Headlines

ನಾಳೆಯಿಂದ ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ಏರಿಕೆ!

ಬೆಂಗಳೂರು, ಜುಲೈ 31: ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಟೋರಿಕ್ಷಾ ಪ್ರಯಾಣದ ದರಗಳನ್ನು ಪರಿಷ್ಕರಿಸಿದ್ದು, ನಾಳೆ ಆಗಸ್ಟ್ 1 ರಿಂದಲೇ ನೂತನ ದರ ಜಾರಿಗೆ ಬರಲಿದೆ. ಬೆಂಗಳೂರು ನಗರ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಆಟೋರಿಕ್ಷಾ ಮೀಟರ್‌ ದರ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ. ಕನಿಷ್ಠ ದರ ಮೊದಲ 2 ಕಿ.ಮೀ.ಗೆ ತಲಾ 36 ರೂ. ನಿಗದಿಪಡಿಸಿದ್ದು, ಆಟೋರಿಕ್ಷಾದಲ್ಲಿ ಮೂವರು ಪ್ರಯಾಣಿಕರಿಗೆ ಪ್ರಯಾಣಿಸಲು ಅವಕಾಶವಿದೆ. ಕಾಯುವಿಕೆ ದರವು ಮೊದಲ 5 ನಿಮಿಷ ಉಚಿತವಾಗಿದೆ. ಅನಂತರ ಪ್ರತಿ 15…

Read More

ಹಿರಿಯೂರು ವೈದ್ಯಾಧಿಕಾರಿ ಮನೆ ಮೇಲೆ ಲೋಕಾ ದಾಳಿ: ರಾಶಿಗಟ್ಟಲೆ ನಗದು, ಚಿನ್ನ ಪತ್ತೆ!

ಚಿತ್ರದುರ್ಗ, ಜುಲೈ 29: ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ (ಜುಲೈ 29) ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳಿಗೆ ಸೇರಿದ ಮನೆ, ಕಚೇರಿ ಹಾಗೂ ಇತರ ಆಸ್ತಿಗಳ ಮೇಲೆ ದಾಳಿ ಮಾಡಿ, ಪರಿಶೀಲನೆ ನಡೆಸಿದರು. ಲೋಕಾಯುಕ್ತ ಅಧಿಕಾರಿಗಳು ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಪತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕು ವೈದ್ಯಾಧಿಕಾರಿ ಡಾ.ವೆಂಕಟೇಶ್​ಗೆ ಸೇರಿದ ಮನೆ, ಕ್ಲಿನಿಕ್ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಹಿರಿಯೂರು ತಾಲೂಕಿನ ಆದಿವಾಲ ಗ್ರಾಮ ಮೂಲದ ಡಾ.ವೆಂಕಟೇಶ್ ಗ್ರಾಮದಲ್ಲಿ ಒಂದು…

Read More

ರಾಯಚೂರಿನಲ್ಲಿ 79 ಟನ್ ಯೂರಿಯಾ ಬ್ಲಾಕ್ ನಲ್ಲಿ ಸೇಲ್!

ರಾಯಚೂರು, ಜುಲೈ 29: ರಾಜ್ಯಾದ್ಯಂತ ರೈತರು ಕೃಷಿ ಚಟುವಟಿಕೆ ಚುರುಕುಗೊಳಿಸಿದ್ದಾರೆ. ಇಂತಹ ಸಂದರ್ಭದಲ್ಲೇ ಕೃಷಿಗೆ ಅತೀ ಅವಶ್ಯಕವಾಗಿರುವ ಯೂರಿಯಾ ಗೊಬ್ಬರದ ಕೊರತೆ ರಾಜ್ಯದೆಲ್ಲೆಡೆ ಇದೆ. ಈ ವೇಳೆ ರಾಯಚೂರು ಜಿಲ್ಲೆಯಲ್ಲಿ 79 ಟನ್ ಯೂರಿಯಾ ಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡಲಾಗಿದೆ. ಈ ಬಗ್ಗೆ ಜಿಲ್ಲೆಯ ರೈತರು ರಾಯಚೂರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ರಾಯಚೂರಿನ ಕಲ್ಲೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಗೋಡೌನ್​ಗೆ ಹೋಗಬೇಕಿದ್ದ ಯೂರಿಯಾ ಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ. ರಾಯಚೂರು ಜಿಲ್ಲಾ ಕೇಂದ್ರದ ಆರ್​ಎಪಿಎಂಸಿಯಿಂದ ಜೂನ್…

