Headlines

ಮೆಟ್ರೋ ರೈಲಿನಲ್ಲಿ ಒಟ್ಟಿಗೆ ಸಂಚರಿಸಿದ ಪ್ರಧಾನಿ-ಸಿಎಂ ಸಚಿವರು

ಬೆಂಗಳೂರು, ಆಗಸ್ಟ್ 10: ನಗರದ ಆರ್‌.ವಿ.ರಸ್ತೆ-ಬೊಮಸಂದ್ರ ದವರೆಗೆ ಸಂಪರ್ಕ ಕಲ್ಪಿಸುವ ಹಳದಿ ಮಾರ್ಗದ ಮೆಟ್ರೋ ರೈಲಿಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಪ್ರಯಾಣಿಸುವ ಮೂಲಕ ನಮ ಮೆಟ್ರೋದ ಅನುಭವ ಪಡೆದುಕೊಂಡರು. ರಾಗಿಗುಡ್ಡದಿಂದ ಕೋನಪ್ಪನ ಅಗ್ರಹಾರದವರೆಗೆ ಕ್ಯೂಆರ್‌ ಕೋಡ್‌ ಮೂಲಕ ತಮ ಸ್ವಂತ ಹಣದಲ್ಲೇ ಟಿಕೆಟ್‌ ಖರೀದಿಸಿ ಮೆಟ್ರೋ ರೈಲಿನಲ್ಲಿ ಸಾಮಾನ್ಯರಂತೆ ನಿಂತುಕೊಂಡೇ ಪ್ರಯಾಣಿಸಿದ ಅವರು, ಪ್ರಯಾಣಿಕರಿಂದ ಕೆಲವು ಮಾಹಿತಿಯನ್ನು ಪಡೆದುಕೊಂಡರು. ಮೆಟ್ರೋ ಕಾರ್ಮಿಕರು, ಸಾರ್ವಜನಿಕರು, ಸರ್ಕಾರಿ ಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸೇರಿದಂತೆ ಕೆಲವು ಆಯ್ದ…

Read More

ಮತಗಳ್ಳತನ ಆರೋಪ: ರಾಹುಲ್ ಗಾಂಧಿಗೆ ರಾಜ್ಯ ಚುನಾವಣಾ ಆಯೋಗ ನೋಟಿಸ್

ಬೆಂಗಳೂರು, ಆಗಸ್ಟ್ 10: ಕಳೆದ ಲೋಕಸಭಾ ಚುನಾವಣೆ ವೇಳೆ ನಗರದ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ಮತಗಳ ಕಳ್ಳತನವಾಗಿದೆ ಎಂದು ನೀವು ಮಾಡಿರುವ ಆರೋಪಗಳಿಗೆ ದಾಖಲೆಗಳನ್ನು ನೀಡಿ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್​ ಗಾಂಧಿ ಅವರಿಗೆ ರಾಜ್ಯ ಚುನಾವಣಾ ಆಯೋಗ ನೋಟಿಸ್​ ನೀಡಿದೆ. ಮತಗಳ್ಳತನ ವಿಚಾರವಾಗಿ ರಾಹುಲ್​ ಗಾಂಧಿಯವರು ಆಗಸ್ಟ್​ 7ರಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು. ಹೀಗಾಗಿ, ರಾಜ್ಯ ಚುನಾವಣಾ ಆಯೋಗ ಈ ದಾಖಲೆಗಳನ್ನು ನೀಡುವಂತೆ ಸೂಚನೆ ನೀಡಿದೆ….

Read More

ಬೆಂಗಳೂರು ಹಳದಿ ಮೆಟ್ರೋ ರೈಲಿನ‌ ವಿಶೇಷತೆಗಳು

ಬೆಂಗಳೂರು ಮಹಾನಗರದ ಜನರ ಜೀವನಾಡಿಯಾಗಿರುವ ನಮ್ಮ ಮೆಟ್ರೋ ಮತ್ತಷ್ಟು ವಿಸ್ತರಣೆಯಾಗಿದೆ. ಹಳದಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಇಂದು ಭಾನುವಾರ ಹಸಿರು ನಿಶಾನೆ ತೋರಿಸಿದರು. ಈ ಮೂಲಕ ಎಲೆಕ್ಟ್ರಾನಿಕ್ ಸಿಟಿ ಜನರ ಬಹುದಿನಗಳ ಕನಸು ನನಸಾಗಿದೆ. ಪ್ರಧಾನಿ ಮೋದಿ ಉದ್ಘಾಟಿಸಿರುವ ಹಳದಿ ಮಾರ್ಗದ ವಿಶೇಷತೆಗಳು ಇಲ್ಲಿದೆ. ಐಟಿ ಹಬ್​ ಎಲೆಕ್ಟ್ರಾನಿಕ್​ ಸಿಟಿ ಸಂಪರ್ಕಿಸುವ ಚಾಲಕ ರಹಿತ ರೈಲು ಈ ಮಾರ್ಗದಲ್ಲಿ ಸಂಚರಿಸಲಿದೆ. ಸುಮಾರು 7,616 ಕೋಟಿ ರೂಪಾಯಿ ವೆಚ್ಚದಲ್ಲಿ ಹಳದಿ ಮಾರ್ಗವನ್ನು ನಿರ್ಮಿಸಲಾಗಿದೆ….

