ಕೊನೆಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಪಟ್ಟಿ ರವಾನಿಸಿದ ಕೈ ಹೈಕಮಾಂಡ್!
ಬೆಂಗಳೂರು, ಸೆ.24: ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿಗಮ-ಮಂಡಳಿಗೆ ಕೊನೆಗೂ ನೇಮಕವಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸಿಡಬ್ಲ್ಯೂಸಿ ಸಭೆಗೆಂದು ಬಿಹಾರ ರಾಜ್ಯಕ್ಕೆ ತೆರಳಿದ ಸಂದರ್ಭದಲ್ಲೇ ನಿಗಮ ಮಂಡಳಿಗಳಿಗೆ ನೇಮಕ ಮಾಡಲಾಗಿದೆ. 39 ನಿಗಮ ಮತ್ತು ಮಂಡಳಿಗಳ ಅಧ್ಯಕ್ಷರಿಗೆ ಕಾಂಗ್ರೆಸ್ ಹೈಕಮಾಂಡ್ ಇಂದು ಅಂತಿಮ ಮುದ್ರೆ ಹಾಕಿ ಇಂದು (ಸೆಪ್ಟೆಂಬರ್ 24) ಪಟ್ಟಿಯನ್ನು ರಾಜ್ಯಕ್ಕೆ ರವಾನೆ ಮಾಡಿದೆ. ಇನ್ನು ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ…

