5 ದಶಕಗಳ ಸುದೀರ್ಘ ಪಯಣಕ್ಕೆ ವಿರಾಮ: ರಾಜಕೀಯ ನಿವೃತ್ತಿ ಪ್ರಕಟಿಸಿದ ಸಿದ್ದರಾಮಯ್ಯ!
ಕರ್ನಾಟಕ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಬೆಳವಣಿಗೆಯೊಂದರಲ್ಲಿ, ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ನಾಯಕ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳುವುದಾಗಿ ಅಧಿಕೃತವಾಗಿ ಪ್ರಕಟಿಸಿದ್ದಾರೆ. ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸುವ ಮೂಲಕ, ಐದು ದಶಕಗಳ ತಮ್ಮ ಸುದೀರ್ಘ ರಾಜಕೀಯ ಪಯಣದ ತೆರೆಗೆ ಕ್ಷಣಗಣನೆ ಆರಂಭಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ನಡೆದ ದಿವಂಗತ ಕೆ.ಆರ್. ಪೇಟೆ ಕೃಷ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಈ ಮಹತ್ವದ ನಿರ್ಧಾರವನ್ನು ಹೊರಹಾಕಿದರು. ವೇದಿಕೆಯಲ್ಲಿದ್ದ…

