Headlines

ಸಚಿವರ ಆಡಳಿತ ವೈಖರಿ ಪರಿಶೀಲಿಸಿದ ಸುರ್ಜೇವಾಲ

ಬೆಂಗಳೂರು, ಜುಲೈ 16: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೆವಾಲ ಅವರು ಇಂದು ಕೆಲ ಸಚಿವರ ಜೊತೆ ಪ್ರತ್ಯೇಕ ಸಭೆ ನಡೆಸಿದರು. ರಾಜ್ಯದ ಕೈ ಶಾಸಕರ ಜೊತೆ ಸಭೆ ನಡೆಸಿ ಅವರ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿದ್ದ ಸುರ್ಜೆವಾಲ ಅವರು ಇಂದು ಸಚಿವರ ಜೊತೆ ಸಭೆ ನಡೆಸಿದ್ದಾರೆ. ಇಂದು ಬೆಳಗ್ಗೆ ಒಬ್ಬೊಬ್ಬ ಸಚಿವರ ಜೊತೆ ಪ್ರತ್ಯೇಕವಾಗಿ ಸಭೆ ನಡೆಸಿ, ಆಡಳಿತ ವೈಖರಿ, ಖಾತೆ ನಿರ್ವಹಣೆ, ಪಕ್ಷದ ನಾಯಕರು, ಮುಖಂಡರು,…

Read More

ನನ್ನ ಇಲಾಖೆಯಲ್ಲಿ ಅನುದಾನ ಬಿಡುಗಡೆಯಾಗದ ಬಗ್ಗೆ ಸುರ್ಜೇವಾಲ ಚರ್ಚಿಸಿದರು: ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು, ಜುಲೈ 15: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಎಐಸಿಸಿ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲಾರನ್ನು ಭೇಟಿಯಾದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಹೀಗೆ ಮಾತಾಡಿದರು: “ನಿರ್ದಿಷ್ಟವಾಗಿ ಅವರೇನೂ ತನಗೆ ಹೇಳಲಿಲ್ಲ, ತಮ್ಮ ಇಲಾಖೆಯಿಂದ ಏನೆಲ್ಲ ಕೆಲಸಗಳಾಗಿವೆ ಅಂತ ಅವರಿಗೆ ಹೇಳಿದ್ದೇನೆ, ಕ್ಷೇತ್ರಾವಾರು ಅನುದಾನಗಳನ್ನು ಬಿಡುಗಡೆ ಮಾಡಿರುವ ಬಗ್ಗೆಯೂ ಅವರ ಗಮನಕ್ಕೆ ತರಲಾಗಿದೆ ಎಂದು ಹೇಳಿದರು. ಕೆಲ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಕೆಲಸವಾಗಿಲ್ಲ, ಅನುದಾನ ಬಿಡುಗಡೆ ಮಾಡಿಲ್ಲ ಅಂತ ಸುರ್ಜೇವಾಲಾ ಅವರಿಗೆ ಹೇಳಿದ್ದಾರೆ, ಅದರ ಬಗ್ಗೆ ಚರ್ಚೆಯಾಯಿತು,…

