Headlines

ಸಂಪುಟದಿಂದ ಕೆ.ಎನ್ ರಾಜಣ್ಣರನ್ನು ವಜಾ ಮಾಡಿಸಿದ್ದು ರಣದೀಪ್ ಸುರ್ಜೇವಾಲ!?

ಬೆಂಗಳೂರು, ಆಗಸ್ಟ್ 12: ಸಚಿವ ಸಂಪುಟದಿಂದ ಕೆ.ಎನ್ ರಾಜಣ್ಣರನ್ನ ವಜಾಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ರಣದೀಪ್ ಸುರ್ಜೇವಾಲಾ..! ಹೌದು, ಹಾಲಿ ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ರಣದೀಪ್ ಸುರ್ಜೇವಾಲಾ ಇತ್ತೀಚೆಗೆ ಬೆಂಗಳೂರಿಗೆ ಬಂದು ಸಚಿವರು, ಶಾಸಕರ ಸಭೆ ನಡೆಸಿದ್ದರು. ಇದನ್ನು ಸಹಕಾರ ಖಾತೆ ಸಚಿವರಾಗಿದ್ದ ಕೆ.ಎನ್.ರಾಜಣ್ಣ ಬಹಿರಂಗವಾಗಿ ಪ್ರಶ್ನಿಸಿದ್ದರು. ಜೊತೆಗೆ ರಣದೀಪ್ ಸುರ್ಜೇವಾಲಾ, ಎಲ್ಲಾ ಕ್ಯಾಬಿನೆಟ್ ಸಚಿವರನ್ನು ಪ್ರತ್ಯೇಕವಾಗಿ ಕರೆದು ಮಾತುಕತೆ ನಡೆಸಿದ್ದರು. ಈ ಮಾತುಕತೆಗೆ ಸಹಕಾರ ಸಚಿವರಾಗಿದ್ದ ಕೆ.ಎನ್‌.ರಾಜಣ್ಣ…

Read More

ಕಾಲ್ತುಳಿತ ಕೇಸ್, ರಾಜಣ್ಣ ವಜಾ ಗಲಾಟೆ ಮಧ್ಯೆ ಅಧಿವೇಶನದಲ್ಲಿ 15 ವಿಧೇಯಕಗಳ ಮಂಡನೆ

ಬೆಂಗಳೂರು, ಆಗಸ್ಟ್ 12: ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನದ 2ನೇ ದಿನದ ಕಲಾಪ ನಡೆಯುತ್ತಿದೆ. ಸಚಿವ ಕೆ.ಎನ್ ರಾಜಣ್ಣ ತಲೆದಂಡ, ಆರ್.ಸಿ.ಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಪ್ರಕರಣ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಮುಗಿಬಿದ್ದಿವೆ. ಇದರ ನಡುವೆ ಇಂದು(ಆಗಸ್ಟ್ 12) ಬರೋಬ್ಬರಿ 15 ವಿಧೇಯಕಗಳು ಮಂಡನೆಯಾಗಿವೆ. ಸಚಿವರಾದ ಪರಮೇಶ್ವರ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಸಂತೋಷ್ ಲಾಡ್, ಎಂ.ಸಿ ಸುಧಾಕರ್ ಹಾಗೂ ಬೋಸರಾಜು ಪರವಾಗಿ ಕಾನೂನು ಸಚಿವ…

Read More

ಆಧಾರ್ ಕಾರ್ಡ್ ಭಾರತದ ಪೌರತ್ವದ ದಾಖಲೆಯಲ್ಲ: ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಬೆಂಬಲ

ನವದೆಹಲಿ, ಆಗಸ್ಟ್ 12: ಆಧಾರ್ ಕಾರ್ಡ್ ಅನ್ನು ಭಾರತೀಯ ಪೌರತ್ವದ ಪುರಾವೆಯಾಗಿ ಪರಿಗಣಿಸಲು ಆಗುವುದಿಲ್ಲ. ಅದನ್ನು ಸರಿಯಾದ ಪರಿಶೀಲನೆಗೆ ಒಳಪಡಿಸಬೇಕು ಎಂಬ ಚುನಾವಣಾ ಆಯೋಗದ ನಿಲುವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ವಿವಿಧ ಸೇವೆಗಳನ್ನು ಪಡೆಯಲು ಆಧಾರ್ ಒಂದು ಪ್ರಮುಖ ಗುರುತಿನ ದಾಖಲೆಯಾಗಿ ಕಾರ್ಯನಿರ್ವಹಿಸುತ್ತದೆಯಾದರೂ ಅದು ಭಾರತೀಯ ಪೌರತ್ವದ ದಾಖಲೆಯಲ್ಲ ಎಂದು ಸುಪ್ರೀಂಕೋರ್ಟ್ ಒತ್ತಿ ಹೇಳಿದೆ. ಬಿಹಾರದ ವಿಶೇಷ ಪರಿಷ್ಕರಣೆ (SIR) ಕುರಿತಾದ ವಿವಾದದ ಮಧ್ಯೆ ಸುಪ್ರೀಂಕೋರ್ಟ್‌ನ ಈ ತೀರ್ಪು ಬಂದಿದೆ. ಈ ವಿಷಯವನ್ನು ಆಲಿಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸೂರ್ಯಕಾಂತ್,…