Read More

ಧರ್ಮಸ್ಥಳದಲ್ಲಿ ಗಲಭೆ ಕೇಸ್: 6 ಮಂದಿ ಅರೆಸ್ಟ್

ಬೆಳ್ತಂಗಡಿ, ಆ.10: ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್‌‍ ನಲ್ಲಿ‌ ಕಳೆದ ಆಗಸ್ಟ್ 6 ರಂದು ಸಂಜೆ ಯೂಟ್ಯೂಬರ್‌ ಗಳ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ನಿನ್ನೆ ಧರ್ಮಸ್ಥಳ ನಿವಾಸಿಗಳಾದ ಪದಪ್ರಸಾದ್‌, ಸುಹಾಸ್‌‍, ಗುರುಪ್ರಸಾದ್‌‍, ಶಶಿಕುಮಾರ್‌, ಕಲಂದರ್‌ ಮತ್ತು ಚೇತನ್‌ ಅವರುಗಳನ್ನು ಬಂಧಿಸಿ, ಬೆಳ್ತಂಗಡಿ ನ್ಯಾಯಾಧೀಶರ ಮನೆಯಲ್ಲಿ ಹಾಜರುಪಡಿಸಿದರು. ನ್ಯಾಯಾಧೀಶರು 6 ಮಂದಿಗೂ ಮಧ್ಯಂತರ ಜಾಮೀನು ಮಂಜೂರು ಮಾಡಿ, ಎಲ್ಲರೂ ನಾಳೆ(ಆಗಸ್ಟ್ 11)…

Read More

ಬೆಂಗಳೂರಿನಲ್ಲಿ ವಂದೇ ಭಾರತ್ ರೈಲಿಗೆ ಪ್ರಧಾನಿ ಚಾಲನೆ

ಬೆಂಗಳೂರು, ಆಗಸ್ಟ್ 10: ಪ್ರಧಾನಿ ಮೋದಿ ಅವರು ಬೆಂಗಳೂರು ಟು ಬೆಳಗಾವಿ ವಂದೇ ಭಾರತ್ ನೂತನ ರೈಲಿಗೆ ಚಾಲನೆ ನೀಡಿದ್ದಾರೆ. ಮೇಖ್ರಿ ಸರ್ಕಲ್, ಚಾಲುಕ್ಯ ಸರ್ಕಲ್ ಮೂಲಕ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ತಲುಪಿದ ನರೇಂದ್ರ ಮೋದಿ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಿ ಚಾಲನೆ ಕೊಟ್ಟಿದ್ದಾರೆ. ಮೇಖ್ರಿ ಸರ್ಕಲ್ ಬಳಿಯ ಹೆಲಿಪ್ಯಾಡ್‌ನಿಂದ ರಸ್ತೆ ಮೂಲಕ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣಕ್ಕೆ ಮೋದಿ ಪ್ರಯಾಣ ಬೆಳೆಸಿದ್ದರು. ಇನ್ನೂ, ಪ್ರಧಾನಿಯನ್ನು ನೋಡಲು ಜನರು ಕಿಕ್ಕಿರಿದು ತುಂಬಿದ್ದರು….

Read More

ಪ್ರಧಾನಿ ಮೋದಿಯವರ ನಾಳಿನ‌ ಬೆಂಗಳೂರು ಕಾರ್ಯಕ್ರಮಗಳ ವೇಳಾಪಟ್ಟಿ..