Read More

ಸುರ್ಜೇವಾಲ ತಮ್ಮ ಪಕ್ಷದ ಶಾಸಕರನ್ನು ಬಂದೋಬಸ್ತ್‌ ಮಾಡಿಕೊಳ್ಳಲು ಪ್ರತ್ಯೇಕ ಸಮಾಲೋಚನೆ

ಬೆಂಗಳೂರು,ಜು.14- ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ಇಂದು ಬೆಂಗಳೂರಿಗೆ ಆಗಮಿಸಿ ಶಾಸಕರು ಹಾಗೂ ಸಚಿವರ ಜೊತೆ ಮೂರನೇ ಸುತ್ತಿನ ಸಮಾಲೋಚನಾ ಸಭೆಯನ್ನು ಮುಂದುವರೆಸಿದ್ದಾರೆ.ಈಗಾಗಲೇ ಎರಡು ಹಂತದಲ್ಲಿ ಶಾಸಕರ ಜೊತೆ ಪ್ರತ್ಯೇಕ ಮಾತುಕತೆ ನಡೆಸಿ ಅಭಿಪ್ರಾಯ ಸಂಗ್ರಹಿಸಿರುವ ಸುರ್ಜೇವಾಲ, ಮೂರನೇ ಹಂತದಲ್ಲಿ ಹದಿನೈದಕ್ಕೂ ಹೆಚ್ಚು ಮಂದಿ ಶಾಸಕರು ಹಾಗೂ ಮೊದಲ ದಿನ 10ಕ್ಕೂ ಹೆಚ್ಚು ಮಂದಿ ಸಚಿವರ ಜೊತೆ ರಹಸ್ಯ ಮಾತುಕತೆ ನಡೆಸಿದ್ದಾರೆ. ಈ ಮೊದಲು ಶಾಸಕರ ಜೊತೆಗಿನ ಸಮಾಲೋಚನೆ ವೇಳೆ ಬಹಳಷ್ಟು ಮಂದಿ ತಮ್ಮ…

Read More

ರಾಜಕೀಯ ಕುತೂಹಲ ಕೆರಳಿಸಿದ ಡಿಕೆಶಿ ದೆಹಲಿ ಪ್ರವಾಸ!

ಬೆಂಗಳೂರು, ಜುಲೈ 14: ರಾಜ್ಯ ಕಾಂಗ್ರೆಸ್ ಸರ್ಕಾರದಪವರ್ ಶೇರಿಂಗ್ ಫೈಟ್​ನಲ್ಲಿ ದಿನಕ್ಕೊಂದು ಟರ್ನ್. ಕ್ಷಣಕ್ಕೊಂದು ಟ್ವಿಸ್ಟ್ ಕಾಣಸಿಗ್ತಿದೆ. ಸಿಎಂ ಸಿದ್ದರಾಮಯ್ಯ ಇದೀಗ 5 ವರ್ಷದ ಜಪ ಮಾಡ್ತಿದ್ರೆ, ಡಿಸಿಎಂ-ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೌನಕ್ಕೆ ಜಾರಿದ್ರು. ಈ ಬೆನ್ನಲ್ಲೇ ಶಿರಡಿ ಸಾಯಿಬಾಬಾನ ದರ್ಶನಕ್ಕೆ ಮುಂದಾಗಿದ್ರು. ಈ ಹೊತ್ತಲ್ಲೇ ಮತ್ತೆ ಡಿಕೆಶಿ ದೆಹಲಿಗೆ ಹಾರಿದ್ದಾರೆ. ಪತ್ನಿ ಸಮೇತ ಶಿರಡಿ ಸಾಯಿಬಾಬಾ ದರ್ಶನ ಮಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಶ್ರದ್ಧೆ ನಂಬಿಕೆ ಮತ್ತು ತಾಳ್ಮೆ ಇದ್ದರೆ ಎಲ್ಲವೂ ಸಾಧ್ಯ ಅಂತ ಸಾಮಾಜಿಕ…

Read More

ಬಿಹಾರ ಅಸೆಂಬ್ಲಿ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಗೆದ್ದರೆ ಮಾತ್ರ ಸಿದ್ದರಾಮಯ್ಯ ಕುರ್ಚಿ ಭದ್ರ!

ನವದೆಹಲಿ, ಜುಲೈ 13: ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಕಾಂಗ್ರೆಸ್‌‍ ಹೈಕಮಾಂಡ್‌ನ ಬಲಾ-ಬಲವನ್ನು ಪರೀಕ್ಷೆ ಒಳಪಡಿಸಲಿದ್ದು, ಸಹಜವಾಗಿಯೇ ರಾಜ್ಯ ರಾಜಕಾರಣದ ಮೇಲೆ ಪರಿಣಾಮ ಬೀರುವ ನಿರೀಕ್ಷೆಗಳಿವೆ. ಈ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ಸುರ್ಜೇವಾಲ ನಡೆಸುತ್ತಿರುವ ಸರಣಿ ಸಭೆಗಳು ತೀವ್ರ ಕುತೂಹಲ ಕೆರಳಿಸಿವೆ. ಸಚಿವ ಸಂಪುಟ ಪುನರ್‌ ರಚನೆ, ನಿಗಮ ಮಂಡಳಿಗಳ ನೇಮಕಾತಿ ಸೇರಿದಂತೆ ಹಲವಾರು ವಿಚಾರಗಳಲ್ಲಿ ಈವರೆಗೂ ಹೈಕಮಾಂಡ್‌ನ ಪ್ರಭಾವ ಎದ್ದುಕಾಣುತ್ತಿದೆ. ಒಂದು ವೇಳೆ ಬಿಹಾರದ ಚುನಾವಣೆಯಲ್ಲಿ ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದಿದ್ದಾದರೆ ಸಿದ್ದರಾಮಯ್ಯ ಅವರು ಹೆಚ್ಚು…

