Headlines

ನಕಲಿ ನಂದಿನಿ ತುಪ್ಪ ತಯಾರಿಕಾ ಜಾಲ ಭೇದಿಸಿದ ಸಿಸಿಬಿ ಪೊಲೀಸರು: ನಾಲ್ವರು ಅರೆಸ್ಟ್

ಬೆಂಗಳೂರು,ನ.15: ಕೆಎಂಎಫ್ ನ‌ ಜನಪ್ರಿಯ ಬ್ರಾಂಡ್ ನಂದಿನಿ ತುಪ್ಪವನ್ನು ನಕಲಿ ಮಾಡುತ್ತಿದ್ದ ಜಾಲವೊಂದನ್ನು ಬೇಧಿಸಿರುವ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಹೊರ ರಾಜ್ಯದಲ್ಲಿ ಕಲಬೆರೆಕೆ ತುಪ್ಪವನ್ನು ತಯಾರಿಸಿ ನಕಲಿ ನಂದಿನಿ ಬ್ರಾಂಡ್‌ನ ಸ್ಯಾಚೆಟ್‌ ಮತ್ತು ಪ್ಲಾಸ್ಟಿಕ್‌ ಬಾಟಲಿಗಳಲ್ಲಿ ತುಂಬಿ ಬೆಂಗಳೂರು ನಗರದಾದ್ಯಂತ ಮಾರಾಟ ಮಾಡುತ್ತಿದ್ದರು.ಈ ಬೃಹತ್‌ ಜಾಲದ ಬೆನ್ನು ಹತ್ತಿತ ಪೊಲೀಸರು ನಾಲ್ವರನ್ನು ಬಂಧಿಸುವ ಜೊತೆಗೆ 1,26,95,200 ರೂ. ವೌಲ್ಯದ 8136 ಲೀಟರ್‌ ನಂದಿನಿ ಬ್ರಾಂಡ್‌ನ ಕಲಬೆರೆಕೆ ತುಪ್ಪ ಹಾಗೂ ಸರಬರಾಜು ಮಾಡುತ್ತಿದ್ದ 4 ವಾಹನಗಳನ್ನು ವಶ…

Read More

ಪಾರದರ್ಶಕ ಆಡಳಿತಕ್ಕಾಗಿ ಮಾಹಿತಿ ಹಕ್ಕು ಕಾಯ್ದೆ ಪರಿಣಾಮಕಾರಿಯಾಗಿ ಜಾರಿಯಾಗಬೇಕು: ಆಯುಕ್ತ ಬದ್ರುದ್ದೀನ್, ಹರೀಶ್ ಕುಮಾರ್

ಚಾಮರಾಜನಗರ, ನವೆಂಬರ್ 15 :- ಉನ್ನತ ಅಧಿಕಾರಸ್ಥರಿಂದ ಹಿಡಿದು ಗ್ರಾಮ ಪಂಚಾಯಿತಿ ವರೆಗಿನ ಎಲ್ಲ ಸಾರ್ವಜನಿಕ ಪ್ರಾಧಿಕಾರಗಳು ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಗೆ ಬರಲಿವೆ. ಹೀಗಾಗಿ ಮಾಹಿತಿ ಹಕ್ಕಿನಡಿ ಕೇಳಲಾಗುವ ಯಾವುದೇ ಅರ್ಜಿಯನ್ನು ನಿರ್ಲಕ್ಷ್ಯ ಮಾಡದೆ ಕಾಲಮಿತಿಯೊಳಗೆ ವಿಲೇವಾರಿ ಮಾಡುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಎಂದು ಮಾಹಿತಿ ಆಯುಕ್ತರಾದ ಡಾ. ಹರೀಶ್ ಕುಮಾರ್ ಹಾಗೂ ಕೆ. ಬದ್ರುದ್ದೀನ್ ಅವರು ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಸಾರ್ವಜನಿಕ ಮಾಹಿತಿ…

