Headlines

​”ಸಾವಯವ ಕೃಷಿ – ಸುಸ್ಥಿರ ಬದುಕು: ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿಗಳ ನೇತೃತ್ವದಲ್ಲಿ ಮಂಡ್ಯದ ರೈತರಿಗಾಗಿ ವಿಶೇಷ ತರಬೇತಿ.”

ಮಂಡ್ಯ ಜಿಲ್ಲೆಯ ಕೃಷಿಕರ ಜೀವನಾಡಿಯಾದ ಕೃಷಿ ಚಟುವಟಿಕೆಗಳಿಗೆ ಹೊಸ ಆಯಾಮ ನೀಡುವ ಉದ್ದೇಶದಿಂದ, ಅತೀ ಕಡಿಮೆ ನೀರನ್ನು ಬಳಸಿ ನೈಸರ್ಗಿಕವಾಗಿ ಸಾವಯವ ಕೃಷಿ ಮಾಡುವ ಕುರಿತು ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಗೌರವಾನ್ವಿತ ಶ್ರೀ ಶ್ರೀ ಕಾಡು ಸಿದ್ದೇಶ್ವರ ಸ್ವಾಮೀಜಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ರೈತರಿಗೆ ಉಪಯುಕ್ತ ಮಾಹಿತಿ ಹಾಗೂ ಮಾರ್ಗದರ್ಶನ ನೀಡಲಿದ್ದಾರೆ. ​ಕಾರ್ಯಕ್ರಮದ ವಿವರಗಳು: ​ಈ ಒಂದು ದಿನದ ಕಾರ್ಯಾಗಾರಕ್ಕೆ ಬರುವ ಆಸಕ್ತ ರೈತ ಬಾಂಧವರಿಗೆ ಪ್ರವೇಶ ಉಚಿತವಾಗಿರುತ್ತದೆ. ಆದರೆ, ಸೀಮಿತ ಅವಕಾಶಗಳಿರುವುದರಿಂದ ರೈತರು ಕಡ್ಡಾಯವಾಗಿ ತಮ್ಮ…

Read More

ಲಂಚದ ಆಮಿಷ: ಚಾಮರಾಜನಗರ ಸಂಚಾರ ಮುಖ್ಯ ಪೇದೆ ‘ಔಟ್’!

ವರದಿ : ರಾಮಸಮುದ್ರ ಎಸ್. ವೀರಭದ್ರಸ್ವಾಮಿ ಚಾಮರಾಜನಗರ: ಖಾಕಿ ಅಂಗಿಯ ಅಹಂಕಾರ ಹಾಗೂ ಕೈಬಿಸಿ ಮಾಡುವ ಚಾಳಿ ಕೊನೆಗೂ ಒಬ್ಬ ಮುಖ್ಯ ಪೇದೆಯ ಕೆಲಸಕ್ಕೆ ಕುತ್ತು ತಂದಿದೆ! ಬಡ ಸವಾರನಿಗೆ ಕಿರುಕುಳ ನೀಡಿ, ಲಂಚಕ್ಕಾಗಿ ಆಮಿಷವೊಡ್ಡಿದ ಆರೋಪದ ಮೇಲೆ ಚಾಮರಾಜನಗರ ನಗರ ಸಂಚಾರ ಠಾಣೆಯ ಮುಖ್ಯ ಪೇದೆ ಮಲ್ಲು ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು ಅಮಾನತುಗೊಳಿಸಿ ಆದೇಶಿಸಿದ್ದಾರೆ. ​ಏನಿದು ಘಟನೆ? ​ಸಂಚಾರ ನಿಯಮ ಉಲ್ಲಂಘನೆ ಹೆಸರಲ್ಲಿ ವಶಪಡಿಸಿಕೊಂಡಿದ್ದ ದ್ವಿಚಕ್ರ ವಾಹನವನ್ನು ಬಿಡುಗಡೆ ಮಾಡಲು ಮಲ್ಲು…

Read More

SIT ಅಧಿಕಾರಿಗಳಿಗೆ 30 ಲಕ್ಷ ರೂಪಾಯಿ ಉಡುಗೊರೆ: ಸರ್ಕಾರಕ್ಕೆ ‘ಕುಮಾರ’ಬಾಣ!

