Headlines

ಐಶ್ವರ್ಯಗೌಡ ಚಿನ್ನ ವಂಚನೆ ಕೇಸ್: ಇ.ಡಿಯಿಂದ ಡಿ.ಕೆ ಸುರೇಶ್ ವಿಚಾರಣೆ

ಬೆಂಗಳೂರು, ಜುಲೈ 8: ಐಶ್ವರ್ಯಗೌಡ ಚಿನ್ನ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರನ್ನು ಕೇಂದ್ರ ಜಾರಿ ನಿರ್ದೇಶನಾಲಯ 2ನೇ ಬಾರಿಗೆ ವಿಚಾರಣೆಗೊಳಪಡಿಸಿದೆ. ಐಶ್ವರ್ಯಗೌಡ ಹಲವಾರು ಮಂದಿಗೆ ಚಿನ್ನ ವ್ಯಾಪಾರದ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಮಾಡಿದ್ದರು. ಈ ವೇಳೆ ಆಕೆ ತಾವು ಡಿ.ಕೆ.ಸುರೇಶ್‌ರವರ ಸಹೋದರಿ ಎಂದು ಹೇಳಿಕೊಂಡಿದ್ದರು. ನಟರೊಬ್ಬರು ಡಿ.ಕೆ.ಸುರೇಶ್‌ರವರ ಧ್ವನಿಯನ್ನು ಮಿಮಿಕ್ರಿ ಮಾಡಿ ಉದ್ಯಮಿಗಳ ಜೊತೆ ಮಾತನಾಡಿದ್ದರು. ಬಹುಕೋಟಿ ಹಗರಣವನ್ನು ವಿಚಾರಣೆ ನಡೆಸುತ್ತಿರುವ ಕೇಂದ್ರ ಜಾರಿ ನಿರ್ದೇಶನಾಲಯ ಡಿ.ಕೆ.ಸುರೇಶ್‌ರವರಿಗೆ ನೋಟಿಸ್ ನೀಡಿತ್ತು. ಕಳೆದ…

Read More

ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವರೊಂದಿಗೆ ಡಿಸಿಎಂ ಚರ್ಚೆ

ನವದೆಹಲಿ, ಜುಲೈ 8: ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದ್ರ ಪಾಟೀಲ್‌ರ ಜೊತೆ ಸಭೆಯ ಬಳಿಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ದೆಹಲಿಯಲ್ಲಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಹಿರಿಯ ಅಧಿಕಾರಿಗಳು ಹಾಗೂ ವಕೀಲರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಕೃಷಿ ಸಚಿವ ಚೆಲುವರಾಯಸ್ವಾಮಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ಗುಪ್ತ ಸೇರಿದಂತೆ ಹಿರಿಯ ಅಧಿಕಾರಿಗಳು, ವಕೀಲರು, ತಂತ್ರಜ್ಞರು ಸಭೆಯಲ್ಲಿ ಉಪಸ್ಥಿತರಿದ್ದರು.ಮೇಕೆದಾಟು, ಕಳಸಾ ಬಂಡೂರಿ, ಎತ್ತಿನಹೊಳೆ, ಕೃಷ್ಣಾ ಮೇಲ್ದಂಡೆ, ತುಂಗಭದ್ರಾ ಸೇರಿದಂತೆ ಹಲವಾರು ಯೋಜನೆಗಳ ಸ್ಥಿತಿಗತಿ ಹಾಗೂ ಕಾನೂನು ತೊಡಕುಗಳ…

Read More

ಜನೌಷಧ ಕೇಂದ್ರ ಸ್ಥಗಿತಕ್ಕೆ ಹೈಕೋರ್ಟ್ ತಡೆ, ರಾಜ್ಯಸರ್ಕಾರಕ್ಕೆ ಕಪಾಳಮೋಕ್ಷ!

