Headlines

ಖರ್ಗೆ ಹೇಳಿಕೆ ಬೆನ್ನಲ್ಲೇ ನಾಯಕತ್ವ ಬದಲಾವಣೆ ಚರ್ಚೆಗೆ ಫುಲ್ ಸ್ಟಾಪ್; ಗೃಹ ಸಚಿವರ ಮಹತ್ವದ ಪ್ರತಿಕ್ರಿಯೆ.

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕೇಳಿ ಬರುತ್ತಿದ್ದ ನಾಯಕತ್ವ ಬದಲಾವಣೆ ಚರ್ಚೆಗಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯು ಪೂರ್ಣವಿರಾಮ ಹಾಕಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದಿದ್ದಾರೆ. ​ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂಬ ಖರ್ಗೆಯವರ ಹೇಳಿಕೆಯನ್ನು ಸ್ವಾಗತಿಸಿದ ಸಚಿವರು, “ಖರ್ಗೆಯವರು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮತ್ತು ಅಪಾರ ಅನುಭವ ಹೊಂದಿರುವವರು. ಅವರ…

Read More

ಚಾಮರಾಜನಗರ: ಹೆಚ್ಚಿದ ರಸ್ತೆ ನಿಯಮ ಉಲ್ಲಂಘನೆ.!ಪೊಲೀಸರಿಂದಲೇ ಹೆಲ್ಮೆಟ್ ನಿಯಮ ಗಾಳಿಗೆ!

ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ. ಚಾಮರಾಜನಗರ: ಪಟ್ಟಣದಲ್ಲಿ ದಿನೆ ದಿನೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದೆ. ಅಪ್ರಾಪ್ತರಿಂದ ವಾಹನ ಚಾಲನೆ ಕೂಡ ಹೆಚ್ಚುತ್ತಿದೆ. ಅದರಲ್ಲೂ ಹೆಲ್ಮೆಟ್ ರಹಿತ ಚಾಲನೆ ಹೇಳತೀರದಂತಾಗಿದೆ. ಕಾನೂನು ಪಾಲೀಸಬೇಕಾದ ಪೊಲೀಸರೂ ಸಮವಸ್ತ್ರದಲ್ಲಿದ್ದರೂ ಹೆಲ್ಮೆಟ್ ಧರಿಸದೆ ಓಡಾಡೋದು ಸಾಮಾನ್ಯವಾಗಿದೆ. ಚಾಮರಾಜನಗರ ಅದೇಷ್ಪೊ ಪೊಲೀಸ್ ವರೀಷ್ಟಾದಿಕಾರಿಗಳು ಈಗಾಗಲೇ ಆದೇಶ ಹೊರಡಿಸಿದ್ದು ಕರ್ತವ್ಯ ಅವದಿಯಲ್ಲಿ ಹಾಗೂ ಖಾಸಗೀ ಅವದಿಯಲ್ಲೂ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವುದು.ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಇಲಾಖಾವಾರು ನಿಯಮ ತೆಗೆದುಕೊಳ್ಳಲಾಗುವುದು ಎಂದು ಆದೇಶ ಹೊರಡಿಸುತ್ತಲೆ ಇರ್ತಾರೆ ಆದರೆ ಕೆಲವರು…

Read More

​”ಯಾವ ರೀತಿ ಕ್ರಾಂತಿ ಆಗುತ್ತೋ ನೋಡೋಣ”: ಕಾಂಗ್ರೆಸ್ ಆಂತರಿಕ ಕಲಹಕ್ಕೆ ಕುತೂಹಲ ವ್ಯಕ್ತಪಡಿಸಿದ ಎಚ್‌ಡಿಕೆ.

ಮಾಲೂರು (ಕೋಲಾರ): ರಾಜ್ಯ ಸಚಿವ ಡಿ.ಸುಧಾಕರ್ ಅವರ ಆರೋಗ್ಯ ಸ್ಥಿತಿಯ ಕುರಿತು ರಾಜ್ಯ ಸರ್ಕಾರವು ತಕ್ಷಣವೇ ಸ್ಪಷ್ಟನೆಯನ್ನು ನೀಡಿ ವಾಸ್ತವಾಂಶವನ್ನು ಜನರ ಮುಂದೆ ತೆರೆದಿಡಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೋಮವಾರ ನಗರದಲ್ಲಿ ಒತ್ತಾಯಿಸಿದ್ದಾರೆ. ಸಚಿವರನ್ನು ನಂಬಿರುವ ಅಭಿಮಾನಿಗಳು ಮತ್ತು ಕ್ಷೇತ್ರದ ಜನರ ಆತಂಕವನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕಿದೆ ಎಂದು ಅವರು ತಿಳಿಸಿದರು. ​ಇದೇ ವೇಳೆ, ಹೆಬ್ಬಟ್ಟಿನ ಗುರುತು ಮತ್ತು ದುರುಪಯೋಗದ ಕುರಿತಾದ ತಮ್ಮ ಹಿಂದಿನ ಹೇಳಿಕೆಗಳ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಕೆಲ ದುರ್ಬುದ್ಧಿಯ…

Read More

ಪಾಲಿಕೆ ಸಮರಕ್ಕೆ ಮುಹೂರ್ತ ಫಿಕ್ಸ್: ಸರ್ಕಾರದ ‘ಮುಂದೂಡಿಕೆ’ ಪ್ಲಾನ್‌ಗೆ ಆಯೋಗದ ಬ್ರೇಕ್!

