ಮತದಾರರ ಪಟ್ಟಿ ಪರಿಷ್ಕರಣೆ ಮಾಡಿ: ಕೆಪಿಸಿಸಿ ಘಟಕಕ್ಕೆ ಎಐಸಿಸಿ ಕಟ್ಟಾಜ್ಞೆ!
ಬೆಂಗಳೂರು/ನವದೆಹಲಿ, ಆ.23: ಮುಂದಿನ 6 ತಿಂಗಳಲ್ಲಿ ನಡೆಯಬಹುದಾದ ಬಿಬಿಎಂಪಿ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆ ವೇಳೆಗೆ ಮತದಾರರ ಪಟ್ಟಿಯಲ್ಲಿನ ಲೋಪಗಳನ್ನು ಸರಿಪಡಿಸುವಂತೆ ಎಐಸಿಸಿ ಪ್ರಧಾನಕಾರ್ಯದರ್ಶಿ ರಣದೀಪ್ಸಿಂಗ್ ಸುರ್ಜೇವಾಲ ರಾಜ್ಯದ ಪ್ರಮುಖ ನಾಯಕರಿಗೆ ಕಟ್ಟಪ್ಪಣೆ ಮಾಡಿದ್ದಾರೆ. ನಿನ್ನೆ ಶುಕ್ರವಾರ ರಾತ್ರಿ ರಾಜ್ಯದ ಪ್ರಮುಖ ಕೈ ನಾಯಕರೊಂದಿಗೆ ಮಹತ್ವದ ಸಭೆ ನಡೆಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ಸಿಂಗ್ ಸುರ್ಜೇವಾಲ, ಈ ಹಿಂದೆ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಾದ ಮತ ಪಟ್ಟಿಯಲ್ಲಿನ ಅಕ್ರಮಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದ್ದಾರೆ….

