Headlines

ರಾಜಕೀಯ ಕುತೂಹಲ ಕೆರಳಿಸಿದ ಡಿಕೆಶಿ ದೆಹಲಿ ಪ್ರವಾಸ!

ಬೆಂಗಳೂರು, ಜುಲೈ 14: ರಾಜ್ಯ ಕಾಂಗ್ರೆಸ್ ಸರ್ಕಾರದಪವರ್ ಶೇರಿಂಗ್ ಫೈಟ್​ನಲ್ಲಿ ದಿನಕ್ಕೊಂದು ಟರ್ನ್. ಕ್ಷಣಕ್ಕೊಂದು ಟ್ವಿಸ್ಟ್ ಕಾಣಸಿಗ್ತಿದೆ. ಸಿಎಂ ಸಿದ್ದರಾಮಯ್ಯ ಇದೀಗ 5 ವರ್ಷದ ಜಪ ಮಾಡ್ತಿದ್ರೆ, ಡಿಸಿಎಂ-ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೌನಕ್ಕೆ ಜಾರಿದ್ರು. ಈ ಬೆನ್ನಲ್ಲೇ ಶಿರಡಿ ಸಾಯಿಬಾಬಾನ ದರ್ಶನಕ್ಕೆ ಮುಂದಾಗಿದ್ರು. ಈ ಹೊತ್ತಲ್ಲೇ ಮತ್ತೆ ಡಿಕೆಶಿ ದೆಹಲಿಗೆ ಹಾರಿದ್ದಾರೆ. ಪತ್ನಿ ಸಮೇತ ಶಿರಡಿ ಸಾಯಿಬಾಬಾ ದರ್ಶನ ಮಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಶ್ರದ್ಧೆ ನಂಬಿಕೆ ಮತ್ತು ತಾಳ್ಮೆ ಇದ್ದರೆ ಎಲ್ಲವೂ ಸಾಧ್ಯ ಅಂತ ಸಾಮಾಜಿಕ…

Read More

ಬಿಹಾರ ಅಸೆಂಬ್ಲಿ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಗೆದ್ದರೆ ಮಾತ್ರ ಸಿದ್ದರಾಮಯ್ಯ ಕುರ್ಚಿ ಭದ್ರ!

ನವದೆಹಲಿ, ಜುಲೈ 13: ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಕಾಂಗ್ರೆಸ್‌‍ ಹೈಕಮಾಂಡ್‌ನ ಬಲಾ-ಬಲವನ್ನು ಪರೀಕ್ಷೆ ಒಳಪಡಿಸಲಿದ್ದು, ಸಹಜವಾಗಿಯೇ ರಾಜ್ಯ ರಾಜಕಾರಣದ ಮೇಲೆ ಪರಿಣಾಮ ಬೀರುವ ನಿರೀಕ್ಷೆಗಳಿವೆ. ಈ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ಸುರ್ಜೇವಾಲ ನಡೆಸುತ್ತಿರುವ ಸರಣಿ ಸಭೆಗಳು ತೀವ್ರ ಕುತೂಹಲ ಕೆರಳಿಸಿವೆ. ಸಚಿವ ಸಂಪುಟ ಪುನರ್‌ ರಚನೆ, ನಿಗಮ ಮಂಡಳಿಗಳ ನೇಮಕಾತಿ ಸೇರಿದಂತೆ ಹಲವಾರು ವಿಚಾರಗಳಲ್ಲಿ ಈವರೆಗೂ ಹೈಕಮಾಂಡ್‌ನ ಪ್ರಭಾವ ಎದ್ದುಕಾಣುತ್ತಿದೆ. ಒಂದು ವೇಳೆ ಬಿಹಾರದ ಚುನಾವಣೆಯಲ್ಲಿ ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದಿದ್ದಾದರೆ ಸಿದ್ದರಾಮಯ್ಯ ಅವರು ಹೆಚ್ಚು…

Read More

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿದ ಎಐಸಿಸಿ ಅಧ್ಯಕ್ಷ!

