Headlines

ಲೋಕಾ ಬಲೆಗೆ ಸಂಚಾರಿ ಠಾಣೆ ಮುಖ್ಯಪೇದೆ

ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ.ಚಾಮರಾಜನಗರ: ಜಪ್ತಿಯಾದ ವಾಹನ ಬಿಡಿಸಿಕೊಳ್ಳಲು ಲಂಚದ ಬೇಡಿಕೆ ಇಟ್ಟಿದ್ದ ಮುಖ್ಯಪೇದೆ ಲೋಕಾಯುಕ್ತರು ಬೀಸಿದ ಬಲೆಗೆ ಬಲಿಯಾಗಿದ್ದಾರೆಚಾಮರಾಜನಗರ ಸಂಚಾರಿ ಠಾಣೆಯ ಮುಖ್ಯಪೇದೆ ಮಲ್ಲು ಎಂಬುವವರೆ ಲೋಕ ಬಲೆಗೆ ಬಿದ್ದ ಪೇದೆಯಾಗಿದ್ದಾರೆ. ಬಂಡಿಗೆರೆ ಗ್ರಾಮದ ದೂರುದಾರರೊಬ್ಬರು ಜಪ್ತಿಯಾಗಿದ್ದ ವಾಹನವನ್ನ ನ್ಯಾಯಾಲಯದ ಆದೇಶ ಮೇರೆಗೆ ವಾಹನ ಬಿಡಿಸಿಕೊಳ್ಳಲು ಮೂರು ಸಾವಿರ ಲಂಚದ ಬೇಡಿಕೆಯನ್ನ ಮುಖ್ಯಪೇದೆ ಮಲ್ಲು ಇಟ್ಟಿದ್ದರು ಎನ್ನಲಾಗಿದೆ. ದೂರುದಾರರ ಮೇರೆಗೆ ಸಂಚಾರಿ ಠಾಣೆಯಲ್ಲೆ ಹಣ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಸ್ಪಿ ಹಾಗೂ ಸಿಬ್ಬಂದಿಗಳು ದಾಳಿ ಕಾರ್ಯದಲ್ಲಿ ಭಾಗವಹಿಸಿದ್ದರು….

Read More

​ಕಲಿತ ಮಠದಲ್ಲೇ ಕೃತಿ ಲೋಕಾರ್ಪಣೆ: ಶಿಕ್ಷಕ ಮುತ್ತು ವಡ್ಡರ ಅವರ ‘ಸನ್ಮಾರ್ಗದ ದುಂಬಿ’ ಬಿಡುಗಡೆ

ತುಮಕೂರಿನ ಸಿದ್ಧಗಂಗಾ ಮಠದ ಪರಮಪೂಜ್ಯ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಯ ಮುಂಭಾಗ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಾಗಿ ಗ್ರಾಮದ ಹಾಗೂ ಪ್ರಸ್ತುತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿರೇಮಳಗಾವಿಯ ಗಣಿತ ಶಿಕ್ಷಕರಾದ ಶ್ರೀ ಮುತ್ತು ಯ. ವಡ್ಡರ ಇವರ ಮೂರನೇ ಕೃತಿ ಸನ್ಮಾರ್ಗದ ದುಂಬಿ ಸರಳವಾಗಿ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಆಶೀರ್ವಾದದೊಂದಿಗೆ ಪರಮಪೂಜ್ಯ ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿಗಳ ಅಮೃತ ಹಸ್ತದಿಂದ ಶ್ರೀಮಠದ ಭಕ್ತರ ಸಮ್ಮುಖದಲ್ಲಿ ಬಿಡುಗಡೆಯಾಯಿತು. ಪರಮ ಪೂಜ್ಯರು ಇನ್ನೂ ಹೆಚ್ಚಿನ…

