ದರ್ಶನ್ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್
ದರ್ಶನ್ ಜಾಮೀನು ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ನಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿದಂತೆ ಮತ್ತಿತರ ಆರೋಪಿಗಳು ಹೈಕೋರ್ಟ್ ನೀಡಿದ್ದ ಜಾಮೀನನ್ನು ಕರ್ನಾಟಕ ಸರ್ಕಾರ ಪ್ರಶ್ನಿಸಿತ್ತು. ಈ ಹಿನ್ನೆಲೆಯಲ್ಲಿ, 2025 ಆಗಸ್ಟ್ 14ರಂದು ಸುಪ್ರೀಂ ಕೋರ್ಟ್ ದರ್ಶನ್, ಪವಿತ್ರಾ ಗೌಡ ಹಾಗೂ ಮೂವರು ಸೇರಿದಂತೆ ಏಳೂ ಜನ ಆರೋಪಿಗಳ ಜಾಮೀನು ರದ್ದುಗೊಳಿಸಿ ಆದೇಶ ನೀಡಿದೆ. ಈ ತೀರ್ಪಿನಿಂದ ದರ್ಶನ್ ಮತ್ತು ಇತರ ಆರೋಪಿಗಳು ಜೈಲು ಸೇರಬೇಕಾಗಿದೆ.