ಬೆಂಗಳೂರು: ಗ್ರೇಟರ್ ಬೆಂಗಳೂರು ವ್ಯಾಪ್ತಿಯ 5 ಮಹಾನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಚುನಾವಣೆ ಆಯೋಗದ ನಡುವೆ ಈಗ ನೇರ ಹಣಾಹಣಿ ಶುರುವಾಗಿದೆ. ಮಾನ್ಯ ಸುಪ್ರೀಂ ಕೋರ್ಟ್ ನೀಡಿರುವ ಗಡುವಿನಂತೆ ಜೂನ್ 30, 2026 ರೊಳಗೆ ಚುನಾವಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಆಯೋಗವು ಪಣತೊಟ್ಟಿದ್ದು, ಈ ಬಗ್ಗೆ ಇಂದು ಅಧಿಕೃತ ಪ್ರಕಟಣೆ ಹೊರಡಿಸಿದೆ. ​ವಾಸ್ತವದಲ್ಲಿ, ರಾಜ್ಯ ಸರ್ಕಾರವು ಜನಗಣತಿ ಕಾರ್ಯ ಮತ್ತು ಶೈಕ್ಷಣಿಕ ಪರೀಕ್ಷೆಗಳ ನೆಪವೊಡ್ಡಿ ಚುನಾವಣೆಯನ್ನು ಸೆಪ್ಟೆಂಬರ್ ಅಂತ್ಯದವರೆಗೆ ಮುಂದೂಡುವಂತೆ ಆಯೋಗಕ್ಕೆ ಮನವಿ ಮಾಡಿತ್ತು….

Read More

ಹುಲಿಕೆರೆ ಪಿಡಿಓ ಸೀನನ ಡೀಲ್ ಗೆ ಬಗ್ಗಿದ ಶ್ರೀರಂಗಪಟ್ಟಣ ಎಂಎಲ್ಎ!?

ಅಕ್ರಮಗಳ ಸರದಾರ ಹುಲಿಕೆರೆ ಪಂಚಾಯಿತಿ ಪಿಡಿಒ ಶ್ರೀನಿವಾಸನ ಆರ್ಭಟದ ಮುಂದೆ ಎಂಎಲ್ಎ ರಮೇಶ್ ಬಂಡಿಸಿದ್ದೇಗೌಡ್ರು ಬಂಡಿ ಬಿಡಬೇಕಷ್ಟೇ.ಸೀನನ ಎಂಜಲು ಕಾಸಿಗೆ ಕೈ ಒಡ್ಡಿ ಮೂರು ಕಾಸಿನ ಮರ್ಯಾದೆಯೂ ಇಲ್ಲದಂತೆ ಮಾಡಿಕೊಂಡ ರಮೇಶ್ ಬಂಡಿಸಿದ್ದೇಗೌಡ್ರು, ಶಾಸಕನಾಗಿ ಜನತೆಯ ಹಿತ ಕಾಯಬೇಕಾದ ರಮೇಶ್ ಬಂಡಿಸಿದ್ದೇಗೌಡ ಎಂಬ ನಾಲಾಯಕ್ ವ್ಯಕ್ತಿ ಒಬ್ಬನನ್ನು ಗೆಲ್ಲಿಸಿದ ತಪ್ಪಿಗಾಗಿ ಇಡೀ ಶ್ರೀರಂಗಪಟ್ಟಣ ತಾಲೂಕಿನ ಜನತೆ ತಮ್ಮ ನಟಿಕೆ ಮುರಿಯುತ್ತಾ ಶಾಪ ಹಾಕುತ್ತಿದ್ದಾರೆ. ಇವನ ಧನದಾಹಕ್ಕೆ ಸಾಲು ಸಾಲು ಅಕ್ರಮ ನಡೆದರು ಇವನೇ ಮುಚ್ಚಿ ಹಾಕುತ್ತಿದ್ದಾನೆ. ಒಂದು…

Read More

​ಬೂದನೂರು ಭೂ ಹಗರಣ: ಸರ್ಕಾರಿ ರಸ್ತೆಯನ್ನೇ ನುಂಗಿ 41 ಲಕ್ಷ ಲಪಟಾಯಿಸಿದ ‘ಕಿಲಾಡಿ’ಗಳು!