Read More

​ಚಾಮರಾಜನಗರ: ಬಸ್-ಲಾರಿ ಮುಖಾಮುಖಿ ಡಿಕ್ಕಿ; ಕೆಎಸ್ಆರ್‌ಟಿಸಿ ಚಾಲಕ ಸಾವು, 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕೆಎಸ್ ಆರ್ ಟಿಸಿ ಬಸ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ ಡಿಕ್ಕಿಯಲ್ಲಿ ಸರ್ಕಾರಿ ಬಸ್ಸಿನ ಚಾಲಕ ಮೃತಪಟ್ಟರೆ, ಬಸ್ಸಿನಲ್ಲಿದ್ದ ೧೫ ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಕೆಎಸ್ಸಾರ್ಟಿಸಿ ಬಸ್ ಚಾಲಕ ಇರಸವಾಡಿ ಗ್ರಾಮದ ಮಂಜು (38) ಮೃತಪಟ್ಟ ದುರ್ದೈವಿಯಾಗಿದ್ದಾರೆ..ತೀವ್ರ ಗಾಯಗೊಂಡಿರುವ ಲಾರಿ ಚಾಲಕನ ಸ್ಥಿತಿ ಚಿಂತಾಜನಕವಾಗಿದ್ದು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ನಂಜನಗೂಡು ಕಡೆಯಿಂದ ಸರ್ಕಾರಿ ಬಸ್, ಚಾಮರಾಜನಗರ ಕಡೆಯಿಂದ ಲಾರಿ…

Read More

ಬಳ್ಳಾರಿ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್: ಮರಣೋತ್ತರ ಪರೀಕ್ಷೆ ಬಗ್ಗೆ ಹೆಚ್‌ಡಿಕೆ ಸ್ಫೋಟಕ ಆರೋಪ!

ಬೆಂಗಳೂರಿನಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಳ್ಳಾರಿಯ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಪ್ರಕರಣದ ತನಿಖೆಯಲ್ಲಿ ಹಲವು ಲೋಪದೋಷಗಳಿವೆ ಎಂದು ಆರೋಪಿಸಿರುವ ಅವರು, ಘಟನೆಯನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿದ್ದಾರೆ. ​ಪತ್ರಿಕಾಗೋಷ್ಠಿಯ ಪ್ರಮುಖ ಅಂಶಗಳು: ​ಮರಣೋತ್ತರ ಪರೀಕ್ಷೆಯ ಬಗ್ಗೆ ಸ್ಫೋಟಕ ಆರೋಪ ರಾಜಶೇಖರ್ ಮೃತದೇಹವನ್ನು ಎರಡು ಬಾರಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿರುವ ಬಗ್ಗೆ ಕುಮಾರಸ್ವಾಮಿ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ….

Read More

ಚಾಮರಾಜೇಶ್ವರನ ದರ್ಶನ ಪಡೆದು ಅಧಿಕಾರ ವಹಿಸಿಕೊಂಡ ಜಿಲ್ಲಾಧಿಕಾರಿ ಶ್ರೀರೂಪ

ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ, ಜನವರಿ,04:- ಚಾಮರಾಜನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶ್ರೀರೂಪ ಅವರು ಇಂದು ಚಾಮರಾಜೆಶ್ವರ ದೇವರ ದರ್ಶನ ಪಡೆದು ಅದಿಕಾರ ಸ್ವೀಕರಿಸಿದ್ದಾರೆ. ದೇವಾಲಯಕ್ಕೆ ಭೇಟಿ ನೀಡಿ ನಂತರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ವರ್ಗಾವಣೆಯಾಗಿರುವ ನಿರ್ಗಮಿತ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರಿಂದ ಅಧಿಕಾರಿ ಸ್ವೀಕರಿಸಿದರು. ನೂತನ ಜಿಲ್ಲಾಧಿಕಾರಿ ಶ್ರೀರೂಪ ಅವರಿಗೆ ಶಿಲ್ಪಾ ನಾಗ್ ಅವರು ಹೂಗುಚ್ಚ ನೀಡಿ ಶುಭ ಕೋರಿದರು. ನೂತನ ಜಿಲ್ಲಾಧಿಕಾರಿ ಶ್ರೀರೂಪ ಅವರು ನಿರ್ಗಮಿತ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರಿಗೆ ಹೂಗುಚ್ಚ ನೀಡಿ ಹಾರೈಸಿದರು….

