Headlines

ಆಧಾರರಹಿತ, ದಾರಿ ತಪ್ಪಿಸುವ ಆರೋಪ: ರಾಹುಲ್ ಗಾಂಧಿಗೆ ಚು.ಆಯೋಗದ ಸಾಕ್ಷಿ ಸಮೇತ ಉತ್ತರ

ನವದೆಹಲಿ, ಜುಲೈ 25: ಕರ್ನಾಟಕ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನ್ನು ಅನುಭವಿಸುವುದಕ್ಕೆ ಚುನಾವಣೆಯಲ್ಲಿ ನಡೆದ ವಂಚನೆಯೇ ಕಾರಣ ಎಂದಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ‘ಚುನಾವಣಾ ಆಯೋಗ ಕರ್ನಾಟಕದಲ್ಲಿ ಅಕ್ರಮ ಎಸಗಲು ಅವಕಾಶ ನೀಡಿರುವುದಕ್ಕೆ ನಮ್ಮ ಬಳಿ 100% ಸಾಕ್ಷಿ ಇದೆ, ಚುನಾವಣಾ ಆಯೋಗ ಅನಗತ್ಯವಾಗಿ ಮತದಾರರ ಹೆಸರು ಸೇರಿಸುವುದು, ತೆಗೆಯುವುದು ಮಾಡಿರುವುದನ್ನು ಪತ್ತೆ ಮಾಡಿದ್ದೇವೆ, ನೀವು, ನಿಮ್ಮ ಅಧಿಕಾರಿಗಳು ಇದರಿಂದ ಪಾರಾಗುತ್ತೇವೆ ಎಂದು ಭಾವಿಸಿದ್ದರೆ ಅದು ತಪ್ಪು. ನೀವು ಪಾರಾಗಲು ಸಾಧ್ಯವಿಲ್ಲ. ಏಕೆಂದರೆ, ನಾವು ನಿಮ್ಮ…

Read More

ವಿರೋಧ  ಪಕ್ಷದವರು ದುಡ್ಡಿಲ್ಲ ಎನ್ನುತ್ತಾರೆ, ಕ್ಷೇತ್ರದ ಅಭಿವೃದ್ಧಿ ನಿಮ್ಮ ಕಣ್ಣ ಮುಂದೆ ಇದೆ : ಶಾಸಕ ಪಿ ರವಿಕುಮಾರ್

ಮಂಡ್ಯ ತಾಲೂಕಿನ ಆನಸಾಸಲು ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆಗೆ ಶಾಸಕ ಪಿ ರವಿಕುಮಾರ್ ಗೌಡ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಪಕ್ಷಭೇದ ಮರೆತು ಗ್ರಾಮದವರು ಬಂದು ಅಭಿವೃದ್ಧಿಗೆ ಕೈಜೋಡಿಸುತ್ತಿರುವುದು ಮೆಚ್ಚುವಂತದ್ದು ಆನಸಾಸಲೂ ಗ್ರಾಮ ಮಾದರಿ ಗ್ರಾಮವಾಗಿದೆ ಎಂದರು. ಮಾರಮ್ಮ ದೇವಿ ದೇವಸ್ಥಾನ ಮತ್ತು ಲೈಬ್ರರಿ ಕಟ್ಟಡ ಸೇರಿದಂತೆ ವಿವಿಧ ರಸ್ತೆ ಕಾಮಗಾರಿಗೆ ಒಟ್ಟು 35 ಲಕ್ಷ ರೂ ವೆಚ್ಚದ ಕಾಮಗಾರಿಗೆ ಇಂದು ಚಾಲನೆ ನೀಡಿದ್ದೇನೆ. ಚಿಕ್ಕಬಳ್ಳಿ ಕೆರೆಯ ಅಭಿವೃದ್ಧಿಗೆ ಇನ್ನೂ ಎರಡು ತಿಂಗಳಲ್ಲಿ…

Read More

ಹೊಳೆನರಸೀಪುರ ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ!