ಭ್ರಷ್ಟ ಪಿಡಿಒಗೆ ಸಂಕಷ್ಟ! ಶಿಸ್ತು ಕ್ರಮಕ್ಕೆ ಮಂಡ್ಯ ಸಿಇಒಗೆ ಜಿಲ್ಲಾಧಿಕಾರಿಗಳ ಸೂಚನೆ. ಮಂಡ್ಯ ಜಿಲ್ಲೆಯ ಬೂದನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ರಾಷ್ಟ್ರೀಯ ಹೆದ್ದಾರಿ ಭೂಸ್ವಾಧೀನ ಪ್ರಕ್ರಿಯೆಯ ಬೃಹತ್ ಹಗರಣವೊಂದು ಈಗ ಬಯಲಿಗೆ ಬಂದಿದ್ದು, ಜಿಲ್ಲಾಡಳಿತದ ಕಟ್ಟುನಿಟ್ಟಿನ ಕ್ರಮಕ್ಕೆ ಸಾಕ್ಷಿಯಾಗಿದೆ. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ (NH-275) ನಿರ್ಮಾಣದ ಸಂದರ್ಭದಲ್ಲಿ ಸಾರ್ವಜನಿಕ ಬಳಕೆಗೆ ಮೀಸಲಾಗಿದ್ದ ರಸ್ತೆಯನ್ನೇ ಖಾಸಗಿ ಆಸ್ತಿ ಎಂದು ಬಿಂಬಿಸಿ, ಲಕ್ಷಾಂತರ ರೂಪಾಯಿ ಪರಿಹಾರ ಪಡೆದಿರುವುದು ತನಿಖೆಯಿಂದ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ….

Read More

ಸಕಲೇಶಪುರ: ಅನಾಥ ವೃದ್ಧೆಗೆ ಆಶ್ರಯ ಕಲ್ಪಿಸಿ ಮಾನವೀಯತೆ ಮೆರೆದ ಸೈಯದ್ ಇದ್ರೀಸ್

ಸಕಲೇಶಪುರ ನಗರದ ಮಹೇಶ್ವರಿ ನಗರದಲ್ಲಿ ಕಳೆದ ಕೆಲವು ದಿನಗಳಿಂದ ಅತಂತ್ರ ಸ್ಥಿತಿಯಲ್ಲಿ ರಸ್ತೆ ಬದಿಯೇ ವಾಸವಾಗಿದ್ದ 65 ವರ್ಷದ ವೃದ್ಧೆ ನಂಜಮ್ಮ ಅವರಿಗೆ ಸಾಮಾಜಿಕ ಕಾರ್ಯಕರ್ತ ಸೈಯದ್ ಇದ್ರೀಸ್ ಅವರು ಆಸರೆಯಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ​ವಯೋವೃದ್ಧ ಮಹಿಳೆಯೊಬ್ಬರು ರಸ್ತೆ ಬದಿಯಲ್ಲಿ ಸಂಕಷ್ಟಕರ ಪರಿಸ್ಥಿತಿಯಲ್ಲಿ ದಿನದೂಡುತ್ತಿದ್ದಾರೆ ಎಂಬ ಮಾಹಿತಿಯನ್ನು ಸ್ಥಳೀಯರಾದ ಪ್ರೇಮ ಅವರು ದೂರವಾಣಿ ಮೂಲಕ ಸೈಯದ್ ಇದ್ರೀಸ್ ಅವರ ಗಮನಕ್ಕೆ ತಂದಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಕಾರ್ಯಪ್ರವೃತ್ತರಾದ ಇದ್ರೀಸ್, ತಮ್ಮ ಸ್ನೇಹಿತ ಹಾಗೂ ಫಾತಿಮಾ ಮಸ್ಜಿದ್ ಅಧ್ಯಕ್ಷರಾದ…

Read More

ಎಚ್‌ಡಿಕೆ vs ಎಂ. ಚಂದ್ರಶೇಖರ್ ಜಟಾಪಟಿ: ಹೈಕೋರ್ಟ್ ಮಧ್ಯಸ್ಥಿಕೆಯಲ್ಲಿ ರಾಜಿ ಸಂಧಾನಕ್ಕೆ ಮುಹೂರ್ತ ಫಿಕ್ಸ್!

