ಎಚ್ಡಿಕೆ vs ಎಂ. ಚಂದ್ರಶೇಖರ್ ಜಟಾಪಟಿ: ಹೈಕೋರ್ಟ್ ಮಧ್ಯಸ್ಥಿಕೆಯಲ್ಲಿ ರಾಜಿ ಸಂಧಾನಕ್ಕೆ ಮುಹೂರ್ತ ಫಿಕ್ಸ್!
ಬೆಂಗಳೂರು, ಏಪ್ರಿಲ್ 02: ಲೋಕಾಯುಕ್ತ ಎಡಿಜಿಪಿ ಮತ್ತು ಎಸ್ಐಟಿ ಮುಖ್ಯಸ್ಥ ಎಂ.ಚಂದ್ರಶೇಖರ್ ಮತ್ತು ಅವರ ಕುಟುಂಬದ ಮೇಲೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆದರಿಕೆ ಹಾಕಿರುವ ಪ್ರಕರಣವು ರಾಜಿ ಸಂಧಾನ ಹಂತಕ್ಕೆ ಬಂದು ನಿಂತಿದೆ. ಹೈಕೋರ್ಟ್ ನ್ಯಾಯಾಧೀಶರ ಸಲಹೆಯಂತೆ ಇಬ್ಬರ ಪರ ವಕೀಲರು ರಾಜಿ ಮಾತುಕತೆಗೆ ಒಪ್ಪಿದ್ದು, ಮಧ್ಯಸ್ಥಿಕೆದಾರರ ನೇಮಕ ಮತ್ತು ಸಭೆ ದಿನಾಂಕವನ್ನು ಏಪ್ರಿಲ್ 30ಕ್ಕೆ ನಿಗದಿ ಮಾಡಲಾಗಿದೆ. ಐಪಿಎಸ್ ಅಧಿಕಾರಿ ಚಂದ್ರಶೇಖರ್ ಅವರು ಸಾಯಿ ಮಿನರಲ್ಸ್ ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡುವ ಸಂದರ್ಭದಲ್ಲಿ ನಿಯಮ…

