Headlines

ಮುಜರಾಯಿ ದೇಗುಲಗಳಲ್ಲಿ ಆಗಸ್ಟ್ 15 ರಿಂದ ಪ್ಲಾಸ್ಟಿಕ್ ಬಳಸುವಂತಿಲ್ಲ

ಬೆಂಗಳೂರು, ಆಗಸ್ಟ್ 15: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಇದೇ ಆಗಸ್ಟ್ 15ರಿಂದ ಪ್ಲಾಸ್ಟಿಕ್‌ ಬಳಕೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್‌ಗೆ ತಿಳಿಸಿದ್ದಾರೆ. ನಿನ್ನೆ ವಿಧಾನಪರಿಷತ್ ಕಲಾಪದಲ್ಲಿ ಸದಸ್ಯ ಮಧುಮಾದೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮುಜರಾಯಿ ಇಲಾಖೆಯು ಆಗಸ್ಟ್ 15ರಿಂದ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್‌ ನಿಷೇಧ ಮಾಡಿ, ಆದೇಶ ಹೊರಡಿಸಲಾಗುವುದು. ಬಳಕೆ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು. ದೇವಸ್ಥಾನದ…

Read More

ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ ಜಾಮೀನು ಭವಿಷ್ಯ ನಾಳೆ ಸುಪ್ರೀಂಕೋರ್ಟ್ ನಲ್ಲಿ ನಿರ್ಧಾರ!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿ ನ್ಯಾಯಾಂಗ ಬಂಧನದಲ್ಲಿದ್ದ ನಟ ದರ್ಶನ್ ತೂಗುದೀಪ್ ಹಾಗೂ ನಟಿ ಪವಿತ್ರಾಗೌಡ ಅವರಿಗೆ ನೀಡಲಾಗಿದ್ದ ಕರ್ನಾಟಕ ಹೈಕೋರ್ಟ್ ನ ಜಾಮೀನು ರದ್ದುಗೊಳಿಸಬೇಕೆಂದು ಸುಪ್ರೀಂಕೋರ್ಟಿಗೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಮುಗಿದಿದ್ದು, ನಾಳೆ ಗುರುವಾರ ತೀರ್ಪು ಹೊರಬೀಳಲಿದೆ. ಈ ಹಿನ್ನೆಲೆಯಲ್ಲಿ ದರ್ಶನ್ ಹಾಗೂ ಪವಿತ್ರಾಗೌಡ ಅವರಿಗೆ ನಾಳೆ ಬಹಳ ಮಹತ್ವದ ದಿನವಾಗಿದ್ದು, ಅಳಿವು-ಉಳಿವಿನ ಪ್ರಶ್ನೆಯಾಗಿದೆ. ಈಗಾಗಲೇ ಸುಪ್ರೀಂಕೋರ್ಟ್ ನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳ ಜಾಮೀನು ರದ್ದುಗೊಳಿಸಬೇಕೆಂದು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ…

Read More

ವೋಟಿ​ಗಾಗಿ ನೋಟು; ಸಿದ್ದರಾಮಯ್ಯ,ಡಿ.ಕೆ ಶಿವಕುಮಾರ್ ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು, ಆ.13: ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ವೋಟ್​ಗಾಗಿ ನೋಟು ಹಂಚಿಕೆ ಮಾಡಲಾಗಿದೆ ಎಂಬ ಶಾಸಕ ಶಿವಲಿಂಗೇಗೌಡ ಅವರದ್ದು ಎನ್ನಲಾಗಿರುವ ಆಡಿಯೋ ವೈರಲ್​ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡ ಅವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. “2024ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ನ ಅಭ್ಯರ್ಥಿಯಾಗಿದ್ದ ಸಂಸದ ಶ್ರೇಯಸ್​ ಎಂ. ಪಟೇಲ್​ ಪರವಾಗಿ ಜಿಲ್ಲೆಯಲ್ಲಿ ಹಣ ಹಂಚಿಕೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ…

Read More

ಧರ್ಮಸ್ಥಳ ಬಳಿ ಶವಗಳನ್ನು ಹೂತಿಟ್ಟ ಕೇಸ್: ನಾಳೆ 13ನೇ ಸ್ಥಳದ ಜಿಪಿಆರ್ ವರದಿ ಎಸ್ಐಟಿಗೆ ಸಲ್ಲಿಕೆ