ಬೆಂಗಳೂರು, ಜುಲೈ 25: ಹೊಳೆನರಸೀಪುರ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ 2ನೇ ಬಾರಿ ಜಾಮೀನು ಪಡೆಯಲು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿಫಲರಾಗಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ನ್ಯಾ. ಎಸ್.ಜಿ.ಭಟ್ ಅವರು ಇಂದು ಹೊಳೆನರಸೀಪುರ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಬಂಧಿತ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು.ಇದರಿಂದ ಅನೇಕ ಲೈಂಗಿಕ ದೌರ್ಜನ್ಯ ಪ್ರಕರಣಗಳ ಆರೋಪಗಳ ಪ್ರಕರಣಗಳಲ್ಲಿ ಎ1 ಆರೋಪಿಯಾಗಿ ಕಳೆದ 14 ತಿಂಗಳಿನಿಂದ ಜೈಲಿನಲ್ಲಿ ಬಂಧನಕ್ಕೊಳಗಾಗಿರುವ ಹಾಸನ…

Read More

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮತಗಳ್ಳತನದ ದಾಖಲೆ ನನ್ನ ಬಳಿಯಿದೆ: ಡಿಸಿಎಂ ಡಿ.ಕೆ.ಶಿ ಬಾಂಬ್

ರಾಹುಲ್ ಗಾಂಧಿ ಅವರು ಮಾಡಿರುವ ಆರೋಪ ನಿಜ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮತದಾನದಲ್ಲಿಯೂ ಗೋಲ್ಮಾಲ್ ನಡೆದಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಬಾಂಬ್ ಸಿಡಿಸಿದ್ದಾರೆ. ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಮತಗಳ್ಳತನವಾಗಿದೆ ಎಂಬ ರಾಹುಲ್ ಗಾಂಧಿ ಅವರ ಹೇಳಿಕೆಗೆ ನವದೆಹಲಿಯಲ್ಲಿ ಇಂದು ಪ್ರತಿಕ್ರಿಯಿಸಿದ ಅವರು, ನಾನು ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಒಪ್ಪುತ್ತೇನೆ. ನಾನು ಕೂಡ ಈ ವಿಚಾರವಾಗಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ತನಿಖೆ ನಡೆಸಿದ್ದೇನೆ. ಅಲ್ಲಿ ಅನೇಕ ಗೋಲ್ಮಾಲ್‌ಗಳು ನಡೆದಿವೆ. ಈ ಬಗ್ಗೆ ಸದ್ಯಕ್ಕೆ…

Read More

ಬೂದನೂರು ಗ್ರಾಮ ಪಂಚಾಯಿತಿಯ ಸಾಮಾಗ್ರಿ ಖರೀದಿಯಲ್ಲಿ ಭ್ರಷ್ಟಾಚಾರ; ಲೋಕಾಯುಕ್ತಕ್ಕೆ ದೂರು

ಮಂಡ್ಯ: ತಾಲ್ಲೂಕಿನ ಬೂದನೂರು ಗ್ರಾಮ ಪಂಚಾಯತಿಯ ಆಡಳಿತ ಮಂಡಳಿ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ಹಾಗೂ ಭ್ರಷ್ಟಾಚಾರ ಎಸಗಿರುವ ಕುರಿತು ನಗರದಲ್ಲಿ ಲೋಕಾಯುಕ್ತಕ್ಕೆ ಸ್ವಂತಮನೆ ನಮ್ಮ ಹಕ್ಕು ಹೋರಾಟ ಸಮಿತಿ ಸಂಚಾಲಕ ಬಿ.ಕೆ.ಸತೀಶರವರು (ಬೂಸ) ದೂರು ನೀಡಿದರು‌‌. ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸತೀಶ್ ರವರು ಬೂದನೂರು ಗ್ರಾಮ ಪಂಚಾಯತಿ ಆಡಳಿತ ಮಂಡಳಿಯ ಅಧ್ಯಕ್ಷೆ ಮಾನಸ ಹಾಗೂ ಪಿಡಿಒ ವೈ.ಎಸ್‌.ವಿನಯ್ ಕುಮಾರ್ ಅವರು 2024-25ನೇ ಸಾಲಿನಲ್ಲಿ ಗ್ರಾಮ ಪಂಚಾಯತಿಯ ನೀರು ಸರಬರಾಜು ಸಾಮಾಗ್ರಿ ಖರೀದಿಯಲ್ಲಿ ಸರ್ಕಾರದ ಪಾರದರ್ಶಕ…

