Headlines

ಜೈಲಿನಲ್ಲಿ ಹಾಸಿಗೆ, ದಿಂಬು ಇನ್ನೂ ಕೊಟ್ಟಿಲ್ಲ: ಮತ್ತೆ ಕೋರ್ಟ್ ಮೊರೆ ಹೋದ ದರ್ಶನ್

ಬೆಂಗಳೂರು, ಸೆ.15: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೋರ್ಟ್ ಆದೇಶದಂತೆ ಕನಿಷ್ಠ ಸೌಲಭ್ಯ ಇನ್ನೂ ನನಗೆ ಸಿಕ್ಕಿಲ್ಲ ಎಂದು ನಟ ದರ್ಶನ್ ಮತ್ತೆ ಕೋರ್ಟ್ ಮೆಟ್ಟಿಲೇರಿದ್ದಾರೆ. ಸೆಷನ್ಸ್ ಕೋರ್ಟ್ ಆದೇಶದ ನಂತರವೂ ಸೌಲಭ್ಯ ಸಿಕ್ಕಿಲ್ಲ ಎಂದು ನಟ ದರ್ಶನ್ ಇಂದು ಮತ್ತೆ ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರಿನ 64ನೇ ಸೆಷನ್ಸ್ ಕೋರ್ಟ್​​ಗೆ ರೇಣುಕಾಸ್ವಾಮಿ ಕೊಲೆ ಕೇಸ್‌ ಆರೋಪಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣಾಧೀನ ಖೈದಿಯಾಗಿರುವ ನನಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕನಿಷ್ಠ ಸೌಲಭ್ಯವನ್ನೂ ನೀಡುತ್ತಿಲ್ಲ ಎಂದು ದೂರಿ ನಟ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ.
‘ಕಾರಿಡಾರ್​ನಲ್ಲಿ ವಾಕ್ ಮಾಡಲು ಮಾತ್ರ ಅಧಿಕಾರಿಗಳು ಅವಕಾಶ ನೀಡಿದ್ದಾರೆ. ಸೆಷನ್ಸ್ ಕೋರ್ಟ್ ಹೇಳಿದ್ದ ಕನಿಷ್ಠ ಸೌಲಭ್ಯ ನೀಡುತ್ತಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಸೆಷನ್ಸ್ ಕೋರ್ಟ್​ಗೆ ದರ್ಶನ್ ಪರ ವಕೀಲ ಎಸ್.ಸುನೀಲ್ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆಗೆ ಶಿಫಾರಸ್ಸು ಕೋರಿ ಮನವಿಯನ್ನು ಸೆಷನ್ಸ್ ಕೋರ್ಟ್ ಗೆ ಮಾಡಿಕೊಂಡಿದ್ದಾರೆ. ಹೈಕೋರ್ಟ್​ಗೆ ನ್ಯಾಯಾಂಗ ನಿಂದನೆ ಕೇಸ್‌ಗೆ ಶಿಫಾರಸ್ಸು ಮಾಡಿ ಎಂದು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಜೈಲಾಧಿಕಾರಿಗಳಿಗೆ ಸೆಷನ್ಸ್ ಕೋರ್ಟ್ ಆದೇಶ ನೀಡಲು ವಕೀಲರು ಹೋಗಿದ್ದರು. ದರ್ಶನ್ ಪರ ವಕೀಲರು ಹೋಗಿದ್ದಾಗ ಸ್ಪಂದಿಸಿಲ್ಲ ಎಂದು ಅರ್ಜಿಯಲ್ಲಿ ಆರೋಪ ಮಾಡಲಾಗಿದೆ. ಕೋರ್ಟ್ ಆದೇಶದ ನಂತರವೂ ಹಾಸಿಗೆ, ದಿಂಬು ಸಿಕ್ಕಿಲ್ಲ ಎಂದು ಅರ್ಜಿ ಸಲ್ಲಿಕೆ ಮಾಡಲಾಗಿದೆ. ಜೈಲು ಮ್ಯಾನ್ಯುಯೆಲ್​​ನಲ್ಲಿರುವ ಕನಿಷ್ಠ ಸೌಲಭ್ಯವನ್ನೂ ಕೊಡುತ್ತಿಲ್ಲ ಎಂದು ಆರೋಪ ಮಾಡಲಾಗಿದೆ. ಸೆಷನ್ಸ್ ಕೋರ್ಟ್ ಆದೇಶವನ್ನು ಪಾಲಿಸಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನೀಡಬೇಕಾಗಿದ್ದ ಹಾಸಿಗೆ, ದಿಂಬು ಸೇರಿದಂತೆ ಕನಿಷ್ಟ ಸವಲತ್ತುಗಳನ್ನು ಜೈಲು ಅಧಿಕಾರಿಗಳು ಇನ್ನೂ ಕೊಡದೇ ಕೋರ್ಟ್ ಆದೇಶವನ್ನು ಪಾಲಿಸುತ್ತಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!