ಸಮೀಕ್ಷೆ ವೇಳೆ ಹಿಂದೂ ಜಾತಿ ಹೆಸರಿನ ಜೊತೆಗೆ ಕ್ರೈಸ್ತ ಹೆಸರು, ಹೊಸ ಜಾತಿ ಸೇರ್ಪಡೆ ಕೈಬಿಡಲು ಸಿಎಂ ಸೂಚನೆ
ಬೆಂಗಳೂರು, ಸೆ.19: ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಜನರ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಶುರುವಾಗಲಿದೆ. ಆದರೇ, ಜಾತಿಯ ಕಾಲಂನಲ್ಲಿ ಕುರುಬ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್, ದಲಿತ ಕ್ರಿಶ್ಚಿಯನ್ ಎಂದೆಲ್ಲಾ ಉಲ್ಲೇಖ ಮಾಡಲಾಗಿತ್ತು. ಹಿಂದೂ ಧರ್ಮದ ವಿವಿಧ ಜಾತಿಗಳಿಂದ ಕ್ರಿಶ್ಚಿಯನ್ ಧರ್ಮದ ಮತಾಂತರವಾದವರು ಹಿಂದೂ ಜಾತಿಯ ಜೊತೆಗೆ ಕ್ರಿಶ್ಚಿಯನ್ ಧರ್ಮದ ಹೆಸರಿನಿಂದಲೂ ಕರೆದುಕೊಳ್ಳಲು ಸಮೀಕ್ಷೆಯ ಕಾಲಂನಲ್ಲಿ ಅವಕಾಶ ನೀಡಲಾಗಿತ್ತು. ಇದಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಇಲ್ಲದೇ ಇರೋ ಹೊಸ ಜಾತಿಗಳನ್ನೇ ಈ ಸಮೀಕ್ಷೆ ವೇಳೆ ಹುಟ್ಟು ಹಾಕಲಾಗಿದೆ…