ಬೆಂಗಳೂರು, ಆಗಸ್ಟ್ 9: ಮೆಟ್ರೋದ ಹಳದಿ ಮಾರ್ಗ​ ಮತ್ತು ಬೆಂಗಳೂರು ಮತ್ತು ಬೆಳಗಾವಿ ನಡುವಿನ ವಂದೇ ಭಾರತ್​ ರೈಲಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಆಗಸ್ಟ್ 10) ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಕುರಿತು ವೇಳಾಪಟ್ಟಿ ಹಂಚಿಕೊಂಡಿರುವ ಸಿಎಂ ಕಚೇರಿ, ಮೋದಿ 4 ಗಂಟೆಗಳ ಕಾಲ ಇರಲಿದ್ದು, ಈ ವೇಳೆ ಮೂರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ ಹೆಚ್​ಎಎಲ್​ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ, ಕೆಎಸ್​ಆರ್​ ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ಆಗಮಿಲಿದ್ದು, ಅಲ್ಲಿ ಬೆಂಗಳೂರು-…

Read More

ವಿಷ್ಣುವರ್ಧನ್ ಸಮಾಧಿ ನೆಲಸಮ: ‘ಎಲ್ಲದಕ್ಕೂ ಅವನೇ ಕಾರಣ’ ಎಂದ ಗೀತಾ ಬಾಲಕೃಷ್ಣ

ಬಾಲಣ್ಣ ಅವರಿಗೆ ಸೇರಿದ್ದ ಅಭಿಮಾನ್ ಸ್ಟುಡಿಯೋನಲ್ಲಿದ್ದ ವಿಷ್ಣುವರ್ಧನ್ ಅವರ ಪುಣ್ಯಭೂಮಿಯನ್ನು ನೆಲಸಮ ಮಾಡಲಾಗಿದೆ. ಇದು ಸಹಜವಾಗಿಯೇ ವಿಷ್ಣುವರ್ಧನ್ ಅಭಿಮಾನಿಗಳಿಗೆ ನೋವುಂಟು ಮಾಡಿದೆ. ಹಲವು ವರ್ಷಗಳಿಂದಲೂ ಅಭಿಮಾನ್ ಸ್ಟುಡಿಯೋನಲ್ಲಿ ವಿಷ್ಣುವರ್ಧನ್ ಸಮಾಧಿಯನ್ನು ಉಳಿಸಿಕೊಂಡು ಅಲ್ಲೊಂದು ಸ್ಮಾರಕ ನಿರ್ಮಾಣ ಮಾಡಲು ಅಭಿಮಾನಿಗಳು ಹೋರಾಡುತ್ತಲೇ ಇದ್ದರು. ಆದರೆ ಈಗ ಅಭಿಮಾನ್ ಸ್ಟುಡಿಯೋನಲ್ಲಿ ಇದ್ದ ಒಂದು ಕುರುಹನ್ನು ಒಡೆದು ಹಾಕಲಾಗಿದೆ. ಇದೀಗ ಈ ಘಟನೆ ಕುರಿತು ಬಾಲಣ್ಣ ಅವರ ಕುಟುಂಬದ ಸದಸ್ಯರೊಬ್ಬರು ಮಾತನಾಡಿದ್ದು, ‘ಎಲ್ಲದಕ್ಕೂ ಅವನೇ ಕಾರಣ’ ಎಂದು ದೂಷಿಸಿದ್ದಾರೆ. ಬಾಲಕೃಷ್ಣ ಅವರ…

Read More

ನಾಳೆ ಪ್ರಧಾನಿ ಆಗಮಿಸುವ ಹಿನ್ನೆಲೆ: ಬೆಂಗಳೂರಿನ ಸಂಚಾರ ಮಾರ್ಗದಲ್ಲಿ ಬದಲಾವಣೆ

ಬೆಂಗಳೂರು, ಆಗಸ್ಟ್ 9: ವಂದೇ ಭಾರತ್‌ ರೈಲು ಹಾಗೂ ಮೆಟ್ರೊ ಮಾರ್ಗ ಉದ್ಘಾಟನಾ ಕಾರ್ಯಕ್ರಮಕ್ಕೆ ಭಾನುವಾರ ಪ್ರಧಾನಿ ನರೇಂದ್ರ ಮೋದಿ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಲವು ರಸ್ತೆಗಳಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದ್ದು, ಕೆಲ ರಸ್ತೆಗಳಲ್ಲಿ ತಾತ್ಕಾಲಿಕವಾಗಿ ವಾಹನ ಸಂಚಾರ ನಿರ್ಬಂಧಿಸಿದ್ದಾರೆ. ಬೆಳಗ್ಗೆ 11 ಗಂಟೆಯಿಂದ 12.30ರವರೆಗೆ ಮಾರೇನಹಳ್ಳಿ ಮುಖ್ಯ ರಸ್ತೆಯ ರಾಜಲಕ್ಷ್ಮಿ ಜಂಕ್ಷನ್‌ ನಿಂದ ಮಾರೇನಹಳ್ಳಿ 18ನೇ ಮುಖ್ಯ ರಸ್ತೆ ಹಾಗೂ ಮಾರೇನಹಳ್ಳಿ ಈಸ್ಟ್‌ ಎಂಡ್‌ ಮುಖ್ಯ ರಸ್ತೆ ಜಂಕ್ಷನ್‌ನಿಂದ ಆರವಿಂದ ಜಂಕ್ಷನ್‌…