ನವದೆಹಲಿ, ಜುಲೈ 12: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ರಾಜಕೀಯದ ಚೆಸ್ ಗೇಮ್ ಭರ್ಜರಿಯಾಗಿ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲೇ ಕೂತು ‘ನಾನೇ 5 ವರ್ಷ ಸಿಎಂ’ ಎಂಬ ಸಂದೇಶವನ್ನು ರಾಜಾರೋಷವಾಗಿ ಸಾರಿದರು. ಇದರ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆಗೆ ಸಚಿವರು ಪಟ್ಟು ಹಿಡಿದಿದ್ದಾರೆ. ಇದನ್ನೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಮುಂದೆ ಹೇಳಿದ್ದಾರೆ. ಒಬ್ಬರಿಗೆ ಒಂದೇ ಹುದ್ದೆ ನಿಯಮ ಇದ್ದು ಅದನ್ನು ಅನುಷ್ಠಾನಕ್ಕೆ ತನ್ನಿ ಎಂದು ಸಚಿವರು ಆಗ್ರಹಿಸಿದ್ದಾರೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ….

Read More

ಸಚಿವರ ಮೌಲ್ಯಮಾಪನಕ್ಕೆ ಮುಂದಾದ ಎಐಸಿಸಿ: ಮುಂದುವರಿದ ಕೈ ಕಗ್ಗಂಟು

ಬೆಂಗಳೂರು, ಜುಲೈ 12: ಶಾಸಕರುಗಳ ಜೊತೆ ಪ್ರತ್ಯೇಕವಾಗಿ ಒಟ್ಟು 6 ದಿನಗಳ ಕಾಲ ಅಭಿಪ್ರಾಯ ಸಂಗ್ರಹಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ಇದೇ ಜುಲೈ 16 ರಂದು ಸಚಿವರ ಜೊತೆ ಚರ್ಚೆ ನಡೆಸುವ ಮೂಲಕ ಮೌಲ್ಯಮಾಪನಕ್ಕೆ ಮುಂದಾಗಿದ್ದಾರೆ. ಆದರೆ ಸುರ್ಜೇವಾಲ ಅವರ ಕಾರ್ಯವೈಖರಿಗೆ ಕಾಂಗ್ರೆಸ್‌‍ ಪಕ್ಷದಲ್ಲೇ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ರಾಜ್ಯದಲ್ಲಿ ಸಿದ್ದರಾಮಯ್ಯ ಪ್ರಭಾವಿ ನಾಯಕರಾಗಿದ್ದು, ಅವರನ್ನೂ ದೂರ ಇಟ್ಟು ಸುರ್ಜೇವಾಲ ನೇರವಾಗಿ ಕಾಂಗ್ರೆಸ್‌‍ ಶಾಸಕರ ಜೊತೆ ಅಭಿಪ್ರಾಯ ಸಂಗ್ರಹಿಸಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ….

Read More

ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿ.ಕೆ.ಶಿ ಅವರಿಗಿಲ್ಲ: ಸಿಎಂಗೆ ಡಿ.ಕೆ‌ ಸುರೇಶ್ ಟಾಂಗ್!

ಬೆಂಗಳೂರು, ಜುಲೈ 12: ರಾಜಕಾರಣದಲ್ಲಿ ನಿವೃತ್ತಿ ಅಂತಿಲ್ಲ, ಹಾಗಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು 2028ರಲ್ಲೂ ತನ್ನದೇ ನಾಯಕತ್ವ ಅಂತ ಹೇಳಿರಬಹುದು ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ. ಶಾಸಕಾಂಗದ ಬೆಂಬಲದೊಂದಿಗೆ ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ, 2 ವರ್ಷದಿಂದ ಅಧಿಕಾರ ನಡೆಸಿಕೊಂಡು ಹೋಗುತ್ತಿದ್ದಾರೆ, ಮುಂದೆಯೂ ನಡೆಸುತ್ತಾರೆ, ಡಿ.ಕೆ ಶಿವಕುಮಾರ್ ಅವರು ಶಾಸಕರ ಬೆಂಬಲ ಪಡೆದುಕೊಳ್ಳಲು ಅಥವಾ ಕೇಳಲು ಇದು ಸಮಯ ಅಲ್ಲ, ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆ ಯಾಕೆ…

Read More

ಸಿದ್ದರಾಮಯ್ಯರನ್ನು ಕೆಳಗಿಳಿಸಿ ಸಿಎಂ ಸ್ಥಾನದಲ್ಲಿ ಖರ್ಗೆ ಕೂರಿಸಲು ನಡೆದಿದೆ ರಣತಂತ್ರ!

