Headlines

ದೂರುದಾರನೇ ಅಸಲಿ ಕಳ್ಳ: ತೆರಕಣಾಂಬಿ ಪೊಲೀಸರ ಚಾಣಾಕ್ಷ ತನಿಖೆ!

​ವರದಿ: ರಾಮಸಮುದ್ರ ಎಸ್. ವೀರಭದ್ರಸ್ವಾಮಿ ಚಾಮರಾಜನಗರ: ತೆರಕಣಾಂಬಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂಡಗೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿ ನಡೆದಿದ್ದ ಬೃಹತ್ ಕಳವು ಪ್ರಕರಣವನ್ನು ಪೊಲೀಸರು ಕೇವಲ ಕೆಲವೇ ದಿನಗಳಲ್ಲಿ ಭೇದಿಸಿದ್ದಾರೆ. ವಿಶೇಷವೆಂದರೆ, ಪ್ರಕರಣದ ದೂರುದಾರನೇ ಅಸಲಿ ಕಳ್ಳ ಎಂಬ ಬೆಚ್ಚಿಬೀಳಿಸುವ ಸತ್ಯ ತನಿಖೆಯಿಂದ ಬಯಲಾಗಿದೆ. ​ಘಟನೆಯ ಹಿನ್ನೆಲೆ​ದಿನಾಂಕ 16/12/2025 ರಂದು ರಾತ್ರಿ ವೇಳೆ ಮೂಡಗೂರು ಸಹಕಾರ ಸಂಘದ ಕಚೇರಿಯ ಬೀಗ ಮುರಿದು ಸುಮಾರು ರೂ. 14,12,000/- ನಗದು ಹಣವನ್ನು ಕಳವು ಮಾಡಲಾಗಿತ್ತು….

Read More

​ಮಂಡ್ಯದಲ್ಲಿ ವಿಶ್ವ ರೈತರ ದಿನಾಚರಣೆ: ರೈತರ ಸಮಸ್ಯೆಗಳ ಬಗ್ಗೆ ಸರ್ಕಾರದ ವಿರುದ್ಧ ಕೆ.ಟಿ. ಶ್ರೀಕಂಠೇಗೌಡ ಆಕ್ರೋಶ

ಮಂಡ್ಯ: ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕಿನ ಆವರಣದಲ್ಲಿ ವಿಶ್ವ ರೈತರ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯ ರೈತಪರ ಹೋರಾಟಗಾರರ ಸಂಘದ ವತಿಯಿಂದ ಬೃಹತ್‌ ಸಮಾವೇಶ ನಡೆಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ವಿಧಾನ ಪರಿಷತ್‌ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರು ಮಾತನಾಡಿ, ರೈತರು ಕಷ್ಟ ಪಡದೇ ಹೊಲ ಗದ್ದೆಗಳಲ್ಲಿ ದುಡಿಯದೇ ಹೋದರೆ ನಾವು ಜೀವಿಸಲು ಸಾಧ್ಯವಿಲ್ಲ, ದೇಶದ ಅಭಿವೃದ್ದಿಯಲ್ಲಿ ರೈತರ ಪಾತ್ರ ಹೆಚ್ಚಿರುತ್ತದೆ ಎನ್ನುವುದನ್ನು ಮರೆಯಬಾರದು. ರೈತರ ಕಷ್ಟಗಳನ್ನು ಆಳುವ ಸರ್ಕಾರಗಳು ಕೇಳುತ್ತಿಲ್ಲ, ಅವರ ಸಮಸ್ಯೆಗಳು ಸಮಸ್ಯೆಯಾಗಿಯೇ ಉಳಿದಿದೆ. ರಾಜ್ಯದಲ್ಲಿ…

Read More

ರಮೇಶ್ ಬಂಡಿಸಿದ್ದೇಗೌಡ್ರ ಅಧ್ಯಕ್ಷತೆಯಲ್ಲಿ ಭಾರಿ ಭ್ರಷ್ಟಾಚಾರವಂತೆ..!?

