”ಜಲ ಸಂಚಯ ಜನ ಭಾಗಿದಾರಿ” ಅಭಿಯಾನ ಮಂಡ್ಯ ಜಿಲ್ಲೆಗೆ ರಾಷ್ಟ್ರೀಯ ಪ್ರಶಸ್ತಿಯ ಗರಿ
ಮಂಡ್ಯ.ಅ.4:- ಜಲ ಶಕ್ತಿ ಅಭಿಯಾನದ ಅಂಗವಾಗಿ “ಜಲ ಸಂಚಯ ಜನ ಭಾಗಿದಾರಿ (JSJB)” ಅಭಿಯಾನದಡಿ ಮಂಡ್ಯ ಜಿಲ್ಲೆಯು ಜಲ ಸಂರಕ್ಷಣೆ ಕಾಮಗಾರಿಗಳನ್ನು ಉತ್ತಮವಾಗಿ ಅನುಷ್ಟಾನಗೊಳಿಸಿದ್ದಕ್ಕಾಗಿ ಮಂಡ್ಯ ಜಿಲ್ಲೆಗೆ ರಾಷ್ರ್ಟೀಯ ಪ್ರಶಸ್ತಿ ದೊರೆತಿದೆ. ಜಲಮೂಲಗಳ ಸಂರಕ್ಷಣೆ, ಅಂತರ್ಜಲ ವೃದ್ಧಿ ಹಾಗೂ ಕೃಷಿ ಚಟುವಟಿಕೆಗಳಿಗೆ ಅಗತ್ಯ ಪ್ರಮಾಣದ ನೀರು ಒದಗಿಸುವ ಹಾಗೂ ನೀರಿನ ಸಮಸ್ಯೆ ನಿವಾರಿಸಲು ಕೈಗೊಂಡ ಜಲಶಕ್ತಿ ಅಭಿಯಾನದ ಚಟುವಟಿಕೆಗಳನ್ನು ಯಶಸ್ವಿಯಾಗಿ ಹಾಗೂ ಪರಿಣಾಮಕಾರಿ ಅನುಷ್ಟಾನಗೊಳಿಸಿದ್ದಕ್ಕಾಗಿ ಮಂಡ್ಯ ಜಿಲ್ಲೆಗೆ ಪ್ರಶಸ್ತಿಯ ಜೊತೆಗೆ 25 ಲಕ್ಷ ರೂ ನಗದು ಬಹುಮಾನವನ್ನು ನೀಡಲಾಗುತ್ತಿದೆ. ಮೈಸೂರು ವಿಭಾಗದ…

