Headlines

ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಕಳುಹಿಸಿದ್ದ ಮೂವರ ಬಂಧನ

ಬೆಂಗಳೂರು, ಆಗಸ್ಟ್ 2: ಸಾಮಾಜಿಕ ಜಾಲತಾಣದಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾಗೆ ಅವಹೇಳನಕಾರಿ ಸಂದೇಶ ಕಳುಹಿಸಿದ್ದ ಮೂವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ, ಚಿತ್ರದುರ್ಗ ಮೂಲದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂವರು ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್‌ ಹಾಕಿ ಸವಾಲ್‌ ಹಾಕಿದ್ದರು. ಬಳಿಕ ಈ ಬಗ್ಗೆ ನಟಿ ರಮ್ಯಾ ದೂರು ನೀಡುವ ವೇಳೆ 43 ಅಕೌಂಟ್‌‍ಗಳ ಹೆಸರು ಉಲ್ಲೇಖಿಸಿ ದೂರು ದಾಖಲಿಸಿದ್ದರು. ಐಪಿ ಅಡ್ರೆಸ್‌‍ ಆಧರಿಸಿ ಪ್ರಕರಣದಲ್ಲಿ ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ…

Read More

ಧರ್ಮಸ್ಥಳ ಬಳಿ ಶವಗಳನ್ನು ಹೂತಿಟ್ಟ ಕೇಸ್: ಅತ್ಯಾಚಾರ ಮಾಡಲಾಗಿದೆಯೇ? ಎಂದು ನಿಖರವಾಗಿ ಹೇಳುವುದು ಅಸಾಧ್ಯ ಎಂದ ಎಸ್ಐಟಿ

ಮಂಗಳೂರು, ಆಗಸ್ಟ್ 1: ಅನಾಮಿಕ ದೂರುದಾರನ ಆಗ್ರಹದ ಮೇರೆಗೆ ಉತ್ಖನನ ಕೆಲಸ ಜಾರಿಯಲ್ಲಿದೆ ಮತ್ತು ಇವತ್ತು 7ನೇ ಸ್ಥಳದಲ್ಲಿ ಅಸ್ಥಿಪಂಜರಗಳನ್ನು ಪತ್ತೆ ಮಾಡುವ ಕೆಲಸವನ್ನು ಪೌರಕಾರ್ಮಿಕರು ಮಾಡುತ್ತಿದ್ದಾರೆ ಎಂದು ಹೇಳುತ್ತಾರೆ. ನೇತ್ರಾವತಿ ನದಿ ಹರಿಯುತ್ತಿರುವ ತೀರದ ಮತ್ತೊಂದು ಭಾಗದಲ್ಲಿ ಭೂಮಿ ತೋಡುವ ಕೆಲಸ ನಡೆಯುತ್ತಿದೆ ಮತ್ತು ನದಿ ತೀರದ ಈ ಭಾಗದಲ್ಲಿ ನಿಂತಿದ್ದಾರೆ. ಇದುವರೆಗೆ ಎರಡೂವರೆ ಅಡಿ ತೋಡಿದರೂ ಮಾನವ ದೇಹದ ಮೂಳೆಗಳಾಗಲೀ, ಅಸ್ಥಿಪಂಜರವಾಗಲೀ ಸಿಕ್ಕಿಲ್ಲ. ನಿನ್ನೆ ಮೂಳೆಗಳು ಸಿಕ್ಕಿದ್ದು ಮೂರೂವರೆ ಅಡಿ ಅಗೆತದ ನಂತರ, ಹಾಗಾಗಿ…

Read More

ಭಾರತದ ಆರ್ಥಿಕತೆ ಸತ್ತಿದೆ ಎಂದು ಹೇಳಿದ ಅಮೆರಿಕಾ ಅಧ್ಯಕ್ಷ ಟ್ರಂಪ್ ‌ಕುಡುಕ: ಮಾಜಿ ಪ್ರಧಾನಿ ದೇವೇಗೌಡ್ರು ಗರಂ

ಬೆಂಗಳೂರು, ಆಗಸ್ಟ್ 1: ಭಾರತದ ಆರ್ಥಿಕತೆ ಸತ್ತು ಹೋಗಿದೆ ಎಂದು ಹೇಳಿಕೆ ನೀಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ವಿರುದ್ಧ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಡೊನಾಲ್ಡ್ ಟ್ರಂಪ್ ಅವರ ಹೇಳಿಕೆ ಆಧಾರ ರಹಿತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಬಲಿಷ್ಠ ಆರ್ಥಿಕ ದೇಶವಾಗುತ್ತಿದೆ” ಎಂದು ಹೇಳಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ, “ಡೊನಾಲ್ಡ್ ಟ್ರಂಪ್ ಅವರು ಕುರುಡರಾಗಿರಬಹುದು ಅಥವಾ ಅಜ್ಞಾನಿ…

Read More

ಕೆ.ಆರ್ ನಗರ ಮಹಿಳೆಯ ಕಿಡ್ನ್ಯಾಪ್-ರೇಪ್ ಆರೋಪದ ಕೇಸ್: ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು!