ಬೆಂಗಳೂರು, ಜುಲೈ 12: ಸೆಪ್ಟೆಂಬರ್‌ ಕ್ರಾಂತಿಯ ಚರ್ಚೆಯಲ್ಲಿ ಹಾರಾಟ ನಡೆಸಿದವರೆಲ್ಲಾ ತಣ್ಣಗಾದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ರಾಜ್ಯ ರಾಜಕಾರಣಕ್ಕೆ ಕರೆತಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಲು ಒಂದು ಬಣ ಅದ್ದಿ ಲ್ಲಿದೆ ಕಾರ್ಯಾಚರಣೆ ನಡೆಸುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರ ರಾಜಕಾರಣದಲ್ಲಿ ಪ್ರಭಾವಿ ಸ್ಥಾನದಲ್ಲಿದ್ದು, ಅವರನ್ನು ಕರೆತರುವ ಮೂಲಕ ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರ ಅಹಿಂದ ಮೂಲಮಂತ್ರಕ್ಕೆ ಪೆಟ್ಟು ನೀಡುವ ಕಾರ್ಯತಂತ್ರಗಳು ನಡೆಯುತ್ತಿವೆ. ವಿಧಾನಸಭೆ ಚುನಾವಣೆಯ ಫಲಿತಾಂಶದ ಬಳಿಕ ಮುಖ್ಯಮಂತ್ರಿ ಆಯ್ಕೆಯ ವಿಚಾರವಾಗಿ…

Read More

2028ಕ್ಕೂ ಸಿದ್ದರಾಮಯ್ಯ ಸಿಎಂ ಅಭ್ಯರ್ಥಿ ಅಲ್ಲ: ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು

ಬೆಂಗಳೂರು, ಜುಲೈ 11: ಮುಂದಿನ 2028 ರ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರೇ ಮತ್ತೆ ಸಿಎಂ ಅಭ್ಯರ್ಥಿಯೆಂದು ನಾನು ಹೇಳುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಿನ್ನೆ ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಾನು 5 ವರ್ಷದ ಸಿಎಂ ಆಗಿ ಇರುತ್ತೇನೆ. ಜೊತೆಗೆ ಮುಂದೆ 2028 ರ ವಿಧಾನಸಭೆ ಚುನಾವಣೆಯಲ್ಲೂ ನಾನೇ ಕಾಂಗ್ರೆಸ್ ಪಕ್ಷದ ಸಿಎಂ ಅಭ್ಯರ್ಥಿ ಎಂದು ಹೇಳಿದ್ದರು‌. ಆದರೆ ಸಿಎಂ ಸಿದ್ದರಾಮಯ್ಯ ಅವರ ಈ ಹೇಳಿಕೆಯನ್ನು ಇಂದು ಸಚಿವ ಸತೀಶ್ ಜಾರಕಿಹೊಳಿ…

Read More

ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಕುರ್ಚಿ ಅಭದ್ರ!ದಲಿತ ಸಿಎಂ ಆಗಲು ರಹಸ್ಯ ಲಾಬಿ!!!

ದೆಹಲಿಯಲ್ಲಿರುವ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರು ಇನ್ನೂ ರಾಹುಲ್ ಗಾಂಧಿ ಅವರನ್ನು ಭೇಟಿಯಾಗುವ ಮೊದಲೇ ಇಂದು ಆತುರದಿಂದ ನಾನೇ ಕರ್ನಾಟಕದಲ್ಲಿ 5 ವರ್ಷ ಸಿಎಂ ಆಗಿರುತ್ತೇನೆ, 2028 ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಗಳಿಸಿದರೂ ನಾನೇ ಮತ್ತೆ ಸಿಎಂ ಆಗುತ್ತೇನೆ, ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಕೇವಲ ಕೆಲವು ಶಾಸಕರ ಬೆಂಬಲ ಮಾತ್ರ ಇದೆಯೆಂದು ಮಾಧ್ಯಮಗಳಿಗೆ ಹೇಳಿಕೊಂಡಿದ್ದಾರೆ.ಇದರಿಂದ ಈವರೆಗೂ ಸಿಎಂ ಆಕಾಂಕ್ಷಿಯೇ ನಾನಲ್ಲ ಎಂದು ಹೇಳುತ್ತಾ ಬಂದಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಯಾವಾಗ ಸಿದ್ದರಾಮಯ್ಯ…

