ಮುಷ್ಕರ ನಡೆಸಿದ ಸಾರಿಗೆ ಸಂಘಟನೆಗೆ ಹೈಕೋರ್ಟ್ ತರಾಟೆ
ಬೆಂಗಳೂರು, ಆಗಸ್ಟ್ 5: ಕರ್ನಾಟಕ ಹೈಕೋರ್ಟ್ ಖಡಕ್ ಎಚ್ಚರಿಕೆ ನೀಡಿದ ಬೆನ್ನಲ್ಲೇ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಸಾರಿಗೆ ನೌಕರರ ಮುಷ್ಕರವನ್ನು ಮುಂದೂಡಿದ್ದೇವೆ ಎಂದು ಘೋಷಿಸಿದ್ದಾರೆ. ಒಂದು ದಿನ ಮುಷ್ಕರ ಮುಂದೂಡುವಂತೆ ಹೈಕೋರ್ಟ್ ಸೂಚನೆ ನೀಡಿದ ನಂತರವೂ ಸಾರಿಗೆ ನೌಕರರು ಮಂಗಳವಾರ ಮುಷ್ಕರ ನಡೆಸಿದರು. ಇದರಿಂದ ಗರಂ ಆದ ಹೈಕೋರ್ಟ್, ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯನ್ನು ತರಾಟೆಗೆ ತೆಗೆದುಕೊಂಡಿತು. ಮುಷ್ಕರ ನಿಲ್ಲಿಸದಿದ್ದರೆ ನ್ಯಾಯಾಂಗ ನಿಂದನೆ…

