Headlines

ಪದೇ ಪದೇ ಸಿಎಂ ಬದಲಾವಣೆ ಹೇಳಿಕೆ: ಚನ್ನಗಿರಿ ಶಾಸಕರಿಗೆ ನೋಟಿಸ್!

ಬೆಂಗಳೂರು, ಆಗಸ್ಟ್ 17: ಪದೇ ಪದೇ ರಾಜ್ಯದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಬದಲಾವಣೆ ಕುರಿತು ಹೇಳಿಕೆ ನೀಡಿದ ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವರಾಜು ಶಿವಗಂಗಾಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಶಿಸ್ತು ಪಾಲನಾ ಸಮಿತಿ ಭಾನುವಾರ ನೋಟಿಸ್ ನೀಡಿದೆ. ‘ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಪಕ್ಷದಲ್ಲಿ ಗೊಂದಲ ಹಾಗೂ ಮುಜುಗರ ಉಂಟು ಮಾಡುವ ರೀತಿಯ ಹೇಳಿಕೆಗಳನ್ನು ನೀಡಿದ್ದೀರಿ. ತಮ್ಮ ಈ ಹೇಳಿಕೆಗಳಿಂದ ಪಕ್ಷಕ್ಕೆ ಮುಜುಗರ ಉಂಟಾಗಿದ್ದಲ್ಲದೆ, ಪಕ್ಷ ಶಿಸ್ತು ಉಲ್ಲಂಘನೆಯಾಗಿರುತ್ತದೆ. ಈ ಅಶಿಸ್ತಿನ ಹೇಳಿಕೆಗಳನ್ನು ಗಂಭೀರವಾಗಿ…

Read More

ಕೆ.ಎನ್ ರಾಜಣ್ಣಗೆ ಬಿಜೆಪಿ ಸೇರಲು ‌ಆಹ್ವಾನವಿತ್ತ ಶ್ರೀರಾಮುಲು

ಬೆಂಗಳೂರು, ಆಗಸ್ಟ್ 14: ರಾಜ್ಯದ ಕಾಂಗ್ರೆಸ್‌ ಸರ್ಕಾರದಿಂದ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರನ್ನು ವಜಾಗೊಂಡ ಕೆ.ಎನ್‌. ರಾಜಣ್ಣ ಹಾಗೂ ಅವರ ಮಗ ಎಂಎಲ್‌ಸಿ ರಾಜೇಂದ್ರ ಅವರನ್ನು ಭೇಟಿಯಾದ ಹಿರಿಯ ಬಿಜೆಪಿ ನಾಯಕ ಬಿ ಶ್ರೀರಾಮುಲು ಪಕ್ಷಕ್ಕೆ ಆಹ್ವಾನಿಸಿದ್ದಾರೆ. ಸಚಿವ ಸತೀಶ್‌ ಜಾರಕಿಹೊಳಿ ಅವರೊಂದಿಗೆ ಕಾಂಗ್ರೆಸ್‌ ಶಾಸಕರ ತಂಡ ರಾಜಣ್ಣ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಿ ನಂತರ ಈ ಬೆಳವಣಿಗೆ ನಡೆದಿದೆ. ಇಡೀ ಸಮುದಾಯ ಮತ್ತು ಅದರ ನಾಯಕರು ನಿಮ್ಮೊಂದಿಗಿದ್ದಾರೆ, ಬಿಜೆಪಿಗೆ ಬನ್ನಿ. ನೀವು…

Read More

ಸಂಪುಟದಿಂದ ಕೆ.ಎನ್ ರಾಜಣ್ಣರನ್ನು ವಜಾ ಮಾಡಿಸಿದ್ದು ರಣದೀಪ್ ಸುರ್ಜೇವಾಲ!?