Read More

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿದ ಎಐಸಿಸಿ ಅಧ್ಯಕ್ಷ!

ನವದೆಹಲಿ, ಜುಲೈ 12: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ರಾಜಕೀಯದ ಚೆಸ್ ಗೇಮ್ ಭರ್ಜರಿಯಾಗಿ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲೇ ಕೂತು ‘ನಾನೇ 5 ವರ್ಷ ಸಿಎಂ’ ಎಂಬ ಸಂದೇಶವನ್ನು ರಾಜಾರೋಷವಾಗಿ ಸಾರಿದರು. ಇದರ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆಗೆ ಸಚಿವರು ಪಟ್ಟು ಹಿಡಿದಿದ್ದಾರೆ. ಇದನ್ನೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಮುಂದೆ ಹೇಳಿದ್ದಾರೆ. ಒಬ್ಬರಿಗೆ ಒಂದೇ ಹುದ್ದೆ ನಿಯಮ ಇದ್ದು ಅದನ್ನು ಅನುಷ್ಠಾನಕ್ಕೆ ತನ್ನಿ ಎಂದು ಸಚಿವರು ಆಗ್ರಹಿಸಿದ್ದಾರೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ….

Read More

ಸಚಿವರ ಮೌಲ್ಯಮಾಪನಕ್ಕೆ ಮುಂದಾದ ಎಐಸಿಸಿ: ಮುಂದುವರಿದ ಕೈ ಕಗ್ಗಂಟು

ಬೆಂಗಳೂರು, ಜುಲೈ 12: ಶಾಸಕರುಗಳ ಜೊತೆ ಪ್ರತ್ಯೇಕವಾಗಿ ಒಟ್ಟು 6 ದಿನಗಳ ಕಾಲ ಅಭಿಪ್ರಾಯ ಸಂಗ್ರಹಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ಇದೇ ಜುಲೈ 16 ರಂದು ಸಚಿವರ ಜೊತೆ ಚರ್ಚೆ ನಡೆಸುವ ಮೂಲಕ ಮೌಲ್ಯಮಾಪನಕ್ಕೆ ಮುಂದಾಗಿದ್ದಾರೆ. ಆದರೆ ಸುರ್ಜೇವಾಲ ಅವರ ಕಾರ್ಯವೈಖರಿಗೆ ಕಾಂಗ್ರೆಸ್‌‍ ಪಕ್ಷದಲ್ಲೇ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ರಾಜ್ಯದಲ್ಲಿ ಸಿದ್ದರಾಮಯ್ಯ ಪ್ರಭಾವಿ ನಾಯಕರಾಗಿದ್ದು, ಅವರನ್ನೂ ದೂರ ಇಟ್ಟು ಸುರ್ಜೇವಾಲ ನೇರವಾಗಿ ಕಾಂಗ್ರೆಸ್‌‍ ಶಾಸಕರ ಜೊತೆ ಅಭಿಪ್ರಾಯ ಸಂಗ್ರಹಿಸಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ….

Read More

ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿ.ಕೆ.ಶಿ ಅವರಿಗಿಲ್ಲ: ಸಿಎಂಗೆ ಡಿ.ಕೆ‌ ಸುರೇಶ್ ಟಾಂಗ್!

