ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿದ ಎಐಸಿಸಿ ಅಧ್ಯಕ್ಷ!
ನವದೆಹಲಿ, ಜುಲೈ 12: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ರಾಜಕೀಯದ ಚೆಸ್ ಗೇಮ್ ಭರ್ಜರಿಯಾಗಿ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲೇ ಕೂತು ‘ನಾನೇ 5 ವರ್ಷ ಸಿಎಂ’ ಎಂಬ ಸಂದೇಶವನ್ನು ರಾಜಾರೋಷವಾಗಿ ಸಾರಿದರು. ಇದರ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆಗೆ ಸಚಿವರು ಪಟ್ಟು ಹಿಡಿದಿದ್ದಾರೆ. ಇದನ್ನೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಮುಂದೆ ಹೇಳಿದ್ದಾರೆ. ಒಬ್ಬರಿಗೆ ಒಂದೇ ಹುದ್ದೆ ನಿಯಮ ಇದ್ದು ಅದನ್ನು ಅನುಷ್ಠಾನಕ್ಕೆ ತನ್ನಿ ಎಂದು ಸಚಿವರು ಆಗ್ರಹಿಸಿದ್ದಾರೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ….

