Headlines

ದಲಿತ‌ ಕೈ ನಾಯಕರ ಸೀಕ್ರೆಟ್ ಮೀಟಿಂಗ್: ಎಚ್.ಸಿ.ಮಹದೇವಪ್ಪ ಮನೆಯಲ್ಲಿ ಪರಮೇಶ್ವರ್ ಚರ್ಚೆ!

ರಾಜ್ಯ ಕಾಂಗ್ರೆಸ್​​ನಲ್ಲಿ ಕ್ರಾಂತಿಗೀತೆ, ಸಿಎಂ ಬದಲಾವಣೆ ಕದನ ಕಿಚ್ಚಿನ ನಡುವೆ ದಲಿತಾಸ್ತ್ರ ಪ್ರಯೋಗ ಆಗಿದೆ. ದಶಕದ ಕೂಗು ಧ್ವನಿ ಏರಿಸಿದ್ದು ದಲಿತ ನಾಯಕರಲ್ಲಿ ಹುಮ್ಮಸ್ಸು ಚಿಗುರಿದೆ. ರಾಜ್ಯ ಕಾಂಗ್ರೆಸ್​​​ನಲ್ಲಿ ಕ್ರಾಂತಿ-ಭ್ರಾಂತಿ ವದಂತಿಗಳ ನಡುವೆ ಪಿಚ್​​​ನಲ್ಲಿ ತಿರುವು ಕಾಣಿಸಿಕೊಂಡಿದೆ. ಅಧಿಕಾರ ಹಂಚಿಕೆ ಸೂತ್ರದ ಮರ್ಮ ಇನ್ನೂ ನಿಗೂಢ. ಇದೇ ಸೂತ್ರ ನಂಬಿ ಕೂತಿರುವ ಟ್ರಬಲ್ ಶೂಟರ್​ ಡಿಕೆಶಿ, ಕುರ್ಚಿ ಪಟ್ಟ ಗಿಟ್ಟಿಸಲು ಇನ್ನಿಲ್ಲದ ಕಸರತ್ತು ನಡೆಸ್ತಿದ್ದಾರೆ. ಈ ನಡುವೆ ಅಹಿಂದ ದಾಳ ಉರುಳಿದ್ದೇ ತಡ ದಲಿತ ಸಿಎಂ ಕೂಗು…

Read More

ಚಾಮರಾಜನಗರ ಮೂಢನಂಬಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು: “ನನ್ನ ಅಧಿಕಾರ ಭದ್ರ”

ಚಾಮರಾಜನಗರ, ನವೆಂಬರ್ 20: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಐದು ವರ್ಷಗಳಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಾಮರಾಜನಗರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೂಢನಂಬಿಕೆ ಮತ್ತು ಕಂದಾಚಾರಗಳಲ್ಲಿ ನಂಬುವುದಿಲ್ಲವಾದ್ದರಿಂದ ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುತ್ತೇನೆ. ರಾಜ್ಯದ ಎಲ್ಲ ಜಿಲ್ಲೆಗಳನ್ನೂ ಸಮಾನವಾಗಿ ಕಂಡು, ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಆ ಮೌಢ್ಯವನ್ನು ಹೋಗಲಾಡಿಸಲು ಇಲ್ಲಿಗೆ…

Read More

2028 ರ ಅಸೆಂಬ್ಲಿ ಎಲೆಕ್ಷನ್ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಆಗಲು ಕೈ ನಾಯಕರ ಒಪ್ಪಿಗೆ ಬೇಕು: ಸಚಿವ ಸತೀಶ್ ಜಾರಕಿಹೊಳಿ

ನಿನ್ನೆಯಷ್ಟೇ ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರ ನಂತರ 2028 ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಬ್ಬ ಅಹಿಂದ ನಾಯಕರಾದ ಉತ್ತರಕರ್ನಾಟಕದ ಬೆಳಗಾವಿ ಸಾಹುಕಾರ್ ಎಂದೇ ಕರೆಯುವ ಸಚಿವ ಸತೀಶ್ ಜಾರಕಿಹೊಳಿ 2028 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಭವಿಷ್ಯ ಹೇಳಿದ್ದರು. ಇಂದು ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಪ್ರತಿಕ್ರಿಯಿಸಿ, ಇಲ್ಲ, ನಾನು ಇನ್ನೂ ಆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಏಕೆಂದರೆ 2028 ರ ವಿಧಾನಸಭಾ…