ಬೆಂಗಳೂರು, ಜುಲೈ 12: ರಾಜಕಾರಣದಲ್ಲಿ ನಿವೃತ್ತಿ ಅಂತಿಲ್ಲ, ಹಾಗಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು 2028ರಲ್ಲೂ ತನ್ನದೇ ನಾಯಕತ್ವ ಅಂತ ಹೇಳಿರಬಹುದು ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ. ಶಾಸಕಾಂಗದ ಬೆಂಬಲದೊಂದಿಗೆ ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ, 2 ವರ್ಷದಿಂದ ಅಧಿಕಾರ ನಡೆಸಿಕೊಂಡು ಹೋಗುತ್ತಿದ್ದಾರೆ, ಮುಂದೆಯೂ ನಡೆಸುತ್ತಾರೆ, ಡಿ.ಕೆ ಶಿವಕುಮಾರ್ ಅವರು ಶಾಸಕರ ಬೆಂಬಲ ಪಡೆದುಕೊಳ್ಳಲು ಅಥವಾ ಕೇಳಲು ಇದು ಸಮಯ ಅಲ್ಲ, ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆ ಯಾಕೆ…

Read More

ಸಿದ್ದರಾಮಯ್ಯರನ್ನು ಕೆಳಗಿಳಿಸಿ ಸಿಎಂ ಸ್ಥಾನದಲ್ಲಿ ಖರ್ಗೆ ಕೂರಿಸಲು ನಡೆದಿದೆ ರಣತಂತ್ರ!

ಬೆಂಗಳೂರು, ಜುಲೈ 12: ಸೆಪ್ಟೆಂಬರ್‌ ಕ್ರಾಂತಿಯ ಚರ್ಚೆಯಲ್ಲಿ ಹಾರಾಟ ನಡೆಸಿದವರೆಲ್ಲಾ ತಣ್ಣಗಾದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ರಾಜ್ಯ ರಾಜಕಾರಣಕ್ಕೆ ಕರೆತಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಲು ಒಂದು ಬಣ ಅದ್ದಿ ಲ್ಲಿದೆ ಕಾರ್ಯಾಚರಣೆ ನಡೆಸುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರ ರಾಜಕಾರಣದಲ್ಲಿ ಪ್ರಭಾವಿ ಸ್ಥಾನದಲ್ಲಿದ್ದು, ಅವರನ್ನು ಕರೆತರುವ ಮೂಲಕ ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರ ಅಹಿಂದ ಮೂಲಮಂತ್ರಕ್ಕೆ ಪೆಟ್ಟು ನೀಡುವ ಕಾರ್ಯತಂತ್ರಗಳು ನಡೆಯುತ್ತಿವೆ. ವಿಧಾನಸಭೆ ಚುನಾವಣೆಯ ಫಲಿತಾಂಶದ ಬಳಿಕ ಮುಖ್ಯಮಂತ್ರಿ ಆಯ್ಕೆಯ ವಿಚಾರವಾಗಿ…

Read More

2028ಕ್ಕೂ ಸಿದ್ದರಾಮಯ್ಯ ಸಿಎಂ ಅಭ್ಯರ್ಥಿ ಅಲ್ಲ: ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು

ಬೆಂಗಳೂರು, ಜುಲೈ 11: ಮುಂದಿನ 2028 ರ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರೇ ಮತ್ತೆ ಸಿಎಂ ಅಭ್ಯರ್ಥಿಯೆಂದು ನಾನು ಹೇಳುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಿನ್ನೆ ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಾನು 5 ವರ್ಷದ ಸಿಎಂ ಆಗಿ ಇರುತ್ತೇನೆ. ಜೊತೆಗೆ ಮುಂದೆ 2028 ರ ವಿಧಾನಸಭೆ ಚುನಾವಣೆಯಲ್ಲೂ ನಾನೇ ಕಾಂಗ್ರೆಸ್ ಪಕ್ಷದ ಸಿಎಂ ಅಭ್ಯರ್ಥಿ ಎಂದು ಹೇಳಿದ್ದರು‌. ಆದರೆ ಸಿಎಂ ಸಿದ್ದರಾಮಯ್ಯ ಅವರ ಈ ಹೇಳಿಕೆಯನ್ನು ಇಂದು ಸಚಿವ ಸತೀಶ್ ಜಾರಕಿಹೊಳಿ…

Read More
error: Content is protected !!