ಬೂದನೂರು ಪಂಚಾಯತ್ ‘ಪವರ್’ ಹಗರಣ: ಜನರ ತೆರಿಗೆ ಹಣದಲ್ಲಿ ಅಧಿಕಾರಿಗಳ ಅಕ್ರಮಕ್ಕೆ ದಂಡ! ಮಂಡ್ಯ ಜಿಲ್ಲೆಯ ಗ್ರಾಮ ಪಂಚಾಯತಿಗಳಲ್ಲಿ ಸಾರ್ವಜನಿಕರ ಹಣ ‘ದೋಚಲು’ ಭ್ರಷ್ಟ ಅಧಿಕಾರಿಗಳು ಹೊಸ ದಾರಿ ಕಂಡುಕೊಂಡಿದ್ದಾರೆ!ಅಕ್ರಮವಾಗಿ ವಿದ್ಯುತ್ ಕಳ್ಳತನ ಮಾಡುವುದು, ಸಿಕ್ಕಿಬಿದ್ದಾಗ ಲಕ್ಷಾಂತರ ರೂಪಾಯಿ ದಂಡವನ್ನು ಜನರ ತೆರಿಗೆ ಹಣದಲ್ಲೇ ಕಟ್ಟುವುದು. ಇಷ್ಟೇ ಆಗಿದ್ದರೆ ಇದು ಕೇವಲ ಆರ್ಥಿಕ ಹಗರಣವಾಗುತ್ತಿತ್ತು. ಆದರೆ, ಈ ಅಕ್ರಮವನ್ನು ಪ್ರಶ್ನಿಸಿದ ಹೋರಾಟಗಾರರಿಗೆ ‘ಸುಳ್ಳು ದೂರು ದಾಖಲಿಸುವ ಬೆದರಿಕೆ’ ಹಾಕುವ ಮೂಲಕ ಬೂದನೂರು ಪಂಚಾಯತ್ ಆಡಳಿತ ಮಂಡಳಿ ಈಗ…

Read More

ರೀಲ್ಸ್ ರಾಣಿಯ ಮೇಲೆ ದಾಖಲಾಯ್ತ್ FIR.

ವರದಿ: ರಾಮಸಮುದ್ರ ಎಸ್. ವೀರಭದ್ರಸ್ವಾಮಿ ಚಾಮರಾಜನಗರ: ಧಾರ್ಮಿಕ ಕೇಂದ್ರಗಳಲ್ಲಿ ಸಾಮಾಜಿಕ ಜಾಲತಾಣಗಳ ಕ್ರೇಜ್ ಮಿತಿಮೀರುತ್ತಿದ್ದು, ಪವಿತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಪಾಯಕಾರಿ ರೀತಿಯಲ್ಲಿ ರೀಲ್ಸ್ ಚಿತ್ರೀಕರಿಸಿದ ಯುವತಿ ಹಾಗೂ ಹಿಟಾಚಿ ಚಾಲಕನ ವಿರುದ್ಧ ಈಗ ಕಾನೂನು ಕ್ರಮ ಜರುಗಿಸಲಾಗಿದೆ. ಘಟನೆಯ ವಿವರ​ಹನೂರು ತಾಲ್ಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಮಲೆ ಮಹದೇಶ್ವರ ಬೆಟ್ಟದ ‘ದೀಪದ ಒಡ್ಡು’ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅಲ್ಲಿರುವ ಮಾದಪ್ಪನ ಭವ್ಯ ಶಿಲಾಮೂರ್ತಿಯ ಬಳಿ ಹಿಟಾಚಿ (ಜೆಸಿಬಿ) ಯಂತ್ರದ ಬುಕ್ಕೆಟ್‌ನಲ್ಲಿ ಮಹಿಳೆಯೊಬ್ಬರನ್ನು ಕುಳ್ಳಿರಿಸಿ, ಪ್ರತಿಮೆಯ ಎತ್ತರದವರೆಗೆ…

Read More

ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಸಿಇಒ ಮೋನಾ ರೋತ್ ಅವರಿಂದ ಚಾಲನೆ

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿಚಾಮರಾಜನಗರ, ಡಿಸೆಂಬರ್ 21 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಇಂದು ಚಾಲನೆ ದೊರೆಯಿತು. ಚಾಮರಾಜನಗರ ತಾಲೂಕಿನ ವೆಂಕಟಯ್ಯನಛತ್ರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಲಾಗಿದ್ದ ಪಲ್ಸ್ ಪೋಲಿಯೋ ಉದ್ಘಾಟನಾ ಸಮಾರಂಭವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಗಿಡಕ್ಕೆ ನೀರೆರೆಯುವ ಮೂಲಕ ಚಾಲನೆ ನೀಡಿದರು. ಬಳಿಕ ಮೋನಾ ರೋತ್ ಅವರು ಮಕ್ಕಳಿಗೆ ಪೋಲಿಯೋ ಹನಿ ಹಾಕುವ…