Read More

ಸರ್ಕಾರಿ ಅಧಿಕಾರಿಗಳ ಜೊತೆ ಸುರ್ಜೇವಾಲ ಸಭೆ: ಸಚಿವ ಕೆ.ಎನ್ ರಾಜಣ್ಣ, ಜೆಡಿಎಸ್ ತೀವ್ರ ಆಕ್ಷೇಪ

ಬೆಂಗಳೂರು, ಜುಲೈ 25: ಇತ್ತೀಚಿಗಷ್ಟೇ ಬೆಂಗಳೂರಿಗೆ ಬಂದು ಕಾಂಗ್ರೆಸ್ ಶಾಸಕರ ಮತ್ತು ಸಚಿವರ ಜೊತೆ ಒನ್ ಟು ಒನ್ ಸಭೆ ನಡೆಸಿದ್ದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕೆಲವು ಮಂದಿ ಸರ್ಕಾರಿ ಅಧಿಕಾರಿಗಳಿಗೂ ಕೂಡ ಬುಲಾವ್ ನೀಡಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ಇದೀಗ ಸಹಕಾರ ಸಚಿವ ಕೆ.ಎನ್ ರಾಜಣ್ಣ ಮತ್ತು ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿವೆ. ಸುರ್ಜೇವಾಲ ಸರ್ಕಾರಿ ಅಧಿಕಾರಿಗಳನ್ನು ಕರೆಸಿ ಮಾತುಕತೆ ನಡೆಸಿದ್ದೇ ಆದರೆ ಅದು ಸಂವಿಧಾನ ಬಾಹಿರ ಕೃತ್ಯ ಎಂದು…

Read More

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ: ನ್ಯಾ.ಮೈಕೆಲ್ ಕುನ್ಹಾ ವರದಿ ರದ್ದು ಕೋರಿ ಹೈಕೋರ್ಟಿಗೆ ಡಿಎನ್‌ಎ ರಿಟ್

ಬೆಂಗಳೂರು, ಜುಲೈ 25: ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟ ಘಟನೆ ಸಂಬಂಧ ನ್ಯಾ.ಮೈಕೆಲ್ ಕುನ್ಹಾ ವರದಿಯನ್ನು ರದ್ದುಗೊಳಿಸಬೇಕು ಎಂದು ತುರ್ತು ವಿಚಾರಣೆ ಕೋರಿ ಡಿಎನ್​ಎ ಎಂಟರ್​ಟೇನ್​ಮೆಂಟ್​​ ನೆಟ್​ವರ್ಕ್ ಕರ್ನಾಟಕ ಹೈಕೋರ್ಟ್​ಗೆ ಮನವಿ ಮಾಡಿದೆ. ನ್ಯಾ.ಜಯಂತ್ ಬ್ಯಾನರ್ಜಿ, ನ್ಯಾ.ಎಸ್.ಜಿ.ಪಂಡಿತ್ ಅವರಿದ್ದ ಹೈಕೋರ್ಟ್ ಪೀಠಕ್ಕೆ ಈ ಮನವಿ ಸಲ್ಲಿಕೆಯಾಗಿದೆ. ನ್ಯಾ.ಮೈಕೆಲ್ ಕುನ್ಹಾ ವರದಿಯನ್ನು ಕರ್ನಾಟಕ ಸಚಿವ ಸಂಪುಟ ಅಂಗೀಕರಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಸದ್ಯ, ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಜುಲೈ 28ಕ್ಕೆ ನಿಗದಿಪಡಿಸಿದೆ….

Read More

ಸಿಎಂ ಕುರ್ಚಿ ಸಮರ ದೆಹಲಿಗೆ ಶಿಫ್ಟ್!!!

ಪವರ್ ಶೇರಿಂಗ್ ಫೈಟ್‌.. ನಾಯಕತ್ವ ಗುದ್ದಾಟದ ಮಧ್ಯೆ ಇವತ್ತು ಸಿಎಂ, ಡಿಸಿಎಂ ಡೆಲ್ಲಿಯಾತ್ರೆ ಮಾಡ್ತಿದ್ದಾರೆ. ಇಂದು ಪ್ರತ್ಯೇಕವಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಡೆಲ್ಲಿ ಫ್ಲೈಟ್ ಹತ್ತಿದ್ದಾರೆ. ಕಳೆದ ಬಾರಿ ಡೆಲ್ಲಿಯಲ್ಲಿ ನಾನೇ 5 ವರ್ಷ ಮುಖ್ಯಮಂತ್ರಿ ಎಂದಿದ್ದ ಸಿದ್ದರಾಮಯ್ಯ ಮತ್ತೇನು ಬಾಂಬ್ ಸಿಡಿಸಲಿದ್ದಾರೆ? ಎಂಬ ಕೌತುಕ ಮೂಡಿದೆ. ಹೀಗೆ ಸಿಎಂ, ಡಿಸಿಎಂ ಪ್ರತ್ಯೇಕವಾಗಿ ದೆಹಲಿಯಾತ್ರೆ ಮಾಡ್ತಿರೋದು ಭಾರೀ ಚರ್ಚೆಗೆ ಗ್ರಾಸವಾಗಿದೆ. ರಾಹುಲ್ ಗಾಂಧಿ ಭೇಟಿಯಾಗ್ತಾರಾ ಸಿಎಂ-ಡಿಸಿಎಂ? ಇತ್ತೀಚಿಗಷ್ಟೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ…