Read More

ಹಿಂದುಳಿದ ವರ್ಗಗಳ ರಾಷ್ಟ್ರೀಯ ವೋಟ್ ಬ್ಯಾಂಕ್ ಗಿಟ್ಟಿಸಲು ಸಿದ್ದರಾಮಯ್ಯಗೆ ಎಐಸಿಸಿಯ ಮಹತ್ವದ ಹುದ್ದೆ!

ಕರ್ನಾಟಕದ ಸಿಎಂ ಸಿದ್ದರಾಮಯ್ಯಗೆ ನಿನ್ನೆ ಎಐಸಿಸಿ ಮಹತ್ವದ ಜವಾಬ್ದಾರಿ ನೀಡಿದೆ. ಎಐಸಿಸಿಯ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ಅಧ್ಯಕ್ಷರನ್ನಾಗಿ ಸಿದ್ದರಾಮಯ್ಯ ಅವರನ್ನು ನೇಮಕ ಮಾಡಿದೆ. ಈ ಮೂಲಕ ಸಿದ್ದರಾಮಯ್ಯ ಇದೀಗ ರಾಷ್ಟ್ರ ರಾಜಕಾರಣದಲ್ಲೂ ಗುರುತಿಸಿಕೊಳ್ಳಲಿದ್ದಾರೆ. ಕಳೆದ ವಾರ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದರು. ಈ ವೇಳೆ ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ’ ಅಸ್ತಿತ್ವಕ್ಕೆ ಬಂದಿದೆ. ಜುಲೈ 15ರಂದು ಬೆಂಗಳೂರಿನಲ್ಲಿ ಇದರ ಮೊದಲ ಸಭೆ ನಡೆಯಲಿದೆ. ದೇಶದಲ್ಲಿ ಹಿಂದುಳಿದ ವರ್ಗಗಳ ಸಮುದಾಯಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು…

Read More

ಎಐಸಿಸಿ ಓಬಿಸಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕ: ಕರ್ನಾಟಕಕ್ಕೆ ಬದಲಿ ಸಿಎಂ ಆಯ್ಕೆಗೆ ಮುನ್ನುಡಿ?

ನವದೆಹಲಿ, ಜುಲೈ 6: ಕರ್ನಾಟಕದ ಸಿಎಂ ಸಿದ್ದರಾಮಯ್ಯನವರನ್ನು ಏಕಾಏಕಿ ಎಐಸಿಸಿ ಓಬಿಸಿ ಸಲಹಾ ಮಂಡಳಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಕರ್ನಾಟಕದಲ್ಲಿ ಸೆಪ್ಟೆಂಬರ್ ಕ್ರಾಂತಿ ಹಾಗೂ ನಾಯಕತ್ವ ಬದಲಾವಣೆ ಚರ್ಚೆ ಮಧ್ಯೆ ಸಿಎಂ ಸಿದ್ದರಾಮಯ್ಯರನ್ನು ಎಐಸಿಸಿ ಓಬಿಸಿ ರಾಷ್ಟ್ರೀಯ ಸಲಹಾ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಿರುವ ಕಾಂಗ್ರೆಸ್ ಹೈಕಮಾಂಡ್ ನಡೆ ತೀವ್ರ ಕುತೂಹಲ ಮೂಡಿಸಿದೆ. ಸಿಎಂ ಸಿದ್ದರಾಮಯ್ಯರಿಗೆ ಈ ಹೇಳಿಕೆಯೇ ಮುಳುವಾಯ್ತಾ?ರಾಜ್ಯದಲ್ಲಿ 5 ವರ್ಷ ನಾನೇ ಸಿಎಂ ಎಂಬ ಸಂದೇಶ ನೀಡಿದ್ದ ಸಿದ್ದರಾಮಯ್ಯ ಅವರು ಸಿಎಂ ಹುದ್ದೆ ತೊರೆದು ರಾಷ್ಟ್ರ ರಾಜಕಾರಣಕ್ಕೆ…

Read More
error: Content is protected !!