ಹಲವು ವರ್ಷಗಳಿಂದ ಶ್ರಮವಹಿಸಿ ವ್ಯಾಪಾರ ಮಾಡುತ್ತಿರುವ ವರ್ತಕರಿಗೆ ನೂತನ ಮಾರುಕಟ್ಟೆಯ ಮಳಿಗೆಗಳ ಹಂಚಿಕೆ: ಎಚ್.ಡಿ ಕುಮಾರ ಸ್ವಾಮಿ
ಮಂಡ್ಯ.ಅ.16:-ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವರ್ತಕರ ಮಾರುಕಟ್ಟೆಯ ಮಳಿಗೆಗಳನ್ನು ಹಲವು ವರ್ಷಗಳಿಂದ ಶ್ರಮವಹಿಸಿ ವ್ಯಾಪಾರ ಮಾಡಿಕೊಂಡು ಬರುತ್ತಿರುವಂತಹ ವರ್ತಕರಿಗೆ ಹಂಚಲಾಗುವು ಇದರಲ್ಲಿ ಯಾವುದೇ ಗೊಂದಲ ಬೇಡ ಎಂದು ಕೇಂದ್ರ ಬೃಹತ್ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ .ಕುಮಾರಸ್ವಾಮಿ ಅವರು ಹೇಳಿದರು. ಇಂದು (ಅ.16) ನಗರದ ಪೇಟೆ ಬೀದಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಮಾರುಕಟ್ಟೆ ಯನ್ನು ಉದ್ಘಾಟಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಜನರ ಆಶೀರ್ವಾದದಿಂದ ಕೇಂದ್ರ ಇಂದು ಮಂತ್ರಿಯಾಗಿದ್ದೇನೆ ಅಂದಿನ ಇಲ್ಲಿಯವರೆಗೂ ಜಿಲ್ಲಾಧಿಕಾರಿಗಳ ಜೊತೆ…