Read More

ಮಂಡ್ಯ ತಾಲ್ಲೂಕಿನಲ್ಲಿ ಶಾಲಾ ಫಲಿತಾಂಶ ಸುಧಾರಣೆ, ಆರೋಗ್ಯ-ಕೃಷಿ-ಪ್ರಾಣಿ ಸಂಪನ್ಮೂಲ ಅಭಿವೃದ್ಧಿಗೆ ಶಾಸಕ ಪಿ. ರವಿಕುಮಾರ್ ಸೂಚನೆ

ಮಂಡ್ಯ.ನ.18:- ಮಂಡ್ಯ ತಾಲ್ಲೂಕು ವ್ಯಾಪ್ತಿಯ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶ ವೃದ್ಧಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ ರವಿಕುಮಾರ್ ಅವರು ಹೇಳಿದರು. ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕೆ.ಡಿ.ಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮಂಡ್ಯ ತಾಲ್ಲೂಕು ವ್ಯಾಪ್ತಿಯ ಕೆಲವು ಆಸ್ಪತ್ರೆಗಳಲ್ಲಿ ವೈದ್ಯರು ರಾತ್ರಿ ವೇಳೆಯಲ್ಲಿ ಇರುವುದಿಲ್ಲವೆಂದು ದೂರು ಕೇಳಿ ಬರುತ್ತಿವೆ ಎಲ್ಲಾ ಆಸ್ಪತ್ರೆಗಳಲ್ಲೂ…

Read More

ಬೆಂಗಳೂರಿನಲ್ಲಿ ಹಾಡಹಗಲೇ ಎಟಿಎಂ ವಾಹನ ಹೈಜಾಕ್, 7.11 ಕೋಟಿ ರೂ. ದರೋಡೆ!

ಬೆಂಗಳೂರು, ನ.19 : ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂಪಾಯಿ ದರೋಡೆಯಾಗಿರುವ ಘಟನೆ ನಡೆದಿದೆ. ಇಂದು (ನವೆಂಬರ್ 19) ಮಧ್ಯಾಹ್ನ ಇನ್ನೋವಾ ಕಾರಿನಲ್ಲಿ ಬಂದ ಗ್ಯಾಂಗ್, ಎಟಿಎಂಗೆ ಹಣ ಹಾಕಲು ಹೊರಟಿದ್ದ ವಾಹನ ತಡೆದು ಬರೋಬ್ಬರಿ 7.11 ಕೋಟಿ ರೂ ದೋಚಿಕೊಂಡು ಪರಾರಿಯಾಗಿದೆ. ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂ ಕಡೆ ಹೊರಟಿದ್ದ ಹಣ ಇದ್ದ ವಾಹನವನ್ನು ಜಯದೇವ ಡೇರಿ ಸರ್ಕಲ್‌ ಬಳಿ ತಡೆದು ಹಣ ದೋಚಿಕೊಂಡು ಎಸ್ಕೇಪ್ ಆಗಿದೆ. ಸೌತ್ ಎಂಡ್ ಸರ್ಕಲ್ ಬಳಿಯ…

Read More

ಶಬರಿಮಲೆ ಯಾತ್ರಿಕರೇ ಎಚ್ಚರವಹಿಸಿ ಮಿದುಳು ತಿನ್ನುವ ಅಮೀಬಾ (ನೇಗ್ಲೇ ರಿಯಾ ಫೌಲೇರಿ) ಕುರಿತು ಆರೋಗ್ಯ ಸಚಿವಾಲಯದಿಂದ ಸುರಕ್ಷತಾ ಸಲಹಾ ಮಾರ್ಗಸೂಚಿ

ಮಂಡ್ಯ.ನ.19.(ಕರ್ನಾಟಕ ವಾರ್ತೆ):-ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿ  (Naegleria fowleri) ಇಂದ ಉಂಟಾಗುವ ಅಮೀಬಿಕ್ಮೆ ನಿಂಗೊಎನ್ಸೆಫಲೈಟಿಸ್  (Amoebic meningoencephalitis)  ಪ್ರಕರಣಗಳು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಶಬರಿಮಲೆ ಹೊರಡುವಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ, ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಮತ್ತು ಸುರಕ್ಷಿತಾ ಕ್ರಮಗಳನ್ನು ಪಾಲಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಸಲಹೆಗಳನ್ನು ನೀಡಿದೆ. 1. ನೇಗ್ಲೇರಿಯಾ ಫೌಲೇರಿ ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು…

