರವಾಗಿ ಚಿತ್ರಹಿಂಸೆ ನೀಡಿ ಕೊಂದ ಆರೋಪ ಸಾಬೀತಾಗಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಇನ್ಸ್ಪೆಕ್ಟರ್ ಸೇರಿದಂತೆ ಒಟ್ಟು ಒಂಬತ್ತು ಪೊಲೀಸರಿಗೆ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿದೆ. ಪ್ರಕರಣದ ಹಿನ್ನೆಲೆ 2020ರಲ್ಲಿ ರಾತ್ರಿ ನಿಗದಿತ ಸಮಯಕ್ಕಿಂತ ಹೆಚ್ಚಿನ ಸಮಯ…