ಬೆಂಗಳೂರು, ಆಗಸ್ಟ್ 12: ಸಚಿವ ಸಂಪುಟದಿಂದ ಕೆ.ಎನ್ ರಾಜಣ್ಣರನ್ನ ವಜಾಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ರಣದೀಪ್ ಸುರ್ಜೇವಾಲಾ..! ಹೌದು, ಹಾಲಿ ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ರಣದೀಪ್ ಸುರ್ಜೇವಾಲಾ ಇತ್ತೀಚೆಗೆ ಬೆಂಗಳೂರಿಗೆ ಬಂದು ಸಚಿವರು, ಶಾಸಕರ ಸಭೆ ನಡೆಸಿದ್ದರು. ಇದನ್ನು ಸಹಕಾರ ಖಾತೆ ಸಚಿವರಾಗಿದ್ದ ಕೆ.ಎನ್.ರಾಜಣ್ಣ ಬಹಿರಂಗವಾಗಿ ಪ್ರಶ್ನಿಸಿದ್ದರು. ಜೊತೆಗೆ ರಣದೀಪ್ ಸುರ್ಜೇವಾಲಾ, ಎಲ್ಲಾ ಕ್ಯಾಬಿನೆಟ್ ಸಚಿವರನ್ನು ಪ್ರತ್ಯೇಕವಾಗಿ ಕರೆದು ಮಾತುಕತೆ ನಡೆಸಿದ್ದರು. ಈ ಮಾತುಕತೆಗೆ ಸಹಕಾರ ಸಚಿವರಾಗಿದ್ದ ಕೆ.ಎನ್‌.ರಾಜಣ್ಣ…

Read More

ಕೆ.ಎನ್ ರಾಜಣ್ಣ ಸಂಪುಟದಿಂದ ವಜಾ ಹಿನ್ನೆಲೆ: ಮಧುಗಿರಿಯಲ್ಲಿ ಬೆಂಬಲಿಗರಿಂದ ಭಾರೀ ಪ್ರತಿಭಟನೆ

ಮಧುಗಿರಿ, ಆಗಸ್ಟ್ 12: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಸಹಕಾರ ಸಚಿವರಾಗಿದ್ದ ಕೆ.ಎನ್ ರಾಜಣ್ಣರನ್ನು ಸಂಪುಟದಿಂದ ವಜಾಗೊಳಿಸಲಾಗಿದೆ. ಕಾಂಗ್ರೆಸ್​ ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸದ್ಯ ಇದನ್ನು ವಿರೋಧಿಸಿ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಕೆ.ಎನ್ ರಾಜಣ್ಣ ಅವರ ಬೆಂಬಲಿಗರು, ಅಭಿಮಾನಿಗಳು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ವೇಳೆ ನೇಣು ಬಿಗಿದುಕೊಂಡು ಕೆಲ ಬೆಂಬಲಿಗರು ಯತ್ನಿಸಿದರೆ, ಮತ್ತೆ ಕೆಲವರು ಪೆಟ್ರೋಲ್ ಸುರಿದುಕೊಂಡು ಜೀವ ತೆಗೆದುಕೊಳ್ಳಲು ಯತ್ನಿಸಿದ್ದಾರೆ. ಕೆ.ಎನ್ ರಾಜಣ್ಣರಿಂದ ರಾಜೀನಾಮೆ ಪಡೆದ ಕಾರಣ ಮಧುಗಿರಿಯ…

Read More

ಕೆ.ಎನ್ ರಾಜಣ್ಣ ತಲೆದಂಡ ಬೆನ್ನಲ್ಲೇ ಸಿದ್ದರಾಮಯ್ಯ ಬೆಂಬಲಿಗ ಸಚಿವರು-ಶಾಸಕರು ಥಂಡಾ!

ಬೆಂಗಳೂರು, ಆಗಸ್ಟ್ 12: ಕೆ.ಎನ್‌.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವ ಮೂಲಕ ಡಿ.ಕೆ.ಶಿವಕುಮಾರ್‌ ಅವರ ಕೈಮೇಲಾಗಿದ್ದು, ಕಾಂಗ್ರೆಸ್‌‍ ಪಕ್ಷದಲ್ಲಿ ಶಿಸ್ತು ಪುನರ್‌ಸ್ಥಾಪನೆಯ ಪ್ರಯತ್ನಗಳಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಬ್ಯಾಟಿಂಗ್‌ ಮಾಡುತ್ತಿದ್ದ ಸಚಿವರು ಮತ್ತು ಶಾಸಕರು ಥಂಡಾ ಒಡೆದಂತಾಗಿದೆ. ಕಾಂಗ್ರೆಸ್‌‍ ಪಕ್ಷದಲ್ಲಿ ಎರಡು ಭಾರಿ ಮುಖ್ಯಮಂತ್ರಿಯಾಗಿ ದೇವರಾಜ್‌ ಅರಸು ಸೇರಿದಂತೆ ಎಲ್ಲಾ ನಾಯಕರ ದಾಖಲೆ ಮುರಿದಿದ್ದ ಸಿದ್ದರಾಮಯ್ಯ ಅದ್ವೀತಿಯ ನಾಯಕರಾಗಿ ಹೊರಹೊಮ್ಮಿದ್ದರು. ರಾಜಕೀಯದಲ್ಲಿ ಮೊದಲಿನಿಂದಲೂ ಸಿದ್ದರಾಮಯ್ಯ ಅವರು ತಮ ಬೆಂಬಲಿಗರ ಹಿತರಕ್ಷಣೆ ಮಾಡುವಲ್ಲಿ ಎತ್ತಿದ ಕೈ. ಯಾವುದೇ…