Read More

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ರೇಡ್

ಬೆಂಗಳೂರು, ಜುಲೈ 29: ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದು ಮಂಗಳವಾರ ನಸುಕಿನ ಜಾವ ಲೋಕಾಯುಕ್ತ ದಾಳಿ ನಡೆದಿದೆ. ಸರ್ಕಾರಿ ಅಧಿಕಾರಿಗಳಿಗೆ ಸೇರಿದ ಮನೆ, ಕಚೇರಿ ಹಾಗೂ ಇತರ ಆಸ್ತಿಗಳ ಮೇಲೆ ದಾಳಿ ನಡೆದಿದೆ. ಬೆಂಗಳೂರಿನ ಎರಡು ಕಡೆ ಕೋಕಾ ಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ. ಚಿಕ್ಕಬಳ್ಳಾಪುರ, ಹಾಸನ, ಚಿತ್ರದುರ್ಗದಲ್ಲಿಯೂ ದಾಳಿ ನಡೆದಿದೆ. ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಓಂಪ್ರಕಾಶ್ ಮನೆ, ಕಂದಾಯ ಅಧಿಕಾರಿ ಎನ್​.ವೆಂಕಟೇಶ್​​ ಮನೆಯಲ್ಲಿ ಪರಿಶೀಲನೆ ನಡೆಯುತ್ತಿದೆ. ಹಾಸನ,…

Read More

ಈಡೇರಿತು 3 ದಶಕಗಳ ಬೇಡಿಕೆ: ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗಕ್ಕೆ ಗ್ರೀನ್ ಸಿಗ್ನಲ್!

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಗೆ ಕೊನೆಗೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಕಳೆದ 3 ದಶಕಗಳಿಂದ ಈ ಯೋಜನೆಗಾಗಿ ನಡೆಯುತ್ತಿದ್ದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಇದೀಗ ಯೋಜನೆಗೆ ಎದುರಾಗಿದ್ದ ಅನೇಕ ವಿಘ್ನಗಳು ನಿವಾರಣೆಯಾಗಿ, ಕೊನೆಗೂ ಕೇಂದ್ರ ಸರಕಾರ ಈ ಯೋಜನೆಗೆ ಗ್ರೀನ್​​ಸಿಗ್ನಲ್ ನೀಡಿದೆ. ಇದರಿಂದಾಗಿ ಕರಾವಳಿ ಹಾಗೂ ಉತ್ತರ ಕರ್ನಾಟಕದ ಹೆಬ್ಬಾಗಿಲು ಹುಬ್ಬಳ್ಳಿಗೆ ರೈಲ್ವೆ ಸಂಪರ್ಕ ಸಿಗಲಿದೆ. ಬಯಲುಸೀಮೆ ಹಾಗೂ ಕರಾವಳಿ ಸಂಪರ್ಕಿಸಿ ವಾಣಿಜ್ಯ ವಹಿವಾಟು ವೃದ್ಧಿಸುವ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಗೆ ಹಲವಾರು ಬಾರಿ ಅಡ್ಡಿ…