​ಹಾಸನ: ‘ಅಂದು ವೀರಪ್ಪನ್ ಹಿಡಿಯಲು ಹೋದ ಪೊಲೀಸರಿಗೆ ದೇವೇಗೌಡರು ಉಡುಗೊರೆ ನೀಡಿದ್ದು ಇತಿಹಾಸ. ಆದರೆ ಇಂದು ಸ್ವಂತ ಕುಟುಂಬದವರನ್ನೇ ಗುರಿಯಾಗಿಸಿಕೊಂಡ ಅಧಿಕಾರಿಗಳಿಗೆ ಲಕ್ಷ ಲಕ್ಷ ಸುರಿಯುತ್ತಿರುವುದು ಯಾವ ನ್ಯಾಯ?’ ಹೀಗೆಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ಹಾಸನದಲ್ಲಿ ಆಕ್ರೋಶ ಹೊರಹಾಕಿದ್ದಾರೆ. ​ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ತನಿಖೆ ನಡೆಸಿ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾದ SIT (ವಿಶೇಷ ತನಿಖಾ ತಂಡ) ಅಧಿಕಾರಿಗಳಿಗೆ ರಾಜ್ಯ ಸರ್ಕಾರ 30 ಲಕ್ಷ ರೂ. ಬಹುಮಾನ ಘೋಷಿಸಿರುವುದನ್ನು ಕುಮಾರಸ್ವಾಮಿ ಅವರು…

Read More

ಬೆಳಗಾವಿ ಗಡಿಯಲ್ಲಿ ದೇಶದ ಅತಿದೊಡ್ಡ ದರೋಡೆ: ₹400 ಕೋಟಿ ನಗದು ತುಂಬಿದ್ದ ಕಂಟೇನರ್ ಹೈಜಾಕ್!

ಅಕ್ಟೋಬರ್‌ನಲ್ಲಿ ನಡೆದ ಕೃತ್ಯ ತಡವಾಗಿ ಬೆಳಕಿಗೆ | ಛೋರ್ಲಾ ಘಾಟ್‌ನಲ್ಲಿ ಸಿನೆಮೀಯ ಮಾದರಿ ಲೂಟಿ | ತನಿಖೆಗೆ ಮಹಾರಾಷ್ಟ್ರ ಸರ್ಕಾರದಿಂದ ‘ಎಸ್‌ಐಟಿ’ ರಚನೆ ​ಮಹಾರಾಷ್ಟ್ರ ಮತ್ತು ಕರ್ನಾಟಕದ ಗಡಿಭಾಗವಾದ ಬೆಳಗಾವಿಯಲ್ಲಿ ದೇಶವೇ ಬೆಚ್ಚಿಬೀಳುವಂತಹ ಭೀಕರ ದರೋಡೆ ಪ್ರಕರಣವೊಂದು ತಡವಾಗಿ ಬಯಲಾಗಿದೆ. ಗೋವಾದಿಂದ ಮಹಾರಾಷ್ಟ್ರದ ಕಡೆಗೆ ಸಾಗುತ್ತಿದ್ದ, ಅಂದಾಜು 400 ಕೋಟಿ ರೂಪಾಯಿಗೂ ಅಧಿಕ ನಗದು ಹೊಂದಿದ್ದ ಎರಡು ಕಂಟೇನರ್‌ಗಳನ್ನು ಕಿಡಿಗೇಡಿಗಳು ಹೈಜಾಕ್ ಮಾಡಿದ್ದಾರೆ. ​ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ದಟ್ಟಾರಣ್ಯ ಪ್ರದೇಶವಾದ ಛೋರ್ಲಾ ಘಾಟ್‌ನಲ್ಲಿ ಕಳೆದ ಅಕ್ಟೋಬರ್…

