Headlines

ಧರ್ಮಸ್ಥಳದ ಬಗ್ಗೆ ಯೂಟ್ಯೂಬರ್ ಗಳು ಅಪಪ್ರಚಾರ ನಡೆಸಿದರೆ ಕಾನೂನು ಕ್ರಮ: ಗೃಹ ಸಚಿವರ ಎಚ್ಚರಿಕೆ

ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾಗಿರುವ ಅಸಹಜ ಸಾವು ಪ್ರಕರಣದ ತನಿಖೆ ನಡೆಯುತ್ತಿದೆ. ಈ ಬಗ್ಗೆ ವಿಧಾನಸಭೆಯಲ್ಲಿ ಗಂಭೀರವಾದ ಮಾತುಕತೆಗಳು ನಡೆದಿದ್ದು ರಾಜ್ಯಸರ್ಕಾರ ಹಾಗೂ ವಿರೋಧ ಪಕ್ಷಗಳ ನಡುವೆ ವಾಕ್ಸಮರವೇ ನಡೆಯುತ್ತಿದೆ. ಇದರ ನಡುವೆ ಗೃಹ ಸಚಿವ ಪರಮೇಶ್ವರ್ ಅವರು ಯೂಟ್ಯೂಬರ್​ಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಅವರು ಹೇಳಿದ್ದಿಷ್ಟು…
“ಯಾರೇ ಯೂಟ್ಯೂಬರ್​ಗಳಾದರೂ, ಯಾವುದೇ ಯೂಟ್ಯೂಬ್ ಆದರೂ ಇರಲಿ, ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡಬಾರದು. ಒಂದು ವೇಳೆ ಧರ್ಮಸ್ಥಳ ಕ್ಷೇತ್ರದ ಕುರಿತು ಕೆಟ್ಟದಾಗಿ ಮಾತನಾಡಿರುವುದು, ಅಪಪ್ರಚಾರ ಮಾಡಿರುವುದು ಕಂಡುಬಂದಲ್ಲಿ ಅಂತವರ ವಿರುದ್ಧ ರಾಜ್ಯಸರ್ಕಾರ ಕಾನೂನು ಕ್ರಮ ತೆಗೆದುಕೊಳ್ಳುತ್ತದೆ. ಎಸ್​ಐಟಿ ಅಧಿಕಾರಿಗಳ ತನಿಖೆ ಮಾಡುವಾಗಲೇ ಅಪಪ್ರಚಾರ ಮಾಡಿದರೆ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳಬೇಕಾಗುತ್ತೆ ಎಂದು ಎಚ್ಚರಿಸಿದ್ದಾರೆ.

ವಿಧಾನಸಭೆ ಕಲಾಪದಲ್ಲಿ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್​ಐಟಿ ಕಾರ್ಯ ಕುರಿತು ಗೃಹ ಸಚಿವ ಪರಮೇಶ್ವರ್ ಅವರು ನಿನ್ನೆ ಮಾತನಾಡಿದರು. ಅಲ್ಲಿ ಸಿಕ್ಕಂತಹ ಅಸ್ಥಿಪಂಜರ, ಮೂಳೆಗಳನ್ನು ಎಫ್​ಎಸ್​ಎಲ್ ಪರೀಕ್ಷೆಗೆ ರವಾನಿಸಲಾಗಿದ್ದು ವರದಿ ಬರಬೇಕಿದೆ. ವರದಿ ಬರುವವರೆಗೂ ಎಸ್​ಐಟಿ ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿದೆ. ವರದಿ ಬಂದ ಬಳಿಕ ತನಿಖೆ ಮುಂದುವರೆಯುತ್ತದೆ ಎಂದು ಹೇಳಿದ್ದಾರೆ.

ಸಚಿವ ಪರಮೇಶ್ವರ್ ಮಾತು ಮುಗಿಸಿದ ನಂತರ ವಿಪಕ್ಷ ನಾಯಕ ಆರ್​.ಅಶೋಕ್ ಮಾತನಾಡಿ, ಬೆಣ್ಣೆಯಲ್ಲಿ ಕೂದಲು ತೆಗೆದಂತೆ ಎಸ್​ಐಟಿ ತನಿಖೆಯನ್ನು ಹೇಳಿದ್ದೀರಿ. ಧರ್ಮಸ್ಥಳದಲ್ಲಿ ಗುಡ್ಡ ಅಗೆದರೂ ಇಲಿ ಸಿಗಲಿಲ್ಲ, ಕಲಾಪದಲ್ಲಿ ನೀವು ಹೇಳಿದರೆ ಸೊಳ್ಳೆ ಕೂಡ ಸತ್ತಿಲ್ಲ. ಅನಾಮಿಕ ಬುರಡೆ ತಂದಿರುವುದರ ಕುರಿತು ಮೊದಲೇ ಯಾಕೆ ತನಿಖೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

error: Content is protected !!