Read More

ಚಾಮರಾಜನಗರ ಮೂಢನಂಬಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು: “ನನ್ನ ಅಧಿಕಾರ ಭದ್ರ”

ಚಾಮರಾಜನಗರ, ನವೆಂಬರ್ 20: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಐದು ವರ್ಷಗಳಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಾಮರಾಜನಗರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೂಢನಂಬಿಕೆ ಮತ್ತು ಕಂದಾಚಾರಗಳಲ್ಲಿ ನಂಬುವುದಿಲ್ಲವಾದ್ದರಿಂದ ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುತ್ತೇನೆ. ರಾಜ್ಯದ ಎಲ್ಲ ಜಿಲ್ಲೆಗಳನ್ನೂ ಸಮಾನವಾಗಿ ಕಂಡು, ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಆ ಮೌಢ್ಯವನ್ನು ಹೋಗಲಾಡಿಸಲು ಇಲ್ಲಿಗೆ…

Read More

ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ : ಸಿ.ಎಂ.ಸಿದ್ದರಾಮಯ್ಯ

ಚಾಮರಾಜನಗರ ನ 20: ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯ್ತಿ, ಒಂದು ಸಹಕಾರ ಸಂಘ ಅತ್ಯಗತ್ಯ ಎನ್ನುವುದು ನೆಹರೂ ಅವರ ದೃಷ್ಟಿಯಾಗಿತ್ತು. ಇವರ ಈ ದೂರದೃಷ್ಟಿಯ ಕಾರಣಕ್ಕೆ ದೇಶದಲ್ಲಿ ಸಹಕಾರ ಚಳವಳಿ ಗಟ್ಟಿಯಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ, ಸಮಾರೋಪ ಮಾತುಗಳನ್ನಾಡಿದರು. ನೆಹರೂ ಅವರ ಈ ದೂರದೃಷ್ಟಿ ಕಾರಣಕ್ಕೆ ಅವರ ಜನ್ಮ ದಿನದಂದೇ ಪ್ರತೀ ವರ್ಷ ಸಹಕಾರ ಸಪ್ತಾಹ…

Read More

ಪೊಲೀಸ್ ಸಿಬ್ಬಂದಿ ವಿರುದ್ಧ ದಂಧೆಕೋರರಿಗೆ ಬೆಂಬಲ ಆರೋಪ: ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

ಮಂಡ್ಯ: ಜಿಲ್ಲೆಯಲ್ಲಿ ಅಪರಾಧ, ಜೂಜಾಟ, ಐಪಿಎಲ್ ದಂಧೆ ನಿಗ್ರಹ ಮತ್ತು ಮಾದಕ ವಸ್ತು ಸೇವನೆ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ನಡೆಸಿ ಎಸ್ಪಿಗೆ ಮನವಿ ಸಲ್ಲಿಸಿದರು.ಜಿಲ್ಲೆಯಲ್ಲಿ ಅಪರಾಧ, ಜೂಜಾಟ, ಐಪಿಎಲ್ ದಂಧೆ ನಿಗ್ರಹ ಮತ್ತು ಮಾದಕ ವಸ್ತು ಸೇವನೆ ವಿರುದ್ಧ ಕೆಲ ದಿನಗಳ ಹಿಂದೆ ತಮ್ಮ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಕ್ರಮಕ್ಕೆ ಆಗ್ರಹಿಸಲಾಗಿತ್ತು. ಕೆಲ ದಿನಗಳ ಕಾಲ ಕಟ್ಟುನಿಟ್ಟಿನ ಕ್ರಮ ವಹಿಸಿದಂತೆ ತೋರಿದರೂ ಬಳಿಕ ಮತ್ತೆ ಎಲ್ಲ ಕಾನೂನುಬಾಹಿರ ಕೃತ್ಯಗಳು…