Read More

ಕೆ.ಎನ್. ರಾಜಣ್ಣ ಬಿಜೆಪಿ ಸೇರ್ಪಡೆಗೆ ಪ್ರಯತ್ನ: ಕಾಂಗ್ರೆಸ್ ಶಾಸಕರೊಬ್ಬರ ಸ್ಫೋಟಕ ಆರೋಪ

ಕಾರಣವಿಲ್ಲದೆ ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನದಿಂದ ವಜಾಗೊಂಡ ಮಧುಗಿರಿ ಕ್ಷೇತ್ರದ ಹಾಲಿ ಹಿರಿಯ ಶಾಸಕ ಕೆ.ಎನ್ ರಾಜಣ್ಣ ಬಗ್ಗೆ ಕಾಂಗ್ರೆಸ್ ಶಾಸಕರೊಬ್ಬರು ಸ್ಫೋಟಕ ಸುದ್ದಿ ನೀಡಿದ್ದಾರೆ. ರಾಜ್ಯದ ಕೈ ಸರ್ಕಾರದಿಂದ ವಜಾಗೊಂಡ ಶಾಸಕ ಕೆ.ಎನ್ ರಾಜಣ್ಣ ಅವರು ಇದೀಗ ಬಿಜೆಪಿಗೆ ಸೇರಲು ಅರ್ಜಿ ಹಾಕಿಕೊಂಡಿದ್ದಾರೆ ಎಂದು ಮಾಗಡಿ ಕಾಂಗ್ರೆಸ್ ಶಾಸಕ ಹೆಚ್.ಸಿ.ಬಾಲಕೃಷ್ಣ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಬಗ್ಗೆ ಇಂದು ಹೇಳಿಕೆ ನೀಡಿದ ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ ಹೇಳಿದ್ದಿಷ್ಟು: “ಕೆ.ಎನ್ ರಾಜಣ್ಣ ತಮ್ಮ ಮಾತಿನಿಂದಲೇ…

Read More

ಡಿಕೆಶಿ ಒಂದು ಕಾಲು ಬಿಜೆಪಿಯಲ್ಲಿಟ್ಟಿದ್ದಾರೆ: ಯತ್ನಾಳ್ ಬಾಂಬ್

ಬೆಂಗಳೂರು, ಆ.31: ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಈಗಾಗಲೇ ತಮ್ಮ‌ ಒಂದು ಕಾಲನ್ನು ಬಿಜೆಪಿಯಲ್ಲಿ ಇಟ್ಟಿದ್ದಾರೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. “ಡಿ.ಕೆ ಶಿವಕುಮಾರ್ ಈಗಾಗಲೇ ದೆಹಲಿಯಲ್ಲಿ ಒಂದು ಸುತ್ತಿನ ಚರ್ಚೆ ನಡೆಸಿದ್ದಾರೆ. ಆದರೆ ಅವರಿಗೆ ಶಾಸಕರ ಬೆಂಬಲ ಕಡಿಮೆ ಇದೆ ಎಂಬ ಕಾರಣಕ್ಕೆ ಅದು ಮುಂದುವರಿಯಲಿಲ್ಲ ಎಂದು ಯತ್ನಾಳ್ ಬಾಂಬ್ ಸಿಡಿಸಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಿಷ್ಟು…‘‘ಡಿ.ಕೆ ಶಿವಕುಮಾರ್ ಈಗಾಗಲೇ ಬಿಜೆಪಿಯಲ್ಲಿ ಒಂದು…

Read More

ಪದೇ ಪದೇ ಸಿಎಂ ಬದಲಾವಣೆ ಹೇಳಿಕೆ: ಚನ್ನಗಿರಿ ಶಾಸಕರಿಗೆ ನೋಟಿಸ್!