Read More

ಹೈಕೋರ್ಟ್ ಮಹತ್ವದ ಆದೇಶ: ಗ್ರೇಟರ್ ಬೆಂಗಳೂರು (ಆಡಳಿತ) ಕಾಯ್ದೆಯಡಿ ಭೂಸ್ವಾಧೀನಕ್ಕೆ ಹಿನ್ನಡೆ

ಬೆಂಗಳೂರು, ಜುಲೈ 24: ಗ್ರೇಟರ್ ಬೆಂಗಳೂರು(ಆಡಳಿತ) ಕಾಯ್ದೆಯಡಿ ಭೂಸ್ವಾಧೀನಕ್ಕೆ ಆರಂಭಿಕ ವಿಘ್ನ ಎದುರಾಗಿದೆ. ಗ್ರೇಟರ್ ಬೆಂಗಳೂರು ಆಡಳಿತ ಕಾಯಿದೆ (2025) ಅಡಿಯಲ್ಲಿ ಭೂಸ್ವಾಧೀನ ಪ್ರಶ್ನಿಸಿ ರಾಜಗೋಪಾಲ ಗೋಪಾಲಕೃಷ್ಣ ಎಂಬುವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ನೋಟಿಸ್ ಆಧರಿಸಿ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು. ಅರ್ಜಿದಾರರ ಬಿಡದಿ ಜಮೀನಿನ ಸ್ವಾಧೀನಕ್ಕೆ ಅಡ್ಡಿಪಡಿಸದಂತೆ ಆದೇಶ ಹೊರಡಿಸಿದೆ. ಅಲ್ಲದೇ ಈ ಬಗ್ಗೆ ಇದೇ ಜುಲೈ 29ರಂದು ಪ್ರತಿಕ್ರಿಯಿಸುವಂತೆ ರಾಜ್ಯ ಸರ್ಕಾರದ ನಗರಾಭಿವೃದ್ಧಿ ಇಲಾಖೆಗೆ ಸೂಚಿಸಿ ಹೈಕೋರ್ಟ್ ನೋಟಿಸ್…

Read More

ಮುಂಬೈ ಸರಣಿ ರೈಲು ಸ್ಫೋಟ: ಬಾಂಬೆ ಹೈಕೋರ್ಟ್ ನ 12 ಆರೋಪಿಗಳ ಖುಲಾಸೆ ತೀರ್ಪಿಗೆ ಸುಪ್ರೀಂಕೋರ್ಟ್ ತಡೆ

ನವದೆಹಲಿ, ಜುಲೈ 24: ಮುಂಬೈನಲ್ಲಿ 2006ರಲ್ಲಿ ನಡೆದ ಸರಣಿ ರೈಲು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್​ ನೀಡಿದ್ದ 12 ಆರೋಪಿಗಳ ಖುಲಾಸೆ ತೀರ್ಪಿಗೆ ಸುಪ್ರೀಂಕೋರ್ಟ್​ ತಡೆ ನೀಡಿದೆ. ಆರೋಪಿಗಳು ಮತ್ತೆ ಜೈಲಿಗೆ ಮರುಳುತ್ತಾರಾ ಎಂದು ಕಾದು ನೋಡಬೇಕಿದೆ. ಸಾಕ್ಷ್ಯಾಧಾರಗಳ ಕೊರತೆ ಇರುವ ಕಾರಣ ಆರೋಪಿಗಳನ್ನು ಖುಲಾಸೆಗೊಳಿಸುತ್ತಿರುವುದಾಗಿ ಬಾಂಬೆ ಹೈಕೋರ್ಟ್​ ಹೇಳಿತ್ತು. 189 ಜನರ ಸಾವಿಗೆ ಕಾರಣವಾದ 2006 ರ ಮುಂಬೈ ರೈಲು ಸ್ಫೋಟದ ಎಲ್ಲಾ 12 ಅಪರಾಧಿಗಳನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮಹಾರಾಷ್ಟ್ರ…

Read More
error: Content is protected !!