Read More

ಸಹಕಾರ ಸಚಿವ ಕೆ.ಎನ್ ರಾಜಣ್ಣ ದಿಢೀರ್ ರಾಜೀನಾಮೆ!!!

ಬೆಂಗಳೂರು, ಆಗಸ್ಟ್ 11: ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರು ದಿಢೀರನೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿಯ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಕೆ.ಎನ್​ ರಾಜಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಕೆ.ಎನ್. ರಾಜಣ್ಣ ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಬಗ್ಗೆ ಸಚಿವ ಕೆ.ಎನ್​ ರಾಜಣ್ಣ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಬಳಿಕ ಸ್ಪಷ್ಟನೆ ನೀಡುತ್ತೇನೆ. ಯಾವ ವಿಚಾರಕ್ಕೆ ಹೈಕಮಾಂಡ್​…

Read More

ಕಾಂಗ್ರೆಸ್ ಗೆ ಗೊಂದಲ ಸೃಷ್ಟಿಸಿರುವ ಕೆಎಂಎಫ್ ಅಧ್ಯಕ್ಷ ಚುನಾವಣೆ

ಬೆಂಗಳೂರು, ಜುಲೈ 27: ಕರ್ನಾಟಕ ಹಾಲು ಮಹಾ ಮಂಡಳಿ (ಕೆ.ಎಂ.ಎಫ್) ಅಧ್ಯಕ್ಷರಾಗಿದ್ದ ಭೀಮಾ ನಾಯ್ಕ್ ಅವರ ಅಧಿಕಾರದ ಅವಧಿ ಮುಗಿದ ಮೇಲೆ ಹೊಸ ಕೆಎಂಎಫ್ ಅಧ್ಯಕ್ಷರ ಆಯ್ಕೆಗಾಗಿ ಕಾಂಗ್ರೆಸ್ ಪಕ್ಷದಲ್ಲೇ ಭಾರಿ ಪೈಪೋಟಿ ನಡೆಯುತ್ತಿದೆ. ಈಗಾಗಲೇ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ಡಿ.ಕೆ ಸುರೇಶ್ ಅವರನ್ನು ನೇಮಿಸಬೇಕೆಂದು ಡಿಸಿಎಂ ತಥಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಲಾಬಿ ಎಐಸಿಸಿ ಮಟ್ಟದಲ್ಲಿ ನಡೆಸುತ್ತಿದ್ದಾರೆ.ಆದರೆ ಇದೀಗ ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಜಿಲ್ಲೆಗಳ ಹಾಲು ಒಕ್ಕೂಟದ (ರಾ.ಬ.ಕೊ.ವಿ) ಅಧ್ಯಕ್ಷರಾಗಿ…

Read More

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮತಗಳ್ಳತನದ ದಾಖಲೆ ನನ್ನ ಬಳಿಯಿದೆ: ಡಿಸಿಎಂ ಡಿ.ಕೆ.ಶಿ ಬಾಂಬ್

ರಾಹುಲ್ ಗಾಂಧಿ ಅವರು ಮಾಡಿರುವ ಆರೋಪ ನಿಜ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮತದಾನದಲ್ಲಿಯೂ ಗೋಲ್ಮಾಲ್ ನಡೆದಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಬಾಂಬ್ ಸಿಡಿಸಿದ್ದಾರೆ. ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಮತಗಳ್ಳತನವಾಗಿದೆ ಎಂಬ ರಾಹುಲ್ ಗಾಂಧಿ ಅವರ ಹೇಳಿಕೆಗೆ ನವದೆಹಲಿಯಲ್ಲಿ ಇಂದು ಪ್ರತಿಕ್ರಿಯಿಸಿದ ಅವರು, ನಾನು ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಒಪ್ಪುತ್ತೇನೆ. ನಾನು ಕೂಡ ಈ ವಿಚಾರವಾಗಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ತನಿಖೆ ನಡೆಸಿದ್ದೇನೆ. ಅಲ್ಲಿ ಅನೇಕ ಗೋಲ್ಮಾಲ್‌ಗಳು ನಡೆದಿವೆ. ಈ ಬಗ್ಗೆ ಸದ್ಯಕ್ಕೆ…

Read More

ಸಿಎಂ ಕುರ್ಚಿ ಸಮರ ದೆಹಲಿಗೆ ಶಿಫ್ಟ್!!!