ಬೆಳ್ತಂಗಡಿ/ಬೆಂಗಳೂರು, ಆಗಸ್ಟ್ 13: ರಾಜ್ಯದ ಸುಪ್ರಸಿದ್ಧ ಪುಣ್ಯಕ್ಷೇತ್ರ ಧರ್ಮಸ್ಥಳ ಸ್ನಾನಘಟ್ಟದ ಬಳಿ ಅನಾಮಿಕ ವ್ಯಕ್ತಿ ಗುರುತಿಸಿರುವ 13 ನೇ ಸ್ಥಳದಲ್ಲಿ ಜಿಪಿಆರ್‌ ಬಳಸಿ ನಡೆಸುತ್ತಿದ್ದ ಶೋಧ ಕಾರ್ಯ ಮುಗಿದಿದ್ದು ಅದರ ವರದಿಯನ್ನು ತಂಡ ಇಂದು ಅಥವಾ ನಾಳೆ ಗುರುವಾರ ಎಸ್‌‍ಐಟಿಗೆ ನೀಡಲಿದೆ. ಈ ತಂಡ ನೀಡುವ ವರದಿ ಆಧಾರದ ಮೇಲೆ ಎಸ್‌‍ಐಟಿ ಉತ್ಖನನವನ್ನು ಆರಂಭಿಸಲಿದೆ. ಸೋಮವಾರ ದೆಹಲಿಯಿಂದ ಮಂಗಳೂರಿಗೆ ಬಂದ ಜಿಪಿಆರ್‌ ತಂಡ ಅಂದು ಪ್ರಾಯೋಗಿಕವಾಗಿ 13ನೇ ಸ್ಥಳದಲ್ಲಿ ಪರಿಶೀಲಿಸಿತು. ಬಳಿಕ ಆ ಸ್ಥಳದಲ್ಲಿದ್ದ ಗಿಡಗಂಟೆಗಳನ್ನು ತೆರವುಗೊಳಿಸಿ…

Read More

ಕಾರವಾರ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ಇಡಿ ದಾಳಿ

ಕಾರವಾರ, ಆಗಸ್ಟ್ 13: ಉತ್ತರಕನ್ನಡ ಜಿಲ್ಲೆಯ ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ಬುಧವಾರ ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. 6 ಕಾರುಗಳಲ್ಲಿ ಬಂದಿರುವ 24ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಸತೀಶ್ ಸೈಲ್ ನಿವಾಸದಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಕಾರಣ ಶಾಸಕ ಸತೀಶ್ ಸೈಲ್ ಬೆಂಗಳೂರಿನಲ್ಲಿದ್ದಾರೆ. ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜೈಲು ಶಿಕ್ಷೆಗೊಳಗಾಗಿದ್ದ ಸತೀಶ್ ಸೈಲ್ ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ. ಮಲ್ಲಿಕಾರ್ಜುನ ಶಿಪ್ಪಿಂಗ್…

Read More

ಸಂಪುಟದಿಂದ ಕೆ.ಎನ್ ರಾಜಣ್ಣರನ್ನು ವಜಾ ಮಾಡಿಸಿದ್ದು ರಣದೀಪ್ ಸುರ್ಜೇವಾಲ!?