ಬೆಂಗಳೂರು, ಆಗಸ್ಟ್ 1: ಮೈಸೂರಿನ ಕೆ.ಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣವಿರುದ್ಧ ತೀರ್ಪು ಪ್ರಕಟಿಸಿದೆ.ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದ್ದರು. ಇದೀಗ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದಾರೆ. ಹಾಗಾದರೆ ಈ ಪ್ರಕರಣದಲ್ಲಿ ತಪ್ಪಿತಸ್ಥ ಅಪರಾಧಿ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಏನು? ಎಷ್ಟು? ಎಂಬುದನ್ನು ನ್ಯಾಯಾಲಯ ಇನ್ನಷ್ಟೇ…

Read More

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಕ್ಲೀನ್ ಚಿಟ್ ಕೊಟ್ಟ ನ್ಯಾಯಾಂಗ ವರದಿ!

ಬೆಂಗಳೂರು/ಮೈಸೂರು, ಜುಲೈ 31: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಅಕ್ರಮ ಪ್ರಕರಣದಲ್ಲಿ ಇಂದು ಗುರುವಾರ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಮಹತ್ವದ ರಿಲೀಫ್ ಸಿಕ್ಕಿದೆ. ನಿವೃತ್ತ ನ್ಯಾಯಾಧೀಶ ದೇಸಾಯಿ ಕಮಿಟಿ ನೀಡಿದ ವರದಿಯಲ್ಲಿ ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಲಾಗಿದ್ದು, ಸುಪ್ರೀಂಕೋರ್ಟ್ ಬಳಿಕ ಈಗ ದೇಸಾಯಿ ಕಮಿಟಿಯಿಂದಲೂ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಕಳೆದ ವಾರವಷ್ಟೇ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರಿಗೆ ಮುಡಾ ಕೇಸ್‌ನಲ್ಲಿ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿತ್ತು. ಇದರ…

Read More

ಧರ್ಮಸ್ಥಳ ಬಳಿ ಹೂತಿಟ್ಟ ಶವಗಳ ಕೇಸ್: 6ನೇ ಪಾಯಿಂಟ್ ನಲ್ಲಿ 10 ಮೂಳೆಗಳು ಪತ್ತೆ!

ಮಂಗಳೂರು, ಜುಲೈ 31: ದಕ್ಷಿಣ ಕನ್ನಡ ಜಿಲ್ಲೆಯ ಸುಪ್ರಸಿದ್ಧ ಜನಪ್ರಿಯ ಧಾರ್ಮಿಕ ಸ್ಥಳ ಧರ್ಮಸ್ಥಳದ ನೇತ್ರಾವತಿ ನದಿ ತೀರದ ಆಸುಪಾಸಲ್ಲಿ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಏಳೆಂಟು ಮೂಳೆಗಳು ಸಿಕ್ಕಿವೆ. ಇಂದು ಗುರುವಾರ ಎಸ್ಐಟಿ ಅಧಿಕಾರಿಗಳು ದೂರುದಾರ ತೋರಿಸಿದ ಜಾಗದಲ್ಲಿ 6ನೇ ಪಾಯಿಂಟ್ ನಲ್ಲಿ ಗುಂಡಿ ಅಗೆದಿದ್ದಾರೆ. ಈ ವೇಳೆ ತಲೆಬುರುಡೆ ಸೇರಿ 10 ಮೂಳೆಗಳು ಸಿಕ್ಕಿವೆ ಎಂದು ತಿಳಿದುಬಂದಿದೆ. 6ನೇ ಪಾಯಿಂಟ್ ನಲ್ಲಿ ಅಸ್ತಿಪಂಜರದ ಮೂಳೆಗಳು ಪತ್ತೆಯಾಗಿವೆ ಎಂದು ಎಸ್‌ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ….

Read More

ನಾಳೆಯಿಂದ ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ಏರಿಕೆ!

ಬೆಂಗಳೂರು, ಜುಲೈ 31: ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಟೋರಿಕ್ಷಾ ಪ್ರಯಾಣದ ದರಗಳನ್ನು ಪರಿಷ್ಕರಿಸಿದ್ದು, ನಾಳೆ ಆಗಸ್ಟ್ 1 ರಿಂದಲೇ ನೂತನ ದರ ಜಾರಿಗೆ ಬರಲಿದೆ. ಬೆಂಗಳೂರು ನಗರ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಆಟೋರಿಕ್ಷಾ ಮೀಟರ್‌ ದರ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ. ಕನಿಷ್ಠ ದರ ಮೊದಲ 2 ಕಿ.ಮೀ.ಗೆ ತಲಾ 36 ರೂ. ನಿಗದಿಪಡಿಸಿದ್ದು, ಆಟೋರಿಕ್ಷಾದಲ್ಲಿ ಮೂವರು ಪ್ರಯಾಣಿಕರಿಗೆ ಪ್ರಯಾಣಿಸಲು ಅವಕಾಶವಿದೆ. ಕಾಯುವಿಕೆ ದರವು ಮೊದಲ 5 ನಿಮಿಷ ಉಚಿತವಾಗಿದೆ. ಅನಂತರ ಪ್ರತಿ 15…

Read More

ಸರಣಿ ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಮತ್ತೆ ಮುಂದೂಡಿಕೆ!

