ಮೋದಿ ಗ್ಯಾರಂಟಿ Vs ಪಿಣರಾಯಿ ಗೈರು: ₹10 ಸಾವಿರ ಕೋಟಿ ಯೋಜನೆಗಳ ನಡುವೆ ರಾಜಕೀಯ ಹೈಡ್ರಾಮಾ!
ಕೊಚ್ಚಿಯಲ್ಲಿ ನಡೆದ ಅಖಿಲ ಕೇರಳ ದೀವರ ಸಭಾದ ಸುವರ್ಣ ಮಹೋತ್ಸವದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ, ₹10 ಸಾವಿರ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವ ಮೂಲಕ ಕೇರಳದಲ್ಲಿ ಚುನಾವಣಾ ಪ್ರಚಾರದ ರಣಕಹಳೆ ಮೊಳಗಿಸಿದರು. ಇದೇ ವೇಳೆ ಕೊಲ್ಲಿ ರಾಷ್ಟ್ರಗಳಲ್ಲಿರುವ ಲಕ್ಷಾಂತರ ಭಾರತೀಯರ ಸುರಕ್ಷತೆಯ ಬಗ್ಗೆ ಭರವಸೆ ನೀಡಿದ ಅವರು, ಸಂಕಷ್ಟದ ಸಮಯದಲ್ಲಿ ಇಂದಿನ ಭಾರತ ತನ್ನ ಜನರನ್ನು ಕೈಬಿಡುವುದಿಲ್ಲ ಎಂದರು. ವಿದೇಶಿ ಸರ್ಕಾರಗಳು ನೀಡುತ್ತಿರುವ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತಲೇ, ಇಂತಹ ಜಾಗತಿಕ ಬಿಕ್ಕಟ್ಟಿನ…