Read More

ಕೊಟ್ಟ ಮಾತು ಉಳಿಸಿಕೊಂಡ ಎಚ್‌ಡಿಕೆ: ಕೆಟಿಎಸ್‌ ಶ್ಲಾಘನೆ

ಮಂಡ್ಯ: ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ನಗರದ ಮೈಷುಗರ್‌ ಶಾಲೆ ಅಭಿವೃದ್ಧಿ ಹಾಗೂ ಇಲ್ಲಿನ ಶಿಕ್ಷಕರಿಗೆ ವೇತನ ನೀಡುವ ಸಂಬಂಧ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಶ್ಲಾಘಿಸಿದರು. ನಗರದ ಮೈಷುಗರ್‌ ಶಾಲೆಯ ಶಿಕ್ಷಕರಿಗೆ ವೇತನದ ಸಂಬಳದ ಚೆಕ್‌ ವಿತರಣೆ ಮಾಡಿ ಅವರು ಮಾತನಾಡಿದ ಅವರು, ಮೈಷುಗರ್ ಪ್ರೌಢ ಶಾಲೆ ಶಿಕ್ಷಕರಿಗೆ ಹಾಗೂ ಐಟಿಐ ಶಿಕ್ಷಕರಿಗೆ ಹಾಗೂ ಶಿಕ್ಷಕರೇತರಿಗೆ ವೇತನವನ್ನು ಬಿಡುಗಡೆ ಮಾಡಿದ್ದಾರೆ, ಈ ಮೂಲಕ…

Read More

ಶಬ್ದ ನಿಯಂತ್ರಣ ನೀತಿಗೆ ಧಕ್ಕೆ: ಚಾಮರಾಜನಗರದಲ್ಲಿ ಮೈಕಾಸುರ ಅಬ್ಬರಕ್ಕೂ ಪೊಲೀಸರ ಮೌನ!

ವರದಿ: ರಾಮಸಮುದ್ರ ಎಸ್‌.ವೀರಭದ್ರಸ್ವಾಮಿ ಚಾಮರಾಜನಗರ: ಯಾವ್ದೆ ರಸ್ತೆ ಸಂಚಾರ ಅವ್ಯವಸ್ಥೆ ಉಂಟಾಗದಂತೆ ಪಾರ್ಕಿಂಗ್ ಹಾಗೂ ದ್ಚನಿವರ್ದಕಗಳ ನಿಯಮಗಳನ್ನೊಳಗೊಂಡ ನಂತರ ಕಾರ್ಯಕ್ರಮ ಆಯೋಜನೆಗಳಿಗೆ ಅನುಮತಿ ನೀಡಬೇಕು ಎಂಬ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿದೆ. ಇತ್ತೀಚೆಗೆ ಚಾಮರಾಜನಗರ ಪಟ್ಟಣದೊಳಗೆ ಅನುಮತಿಸತಕ್ಕ ಕಾರ್ಯಕ್ರಮಗಳಿಗೆ ಅತಿಥಿಗಳನ್ನ ಕರೆಯೋದು ಸಹಜ..ಕೆಲವರಂತು ಅವರವರ ಅನುಕೂಲಕ್ಕೆ ತಕ್ಕಂತೆ ಅತಿಥಿಗಳನ್ನ ಕರೆಯುವುದು,ಉದ್ಘಾಟಸುವುದು, ಸನ್ಮಾನ ಸ್ವೀಕರಿಸುವುದು ಸಾಮಾನ್ಯವಾಗಿದೆ. ಕಾರ್ಯಕ್ರಮಗಳಿಗೆ ಪೊಲೀಸ್ ವರೀಷ್ಟಾದಿಕಾರಿಗಳನ್ನ ಕರೆದರೆ ಪಾರ್ಕಿಂಗ್ ವ್ಯವಸ್ಥೆ ಸುಗಮವಾಗಿ ಉಚಿತವಾಗಿ ನೋಡಿಕೊಳ್ತಾರೆ ಅಂತ ಗಣ್ಯರಾಗಿ ಪರಿಗಣಿಸೋದು ಸಹಜವಾಗಿದೆ..ಅಂತ…