ಬೆಂಗಳೂರು, ಜುಲೈ 30: ಸರಣಿ ಅತ್ಯಾಚಾರ ಆರೋಪ ಎದುರಿಸುತ್ತಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ತೀರ್ಪನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತ್ತೆರಡು ದಿನ ಮುಂದೂಡಿದೆ. ಮೈಸೂರಿನ ಕೆ.ಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದರು. ಇದೀಗ ಆಗಸ್ಟ್ 1ಕ್ಕೆ ತೀರ್ಪನ್ನು ಮುಂದೂಡಿಕೆ ಮಾಡಲಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧದ ತೀರ್ಪು…

Read More

ಕರ್ನಾಟಕದ ಇತಿಹಾಸದಲ್ಲೇ ಅತಿದೊಡ್ಡ ಸೈಬರ್ ಕ್ರೈಂ: ಕಂಪನಿಯ ಸರ್ವರ್ ಹ್ಯಾಕ್ ಮಾಡಿ 378 ಕೋಟಿ ರೂ‌. ಲೂಟಿ!

ಬೆಂಗಳೂರು, ಜುಲೈ 30: ಕರ್ನಾಟಕ ಇತಿಹಾಸದಲ್ಲೇ ಅತಿದೊಡ್ಡ ಸೈಬರ್ ವಂಚನೆ ಪ್ರಕರಣವೊಂದು ಬೆಂಗಳೂರಿನ ವೈಟ್​ಫೀಲ್ಡ್​ನಲ್ಲಿ ಬೆಳಕಿಗೆ ಬಂದಿದೆ. ದೇಶದ ಪ್ರತಿಷ್ಠಿತ ಕ್ರಿಪ್ಟೋ ಕರೆನ್ಸಿ ಕಂಪನಿಯಾದ ನೆಬಿಲೊ ಟೆಕ್ನಾಲಜೀಸ್ ಪ್ರೈವೇಟ್​ ಲಿಮಿಟೆಡ್​ನ ಸರ್ವರ್ ಹ್ಯಾಕ್ ಮಾಡಿ, ಸೈಬರ್​ ಖದೀಮರು 378 ಕೋಟಿ ರೂಪಾಯಿ ಕಳವು ಮಾಡಿದ್ದಾರೆ. ಪ್ರಕರಣ ಸಂಬಂಧ ವೈಟ್​​ಫೀಲ್ಡ್ ಸೈಬರ್​ ಕ್ರೈಂ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ನೆಬಿಲೊ ಟೆಕ್ನಾಲಜೀಸ್ ಕಂಪನಿ ನೌಕರ ರಾಹುಲ್ ಅಗರ್ವಾಲ್ ಎಂಬುವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಸೈಬರ್​…

Read More

ಆಗಸ್ಟ್ 1 ರಿಂದ UPI ಬಳಕೆಗೆ ಹೊಸ ನಿಯಮ ಜಾರಿ

ಭಾರತ ದೇಶಾದ್ಯಂತ ಯುಪಿಐ ಪೇಮೆಂಟ್‌ನಲ್ಲಿ ಆಗಸ್ಟ್ 1ರಿಂದ ಕೆಲ ಪ್ರಮುಖ ಬದಲಾವಣೆಯಾಗಲಿದೆ. ಯುನಿಫೈಡ್‌ ಪೇಮೆಂತ್ಸ್ ಇಂಟರ್ಫೇಸ್‌‍ ನಿಯಮಗಳಲ್ಲಿ ಮಹತ್ವದ ಬದಲಾವಣೆಗಳ ಜಾರಿಗೆ ತರಲು ನ್ಯಾಷನಲ್‌ ಪೇಮೆಂಟ್ಸ್ ಕಾರ್ಪೊರೇಷನ್‌ ಆಫ್‌ ಇಂಡಿಯಾ ಮುಂದಾಗಿದೆ. ಈ ಹೊಸ ಮಾರ್ಗಸೂಚಿಗಳು ಗೂಗಲ್‌ ಪೇ, ಫೋನ್‌ ಪೇ ಮತ್ತು ಪೇಟಿಎಂನಂತಹ ಡಿಜಿಟಲ್‌ ಪಾವತಿ ಆಪ್‌ಗಳಿಗೆ ಅನ್ವಯವಾಗಲಿವೆ. ಈ ಬದಲಾವಣೆಗಳು ಬಳಕೆದಾರರ ದೈನಂದಿನ ವಹಿವಾಟುಗಳ ಮೇಲೆ ಅಂತಹ ಬದಲಾವಣೆಗಳನ್ನೇನೂ ತರುವುದಿಲ್ಲವಾದರೂ, ಬ್ಯಾಲೆನ್ಸ್ ಚೆಕ್‌ ಮತ್ತು ಆಟೋ ಡೆಬಿಟ್‌ಗಳಂತಹ ಕೆಲವು ಕಾರ್ಯಗಳಿಗೆ ಮಿತಿಗಳನ್ನು ಹೇರಲಿದೆ. ಹೊಸ…

Read More
error: Content is protected !!