ಬೆಂಗಳೂರು, ಆಗಸ್ಟ್ 17: ಪದೇ ಪದೇ ರಾಜ್ಯದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಬದಲಾವಣೆ ಕುರಿತು ಹೇಳಿಕೆ ನೀಡಿದ ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವರಾಜು ಶಿವಗಂಗಾಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಶಿಸ್ತು ಪಾಲನಾ ಸಮಿತಿ ಭಾನುವಾರ ನೋಟಿಸ್ ನೀಡಿದೆ. ‘ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಪಕ್ಷದಲ್ಲಿ ಗೊಂದಲ ಹಾಗೂ ಮುಜುಗರ ಉಂಟು ಮಾಡುವ ರೀತಿಯ ಹೇಳಿಕೆಗಳನ್ನು ನೀಡಿದ್ದೀರಿ. ತಮ್ಮ ಈ ಹೇಳಿಕೆಗಳಿಂದ ಪಕ್ಷಕ್ಕೆ ಮುಜುಗರ ಉಂಟಾಗಿದ್ದಲ್ಲದೆ, ಪಕ್ಷ ಶಿಸ್ತು ಉಲ್ಲಂಘನೆಯಾಗಿರುತ್ತದೆ. ಈ ಅಶಿಸ್ತಿನ ಹೇಳಿಕೆಗಳನ್ನು ಗಂಭೀರವಾಗಿ…

Read More

ಕೆ.ಎನ್ ರಾಜಣ್ಣಗೆ ಬಿಜೆಪಿ ಸೇರಲು ‌ಆಹ್ವಾನವಿತ್ತ ಶ್ರೀರಾಮುಲು

ಬೆಂಗಳೂರು, ಆಗಸ್ಟ್ 14: ರಾಜ್ಯದ ಕಾಂಗ್ರೆಸ್‌ ಸರ್ಕಾರದಿಂದ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರನ್ನು ವಜಾಗೊಂಡ ಕೆ.ಎನ್‌. ರಾಜಣ್ಣ ಹಾಗೂ ಅವರ ಮಗ ಎಂಎಲ್‌ಸಿ ರಾಜೇಂದ್ರ ಅವರನ್ನು ಭೇಟಿಯಾದ ಹಿರಿಯ ಬಿಜೆಪಿ ನಾಯಕ ಬಿ ಶ್ರೀರಾಮುಲು ಪಕ್ಷಕ್ಕೆ ಆಹ್ವಾನಿಸಿದ್ದಾರೆ. ಸಚಿವ ಸತೀಶ್‌ ಜಾರಕಿಹೊಳಿ ಅವರೊಂದಿಗೆ ಕಾಂಗ್ರೆಸ್‌ ಶಾಸಕರ ತಂಡ ರಾಜಣ್ಣ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಿ ನಂತರ ಈ ಬೆಳವಣಿಗೆ ನಡೆದಿದೆ. ಇಡೀ ಸಮುದಾಯ ಮತ್ತು ಅದರ ನಾಯಕರು ನಿಮ್ಮೊಂದಿಗಿದ್ದಾರೆ, ಬಿಜೆಪಿಗೆ ಬನ್ನಿ. ನೀವು…

Read More

ಸಂಪುಟದಿಂದ ಕೆ.ಎನ್ ರಾಜಣ್ಣರನ್ನು ವಜಾ ಮಾಡಿಸಿದ್ದು ರಣದೀಪ್ ಸುರ್ಜೇವಾಲ!?

ಬೆಂಗಳೂರು, ಆಗಸ್ಟ್ 12: ಸಚಿವ ಸಂಪುಟದಿಂದ ಕೆ.ಎನ್ ರಾಜಣ್ಣರನ್ನ ವಜಾಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ರಣದೀಪ್ ಸುರ್ಜೇವಾಲಾ..! ಹೌದು, ಹಾಲಿ ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ರಣದೀಪ್ ಸುರ್ಜೇವಾಲಾ ಇತ್ತೀಚೆಗೆ ಬೆಂಗಳೂರಿಗೆ ಬಂದು ಸಚಿವರು, ಶಾಸಕರ ಸಭೆ ನಡೆಸಿದ್ದರು. ಇದನ್ನು ಸಹಕಾರ ಖಾತೆ ಸಚಿವರಾಗಿದ್ದ ಕೆ.ಎನ್.ರಾಜಣ್ಣ ಬಹಿರಂಗವಾಗಿ ಪ್ರಶ್ನಿಸಿದ್ದರು. ಜೊತೆಗೆ ರಣದೀಪ್ ಸುರ್ಜೇವಾಲಾ, ಎಲ್ಲಾ ಕ್ಯಾಬಿನೆಟ್ ಸಚಿವರನ್ನು ಪ್ರತ್ಯೇಕವಾಗಿ ಕರೆದು ಮಾತುಕತೆ ನಡೆಸಿದ್ದರು. ಈ ಮಾತುಕತೆಗೆ ಸಹಕಾರ ಸಚಿವರಾಗಿದ್ದ ಕೆ.ಎನ್‌.ರಾಜಣ್ಣ…