Read More

ಹುನಗುಂದ ತಾಲೂಕಿನ ಅವಳಿ ಸಂಘಗಳಿಂದ ಸೂಟಿ ಪತ್ರಿಕೆ ಹಾಗೂ ಪದಗ್ರಹಣ ಕಾರ್ಯಕ್ರಮ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನ ಹುನಗುಂದದಲ್ಲಿ ಇಂದು ನಡೆದ ಕರ್ನಾಟಕ ರಾಜ್ಯ ಎಸ್ ಸಿ /ಎಸ್ ಟಿ ಪ್ರಾಥಮಿಕ ಮಾಧ್ಯಮಿಕ ಶಿಕ್ಷಕರ ನೌಕರರ ಕ್ಷೇಮಾಭಿವೃದ್ಧಿ ಸಂಘ ಹುನಗುಂದ ಹಾಗೂ ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹುನಗುಂದ ಅವಳಿ ಸಂಘದ ಪದಾಧಿಕಾರಿಗಳ ಪದಗ್ರಹಣ ಹಾಗೂ ಸೂಟಿ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸರಳವಾಗಿ ಸುಂದರವಾಗಿ ಯಶಸ್ವಿಯಾಯಿತು. ಸರಕಾರಿ ನೌಕರರ ಸಂಘದ ಗೌರವ ಅಧ್ಯಕ್ಷರು ಆಗಿರುವ ಶ್ರೀ ಎಸ್ ಜಿ ಹುದ್ದಾರ ಅವರು ಒಂಟಿಯ ಹೋರಾಟಕ್ಕೂ…

Read More

ಅಕ್ರಮ ಬಾಂಗ್ಲಾದೇಶಿಗರಿಗೆ ಇಲ್ಲ ಪರ್ಯಾಯ ವಸತಿ: ಪತ್ತೆಯಾದಲ್ಲಿ ತಕ್ಷಣ ಗಡಿಪಾರು – ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಚ್ಚರಿಕೆ

ಬೆಂಗಳೂರು: ರಾಜಧಾನಿಯ ಯಲಹಂಕದ ಕೋಗಿಲು ಕ್ರಾಸ್ ಬಳಿ ನಡೆದ ತೆರವು ಕಾರ್ಯಾಚರಣೆಯ ಬೆನ್ನಲ್ಲೇ ತೀವ್ರಗೊಂಡಿರುವ ‘ಅಕ್ರಮ ವಲಸಿಗರ’ ವಿವಾದಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸ್ಪಷ್ಟನೆ ನೀಡಿದ್ದಾರೆ. ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ಪ್ರಜೆಗಳಿಗೆ ಯಾವುದೇ ಕಾರಣಕ್ಕೂ ಸರ್ಕಾರದಿಂದ ಪರ್ಯಾಯ ವಸತಿ ಸೌಲಭ್ಯ ನೀಡುವುದಿಲ್ಲ ಮತ್ತು ಪತ್ತೆಯಾದ ತಕ್ಷಣವೇ ಅವರನ್ನು ಗಡಿಪಾರು ಮಾಡಲಾಗುವುದು ಎಂದು ಅವರು ಕಡಕ್ ಸಂದೇಶ ರವಾನಿಸಿದ್ದಾರೆ. ​ಪೊಲೀಸ್ ತಪಾಸಣೆ ಮತ್ತು ಬಿಗುವಿನ ಕ್ರಮ ​ಯಲಹಂಕದ ಫಕೀರ್ ಬಡಾವಣೆಯಲ್ಲಿ ತೆರವುಗೊಂಡ ನಿರಾಶ್ರಿತರ ಪಟ್ಟಿಯನ್ನು…

Read More

ಚಾಮರಾಜನಗರ ಜಿಲ್ಲಾಧಿಕಾರಿ ಮತ್ತು ಎಸ್ಪಿ ವರ್ಗಾವಣೆ: ನೂತನ ಡಿಸಿಯಾಗಿ ಶ್ರೀರೂಪಾ, ಎಸ್ಪಿಯಾಗಿ ಮುತ್ತುರಾಜು ನೇಮಕ

ವರದಿ: ರಾಮಸಮುದ್ರ ಎಸ್‌.ವೀರಭದ್ರಸ್ವಾಮಿ ಚಾಮರಾಜನಗರ: ಪೊಲೀಸ್ ವರೀಷ್ಟಾದಿಕಾರಿ ಕವಿತಾ ಹಾಗೂ ಜಿಲ್ಲಾದಿಕಾರಿ ಶಿಲ್ಪನಾಗ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಚಾಮರಾಜನಗರ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಶ್ರೀರೂಪಾ ಅವರನ್ನು ಸರಕಾರ ನೇಮಿಸಿ ಆದೇಶ ಹೊರಡಿಸಿದೆ. ಶ್ರೀರೂಪಾ ಅವರು ಪ್ರಸ್ತುತ ಪಶುಪಾಲನಾ ಲಾಖೆಯ ಆಯುಕ್ತರಾಗಿ ಕರ್ತವ್ಯ ನಿರ್ವಹಿಸು ತ್ತಿದ್ದರು. ಇವರು 2018ನೇ ಕರ್ನಾಟಕ ಬ್ಯಾಚ್‌ನ ಐ ಎ ಎಸ್ ಅಧಿಕಾರಿಯಾಗಿದ್ದಾರೆ. ಚಾಮರಾಜ ನಗರ ಜಿಲ್ಲಾಧಿಕಾರಿಯಾಗಿದ್ದ ಸಿ.ಟಿ. ಶಿಲ್ಪಾ ನಾಗ್ ಅವರನ್ನು ಬೆಂಗಳೂರಿನ ಪಶುಪಾಲನಾ…