Read More

ದರ್ಶನ್ ಅಭಿಮಾನಿಗಳಿಂದ ಅಶ್ಲೀಲ ಕಮೆಂಟ್ಸ್: ರಮ್ಯಾ ದೂರು ಕೊಟ್ಟರೆ ಕ್ರಮ ಎಂದ ಗೃಹ ಸಚಿವ

ಬೆಂಗಳೂರು, ಜುಲೈ 28: ನಟ ದರ್ಶನ್‌ ಅಭಿಮಾನಿಗಳಿಂದ ಅಶ್ಲೀಲವಾದ, ಕೊಳಕು ಕಮೆಂಟ್ಸ್‌ ಬರುತ್ತಿರುವ ಬಗ್ಗೆ ನಟಿ ರಮ್ಯಾ ದೂರು ನೀಡಿದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹಸಚಿವ ಜಿ. ಪರಮೇಶ್ವರ್‌ ಹೇಳಿದ್ದಾರೆ. ಸೋಮವಾರ ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ರಮ್ಯ ಅವರು ಇದುವರೆಗೂ ಯಾವುದೇ ದೂರು ದಾಖಲಿಸಿಲ್ಲ. ಒಂದು ವೇಳೆ ದಾಖಲಿಸಿದರೆ ನಮ್ಮ ಪೊಲೀಸರು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ನುಡಿದರು. ರಮ್ಯಾ ದೂರು ಕೊಡಲಿ, ಪೊಲೀಸರು ಏನು ಕ್ರಮ‌ ಕೈಗೊಳ್ಳಬೇಕೋ ತಗೊಳ್ತಾರೆ….

Read More

ಉತ್ತಮ ಮಳೆಯಾದ್ರೂ ರಸಗೊಬ್ಬರದ ಕೊರತೆ: ಇಂದು ರಾಜ್ಯಾದ್ಯಂತ ಬಿಜೆಪಿ ಹೋರಾಟ

ಬೆಂಗಳೂರು, ಜುಲೈ 28: ಕರ್ನಾಟಕದಾದ್ಯಂತ ಈ ಬಾರಿ ಮುಂಗಾರಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಹೀಗೆ ನಿರಂತರ ಮಳೆಯಿಂದ ಇಳೆ ಕಂಗೊಳಿಸುತ್ತಿದೆ. ಪರಿಣಾಮ ವರುಣನ ಕೃಪೆಗೆ ರೈತನ ಮೊಗದಲ್ಲಿ ಮಂದಹಾಸ ಮೂಡಿದೆ. ಉತ್ಕೃಷ್ಟ ಬೆಳೆಯ ನಿರೀಕ್ಷೆಯಲ್ಲಿರುವ ರೈತ, ಈ ಬಾರಿ ಉತ್ತಮ ಫಸಲು ತೆಗೆಯುವ ಕನಸು ಹೊತ್ತು ಹೆಜ್ಜೆ ಇಟ್ಟಿದ್ದಾನೆ. ಹೀಗೆ ಹೆಜ್ಜೆ ಇಟ್ಟ ಅನ್ನದಾತನಿಗೆ ರಸಗೊಬ್ಬರ ಕೊರತೆಯ ಕಲ್ಲು ಎದೆಗೆ ಬಡಿದಿದೆ. ಎಲ್ಲಿ ಹೋದರೂ ‘‘ನೋ ಸ್ಟಾಕ್’’ ಬೋರ್ಡ್!!! ಕಾಂಗ್ರೆಸ್, ಬಿಜೆಪಿ ಮಧ್ಯೆ ಗೊಬ್ಬರ ಗುದ್ದಾಟ…ಮಳೆ ಬಂದ್ರೂ ಗೊಬ್ಬರವಿಲ್ಲ,…

Read More

ಮಲ್ಲಿಕಾರ್ಜುನ ಖರ್ಗೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ-ಐಸಿಯುನಲ್ಲಿ ಚಿಕಿತ್ಸೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ 2ನೇ ಪುತ್ರ ಮಿಲಿಂದ್ ಖರ್ಗೆ ಅವರಿಗೆ ಕ್ಯಾನ್ಸರ್ ನಿಂದ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಸದ್ಯ ಮಿಲಿಂದ್ ಖರ್ಗೆ ಅವರನ್ನು ಬೆಂಗಳೂರಿನ ಸಕ್ರಾ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಬ್ಬರು ಹೆಣ್ಣುಮಕ್ಕಳು, ಮೂವರು ಗಂಡು ಮಕ್ಕಳಿದ್ದಾರೆ. ಮಿಲಿಂದ್ ಖರ್ಗೆ ಅವರು ಯುನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾದ ವಾರ್ಟನ್ ಸ್ಕೂಲ್ ನಲ್ಲಿ ಎಂ.ಬಿ.ಎ ಪದವಿ ಪಡೆದಿದ್ದಾರೆ. ವಿದೇಶದಲ್ಲಿದ್ದ ಮಿಲಿಂದ್ ಖರ್ಗೆ ಅವರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಮಿಲಿಂದ್…