Read More

ಭಾರತದ ವ್ಯಾಪಾರದ ಮೇಲೆ ಶೇ.50ರಷ್ಟು ಸುಂಕ ವಿಧಿಸಿದ ಅಮೆರಿಕಾ!

ವಾಷಿಂಗ್ಟನ್, ಆಗಸ್ಟ್ 6: ತನ್ನ ಕಡು ವೈರಿ ರಷ್ಯಾದಿಂದ ತೈಲ ಖರೀದಿಸಿದ್ದೇವೆ ಎಂಬ ಕಾರಣಕ್ಕೆ ಭಾರತದ ವಿರುದ್ಧ ಕಿಡಿ ಕಾರುತ್ತಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿನ್ನೆ (ಮಂಗಳವಾರ) ಮುಂದಿನ 24 ಗಂಟೆಯೊಳಗೆ ಭಾರತದ ಮೇಲಿನ ಸುಂಕವನ್ನು ಗಣನೀಯವಾಗಿ ಹೆಚ್ಚಿಸುತ್ತೇನೆ ಎಂದು ಬೆದರಿಕೆ ಹಾಕಿದ್ದರು. ಕೊನೆಗೂ ತಾವು ಹೇಳಿದಂತೆಯೇ ಮಾಡಿರುವ ಟ್ರಂಪ್ ಇಂದು ಬುಧವಾರ ಭಾರತದ ಮೇಲೆ ಹೆಚ್ಚುವರಿಯಾಗಿ ಶೇ.25ರಷ್ಟು ಸುಂಕ ವಿಧಿಸಿದ್ದಾರೆ. ಈ ಮೂಲಕ ಭಾರತದ ಮೇಲೆ ಅಮೆರಿಕ ಹೇರಿರುವ ವ್ಯಾಪಾರ ಸುಂಕ ಶೇ.50ರಷ್ಟಾಗಿದೆ! ಆಗಸ್ಟ್…

Read More

ಧರ್ಮಸ್ಥಳ ಬಗ್ಗೆ ಅಪಪ್ರಚಾರ ಆರೋಪ: ಯೂಟ್ಯೂಬರ್ಸ್ ಗಳ ಮೇಲೆ ಹಲ್ಲೆ

ಮಂಗಳೂರು, ಆಗಸ್ಟ್ 6: ಸಾಲು ಸಾಲು ಅಪಪ್ರಚಾರ, ಧರ್ಮಸ್ಥಳದ ಬಗ್ಗೆ ಸುಳ್ಳು ಸುದ್ದಿಗಳನ್ನೇ ಬಿತ್ತರ ಮಾಡುತ್ತಿದ್ದ 30ಕ್ಕೂ ಅಧಿಕ ಯೂಟ್ಯೂಬರ್‌ಗಳ ಮೇಲೆ ಧರ್ಮಸ್ಥಳದ ಭಕ್ತರು ಶ್ರೀಕ್ಷೇತ್ರದಲ್ಲಿಯೇ ಧರ್ಮದೇಟು ನೀಡಿ ಓಡಿಸಿದ್ದಾರೆ. ಈ ಗಲಭೆಯಲ್ಲಿ ಗಾಯಗೊಂಡ ಕೆಲವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಉಜಿರೆಯಲ್ಲಿ ಸ್ಥಳೀಯ ಸುವರ್ಣನ್ಯೂಸ್‌ ಚಾನೆಲ್ ವರದಿಗಾರನ ಮೇಲೆ ಮಹೇಶ್‌ ಶೆಟ್ಟಿ ತಿಮರೋಡಿ ಅವರ ಗ್ಯಾಂಗ್‌ ಹಲ್ಲೆ ಮಾಡಿದ್ದಾರೆ. ಈ ನಡುವೆ, ಕ್ಷೇತ್ರದ ಬಗ್ಗೆ ಅವಹೇಳನ ಮಾಡುತ್ತಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸುವವರ ಮೇಲೆ, ಧರ್ಮಸ್ಥಳದ…

Read More
error: Content is protected !!