Read More

ಸಕ್ಕರೆ ನಾಡಿನ ಪೊಲೀಸ್ ಗದ್ದುಗೆಗೆ ಶೋಭಾರಾಣಿ ಎಂಟ್ರಿ: ಮೈಸೂರಿಗೆ ಮಲ್ಲಿಕಾರ್ಜುನ ಬಾಲದಂಡಿ ಶಿಫ್ಟ್

ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರಿಗೆ ಮೈಸೂರು ಜಿಲ್ಲೆಯ ಜವಾಬ್ದಾರಿ ನೀಡಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಮಂಡ್ಯದಲ್ಲಿ ‘ಜನಸ್ನೇಹಿ ಪೊಲೀಸ್’ ಪರಿಕಲ್ಪನೆಯನ್ನು ಜಾರಿಗೆ ತಂದು ಮೆಚ್ಚುಗೆ ಗಳಿಸಿದ್ದ ಬಾಲದಂಡಿ ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ, ಸದ್ಯ ಬಳ್ಳಾರಿ ಎಸ್ಪಿಯಾಗಿರುವ ಶೋಭಾರಾಣಿ ವಿ.ಜೆ. ಅವರನ್ನು ನೇಮಕ ಮಾಡಲಾಗಿದೆ. ​ನೂತನ ಎಸ್ಪಿಯಾಗಿ ಬರಲಿರುವ ಶೋಭಾರಾಣಿ ಅವರು 2016ರ ಬ್ಯಾಚ್‌ನ ಅಧಿಕಾರಿಯಾಗಿದ್ದು, ಮಂಡ್ಯ ಜಿಲ್ಲೆಯ ಭೌಗೋಳಿಕ ಮತ್ತು ಅಪರಾಧ ಹಿನ್ನೆಲೆಯ…

Read More

ಮಂಡ್ಯದಲ್ಲಿ “ಸಿರಿಧಾನ್ಯ ರೋಡ್ ಶೋ”: ಮುಂದಿನ ಪೀಳಿಗೆಗೆ ಪೌಷ್ಟಿಕತೆಯ ಅರಿವು ಮೂಡಿಸಲು ಜಿ.ಪಂ. ಸಿಇಒ ಕರೆ

ಮಂಡ್ಯ.ಡಿ.31.:- ಸಿರಿಧಾನ್ಯಗಳ ಕುರಿತು ಮುಂದಿನ ಪೀಳಿಗೆಗೆ ತಿಳಿಸುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್. ನಂದಿನಿ ಅವರು ಹೇಳಿದರು. ಇಂದು ಕೃಷಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಆಹಾರ ಮತ್ತು ಪೌಷ್ಠಿಕ ಭದ್ರತೆ (ನ್ಯೂಟ್ರಿ ಸಿರಿಧಾನ್ಯ) ಯೋಜನೆಯಡಿ “ಸಿರಿಧಾನ್ಯ ರೋಡ್ ಶೋ” ಮೂಲಕ ಮುಂದಿನ ಪೀಳಿಗೆಗೆ ಸಿರಿಧಾನ್ಯ ಬೆಳೆಗಳ ಬಗ್ಗೆ ಅರಿವು ಮೂಡಿಸುವ ಸಂಬAಧ ಆಯೋಜಿಸಲಾಗಿದ್ದ “ಸಿರಿಧಾನ್ಯ ರೋಡ್ ಶೋ” ಕಾರ್ಯಕ್ರಮವನ್ನು ಹಸಿರು ಬಾವುಟ ಹಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಎಲ್ಲಾ…

Read More
error: Content is protected !!