Read More

ಕೆ.ಎನ್ ರಾಜಣ್ಣ ಸಂಪುಟದಿಂದ ವಜಾ ಹಿನ್ನೆಲೆ: ಮಧುಗಿರಿಯಲ್ಲಿ ಬೆಂಬಲಿಗರಿಂದ ಭಾರೀ ಪ್ರತಿಭಟನೆ

ಮಧುಗಿರಿ, ಆಗಸ್ಟ್ 12: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಸಹಕಾರ ಸಚಿವರಾಗಿದ್ದ ಕೆ.ಎನ್ ರಾಜಣ್ಣರನ್ನು ಸಂಪುಟದಿಂದ ವಜಾಗೊಳಿಸಲಾಗಿದೆ. ಕಾಂಗ್ರೆಸ್​ ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸದ್ಯ ಇದನ್ನು ವಿರೋಧಿಸಿ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಕೆ.ಎನ್ ರಾಜಣ್ಣ ಅವರ ಬೆಂಬಲಿಗರು, ಅಭಿಮಾನಿಗಳು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ವೇಳೆ ನೇಣು ಬಿಗಿದುಕೊಂಡು ಕೆಲ ಬೆಂಬಲಿಗರು ಯತ್ನಿಸಿದರೆ, ಮತ್ತೆ ಕೆಲವರು ಪೆಟ್ರೋಲ್ ಸುರಿದುಕೊಂಡು ಜೀವ ತೆಗೆದುಕೊಳ್ಳಲು ಯತ್ನಿಸಿದ್ದಾರೆ. ಕೆ.ಎನ್ ರಾಜಣ್ಣರಿಂದ ರಾಜೀನಾಮೆ ಪಡೆದ ಕಾರಣ ಮಧುಗಿರಿಯ…

Read More

ಕೆ.ಎನ್ ರಾಜಣ್ಣ ತಲೆದಂಡ ಬೆನ್ನಲ್ಲೇ ಸಿದ್ದರಾಮಯ್ಯ ಬೆಂಬಲಿಗ ಸಚಿವರು-ಶಾಸಕರು ಥಂಡಾ!

ಬೆಂಗಳೂರು, ಆಗಸ್ಟ್ 12: ಕೆ.ಎನ್‌.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವ ಮೂಲಕ ಡಿ.ಕೆ.ಶಿವಕುಮಾರ್‌ ಅವರ ಕೈಮೇಲಾಗಿದ್ದು, ಕಾಂಗ್ರೆಸ್‌‍ ಪಕ್ಷದಲ್ಲಿ ಶಿಸ್ತು ಪುನರ್‌ಸ್ಥಾಪನೆಯ ಪ್ರಯತ್ನಗಳಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಬ್ಯಾಟಿಂಗ್‌ ಮಾಡುತ್ತಿದ್ದ ಸಚಿವರು ಮತ್ತು ಶಾಸಕರು ಥಂಡಾ ಒಡೆದಂತಾಗಿದೆ. ಕಾಂಗ್ರೆಸ್‌‍ ಪಕ್ಷದಲ್ಲಿ ಎರಡು ಭಾರಿ ಮುಖ್ಯಮಂತ್ರಿಯಾಗಿ ದೇವರಾಜ್‌ ಅರಸು ಸೇರಿದಂತೆ ಎಲ್ಲಾ ನಾಯಕರ ದಾಖಲೆ ಮುರಿದಿದ್ದ ಸಿದ್ದರಾಮಯ್ಯ ಅದ್ವೀತಿಯ ನಾಯಕರಾಗಿ ಹೊರಹೊಮ್ಮಿದ್ದರು. ರಾಜಕೀಯದಲ್ಲಿ ಮೊದಲಿನಿಂದಲೂ ಸಿದ್ದರಾಮಯ್ಯ ಅವರು ತಮ ಬೆಂಬಲಿಗರ ಹಿತರಕ್ಷಣೆ ಮಾಡುವಲ್ಲಿ ಎತ್ತಿದ ಕೈ. ಯಾವುದೇ…

Read More
error: Content is protected !!