ಪವರ್ ಶೇರಿಂಗ್ ಫೈಟ್‌.. ನಾಯಕತ್ವ ಗುದ್ದಾಟದ ಮಧ್ಯೆ ಇವತ್ತು ಸಿಎಂ, ಡಿಸಿಎಂ ಡೆಲ್ಲಿಯಾತ್ರೆ ಮಾಡ್ತಿದ್ದಾರೆ. ಇಂದು ಪ್ರತ್ಯೇಕವಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಡೆಲ್ಲಿ ಫ್ಲೈಟ್ ಹತ್ತಿದ್ದಾರೆ. ಕಳೆದ ಬಾರಿ ಡೆಲ್ಲಿಯಲ್ಲಿ ನಾನೇ 5 ವರ್ಷ ಮುಖ್ಯಮಂತ್ರಿ ಎಂದಿದ್ದ ಸಿದ್ದರಾಮಯ್ಯ ಮತ್ತೇನು ಬಾಂಬ್ ಸಿಡಿಸಲಿದ್ದಾರೆ? ಎಂಬ ಕೌತುಕ ಮೂಡಿದೆ. ಹೀಗೆ ಸಿಎಂ, ಡಿಸಿಎಂ ಪ್ರತ್ಯೇಕವಾಗಿ ದೆಹಲಿಯಾತ್ರೆ ಮಾಡ್ತಿರೋದು ಭಾರೀ ಚರ್ಚೆಗೆ ಗ್ರಾಸವಾಗಿದೆ. ರಾಹುಲ್ ಗಾಂಧಿ ಭೇಟಿಯಾಗ್ತಾರಾ ಸಿಎಂ-ಡಿಸಿಎಂ? ಇತ್ತೀಚಿಗಷ್ಟೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ…

Read More

ಹೆಚ್ಚಿನ ಮಾಂಸಹಾರ ಹೃದಯಾಘಾತಕ್ಕೆ ಆಹ್ವಾನ: ತಜ್ಞ ವೈದ್ಯರ ಶಂಕೆ

ಹಾಸನದ ಸುತ್ತಮುತ್ತ ಇತ್ತೀಚೆಗೆ ಹಲವಾರು ಮಂದಿ ಹೃದಯಘಾತದಿಂದ ಮೃತಪಟ್ಟಿರುವುದಕ್ಕೆ ಅತಿಯಾದ ತೂಕ ಹಾಗೂ ರೆಡ್ ಮೀಟ್ ಸೇವನೆ ಕಾರಣ ಇರಬಹುದು ಎಂದು ತಜ್ಞ ವೈದ್ಯರು ಶಂಕೆ ವ್ಯಕ್ತಪಡಿಸಿದ್ದಾರೆ. ಹಾಸನದಲ್ಲಿ ಸಂಭವಿಸಿದ ಸಾಲು ಸಾಲು ಸಾವುಗಳಿಗೆ ಕಾರಣ ಪತ್ತೆ ಹಚ್ಚಲು ರಾಜ್ಯಸರ್ಕಾರ ನೇಮಿಸಿರುವ ತಾಂತ್ರಿಕ ಸಮಿತಿಯ ಸದಸ್ಯರು ಇಂತಹ ಅನುಮಾನ ವ್ಯಕ್ತಪಡಿಸಿದ್ದಾರೆ. ತಾಂತ್ರಿಕ ಸಮಿತಿಯ ತಪಾಸಣೆ ವೇಳೆ ಇಂತಹ ಶಾಕಿಂಗ್ ವಿಚಾರ ಬಯಲಾಗಿದ್ದು, ಮೇಲ್ನೋಟಕ್ಕೆ ಹಾಸನದ ಪ್ರಕರಣಗಳಿಗೆ ಇದೇ ಮುಖ್ಯ ಕಾರಣ ಎನ್ನಲಾಗಿದೆ. ಅತಿಯಾದ ತೂಕ, ರೆಡ್ ಮೀಟ್…

Read More
error: Content is protected !!