Read More

ಸುಳ್ಳು ಪ್ರಕರಣ ದಾಖಲಿಸಿದವರ ವಿರುದ್ದ ರೊಚ್ಚಿಗೆದ್ದ ಗ್ರಾಮಸ್ಥರು! ಎಸ್ಪಿ ಕಛೇರಿ ಮುತ್ತಿಗೆ, ಮುಖ್ಯದ್ವಾರದಲ್ಲೆ ಬಂದೂಬಸ್ತ್

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ವೀರನಪುರ ಗ್ರಾಮ ಸಭೆಯಲ್ಲಿ ಅಶಾಂತಿ ಮೂಡಿಸಿ, ಜಾತಿ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ 17 ಮಂದಿಯ ಮೇಲೆ ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ರೊಚ್ಚಿಗೆದ್ದ ಎಲ್ಲ ಸಮುದಾಯದವರು ಎಸ್ಪಿ ಕಚೇರಿ ಮುತ್ತಿಗೆ ಹಾಕಲು ಬಂದಿದ್ದ ಘಟನೆ ಇಂದು ನಡೆದಿದೆ‌.ಗುಂಡ್ಲುಪೇಟೆ ತಾಲ್ಲೂಕಿನ ವೀರನಪುರ ಗ್ರಾಮದ ಶಿವಕುಮಾರ್ ನೀಡಿದ ದೂರಿನನ್ವಯ ಗುಂಡ್ಲುಪೇಟೆ ಪೊಲೀಸರು ವೀರನಪುರ ಗ್ರಾಮದ 17 ಮಂದಿಯ ಮೇಲೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಪ್ರಕರಣ…

Read More

ರಾಷ್ಟ್ರೀಯ ಸ್ವಯಂಸೇವಕರಿಂದ ಆಕರ್ಷಕ ಪಥಸಂಚಲನ

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ: ರಾಷ್ಟ್ರೀಯ ಸ್ವಯಂಸೇವಕರ ಸಂಘ(ಆರ್‌ಎಸ್‌ಎಸ್) ವತಿಯಿಂದ ವಿಜಯದಶಮಿ ಉತ್ಸವದ ಅಂಗವಾಗಿ ನಗರದಲ್ಲಿ ಆಕರ್ಷಕ ಪಥಸಂಚಲನ ಕಾರ್ಯಕ್ರಮ ಇಂದು ಜರುಗಿತು. ನಗರದ ಚಾಮರಾಜೇಶ್ವರ ದೇವಾಲಯದ ಆವರಣದಿಂದ ಆರಂಭವಾದ ಪಥಸಂಚಲನ ನಗರದ ಪ್ರಮುಖರ ಬೀದಿಗಳಲ್ಲಿ ಹಾಗೂ ವೃತ್ತಗಳಲ್ಲಿ ಸಂಚರಿಸಿ ನೋಡುಗರ ಗಮನ ಸೆಳೆಯಿತು. ನಗರದ ಪ್ರಮುಖ ವೃತ್ತಗಳಲ್ಲಿ ಹಾಗೂ ಪ್ರಮುಖ ಬೀದಿಗಳಲ್ಲಿ ಕಟ್ಟಿದ್ದ ಭಗವಾ ಧ್ವಜ, ಕೇಸರಿ ತೋರಣಗಳು, ಹಾಗೂ ವಿಶೆಷವಾಗಿ ಮನೆಗಳ ಮುಂದೆ ಪಥ ಸಂಚಲನಕ್ಕಾಗಿ ಹಾಕಲಾಗಿದ್ದ ರಂಗೋಲಿಗಳು ಜನರನ್ನು ಮತ್ತಷ್ಟು ಆಕರ್ಷಿಸುತ್ತಿದ್ದವು. 450ಕ್ಕೂ…

Read More
error: Content is protected !!