Read More

ಡಿಸಿಎಂ ಡಿ.ಕೆ ಶಿವಕುಮಾರ್ ಕಚೇರಿ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಸಂದೇಶ

ಬೆಂಗಳೂರು, ಜುಲೈ 27: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಕಚೇರಿ ಹಾಗೂ ದೇವನಹಳ್ಳಿಯಲ್ಲಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಸ್ಫೋಟಿಸುವುದಾಗಿ ಇ-ಮೇಲ್​ ಸಂದೇಶ ಬಂದಿದೆ. ಮಾಹಿತಿ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ತೆರಳಿದ ಪೊಲೀಸರು, ಬಾಂಬ್​ ನಿಷ್ಕ್ರಿಯ ದಳ ಹಾಗೂ ಬಾಂಬ್ ಪತ್ತೆ ದಳ ಸಿಬ್ಬಂದಿ ಪರಿಶೀಲನೆ ನಡೆಸಿದರು. ಯಾವುದೇ ಬಾಂಬ್​ ಪತ್ತೆಯಾಗದ ಹಿನ್ನೆಲೆಯಲ್ಲಿ ಹುಸಿ ಬಾಂಬ್​ ಬೆದರಿಕೆ ಸಂದೇಶ ಎಂದು ಗೊತ್ತಾಗಿದೆ. ಬಾಂಬ್​ ಬೆದರಿಕೆ ಸಂದೇಶದಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. bhagwanthmann@yandex.com ಮೇಲ್‌ನಿಂದ ಬಾಂಬ್​ ಬೆದರಿಕೆ…

Read More

ದ್ರೋಹಿಗಳನ್ನು ಮಲ್ಲಾಡಿಹಳ್ಳಿ ಮಠದಿಂದ ಹೊರಹಾಕಿ: ಮಾಜಿ ಶಾಸಕ ಎ.ವಿ ಉಮಾಪತಿ ಕರೆ

ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿಹಳ್ಳಿಯ ಅನಾಥಸೇವಾಶ್ರಮದ ಆಡಳಿತಾಧಿಕಾರಿ ರಾಘವೇಂದ್ರ ಪಾಟೀಲ್ ಸಾರ್ವಜನಿಕರೆದುರು ಬಂದು ಇರುವ ಸಮಸ್ಯೆಗಳ ಬಗ್ಗೆ ಮಾತನಾಡಬೇಕೆಂದು ಮಾಜಿ ಶಾಸಕ ಎ.ವಿ ಉಮಾಪತಿ ಅವರು ಸವಾಲು ಹಾಕಿದ್ದಾರೆ. ಈ ಬಗ್ಗೆ ಹೊಳಲ್ಕೆರೆಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಜಿ ಶಾಸಕರಾದ ಎ.ವಿ ಉಮಾಪತಿ ಅವರು ಮಲ್ಲಾಡಿಹಳ್ಳಿಯ ಅನಾಥಸೇವಾಶ್ರಮದ ಆಸ್ತಿ ಅಲ್ಲಿನ ಆಡಳಿತಾಧಿಕಾರಿ ರಾಘವೇಂದ್ರ ಪಾಟೀಲ್, ಬಡಿಗೇರ್, ಶಿವರಾಮಯ್ಯ ಅವರ ಪಾಲಾಗುತ್ತಿದೆ ಎಂದು ಹರಿಹಾಯ್ದರು. “ಬಡಿಗೇರ್, ಮಠದ ಆಡಳಿತಾಧಿಕಾರಿ ರಾಘವೇಂದ್ರ ಪಾಟೀಲ್ ಹಾಗೂ ಶಿವರಾಮಯ್ಯ ಸೇರಿಕೊಂಡು ಮಲ್ಲಾಡಿಹಳ್ಳಿಯ ಅನಾಥಸೇವಾಶ್ರಮದ ಆಸ್ತಿಯನ್ನು ಕೊಳ್ಳೆ…

Read More
error: Content is protected !!