Read More

ಧರ್ಮಸ್ಥಳ ಸುತ್ತಮುತ್ತ ಶವಗಳನ್ನು ಹೂತಿಟ್ಟ ಕೇಸ್: 13ನೇ ಪಾಯಿಂಟ್ ನಲ್ಲಿ ಜಿಪಿಆರ್ ನಿಂದ ಪರಿಶೀಲನೆ

ಬೆಳ್ತಂಗಡಿ, ಆಗಸ್ಟ್ 12: ತಾಲ್ಲೂಕಿನ ಧರ್ಮಸ್ಥಳ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ದೂರುದಾರ ಗುರುತಿಸಿರುವ 13ನೇ ಸ್ಥಳದಲ್ಲಿ ಡ್ರೋನ್‌ ಜಿಪಿಆರ್‌ ಮೂಲಕ ಎಸ್‌‍ಐಟಿ ಇಂಚಿಂಚೂ ಕಾರ್ಯಾಚರಣೆ ನಡೆಸುತ್ತಿದೆ. ದೆಹಲಿಯಿಂದ ನಾಲ್ವರ ಜಿಪಿಆರ್‌ ತಂಡ ಮಂಗಳೂರಿಗೆ ನಿನ್ನೆ ಬಂದಿದ್ದು, ಇಂದು ಎಸ್‌‍ಐಟಿ ತಂಡ ಈ ಸ್ಥಳದಲ್ಲಿ ಡ್ರೋನ್‌ ಜಿಪಿಆರ್‌ ಮೂಲಕ ಅಸ್ಥಿಪಂಜರದ ಅವಶೇಷಗಳೇನಾದರೂ ಪತ್ತೆಯಾಗಬಹುದೇ? ಎಂಬುದನ್ನು ಎದುರು ನೋಡುತ್ತಿದೆ. ದೂರುದಾರ ಗುರುತಿಸಿರುವ 13ನೇ ಸ್ಥಳ ನೇತ್ರಾವತಿ -ಅಜೆಕುರಿ ರಸ್ತೆಯ ನೇತ್ರಾವತಿ ನದಿ ಪಕ್ಕದಲ್ಲೇ ಇರುವ ಕಿಂಡಿ ಅಣೆಕಟ್ಟಿನ ಸಮೀಪವಿರುವುದರಿಂದ ಉತ್ಖನನ…

Read More

ಕೆ.ಎನ್ ರಾಜಣ್ಣ ಸಂಪುಟದಿಂದ ವಜಾ ಹಿನ್ನೆಲೆ: ಮಧುಗಿರಿಯಲ್ಲಿ ಬೆಂಬಲಿಗರಿಂದ ಭಾರೀ ಪ್ರತಿಭಟನೆ

ಮಧುಗಿರಿ, ಆಗಸ್ಟ್ 12: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಸಹಕಾರ ಸಚಿವರಾಗಿದ್ದ ಕೆ.ಎನ್ ರಾಜಣ್ಣರನ್ನು ಸಂಪುಟದಿಂದ ವಜಾಗೊಳಿಸಲಾಗಿದೆ. ಕಾಂಗ್ರೆಸ್​ ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸದ್ಯ ಇದನ್ನು ವಿರೋಧಿಸಿ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಕೆ.ಎನ್ ರಾಜಣ್ಣ ಅವರ ಬೆಂಬಲಿಗರು, ಅಭಿಮಾನಿಗಳು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ವೇಳೆ ನೇಣು ಬಿಗಿದುಕೊಂಡು ಕೆಲ ಬೆಂಬಲಿಗರು ಯತ್ನಿಸಿದರೆ, ಮತ್ತೆ ಕೆಲವರು ಪೆಟ್ರೋಲ್ ಸುರಿದುಕೊಂಡು ಜೀವ ತೆಗೆದುಕೊಳ್ಳಲು ಯತ್ನಿಸಿದ್ದಾರೆ. ಕೆ.ಎನ್ ರಾಜಣ್ಣರಿಂದ ರಾಜೀನಾಮೆ ಪಡೆದ ಕಾರಣ ಮಧುಗಿರಿಯ…