ಬೆಂಗಳೂರು, ಜುಲೈ 8: ಕರ್ನಾಟಕದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ರಾಜ್ಯಸರ್ಕಾರ ಸ್ಥಗಿತಗೊಳಿಸಿತ್ತು. ಇದಕ್ಕೆ ಭಾರೀ ವಿರೋಧಗಳು ವ್ಯಕ್ತವಾಗಿದ್ದವು. ಅಲ್ಲದೇ ರಾಜ್ಯದ ಕಾಂಗ್ರೆಸ್ ಸರ್ಕಾರದ ಈ ಕ್ರಮ ಪ್ರಶ್ನಿಸಿ 16 ಜನರು ಹೈಕೋರ್ಟ್​ ಮೆಟ್ಟಿಲೇರಿದ್ದು, ಇಂದು (ಜುಲೈ 8) ಈ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಹೈಕೋರ್ಟ್ ಪೀಠ, ಮುಂದಿನ ವಿಚಾರಣೆವರೆಗೂ ಅರ್ಜಿದಾರರ…

Read More

ಲಾರಿ ಮುಷ್ಕರ ಹಿನ್ನೆಲೆ: ಅನ್ನಭಾಗ್ಯ ಆಹಾರಧಾನ್ಯ ಸಾಗಾಣಿಕೆ ಬಂದ್!

ಬೆಂಗಳೂರು, ಜುಲೈ 7: ಕಳೆದ 4 ತಿಂಗಳಿಂದ ರಾಜ್ಯಸರ್ಕಾರ ಪಡಿತರ ಆಹಾರಧಾನ್ಯ ಸಾಗಾಣಿಕೆ ವೆಚ್ಚ ನೀಡಿಲ್ಲ. 250 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. ಹೀಗಾಗಿ ಲಾರಿ ಮಾಲೀಕರು, ಚಾಲಕರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಆ ಮೂಲಕ ಈ ತಿಂಗಳ ಪಡಿತರ ವಿತರಣೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಈ ಬಗ್ಗೆ ಮಾತನಾಡಿರುವ ರಾಜ್ಯ ಲಾರಿ ಮಾಲೀಕರ ಸಂಘದ ರಾಜ್ಯಾಧ್ಯಕ್ಷ ವಿ‌.ಆರ್.ಷಣ್ಮುಗಪ್ಪ, ಇಂದಿನಿಂದ ಅನ್ನಭಾಗ್ಯ ಆಹಾರ ಧಾನ್ಯ ಸಾಗಾಣಿಕೆ ಬಂದ್ ಎಂದು ಸರ್ಕಾರಕ್ಕೆ ಶಾಕ್ ನೀಡಿದ್ದಾರೆ. ಈ ಬಗ್ಗೆ…

Read More

ಹುಲಿಕೆರೆ: ಆಕಸ್ಮಿಕ ಬೆಂಕಿ, ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಪೀಠೋಪಕರಣಗಳು ಭಸ್ಮ!

ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮವಾಗಿ ಮನೆಯಲ್ಲಿದ್ದ ಪೀಠೋಪಕರಣಗಳು ಸುಟ್ಟು ಬಸ್ಮವಾಗಿರುವ ಘಟನೆ ಶ್ರೀರಂಗಪಟ್ಟಣ ತಾಲೂಕು ಹುಲಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿನ್ನೆ ನಡೆದಿದೆ. ನಿನ್ನೆ ಬೆಳಗ್ಗೆ ಸುಮಾರು 9 ಗಂಟೆಯ ಸುಮಾರಿಗೆ ಹುಲಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ MNPM ಕಾಲೋನಿಯ ಶಿವಣ್ಣಚಾರ್ ರವರ ಮನೆಯಲ್ಲಿ ಸೌದೆ ಒಲೆಯಲ್ಲಿ ನೀರು ಕಾಯಿಸುತ್ತಿರುವಾಗ ಆಕಸ್ಮಿಕವಾಗಿ ಬೆಂಕಿಯು ಮನೆಯನ್ನು ಆವರಿಸಿ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಪೀಠೋಪಕರಣಗಳು ಸುಟ್ಟು ಬಸ್ಮಮಾಡಿದೆ ಹಾಗೂ ಮನೆಯ ಮೇಲ್ಚಾವಣಿಯು ಸಂಪೂರ್ಣ ಹಾನಿಯಾಗಿದೆ. ಬೆಂಕಿ ಕಂಡ ಸ್ಥಳೀಯರು ಬೆಂಕಿ…

Read More

ಕರ್ನಾಟಕದಲ್ಲಿ ಮುಂದುವರೆದ ಹೃದಯಾಘಾತದ ಮರಣಮೃದಂಗ: ಭಾನುವಾರ 8 ಸಾವು!