Read More

ಲೋಕಾ ಬಲೆಗೆ ಸಂಚಾರಿ ಠಾಣೆ ಮುಖ್ಯಪೇದೆ

ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ.ಚಾಮರಾಜನಗರ: ಜಪ್ತಿಯಾದ ವಾಹನ ಬಿಡಿಸಿಕೊಳ್ಳಲು ಲಂಚದ ಬೇಡಿಕೆ ಇಟ್ಟಿದ್ದ ಮುಖ್ಯಪೇದೆ ಲೋಕಾಯುಕ್ತರು ಬೀಸಿದ ಬಲೆಗೆ ಬಲಿಯಾಗಿದ್ದಾರೆಚಾಮರಾಜನಗರ ಸಂಚಾರಿ ಠಾಣೆಯ ಮುಖ್ಯಪೇದೆ ಮಲ್ಲು ಎಂಬುವವರೆ ಲೋಕ ಬಲೆಗೆ ಬಿದ್ದ ಪೇದೆಯಾಗಿದ್ದಾರೆ. ಬಂಡಿಗೆರೆ ಗ್ರಾಮದ ದೂರುದಾರರೊಬ್ಬರು ಜಪ್ತಿಯಾಗಿದ್ದ ವಾಹನವನ್ನ ನ್ಯಾಯಾಲಯದ ಆದೇಶ ಮೇರೆಗೆ ವಾಹನ ಬಿಡಿಸಿಕೊಳ್ಳಲು ಮೂರು ಸಾವಿರ ಲಂಚದ ಬೇಡಿಕೆಯನ್ನ ಮುಖ್ಯಪೇದೆ ಮಲ್ಲು ಇಟ್ಟಿದ್ದರು ಎನ್ನಲಾಗಿದೆ. ದೂರುದಾರರ ಮೇರೆಗೆ ಸಂಚಾರಿ ಠಾಣೆಯಲ್ಲೆ ಹಣ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಸ್ಪಿ ಹಾಗೂ ಸಿಬ್ಬಂದಿಗಳು ದಾಳಿ ಕಾರ್ಯದಲ್ಲಿ ಭಾಗವಹಿಸಿದ್ದರು….

Read More

​ಕಲಿತ ಮಠದಲ್ಲೇ ಕೃತಿ ಲೋಕಾರ್ಪಣೆ: ಶಿಕ್ಷಕ ಮುತ್ತು ವಡ್ಡರ ಅವರ ‘ಸನ್ಮಾರ್ಗದ ದುಂಬಿ’ ಬಿಡುಗಡೆ

ತುಮಕೂರಿನ ಸಿದ್ಧಗಂಗಾ ಮಠದ ಪರಮಪೂಜ್ಯ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಯ ಮುಂಭಾಗ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಾಗಿ ಗ್ರಾಮದ ಹಾಗೂ ಪ್ರಸ್ತುತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿರೇಮಳಗಾವಿಯ ಗಣಿತ ಶಿಕ್ಷಕರಾದ ಶ್ರೀ ಮುತ್ತು ಯ. ವಡ್ಡರ ಇವರ ಮೂರನೇ ಕೃತಿ ಸನ್ಮಾರ್ಗದ ದುಂಬಿ ಸರಳವಾಗಿ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಆಶೀರ್ವಾದದೊಂದಿಗೆ ಪರಮಪೂಜ್ಯ ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿಗಳ ಅಮೃತ ಹಸ್ತದಿಂದ ಶ್ರೀಮಠದ ಭಕ್ತರ ಸಮ್ಮುಖದಲ್ಲಿ ಬಿಡುಗಡೆಯಾಯಿತು. ಪರಮ ಪೂಜ್ಯರು ಇನ್ನೂ ಹೆಚ್ಚಿನ…

Read More

​ಚಾಮರಾಜನಗರ: ಬಸ್-ಲಾರಿ ಮುಖಾಮುಖಿ ಡಿಕ್ಕಿ; ಕೆಎಸ್ಆರ್‌ಟಿಸಿ ಚಾಲಕ ಸಾವು, 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕೆಎಸ್ ಆರ್ ಟಿಸಿ ಬಸ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ ಡಿಕ್ಕಿಯಲ್ಲಿ ಸರ್ಕಾರಿ ಬಸ್ಸಿನ ಚಾಲಕ ಮೃತಪಟ್ಟರೆ, ಬಸ್ಸಿನಲ್ಲಿದ್ದ ೧೫ ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಕೆಎಸ್ಸಾರ್ಟಿಸಿ ಬಸ್ ಚಾಲಕ ಇರಸವಾಡಿ ಗ್ರಾಮದ ಮಂಜು (38) ಮೃತಪಟ್ಟ ದುರ್ದೈವಿಯಾಗಿದ್ದಾರೆ..ತೀವ್ರ ಗಾಯಗೊಂಡಿರುವ ಲಾರಿ ಚಾಲಕನ ಸ್ಥಿತಿ ಚಿಂತಾಜನಕವಾಗಿದ್ದು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ನಂಜನಗೂಡು ಕಡೆಯಿಂದ ಸರ್ಕಾರಿ ಬಸ್, ಚಾಮರಾಜನಗರ ಕಡೆಯಿಂದ ಲಾರಿ…

Read More

ಬಳ್ಳಾರಿ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್: ಮರಣೋತ್ತರ ಪರೀಕ್ಷೆ ಬಗ್ಗೆ ಹೆಚ್‌ಡಿಕೆ ಸ್ಫೋಟಕ ಆರೋಪ!

ಬೆಂಗಳೂರಿನಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಳ್ಳಾರಿಯ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಪ್ರಕರಣದ ತನಿಖೆಯಲ್ಲಿ ಹಲವು ಲೋಪದೋಷಗಳಿವೆ ಎಂದು ಆರೋಪಿಸಿರುವ ಅವರು, ಘಟನೆಯನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿದ್ದಾರೆ. ​ಪತ್ರಿಕಾಗೋಷ್ಠಿಯ ಪ್ರಮುಖ ಅಂಶಗಳು: ​ಮರಣೋತ್ತರ ಪರೀಕ್ಷೆಯ ಬಗ್ಗೆ ಸ್ಫೋಟಕ ಆರೋಪ ರಾಜಶೇಖರ್ ಮೃತದೇಹವನ್ನು ಎರಡು ಬಾರಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿರುವ ಬಗ್ಗೆ ಕುಮಾರಸ್ವಾಮಿ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ….

Read More

ಚಾಮರಾಜೇಶ್ವರನ ದರ್ಶನ ಪಡೆದು ಅಧಿಕಾರ ವಹಿಸಿಕೊಂಡ ಜಿಲ್ಲಾಧಿಕಾರಿ ಶ್ರೀರೂಪ

ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ, ಜನವರಿ,04:- ಚಾಮರಾಜನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶ್ರೀರೂಪ ಅವರು ಇಂದು ಚಾಮರಾಜೆಶ್ವರ ದೇವರ ದರ್ಶನ ಪಡೆದು ಅದಿಕಾರ ಸ್ವೀಕರಿಸಿದ್ದಾರೆ. ದೇವಾಲಯಕ್ಕೆ ಭೇಟಿ ನೀಡಿ ನಂತರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ವರ್ಗಾವಣೆಯಾಗಿರುವ ನಿರ್ಗಮಿತ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರಿಂದ ಅಧಿಕಾರಿ ಸ್ವೀಕರಿಸಿದರು. ನೂತನ ಜಿಲ್ಲಾಧಿಕಾರಿ ಶ್ರೀರೂಪ ಅವರಿಗೆ ಶಿಲ್ಪಾ ನಾಗ್ ಅವರು ಹೂಗುಚ್ಚ ನೀಡಿ ಶುಭ ಕೋರಿದರು. ನೂತನ ಜಿಲ್ಲಾಧಿಕಾರಿ ಶ್ರೀರೂಪ ಅವರು ನಿರ್ಗಮಿತ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರಿಗೆ ಹೂಗುಚ್ಚ ನೀಡಿ ಹಾರೈಸಿದರು….

Read More

ಹುನಗುಂದ ತಾಲೂಕಿನ ಅವಳಿ ಸಂಘಗಳಿಂದ ಸೂಟಿ ಪತ್ರಿಕೆ ಹಾಗೂ ಪದಗ್ರಹಣ ಕಾರ್ಯಕ್ರಮ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನ ಹುನಗುಂದದಲ್ಲಿ ಇಂದು ನಡೆದ ಕರ್ನಾಟಕ ರಾಜ್ಯ ಎಸ್ ಸಿ /ಎಸ್ ಟಿ ಪ್ರಾಥಮಿಕ ಮಾಧ್ಯಮಿಕ ಶಿಕ್ಷಕರ ನೌಕರರ ಕ್ಷೇಮಾಭಿವೃದ್ಧಿ ಸಂಘ ಹುನಗುಂದ ಹಾಗೂ ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹುನಗುಂದ ಅವಳಿ ಸಂಘದ ಪದಾಧಿಕಾರಿಗಳ ಪದಗ್ರಹಣ ಹಾಗೂ ಸೂಟಿ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸರಳವಾಗಿ ಸುಂದರವಾಗಿ ಯಶಸ್ವಿಯಾಯಿತು. ಸರಕಾರಿ ನೌಕರರ ಸಂಘದ ಗೌರವ ಅಧ್ಯಕ್ಷರು ಆಗಿರುವ ಶ್ರೀ ಎಸ್ ಜಿ ಹುದ್ದಾರ ಅವರು ಒಂಟಿಯ ಹೋರಾಟಕ್ಕೂ…

Read More
error: Content is protected !!