Read More

ಕೆ.ಎನ್ ರಾಜಣ್ಣ ತಲೆದಂಡ ಬೆನ್ನಲ್ಲೇ ಸಿದ್ದರಾಮಯ್ಯ ಬೆಂಬಲಿಗ ಸಚಿವರು-ಶಾಸಕರು ಥಂಡಾ!

ಬೆಂಗಳೂರು, ಆಗಸ್ಟ್ 12: ಕೆ.ಎನ್‌.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವ ಮೂಲಕ ಡಿ.ಕೆ.ಶಿವಕುಮಾರ್‌ ಅವರ ಕೈಮೇಲಾಗಿದ್ದು, ಕಾಂಗ್ರೆಸ್‌‍ ಪಕ್ಷದಲ್ಲಿ ಶಿಸ್ತು ಪುನರ್‌ಸ್ಥಾಪನೆಯ ಪ್ರಯತ್ನಗಳಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಬ್ಯಾಟಿಂಗ್‌ ಮಾಡುತ್ತಿದ್ದ ಸಚಿವರು ಮತ್ತು ಶಾಸಕರು ಥಂಡಾ ಒಡೆದಂತಾಗಿದೆ. ಕಾಂಗ್ರೆಸ್‌‍ ಪಕ್ಷದಲ್ಲಿ ಎರಡು ಭಾರಿ ಮುಖ್ಯಮಂತ್ರಿಯಾಗಿ ದೇವರಾಜ್‌ ಅರಸು ಸೇರಿದಂತೆ ಎಲ್ಲಾ ನಾಯಕರ ದಾಖಲೆ ಮುರಿದಿದ್ದ ಸಿದ್ದರಾಮಯ್ಯ ಅದ್ವೀತಿಯ ನಾಯಕರಾಗಿ ಹೊರಹೊಮ್ಮಿದ್ದರು. ರಾಜಕೀಯದಲ್ಲಿ ಮೊದಲಿನಿಂದಲೂ ಸಿದ್ದರಾಮಯ್ಯ ಅವರು ತಮ ಬೆಂಬಲಿಗರ ಹಿತರಕ್ಷಣೆ ಮಾಡುವಲ್ಲಿ ಎತ್ತಿದ ಕೈ. ಯಾವುದೇ…

Read More

ಕರ್ನಾಟಕದಲ್ಲಿ ಎಂ.ಎಸ್.ಎಂ.ಇ ಮತ್ತು ಕಾರ್ಮಿಕ ಕಲ್ಯಾಣದಲ್ಲಿ ದಾಖಲೆ ಸಾಧನೆ

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಮತ್ತು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯದ ರಾಜ್ಯ ಸಚಿವೆ ಸು.ಶ್ರೀ. ಶೋಭಾ ಕರಂದ್ಲಾಜೆ ಅವರ ಸಕಾರಾತ್ಮಕ ದೃಷ್ಟಿಕೋನ ಹಾಗೂ ವೃತ್ತಿಪರತೆಯಿಂದ ಎಂ.ಎಸ್.ಎಂ.ಇ ಉದ್ಯೋಗ ಮತ್ತು ಕಾರ್ಮಿಕ ಸಚಿವಾಲಯದ ಯೋಜನೆಗಳು ಕುಶಲಕರ್ಮಿಗಳಿಗೆ, ಸಣ್ಣ ವ್ಯಾಪಾರಸ್ಥರಿಗೆ, ಉದ್ಯಮಕರ್ತರಿಗೆ, ಮಹಿಳೆಯರಿಗೆ ತಲುಪಲು ಸಾಧ್ಯವಾಗಿದೆ. ಸಚಿವಾಲಯದ ಉಪಕ್ರಮಗಳಿಂದ ಕರ್ನಾಟಕದಲ್ಲಿ ಹೆಚ್ಚಿನ ಸಾಮಾಜಿಕ ಭದ್ರತೆ, ಆರ್ಥಿಕ ಬೆಳವಣಿಗೆ ಸಾಧ್ಯವಾಗಿದೆ. ಭಾರತದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (MSME) ವಲಯವು ಗಮನಾರ್ಹ ಯಶಸ್ಸನ್ನು ಪ್ರದರ್ಶಿಸಿದ್ದು,…

Read More

ಸಹಕಾರ ಸಚಿವ ಕೆ.ಎನ್ ರಾಜಣ್ಣ ದಿಢೀರ್ ರಾಜೀನಾಮೆ!!!