ಬೆಂಗಳೂರು, ಏಪ್ರಿಲ್ 02: ಲೋಕಾಯುಕ್ತ ಎಡಿಜಿಪಿ ಮತ್ತು ಎಸ್‌ಐಟಿ ಮುಖ್ಯಸ್ಥ ಎಂ.ಚಂದ್ರಶೇಖರ್ ಮತ್ತು ಅವರ ಕುಟುಂಬದ ಮೇಲೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆದರಿಕೆ ಹಾಕಿರುವ ಪ್ರಕರಣವು ರಾಜಿ ಸಂಧಾನ ಹಂತಕ್ಕೆ ಬಂದು ನಿಂತಿದೆ. ಹೈಕೋರ್ಟ್ ನ್ಯಾಯಾಧೀಶರ ಸಲಹೆಯಂತೆ ಇಬ್ಬರ ಪರ ವಕೀಲರು ರಾಜಿ ಮಾತುಕತೆಗೆ ಒಪ್ಪಿದ್ದು, ಮಧ್ಯಸ್ಥಿಕೆದಾರರ ನೇಮಕ ಮತ್ತು ಸಭೆ ದಿನಾಂಕವನ್ನು ಏಪ್ರಿಲ್ 30ಕ್ಕೆ ನಿಗದಿ ಮಾಡಲಾಗಿದೆ. ಐಪಿಎಸ್ ಅಧಿಕಾರಿ ಚಂದ್ರಶೇಖರ್ ಅವರು ಸಾಯಿ ಮಿನರಲ್ಸ್‌ ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡುವ ಸಂದರ್ಭದಲ್ಲಿ ನಿಯಮ…

Read More

ಕರ್ನಾಟಕ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಎಫ್‌ಐಆರ್ ದಾಖಲು

​ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆಯ ಘನತೆಗೆ ಕುಂದು ತರುವಂತಹ ಘಟನೆಯೊಂದು ರಾಜಧಾನಿಯಲ್ಲಿ ಬೆಳಕಿಗೆ ಬಂದಿದೆ. ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್‌ನ ರಿಜಿಸ್ಟ್ರಾರ್ ಮಲ್ಲು ಎಂಬುವವರು ತಮ್ಮದೇ ಕಚೇರಿಯ ಮಹಿಳಾ ಸಿಬ್ಬಂದಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಗಂಭೀರ ಆರೋಪ ಎದುರಿಸುತ್ತಿದ್ದಾರೆ. ​ಘಟನೆಯ ಹಿನ್ನೆಲೆ: ​ಗಾಂಧೀನಗರದಲ್ಲಿರುವ ನರ್ಸಿಂಗ್ ಕೌನ್ಸಿಲ್ ಕಚೇರಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಕೆಲಸದ ನೆಪದಲ್ಲಿ ಸಂತ್ರಸ್ತೆಯ ಬಳಿ ಬಂದ ಆರೋಪಿ, ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕವಾಗಿ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ….

Read More

ಇಂದಿರಾ ಕ್ಯಾಂಟಿನ್ ಆವರಿಸಿದ ಒಳಚರಂಡಿ ನೀರು.!

ವರದಿ: ರಾಮಸಮುದ್ರ ಎಸ್. ವೀರಭದ್ರಸ್ವಾಮಿಚಾಮರಾಜನಗರ : ಜಿಲ್ಲಾಡಳಿತ ಸಮೀಪವಿರುವ ಇಂದಿರಾ ಕ್ಯಾಂಟಿನ್ ಗೆ ಮಳೆ ನೀರು, ಒಳಚರಂಡಿ ನೀರಿನಿಂದ ಜಲಾವೃತಗೊಂಡ ಪರಿಣಾಮ: ೨-೩ ದಿನ‌‌‌ ಕ್ಯಾಂಟಿನ್ ಬಂದ್‌ ಮಾಡಲಾಗಿದೆ. ಕೂಲಿಕಾರ್ಮಿಕರು, ಸಾರ್ವಜನಿಕರು. ವಿದ್ಯಾರ್ಥಿಗಳಿಗೆ ಕಡಿಮೆದರದಲ್ಲಿ‌ ಉಪಹಾರ ಒದಗಿಸುವ ಕಾಂಗ್ರೆಸ್ ಸರ್ಕಾರದ‌ ಮಹತ್ವದ ಯೋಜನೆ ಇಂದಿರಾ ಕ್ಯಾಂಟೀನ್ ಸಿಎಂ ಸಿದ್ದರಾಮಯ್ಯ 2013 ರಲ್ಲಿ ಸಿಎಂ ಆಗಿದ್ದಾಗ ಚಾಮರಾಜನಗರ ಸೇರಿದಂತೆ ರಾಜ್ಯದ ಹಲಜಿಲ್ಲೆಗಳಲ್ಲಿ ಆರಂಭಿಸಿದ್ಷರು. ದುರಂತ ಎಂದರೆ‌ ಸಿಎಂ‌ ತವರು ಜಿಲ್ಲೆಯಿಂದ 60 ಕಿಮೀ‌ ಗಡಿಜಿಲ್ಲಾ ಕೇಂದ್ರದಲ್ಲಿನ ಇಂದಿರಾ ಕ್ಯಾಂಟಿನ್…

Read More
error: Content is protected !!