ಬೆಂಗಳೂರು, ಆಗಸ್ಟ್ 12: ಸಚಿವ ಸಂಪುಟದಿಂದ ಕೆ.ಎನ್ ರಾಜಣ್ಣರನ್ನ ವಜಾಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ರಣದೀಪ್ ಸುರ್ಜೇವಾಲಾ..! ಹೌದು, ಹಾಲಿ ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ರಣದೀಪ್ ಸುರ್ಜೇವಾಲಾ ಇತ್ತೀಚೆಗೆ ಬೆಂಗಳೂರಿಗೆ ಬಂದು ಸಚಿವರು, ಶಾಸಕರ ಸಭೆ ನಡೆಸಿದ್ದರು. ಇದನ್ನು ಸಹಕಾರ ಖಾತೆ ಸಚಿವರಾಗಿದ್ದ ಕೆ.ಎನ್.ರಾಜಣ್ಣ ಬಹಿರಂಗವಾಗಿ ಪ್ರಶ್ನಿಸಿದ್ದರು. ಜೊತೆಗೆ ರಣದೀಪ್ ಸುರ್ಜೇವಾಲಾ, ಎಲ್ಲಾ ಕ್ಯಾಬಿನೆಟ್ ಸಚಿವರನ್ನು ಪ್ರತ್ಯೇಕವಾಗಿ ಕರೆದು ಮಾತುಕತೆ ನಡೆಸಿದ್ದರು. ಈ ಮಾತುಕತೆಗೆ ಸಹಕಾರ ಸಚಿವರಾಗಿದ್ದ ಕೆ.ಎನ್‌.ರಾಜಣ್ಣ…

Read More

ಕಾಲ್ತುಳಿತ ಕೇಸ್, ರಾಜಣ್ಣ ವಜಾ ಗಲಾಟೆ ಮಧ್ಯೆ ಅಧಿವೇಶನದಲ್ಲಿ 15 ವಿಧೇಯಕಗಳ ಮಂಡನೆ

ಬೆಂಗಳೂರು, ಆಗಸ್ಟ್ 12: ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನದ 2ನೇ ದಿನದ ಕಲಾಪ ನಡೆಯುತ್ತಿದೆ. ಸಚಿವ ಕೆ.ಎನ್ ರಾಜಣ್ಣ ತಲೆದಂಡ, ಆರ್.ಸಿ.ಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಪ್ರಕರಣ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಮುಗಿಬಿದ್ದಿವೆ. ಇದರ ನಡುವೆ ಇಂದು(ಆಗಸ್ಟ್ 12) ಬರೋಬ್ಬರಿ 15 ವಿಧೇಯಕಗಳು ಮಂಡನೆಯಾಗಿವೆ. ಸಚಿವರಾದ ಪರಮೇಶ್ವರ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಸಂತೋಷ್ ಲಾಡ್, ಎಂ.ಸಿ ಸುಧಾಕರ್ ಹಾಗೂ ಬೋಸರಾಜು ಪರವಾಗಿ ಕಾನೂನು ಸಚಿವ…

Read More

ಆಧಾರ್ ಕಾರ್ಡ್ ಭಾರತದ ಪೌರತ್ವದ ದಾಖಲೆಯಲ್ಲ: ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಬೆಂಬಲ

ನವದೆಹಲಿ, ಆಗಸ್ಟ್ 12: ಆಧಾರ್ ಕಾರ್ಡ್ ಅನ್ನು ಭಾರತೀಯ ಪೌರತ್ವದ ಪುರಾವೆಯಾಗಿ ಪರಿಗಣಿಸಲು ಆಗುವುದಿಲ್ಲ. ಅದನ್ನು ಸರಿಯಾದ ಪರಿಶೀಲನೆಗೆ ಒಳಪಡಿಸಬೇಕು ಎಂಬ ಚುನಾವಣಾ ಆಯೋಗದ ನಿಲುವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ವಿವಿಧ ಸೇವೆಗಳನ್ನು ಪಡೆಯಲು ಆಧಾರ್ ಒಂದು ಪ್ರಮುಖ ಗುರುತಿನ ದಾಖಲೆಯಾಗಿ ಕಾರ್ಯನಿರ್ವಹಿಸುತ್ತದೆಯಾದರೂ ಅದು ಭಾರತೀಯ ಪೌರತ್ವದ ದಾಖಲೆಯಲ್ಲ ಎಂದು ಸುಪ್ರೀಂಕೋರ್ಟ್ ಒತ್ತಿ ಹೇಳಿದೆ. ಬಿಹಾರದ ವಿಶೇಷ ಪರಿಷ್ಕರಣೆ (SIR) ಕುರಿತಾದ ವಿವಾದದ ಮಧ್ಯೆ ಸುಪ್ರೀಂಕೋರ್ಟ್‌ನ ಈ ತೀರ್ಪು ಬಂದಿದೆ. ಈ ವಿಷಯವನ್ನು ಆಲಿಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸೂರ್ಯಕಾಂತ್,…