ಬೆಂಗಳೂರು, ಆಗಸ್ಟ್ 11: ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರು ದಿಢೀರನೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿಯ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಕೆ.ಎನ್​ ರಾಜಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಕೆ.ಎನ್. ರಾಜಣ್ಣ ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಬಗ್ಗೆ ಸಚಿವ ಕೆ.ಎನ್​ ರಾಜಣ್ಣ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಬಳಿಕ ಸ್ಪಷ್ಟನೆ ನೀಡುತ್ತೇನೆ. ಯಾವ ವಿಚಾರಕ್ಕೆ ಹೈಕಮಾಂಡ್​…

Read More

ಮತ ಕಳುವು ಆರೋಪ: ಪ್ರತಿಭಟನೆ ನಡೆಸಿದ ಇಂಡಿಯಾ ಮೈತ್ರಿಕೂಟದ ಸಂಸದರು ಅರೆಸ್ಟ್

ನವದೆಹಲಿ, ಆಗಸ್ಟ್11: ಮತಕಳುವಿನ ಆರೋಪ ಮಾಡಿರುವ ಪ್ರತಿಪಕ್ಷಗಳ ಒಕ್ಕೂಟದ ಸಂಸದರು ಲೋಕಸಭೆಯ ವಿ.ಪಕ್ಷ ನಾಯಕ ರಾಹುಲ್​ ಗಾಂಧಿ ನೇತೃತ್ವದಲ್ಲಿ ಸಂಸತ್​ ಭವನದಿಂದ ಚುನಾವಣಾ ಆಯೋಗದ ಮುಖ್ಯ ಕಚೇರಿವರೆಗೆ ನಡೆಸುತ್ತಿರುವ ಪ್ರತಿಭಟನಾ ಮೆರವಣಿಗೆಯನ್ನು ದೆಹಲಿ ಪೊಲೀಸರು ತಡೆದಿದ್ದಾರೆ. ಬಿಹಾರದಲ್ಲಿ ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ ಹಾಗೂ ಮತ ಕಳುವಿನ ಆರೋಪದ ಹಿನ್ನೆಲೆ ಈ ಪ್ರತಿಭಟನೆ ನಡೆದಿದೆ. ಸಂಸತ್​ ಭವನದಿಂದ ಇಂದು ಸೋಮವಾರ ಬೆಳಗ್ಗೆ 11.30ಕ್ಕೆ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಇಲ್ಲಿಂದ ಒಂದು ಕಿ.ಮೀ…

Read More

ವಿಷ್ಣುವರ್ಧನ್ ವಿರೋಧಿಗಳಿಗೆ ಬಸವಣ್ಣನವರ ವಚನದ ಮೂಲಕ‌ ಉಪೇಂದ್ರ ತಿರುಗೇಟು

ಬೆಂಗಳೂರು, ಆಗಸ್ಟ್ 11: ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಸಮಾಧಿಯನ್ನ ನೆಲಸಮ ಮಾಡಿದ ಹಿನ್ನೆಲೆ ರಾಜ್ಯಾದ್ಯಂತ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಕನ್ನಡ ಚಿತ್ರರಂಗದ ನಟ, ನಟಿಯರು, ನಿರ್ದೇಶಕ ಹಾಗೂ ನಿರ್ಮಾಪಕರುಗಳು ಈ ಘಟನೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ರಿಯಲ್ ಸ್ಟಾರ್ ಉಪೇಂದ್ರ ಕೂಡ ತೀವ್ರವಾಗಿ ಖಂಡಿಸಿದ್ದಾರೆ. ನಟ ಹಾಗೂ ನಿರ್ದೇಶಕರಾಗಿರುವ ಉಪೇಂದ್ರ ಅವರು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ವಿಷ್ಣುವರ್ಧನ್ ಅವರ ಮೇಲಿನ ಅಪಾರ ಪ್ರೀತಿಯನ್ನ ವ್ಯಕ್ತಪಡಿಸಿದ್ದಾರೆ. ಬಸವಣ್ಣನವರ ವಚನದ ಸಾಲು ಹಾಕುವ ಮೂಲಕ ಈ ಕೃತ್ಯವೆಸಗಿದವರಿಗೆ ತಿರುಗೇಟು…

Read More
error: Content is protected !!