ಕರ್ನಾಟಕದಲ್ಲಿ ಹೃದಯಾಘಾತದಿಂದ ಸಾವಿಗೀಡಾಗುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇಂದು ಭಾನುವಾರ (ಜುಲೈ 6) ಒಂದೇ ದಿನ ಕರ್ನಾಟಕದಲ್ಲಿ ಹೃದಯಾಘಾತದಿಂದ 8 ಜನರು ಸಾವನ್ನಪ್ಪಿದ್ದಾರೆ.ಇದೇ ರೀತಿ ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಸಹ ತಲಾ ಇಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇನ್ನು, ಯಾದಗಿರಿ, ಧಾರವಾಡ ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತಲಾ ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಚಾಮರಾಜನಗರದ ರಾಮಸಮುದ್ರ ಹೌಸಿಂಗ್‌ಬೋರ್ಡ್ ಕಾಲೋನಿ ನಿವಾಸಿ ಶಿವಕುಮಾರ್‌‌ (52) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶಿವಕುಮಾರ್ ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ…

Read More

ಬೆಂಗಳೂರು ನೋಡಿ ನಗುತ್ತಿದ್ದ ಹೈದರಾಬಾದ್‌ಗೂ ಅದೇ ಸಮಸ್ಯೆ! ನಮ್ಮ ಕಷ್ಟ ಗೊತ್ತಾಯ್ತಾ ಎಂದ ಬೆಂಗಳೂರಿಗರು!

ಬೆಂಗಳೂರಿನಲ್ಲಿ ಕಳೆದ 10 ವರ್ಷಗಳಿಂದಲೂ ಟ್ರಾಫಿಕ್ ಜಾಮ್‌ ವಿಪರೀತ ಹೆಚ್ಚಳವಾಗಿದೆ. ಟ್ರಾಫಿಕ್‌ ಜಾಮ್‌ ಸಮಸ್ಯೆಯಿಂದ ಜನ ಹೈರಾಣಾಗಿದ್ದಾರೆ. ಬೆಂಗಳೂರಿನ ಟ್ರಾಫಿಕ್‌ ಜಾಮ್‌ ಸಮಸ್ಯೆಯ ಬಗ್ಗೆ ದಿನಕ್ಕೊಂದು ಟ್ರೋಲ್‌ಗಳು ಸೋಷಿಯಲ್‌ ಮೀಡಿಯಾದಲ್ಲಿ ಕಾಣಿಸಿಕೊಳ್ಳುವುದಿದೆ. ಬೆಂಗಳೂರಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ಟ್ರಾಫಿಕ್‌ ಜಾಮ್‌ ಹೆಚ್ಚಾಗುತ್ತಿದ್ದು. ಮೆಟ್ರೋ ಬಂದ ಮೇಲೂ ಟ್ರಾಫಿಕ್‌ ಜಾಮ್‌ನಲ್ಲಿ ಹೇಳಿಕೊಳ್ಳುವಂತಹ ಬದಲಾವಣೆ ಆಗಿಲ್ಲ. ಆದರೆ, ಬೆಂಗಳೂರಿನ ಬಗ್ಗೆ ಕಾಮಿಡಿ ಮಾಡುತ್ತಿದ್ದ ಜನರಿರುವ ನಗರಗಳಲ್ಲೂ ಇದೀಗ ನಿಧಾನವಾಗಿ ಟ್ರಾಫಿಕ್ ಜಾಮ್‌ ಹೆಚ್ಚಾಗಿದೆ. ಬೆಂಗಳೂರಿನ ಟ್ರಾಫಿಕ್‌ ಜಾಮ್ ಬಗ್ಗೆ ಕಾಮಿಡಿ ಮಾಡುತ್ತಿದ್ದ…

Read More
error: Content is protected !!