Read More

ಧರ್ಮಸ್ಥಳ ಸುತ್ತಮುತ್ತ ಶವಗಳನ್ನು ಹೂತಿಟ್ಟ ಕೇಸ್: 13ನೇ ಪಾಯಿಂಟ್ ನಲ್ಲಿ ಜಿಪಿಆರ್ ನಿಂದ ಪರಿಶೀಲನೆ

ಬೆಳ್ತಂಗಡಿ, ಆಗಸ್ಟ್ 12: ತಾಲ್ಲೂಕಿನ ಧರ್ಮಸ್ಥಳ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ದೂರುದಾರ ಗುರುತಿಸಿರುವ 13ನೇ ಸ್ಥಳದಲ್ಲಿ ಡ್ರೋನ್‌ ಜಿಪಿಆರ್‌ ಮೂಲಕ ಎಸ್‌‍ಐಟಿ ಇಂಚಿಂಚೂ ಕಾರ್ಯಾಚರಣೆ ನಡೆಸುತ್ತಿದೆ. ದೆಹಲಿಯಿಂದ ನಾಲ್ವರ ಜಿಪಿಆರ್‌ ತಂಡ ಮಂಗಳೂರಿಗೆ ನಿನ್ನೆ ಬಂದಿದ್ದು, ಇಂದು ಎಸ್‌‍ಐಟಿ ತಂಡ ಈ ಸ್ಥಳದಲ್ಲಿ ಡ್ರೋನ್‌ ಜಿಪಿಆರ್‌ ಮೂಲಕ ಅಸ್ಥಿಪಂಜರದ ಅವಶೇಷಗಳೇನಾದರೂ ಪತ್ತೆಯಾಗಬಹುದೇ? ಎಂಬುದನ್ನು ಎದುರು ನೋಡುತ್ತಿದೆ. ದೂರುದಾರ ಗುರುತಿಸಿರುವ 13ನೇ ಸ್ಥಳ ನೇತ್ರಾವತಿ -ಅಜೆಕುರಿ ರಸ್ತೆಯ ನೇತ್ರಾವತಿ ನದಿ ಪಕ್ಕದಲ್ಲೇ ಇರುವ ಕಿಂಡಿ ಅಣೆಕಟ್ಟಿನ ಸಮೀಪವಿರುವುದರಿಂದ ಉತ್ಖನನ…

Read More

ಕೆ.ಎನ್ ರಾಜಣ್ಣ ಸಂಪುಟದಿಂದ ವಜಾ ಹಿನ್ನೆಲೆ: ಮಧುಗಿರಿಯಲ್ಲಿ ಬೆಂಬಲಿಗರಿಂದ ಭಾರೀ ಪ್ರತಿಭಟನೆ

ಮಧುಗಿರಿ, ಆಗಸ್ಟ್ 12: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಸಹಕಾರ ಸಚಿವರಾಗಿದ್ದ ಕೆ.ಎನ್ ರಾಜಣ್ಣರನ್ನು ಸಂಪುಟದಿಂದ ವಜಾಗೊಳಿಸಲಾಗಿದೆ. ಕಾಂಗ್ರೆಸ್​ ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸದ್ಯ ಇದನ್ನು ವಿರೋಧಿಸಿ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಕೆ.ಎನ್ ರಾಜಣ್ಣ ಅವರ ಬೆಂಬಲಿಗರು, ಅಭಿಮಾನಿಗಳು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ವೇಳೆ ನೇಣು ಬಿಗಿದುಕೊಂಡು ಕೆಲ ಬೆಂಬಲಿಗರು ಯತ್ನಿಸಿದರೆ, ಮತ್ತೆ ಕೆಲವರು ಪೆಟ್ರೋಲ್ ಸುರಿದುಕೊಂಡು ಜೀವ ತೆಗೆದುಕೊಳ್ಳಲು ಯತ್ನಿಸಿದ್ದಾರೆ. ಕೆ.ಎನ್ ರಾಜಣ್ಣರಿಂದ ರಾಜೀನಾಮೆ ಪಡೆದ ಕಾರಣ ಮಧುಗಿರಿಯ…

Read More
error: Content is protected !!