Read More

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಕ್ಕೆ ಮಹಿಳಾ ಆಯೋಗದ ಮನವಿ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಅಕ್ರಮ ಮದ್ಯ ಮಾರಾಟ ಹಾಗೂ ಮದ್ಯದ ವ್ಯಸನದಿಂದ ಕುಟುಂಬಗಳು ಬೀದಿಗೆ ಬರುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕದಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ರಾಜ್ಯ ಮಹಿಳಾ ಆಯೋಗವು ಸರ್ಕಾರವನ್ನು ಒತ್ತಾಯಿಸಿದೆ. ಈ ಕುರಿತು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮೀ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕೃತ ಪತ್ರ ಬರೆದು ಮನವಿ ಸಲ್ಲಿಸಿದ್ದಾರೆ. ​ಜಿಲ್ಲಾ ಪ್ರವಾಸದ ವೇಳೆ ಮಹಿಳೆಯರ ಅಳಲು​ಇತ್ತೀಚೆಗೆ ಅಧ್ಯಕ್ಷರು ಕಲಬುರಗಿ, ಶಿವಮೊಗ್ಗ, ಬೀದರ್‌, ತುಮಕೂರು ಮತ್ತು…

Read More

ನರೇಗಾ ಹೆಸರು ಬದಲಾವಣೆ ವಿರೋಧಿಸಿ ಸಿದ್ದರಾಮಯ್ಯ-ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಬೆಳಗಾವಿ: ಕೇಂದ್ರ ಸರ್ಕಾರ ನರೇಗಾ ಯೋಜನೆಯ ಹೆಸರಿನಿಂದ ಮಹಾತ್ಮ ಗಾಂಧಿಯ ಹೆಸರನ್ನು ತೆಗೆದುಹಾಕಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಬುಧವಾರ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಈ ಪ್ರತಿಭಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವ ವಹಿಸಿದರು. ಸುವರ್ಣ ಸೌಧದ ಗಾಂಧಿ ಪ್ರತಿಮೆ ಎದುರು ನಡೆದ ಈ ಪ್ರತಿಭಟನೆಯಲ್ಲಿ ಸಚಿವರು, ಶಾಸಕರು ಹಾಗೂ ವಿಧಾನ ಪಾರಿಷತ್ ಸದಸ್ಯರು ಪಾಲ್ಗೊಂಡರು. ಮಾಧ್ಯಮದವರೊಡನೆ ಮಾತನಾಡಿದ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರ ಹೇಳಿಕೆಯ ಪ್ರಕಾರ, ನರೇಗಾ ಯೋಜನೆ…

Read More

ಲೋಕಾಯುಕ್ತ ಬಲೆಗೆ ನಾಲ್ವರು ಸರ್ಕಾರಿ ಅಧಿಕಾರಿಗಳು: ₹18.20 ಕೋಟಿ ಅಕ್ರಮ ಆಸ್ತಿ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಸಮರ ಮುಂದುವರಿಸಿರುವ ಲೋಕಾಯುಕ್ತ ಪೊಲೀಸರು, ಮಂಗಳವಾರ ಮುಂಜಾನೆ ಏಕಕಾಲಕ್ಕೆ ನಾಲ್ವರು ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಅಂದಾಜು 18.20 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿಯನ್ನು ಪತ್ತೆಹಚ್ಚಿ ವಶಪಡಿಸಿಕೊಳ್ಳಲಾಗಿದೆ. ​ಮಂಡ್ಯ, ಧಾರವಾಡ, ಹೊಸಪೇಟೆ ಹಾಗೂ ಶಿವಮೊಗ್ಗದ ಲೋಕಾಯುಕ್ತ ಠಾಣೆಗಳಲ್ಲಿ ದಾಖಲಾಗಿದ್ದ ಅಕ್ರಮ ಆಸ್ತಿ ಗಳಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ. ಒಟ್ಟು 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ​ದಾಳಿಗೆ…

Read More
error: Content is protected !!